Author: kannadanewsnow05

ಬೆಂಗಳೂರು : ರಾಜ್ಯ ಪೊಲೀಸ್​ ಇಲಾಖೆಯ ಕಾನ್​ಸ್ಟೇಬಲ್‌ಗಳು ಧರಿಸುತ್ತಿರುವ ಬ್ರಿಟಿಷ್​ ಕಾಲದ ಟೋಪಿ ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಇದೀಗ ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್​ ಕ್ಯಾಪ್​ ನೀಡುವುದರ ಕುರಿತು ಚರ್ಚೆ ನಡೆಸಿ ನೂತನ ಕ್ಯಾಪ್ ಬಳಕೆಗೆ ಚಿಂತನೆ ನಡೆಸಲಾಗುತ್ತಿದೆ. ಹೌದು ಕರ್ನಾಟಕ ಪೊಲೀಸರ ಕ್ಯಾಪ್ ದಲಾವಣೆಗೆ ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ರಾಜ್ಯದಲ್ಲಿ ಸದ್ಯ ಪೊಲೀಸರು ಬಳಸುತ್ತಿರುವ ಕ್ಯಾಪ್ ಬದಲು ಮಾಡಲು ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸುತ್ತಿದೆ. ಹೊಸ ಮಾದರಿಯ ಪೊಲೀಸ್ ಕ್ಯಾಪ್ ಬಳಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹೊಸ ಪ್ರಸ್ತಾಪಿತ ಕ್ಯಾಪ್ ಅನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ವೀಕ್ಷಿಸಿದರು. ಬೇರೆ ರಾಜ್ಯಗಳ ಪೊಲೀಸರು ಬಳಸುತ್ತಿರುವ ಕ್ಯಾಪ್ ಗಳನ್ನು ಇದೇ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್…

Read More

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಐವರನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಈ ವಿಚಾರವಾಗಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, 5 ಹುಲಿಗಳ ಸಾವು ಅತ್ಯಂತ ದುಃಖಕರ ಘಟನೆಯಾಗಿದೆ. ಹುಲಿಗಳ ಸಾವಿನ ಬಗ್ಗೆ ತನಿಖೆ ಈಗಾಗಲೇ ತಂಡ ರಚಿಸಿದ್ದೇವೆ. ಇನ್ನು ಮೂರು ದಿನಗಳಲ್ಲಿ ವರದಿ ಬರಲಿದೆ ಪ್ರಾಥಮಿಕ ಹಂತದಲ್ಲಿ ಗೊತ್ತಾಗಿರುವಂತೆ ವಿಷಪ್ರಾಶನ ಆಗಿರಬಹುದು. ಸತ್ತುಹೋದ ಹಸಿವಿನ ಮೇಲೆ ಯಾರೋ ವಿಷ ಹಾಕಿರಬಹುದು ಅದನ್ನು ಹುಲಿಗಳು ತಿಂದು ಮೃತಪಟ್ಟಿರಬಹುದು. ಹುಲಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರ…

Read More

ಕೇರಳ : ಕೇರಳದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸುಮಾರು 40 ವರ್ಷದ ಹಳೆಯ ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕೇರಳದ ತ್ರಿಶೂರ್‌ನಲ್ಲಿ ವಲಸೆ ಕಾರ್ಮಿಕರನ್ನು ಹೊಂದಿದ್ದ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ರಾಹುಲ್ (19) ಮತ್ತು ರೂಪೆಲ್ (21) ಇಬ್ಬರೂ. ರೂಪೆಲ್ ಮೃತಪಟ್ಟಿರುವುದು ಕಂಡುಬಂದರೂ, ರಾಹುಲ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಪಶ್ಚಿಮ ಬಂಗಾಳ ಮೂಲದ ಅಲೀಮ್ (30) ಅವರ ಪತ್ತೆಗಾಗಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ, ಅವರು ಕಟ್ಟಡದಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ 14 ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕಟ್ಟಡ ದುರ್ಬಲಗೊಂಡಿರಬಹುದುಪೊಲೀಸರ ಪ್ರಕಾರ, ಮೂವರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಅವರಲ್ಲಿ ಇಬ್ಬರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಕಲಬುರ್ಗಿ : ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಇಡಿ ರಾಜ್ಯದ್ಯಂತ ಎಲ್ಲಿ ಬೇಕಾದಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದೀಗ ಕಲ್ಬುರ್ಗಿ ಜಿಲ್ಲೆಯ ವಾಡಿಯಲ್ಲಿ ಕಂಡಕ್ಟರ್ ಒಬ್ಬರು ಮಹಿಳೆಗೆ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಆಕೆ ಸಂಬಂಧಿಕರು ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ನಡೆದಿದೆ. ಹೌದು ನಿನ್ನೆ ಕಲಬುರಗಿ-ಯಾದಗಿರಿ ನಡುವೆ ಸಂಚರಿಸುತ್ತಿದ್ದ ಬಸ್‌ಗೆ ರಾವೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಹತ್ತಿದ್ದಾರೆ. ಟಿಕೆಟ್‌ ಪಡೆಯುವ ವೇಳೆ ಝರಾಕ್ಸ್‌ ಪ್ರತಿ ತೋರಿಸಿದ್ದಾರೆ. ಕಂಡಕ್ಟರ್‌ ಅರ್ಜುನ ನಾಗಪ್ಪ ಕಟ್ಟಿಮನಿ ಅವರು ಓರಿಜಿನಲ್‌ ತೋರಿಸಿ ಎಂದು ಹೇಳಿ, ಇತರರಿಗೆ ಟಿಕೆಟ್‌ ನೀಡಲು ಹೋಗಿದ್ದಾರೆ. ವಾಪಸ್‌ ಮಹಿಳೆ ಬಳಿ ಬಂದಾಗ, ಬೇರೆಯವರ ಆಧಾರ್‌ ಕಾರ್ಡ್‌ ತೋರಿಸಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್‌ ಹಣ ಕೊಟ್ಟು ಟಿಕೆಟ್‌ ಪಡೆಯಿರಿ, ಇಲ್ಲವೇ ಬಸ್‌ನಿಂದ ಇಳಿಯಿರಿ ಎಂದಿದ್ದಾರೆ. ಹಣಕೊಟ್ಟು ಟಿಕೆಟ್‌ ಪಡೆದ ಮಹಿಳೆ, ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಘಟನೆ…

Read More

ಬೆಂಗಳೂರು : ಮೊದಲ ಬಾರಿ ಆರ್‌ಸಿಬಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದಾಗ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಕಮಿಷನರ್ ಬಿ ದಯಾನಂದ ಸೇರಿದಂತೆ ಹಲವು ಅಧಿಕಾರಿಗಳನ್ನು, ಸಸ್ಪೆಂಡ್ ಮಾಡಲಾಯಿತು, ಇದೀಗ ಅಮಾನತುಕೊಂಡಿರುವ ಬೆಂಗಳೂರು ಕಮಿಷನರ್ ಬಿ.ದಯಾನಂದ್ ವಿಚಾರಣೆಗೆ ಹಾಜರಾಗಿದ್ದಾಗ, ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್‌ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್‌…

Read More

ಕೊಪ್ಪಳ :  ತನ್ನ ಮೂರನೇ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿ ಬಸ್ನಲ್ಲಿ ಲಗೇಜ್ ಇದೆ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ ವೃದ್ಧ ಬರೋಬ್ಬರಿ 23 ವರ್ಷದ ಬಳಿಕ ಪೊಲೀಸರ ಅತಿಥಿಯಾಗಿದ್ದಾನೆ. ಹೌದು ವೃದ್ಧನೊಬ್ಬ ತನ್ನ ಮೂರನೇ ಹೆಂಡತಿಯನ್ನು ಭೀಕರ ಬಗ್ಗೆ ಕೊಲೆ ಮಾಡಿದ್ದು ಅಲ್ಲದೆ ಬಸ್ನಲ್ಲಿ ಲಗೇಜ್ ಎಂದು ಶವ ಸಾಗಿಸಿ ಏನು ಆಗಿಲ್ಲವೆಂಬತ್ತೆ ಇದ್ದ ಆದರೆ ಇದೀಗ ರಾಯಚೂರು ಪೊಲೀಸರು ಆದರೆ ರಾಯಚೂರು ಪೊಲೀಸರು ವೃದ್ಧನನ್ನು ಅರೆಸ್ಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ ಪರಾರಿಯಾಗಿದ್ದಲ್ಲದೆ, ತಲೆಮರೆಸಿಕೊಂಡು ಹಾಯಾಗಿದ್ದ! ಇದೀಗ ಕೃತ್ಯ ಎಸಗಿ 23 ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ 75 ವರ್ಷದ ಹುಸೇನಪ್ಪನನ್ನು ಬಂಧಿಸಲಾಗಿದೆ.…

Read More

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ.ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಅರೆಸ್ಟ್ ಮಾಡಿದ್ದಾರೆ. ಹಸುವಿಗೆ ಇಬ್ಬರು ವಿಷಪ್ರಾಶನ ಮಾಡಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹಸುವಿಗೆ ಇಟ್ಟ ವಿಷಯದಿಂದ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿ ಸಾವು ಸಂಬಂಧ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಕಳೆದ ಬುಧವಾರ ಸಂಜೆ ಅರಣ್ಯ ಸಿಬ್ಬಂದಿ ಗಸ್ತು ನಡೆಸುವಾಗ ಈ ಹುಲಿಗಳ ಅಸಹಜ ಸಾವನ್ನಪ್ಪಿರುವುದು ಗೊತ್ತಾಗಿದೆ. ಮೇಲ್ನೋಟಕ್ಕೆ ತಾಯಿ ಹುಲಿ ಮತ್ತು ಮರಿಗಳು ವಿಷಪ್ರಾಶನದಿಂದ ಅಸುನೀಗಿರುವ…

Read More

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಉತ್ಸವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಳಿ ಇರುವ ಅವತಿ ಗ್ರಾಮದಲ್ಲಿ ಜ್ಯೋತಿ ಹೊತ್ತ ರಥಕ್ಕೆ ಸಚಿವ ಕೆಎಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಅವತಿ ಗ್ರಾಮದ ಚೆನ್ನಕೇಶವ ಸ್ವಾಮಿ ದೇಗುಲದಲ್ಲಿ ಕೆ ಎಚ್ ಮುನಿಯಪ್ಪ ಅವರು ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಿದರು. ಜ್ಯೋತಿ ಹೊತ್ತ ರಥಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಅವತಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 9 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಆಗಲಿದೆ ಎಂದು ಅವತಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡರ ವಂಶಸ್ಥರ ಜನ್ಮಸ್ಥಳವಾದ ಅವತಿ ಗ್ರಾಮದಲ್ಲಿ ಸ್ಮಾರಕ ನಿರ್ಮಾಣ ಆಗಲಿದೆ ಕೆಂಪೇಗೌಡರು ಮತ್ತು ಅವರ ಜೀವನ ಚರಿತ್ರೆ ತಿಳಿಸುವ ಸ್ಮಾರಕ ನಿರ್ಮಾಣ ಆಗಲಿದೆ. ಇನ್ನೊಂದು ವಾರದಲ್ಲಿ ಸ್ಮಾರಕ ನಿರ್ಮಾಣಕ್ಕೆ…

Read More

ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಬೀದರ್, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ದೊಡ್ಡ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದವು. ಇದೀಗ ಬೆಂಗಳೂರಿನಲ್ಲಿ ಹಾಡಹಗಲೇ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಕಳೆದ ಜೂನ್ 25ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಜೂನ್ 25ರಂದು ಬೆಂಗಳೂರಿನ ವಿದ್ಯಾರಣ್ಯಪುರಂನ ಎಂ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. USDT ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದಾಗ ಖದೀಮರು ಎರಡು ಕೋಟಿ ರೂಪಾಯಿ ದೋಚಿದ್ದಾರೆ. ಕೆಂಗೇರಿ ನಿವಾಸಿ ಶ್ರೀಹರ್ಷ ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಶ್ರೀಹರ್ಷ ಹೊಸ ಕಂಪನಿಗೆ ಜಪಾನ್ ನಿಂದ ಯಂತ್ರ ಬೇಕಾಗಿರುತ್ತದೆ. ಹೀಗಾಗಿ ಯುಎಸ್‌ಡಿಟಿಗೆ ಹಣ ಕನ್ವರ್ಟ್ ಮಾಡಿಸಲು ಶ್ರೀ ಹರ್ಷ ಮುಂದಾಗಿದ್ದಾರೆ. ಈ ವೇಳೆ ಸ್ನೇಹಿತರ ಮೂಲಕ ಬೆಂಜಮಿನ ನ್ ಎಂಬಾತ ವ್ಯಕ್ತಿ ಪರಿಚಯ ಆಗಿದ್ದಾನೆ. ಜೂನ್ 25 ಮಧ್ಯಾಹ್ನ 3 ಗಂಟೆಗೆ ಶ್ರೀಹರ್ಷನನ್ನು ಬೆಂಜಮಿನ್ ಭೇಟಿ…

Read More

ಬೆಂಗಳೂರು : ಇತ್ತೀಚಿಗೆ ಯುವಕರಲ್ಲಿ ಏನಾಗುತ್ತಿದೆ ಅಂತ ಗೊತ್ತಾಗುತ್ತಿಲ್ಲ. ಏಕೆಂದರೆ ಕಳೆದ ಒಂದು ತಿಂಗಳಲ್ಲೇ ಹಾಸನದಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ಮನೆಯಲ್ಲಿಯೇ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ ಸುಪ್ರಿಯಾ ಎಂಬ ವಿದ್ಯಾರ್ಥಿನಿ ಇದೀಗ ಸಾವನ್ನಪ್ಪಿದ್ದಾಳೆ. ಹಾಸನ ಮೂಲದ ಸುಪ್ರಿಯ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಹೊಳೆ ನರಸಿಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ಸದ್ಯ ಬ್ಯಾಟರಾಯನಪುರದಲ್ಲಿ ಕುಟುಂಬ ಸಮೇತ ವಾಸವಿದ್ದಳು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸುಪ್ರಿಯ ಪದವಿ ಓದುತ್ತಿದ್ದಳು. ನಿನ್ನೆ ಮನೆಯಲ್ಲಿ ಕುಸಿದು ಬಿದ್ದು ಬಿದ್ದಿದ್ದಾಳೆ. ತಕ್ಷಣ ಆಸ್ಪತ್ರೆಗೆ ಕರೆದೋಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದೊಯುವಷ್ಟರಲ್ಲಿ ಸುಪ್ರಿಯಾ ಕೊನೆಯುಸಿರೆಳೆದಿದ್ದಾಳೆ. ಹಾಸನ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಇದೀಗ ಸರಣಿ ಸಾವುಗಳು ಸಂಭವಿಸುತ್ತಿವೆ.

Read More