Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ತಮ್ಮ ಜಮೀನುಗಳ ಪಹಣಿ ಪತ್ರಗಳಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರಿಸಿರುವುದನ್ನು ರೈತರು ಪ್ರಶ್ನಿಸುತ್ತಿದ್ದಾರೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಚಿವ ಎಂಬಿ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು.…
ಮೈಸೂರು : ಕೇವಲ 300 ರೂಪಾಯಿ ಸಲುವಾಗಿ ಸಹೋದರರ ಮಧ್ಯ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಈ ವೇಳೆ ಮನನೊಂದ ತಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಹಲ್ಯ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಿದ್ದರಾಜು ಎಂದು ಹೇಳಲಾಗುತ್ತಿದೆ. ಕರೆಂಟ್ ಬಿಲ್ ಕಟ್ಟಿ ಮನೆಗೆ ಬಂದ ಸಿದ್ದರಾಜು ಅಣ್ಣ ನಿಂಗಣ್ಣನ ಬಳಿ 200 ರೂಪಾಯಿ ಕರೆಂಟ್ ಬಿಲ್ ಕಟ್ಟಿದ್ದೇನೆ 200 ರೂ ಕೊಡು ಎಂದು ಕೇಳಿದ್ದಾನೆ. ಈ ವೇಳೆ ನನ್ನ ಬಳಿ ಹಣ ಕೇಳುತ್ತೀಯಾ ನಿಂಗಣ್ಣ ತಮ್ಮ ಸಿದ್ದರಾಜು ಮೇಲೆ ಹಲ್ಲೆ ಮಾಡಿದ್ದಾನೆ. ಕರೆಂಟ್ ಬಿಲ್ ಕಟ್ಟಿ ತನ್ನ 200 ರೂಪಾಯಿ ಕೇಳಿದ್ದಕ್ಕೆ ಅಣ್ಣ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಮನನೊಂದು ಸಿದ್ದರಾಜು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಈ ಒಂದು ಆತ್ಮಹತ್ಯೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಈ ಬಾರಿಯ ದೀಪಾವಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು ಅದು ರಾತ್ರಿ 8 ಗಂಟೆಯಿಂದ 10 ಗಂಟೆಗಳ ಕಾಲದವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಕ್ಷಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಒಂದು ಆದೇಶ ನೀಡಿದೆ. ಹಾಗಾಗಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿದೆ ಎಂದರು. ಇನ್ನು ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ ಸಿಇಓ ಗಳಿಗೆ ಸೂಚನೆ ನೀಡಿದ ಅವರು, ಪಟಾಕಿ ಸಿಡಿಸುವ ಸಂದರ್ಭದಲ್ಲಿ ಯಾವುದೇ ಸಾವು ನೋವುಗಳಾಗದಂತೆ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿಗಳು ಕಂಡುಬಂದಲ್ಲಿ ಅಂತಹ ಪಟಾಕಿ ಮಾಲೀಕರ ಗೋದಾಮಿನ ಮೇಲೆ ದಾಳಿ ಮಾಡಿ, ಮಾಲೀಕರ ವಿರುದ್ಧ…
ಬೆಂಗಳೂರು : ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ ನಲ್ಲಿ ಭಾರಿ ಮಳೆಯಾಗಿದ್ದು ಈ ಒಂದು ಮಳೆಯ ಅವಾಂತರದಿಂದ ಅನೇಕ ಪ್ರದೇಶಗಳಲ್ಲಿ ಬೆಳೆಹಾನಿ ಸೇರಿದಂತೆ ಅನೇಕರು ಮನೆಗಳನ್ನು ಕಳೆದುಕೊಂಡಿದ್ದಾರೆ. ಇದೀಗ ಪೂರ್ತಿಯಾಗಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಹಾನಿಯ ಬಗ್ಗೆ ಡಿಸಿ ಸಿಇಓಗಳ ಹಾಗೂ ಎಸ್ ಪಿ ಗಳ ಸಭೆ ಮಾಡಿದ್ದೇನೆ. ಬೆಂಗಳೂರು ಸೇರಿದಂತೆ ಹಲವೆಡೆ ಹಿಂಗಾರು ಮಳೆಯಿಂದ ಹಾನಿಯಾಗಿದೆ. ಅಕ್ಟೋಬರ್ 1 ರಿಂದ 25 ರವರೆಗೆ 181 ಮಿಲಿ ಮೀಟರ್ ಮಳೆಯಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ…
ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಡಿಸಿಗಳು ಹಾಗೂ ಎಸ್ ಪಿ ಗಳಿಗೆ ಸೂಚನೆ ನೀಡಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿ ಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಡಿಸಿಗಳು ಮತ್ತು ಎಸ್ ಪಿ ಗಳಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತು ಖಡಕ್ ಸೂಚನೆ ನೀಡಿದ್ದಾರೆ. ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ…
ವಿಜಯನಗರ : ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹೇಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿವೆ.ಇದರ ಬದನಲ್ಲೇ ಈ ಒಂದು ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಕೊಟ್ಟೂರಿನ ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದೆ. ಕೊನೆಯ ದಾಗಿ ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಯೋಗೇಶ್ವರ್ ಅವರನ್ನು ಹರಕೆಯ ಕುರಿ ಮಾಡಲು ಮುಂದಾಗಿದ್ದಾರೆ. ಬಿಜೆಪಿಯವರು ನಿಖಿಲ್…
ಶಿವಮೊಗ್ಗ : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿದಂತೆ ಒಟ್ಟು 8 ಜನ ಬಿಜೆಪಿ ಶಾಸಕರು ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಈ ಒಂದು ವಿಚಾರವಾಗಿ ಶಿವಮೊಗ್ಗದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು, ಪ್ರತಿಕ್ರಿಯೆ ನೀಡಿ, ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನು 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಎಸ್ ಟಿ ಸೋಮಶೇಖರ್ ವಿಷಯದ ಬಗ್ಗೆ ಮಾತಾಡಿರುವುದರಿಂದ ಅವರಿಂದಲೇ ಹೆಚ್ಚಿನ ವಿವರಣೆ ಸಿಗಬಹುದು ಎಂದರು. ಇನ್ನು HDK ಕುರಿತಾಗಿ ಮಾತನಾಡಿದ ಅವರು, ಕೇಂದ್ರ ಭಾರೀ ಕೈಗಾರಿಕೆ ಮತ್ತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಮುಚ್ಚಿರುವ ಹೆಚ್ಎಂಟಿ ಕಾರ್ಖಾನೆಯನ್ನು ಪುನರಾರಂಭಿಸುವ ಬಗ್ಗೆ ಮಾತಾಡುತ್ತಾರೆ. ಈ ವೇಳೆ ಗೃಹಸಚಿವ ಜಿ ಪರಮೇಶ್ವರ್, ಹೆಚ್ಎಂಟಿ ಕಾರ್ಖಾನೆ ಮುಚ್ಚಿಹೋಗಿರುವುದರಿಂದ ಅದಕ್ಕೆ ನೀಡಿದ ಜಮೀನನ್ನು…
ಮಂಗಳೂರು : ಸಾಮಾನ್ಯವಾಗಿ ಉದ್ಯಮಿಗಳು ಹಾಗೂ ಬ್ಯಾಂಕ್ ನೌಕರರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಅವರ ಖಾತೆಗಳನ್ನು ಹ್ಯಾಕ್ ಮಾಡುವುದು ಅಥವಾ ನಕಲಿ ಖಾತೆಗಳನ್ನು ಸೃಷ್ಟಿಸಿದ್ದನ್ನು ನೋಡಿದ್ದೇವೆ. ಆದರೆ ಇದೀಗ ಸೈಬರ್ ವಂಚಕರು ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೇ ಮಂಗಳೂರಲ್ಲಿ ನಡೆದಿದೆ. ಹೌದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅವುಗಳ ಮುಖಾಂತರ ಫ್ರೆಂಡ್ಸ್ ರಿಕ್ವೆಸ್ಟ್ ಗಳನ್ನ ಅಕ್ಸೆಪ್ಟ್ ಮಾಡಿಕೊಂಡು, ಮೆಸೆಂಜರ್ ಮುಖಾಂತರ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ : ದೇಶದ ಜನತೆ ಯಾರೊಂದಿಗೂ ದ್ವೇಷ ಮಾಡಬಾರದು. ಎಲ್ಲಾ ಜಾತಿ ಧರ್ಮದವರನ್ನು ಪ್ರೀತಿಸಬೇಕು ದ್ವೇಷ ಎಂಬ ಬೀಜವನ್ನು ಬಿತ್ತುವರನ್ನು ವಿರೋಧಿಸಬೇಕು ಎಂದು ಐತಿಹಾಸಿಕ ಕಿತ್ತೂರು ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ಈ ಒಂದು ಕಾರ್ಯಕ್ರಮ ನಡೆಯುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೇಳಿದವರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೊದಲಿಗರು. ಬ್ರಿಟಿಷರು ಈ ದೇಶವನ್ನು 200 ವರ್ಷಗಳ ಕಾಲ ಆಳಿದರು. ವಿದೇಶಿಯರು ಈ ದೇಶ ಆಳಬಾರದೆಂದು ಕಿತ್ತೂರು ರಾಣಿ ಚೆನ್ನಮ್ಮ ಹೋರಾಡಿದರು. ಅಮಟೂರು ಬಾಳಪ್ಪ, ಸಂಗೊಳ್ಳಿ ರಾಯಣ್ಣ ಚೆನ್ನಮ್ಮನ ಜೊತೆಗೆ ಇದ್ದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಿತ್ತೂರು ಸಂಸ್ಥಾನ ಉಳಿಸಿಕೊಳ್ಳಲು ರಾಣಿ ಚೆನ್ನಮ್ಮ ಪ್ರಾಣ ತ್ಯಾಗ ಮಾಡಿದರು.ಈ ದೇಶಕ್ಕೆ ಅಷ್ಟು ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿಲ್ಲ. ಯಾವುದೇ ಕಾರಣಕ್ಕೂ ಈ ದೇಶದ ಜನತೆ ದ್ವೇಷ ಮಾಡಬಾರದು. ಯಾವುದೇ ಜಾತಿ ಧರ್ಮದವರಿದ್ದರು ಪರಸ್ಪರ ಪ್ರೀತಿಸಬೇಕು ದ್ವೇಷ ಮಾಡಿ ಎಂದು ವಿಷ…
ಬೆಂಗಳೂರು : ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಂಗಳೂರಿನ 91ನೇ CCH ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಈ ಒಂದು ಪ್ರಕರಣದಲ್ಲಿ ವಿ ಸೋಮಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2013 ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಎನ್ನುವವರು ವಿ.ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ.ಲ್ ಎಂದು ಖಾಸಗಿ ದೂರು ಸಲ್ಲಿಸಿದ್ದರು.ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಏಕಸದಸ್ಯ ಪೀಠ, ರಾಮಕೃಷ್ಣ ಅವರ ಆರೋಪಕ್ಕೆ ಪೂರಕ ಸಾಕ್ಷಿ ಇಲ್ಲವೆಂದು ಪಿಸಿಆರ್ ಅನ್ನು ವಜಾಗೊಳಿಸಿದೆ. ಪ್ರಕರಣ ಹಿನ್ನೆಲೆ? 2013 ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ…













