Author: kannadanewsnow05

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಹಗರಣದ ಶೀಘ್ರ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಸಿಬಿಐ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಸಿಬಿಐಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಈ ಕುರಿತಂತೆ ಬಿಜೆಪಿಯ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ ಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್‌ಬಂಗಾರಪ್ಪ ಸಲ್ಲಿಸಿರುವ ಅರ್ಜಿ ಗುರುವಾರ ನ್ಯಾ| ಎಂ.ನಾಗ ಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಗೆ ನಡೆಸಿತು.ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿ ಗೊಳಿಸಿ ವಿಚಾರಣೆ ಮುಂದೂಡಿದೆ. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಪಿ.ವೆಂಕಟೇಶ್ ದಳವಾಯಿ ವಾದ ಮಂಡಿಸಿ, ದುರ್ಬಲ ವರ್ಗದವರಿಗೆ ಮೀಸ ಲಿಟ್ಟ ಹಣವನ್ನು ಲೂಟಿ ಮಾಡಲಾಗಿದೆ. ಸಿಬಿಐ ಎಫ್‌ಐಆ ‌ದಾಖಲಿಸಿಕೊಂಡು 5 ತಿಂಗಳಾಗಿವೆ. ತನಿಖೆ ನಡೆಸಿಲ್ಲ. ಇಂತಹ ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿ ಯಲ್ಲಿ ತನಿಖೆ ನಡೆಸಬೇಕಾದರೆ ನ್ಯಾಯಾ ಲಯವು ಮೇಲ್ವಿಚಾರಣೆ ನಡೆಸುವ ಅಗತ್ಯವಿದೆ.…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆದಿತ್ತು. ಇದೀಗ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯ ತಿಳಿದುಬರಲಿದೆ. ಚನ್ನಪಟ್ಟಣದಲ್ಲಿ ಬೆಳಿಗ್ಗೆ 8 ಗಂಟೆಗೆ ಇವಿಎಂ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಬೆಂಗಳೂರು ಮೈಸೂರು ಹೆದ್ದಾರಿ ಬಳಿ ಇರುವ ಈ ಒಂದು ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ 88.81ರಷ್ಟು ಮತದಾನವಾಗಿತ್ತು. ಕಾಲೇಜಿನ ಮೂರು ಹಾಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟು 20 ಸುತ್ತು ನಡೆಯಲಿರುವ ಮತ ಎಣಿಕೆ ಕಾರ್ಯ. 14 ಟೇಬಲ್ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ…

Read More

ಬೆಂಗಳೂರು : ಈಗಾಗಲೇ ಹೇಳಿರುವಂತೆ ಸರ್ಕಾರಿ ನೌಕರರು ಆದಾಯ ತೆರಿಗೆ (IT) ಪವತಿಸುವವರನ್ನು ಹೊರತುಪಡಿಸಿ ಉಳಿದ ಅರ್ಹ ಪಡೀತರ ಚೀಟಿದಾರರ BPL ಕಾರ್ಡ್ ಗಳನ್ನು ರದ್ದು ಮಾಡಲ್ಲ ಎಂದು ಆಹಾರ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದರು. ಇದೀಗ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (2)ರ ನಡವಳಿಯಲ್ಲಿ ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದ. 1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ…

Read More

ಮೈಸೂರು : ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.ಅವರು ಇಂದು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು. ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಗ್ಯಾರಂಟಿ ಯೋಜನೆಗಳು ಜಾರಿ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ.…

Read More

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈಗಳ ಬೆರಳುಗಳು ಛಿದ್ರ ಛಿದ್ರವಾಗಿ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಕಳೆದ ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ನಡೆದಿತ್ತು. ಇದೀಗ ಈ ಒಂದು ಸ್ಫೋಟದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಾಯಗೊಂಡ ಮಹಿಳೆಯ ಪ್ರಿಯಕರ ತನ್ನ ಪ್ರೀತಿಗೆ ಅಡ್ಡಿಯಾಗಿದ್ದಾಳೆಂದು ಆಕೆಯ ಸ್ನೇಹಿತೆಯ ಕೊಲೆಗೆ ಹಾಕಿದ್ದ ಎನ್ನಲಾಗಿದೆ. ಹೌದು ಹೇರ್ ಡ್ರೈಯರ್ ಸ್ಪೋಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಗೆ ಅಡ್ಡ ಬಂದವಳ ಕೊಲೆಗೆ ಆರೋಪಿ ಸಿದ್ದಪ್ಪ ಎನ್ನುವವ ಸ್ಕೆಚ್ ಹಾಕಿದ್ದ ಎನ್ನಲಾಗಿದೆ. ಆದರೆ ಆರೋಪಿಯು ತಾನು ಮಾಡಿದ್ದ ಪ್ಲಾನಿಗೆ ತನ್ನ ಪ್ರಿಯತಮೆನೆ ಬಲಿಯಾಗಿದ್ದಾಳೆ. ನವೆಂಬರ್ 20ರಂದು ಈ ಒಂದು ಹೇರ್ ಡ್ರೈಯರ್ ಸ್ಪೋಟ ಪ್ರಕರಣ ನಡೆದಿತ್ತು. ಇಳಕಲ್ ಠಾಣೆ ಪೋಲಿಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಆರೋಪಿ ಸಿದ್ದಪ್ಪ ಶೀಲವಂತರನಿಂದ ಶಶಿಕಲಾ ಎನ್ನುವ ಮಹಿಳೆಯ ಕೊಲೆಗೆ ಸ್ಕೆಚ್ ಹಾಕಿದ್ದ. ಆರೋಪಿ ಸಿದ್ದಪ್ಪನ ಪ್ರೀತಿಗೆ ಶಶಿಕಲಾ ಹಡಪದ ಅಡ್ಡ…

Read More

ಬೀದರ್ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಹಲವರನ್ನು ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಬೀದರ್ ನಲ್ಲಿ ಬುಡಾದ ಕಮಿಷನರ್ ಶ್ರೀಕಾಂತ್ ಚಿಮಕೋಡೆ 10 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಹೌದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಆಗಿರುವ ಶ್ರೀಕಾಂತ್ ಚಿಮಾಕೋಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ 40 ಲಕ್ಷ ಲಂಚ ನೀಡುವಂತೆ ಬುಡಾ ಕಮಿಷನರ್ ಶ್ರೀಕಾಂತ್ ಚಿಮಕೋಡೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸಿದ್ದು ಹೂಗಾರ್ ಎನ್ನುವ ವ್ಯಕ್ತಿಯ ಬಳಿ 40 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೀಗ ಇಂದು 10 ಲಕ್ಷ ರೂಪಾಯಿ ಲಂಚ…

Read More

ದಾವಣಗೆರೆ : ವಾಜಪೇಯಿ, ಮೋದಿ ಪ್ರಧಾನಿ ಆಗದಿದ್ದರೆ ಭಾರತ ಪಾಕಿಸ್ತಾನ್ ಆಗ್ತಾ ಇತ್ತು. ಹಿಂದೂ ರಾಷ್ಟ್ರ ಉಳಿಸಲು ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ವಕ್ಫ್ ರದ್ದತಿಗೆ ಮೋದಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದಕ್ಕೆ ಹಿಂದೂಗಳು ಬೆಂಬಲ ಕೊಡಬೇಕು. ಎಲ್ಲ ಮಠಾಧೀಶರು ಹೋರಾಟಕ್ಕೆ ಇಳಿಯಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಮಾಡಲು ನಾವು ಹೋರಾಟ ಮಾಡಬೇಕು, ಹಿಂದೂಗಳು ಉಳಿಯಲು ಎಲ್ಲರೂ ಒಂದಾಗಬೇಕು. ಮೂರು ಚುನಾವಣೆ ಮೇಲೆ ದುಷ್ಪರಿಣಾಮ ತಪ್ಪಿಸಲು ನೋಟಿಸ್​ ಹಿಂಪಡೆಯಲು ಸಿದ್ದರಾಮಯ್ಯ ಹೇಳಿದ್ದಾರೆ. ಕಾಲಂ ನಂಬರ್ 11 ತೆಗೆಯಲು ಹೇಳಿಲ್ಲ. ವಕ್ಫ್ ಹಠಾವೋ ಅಲ್ಲ, ಕಾಂಗ್ರೆಸ್ ಹಠಾವೋ ಎನ್ನಬೇಕಿದೆ ಎಂದರು. ಇನ್ನು ಜಮೀರ್ ಅಹ್ಮದ್ ವಿರುದ್ಧ ಕಿಡಿ ಕಾರಿದ ಅವರು, ಸಚಿವ ಜಮೀರ್ ಅಹಮ್ಮದ್ ಖಾನ್​ ಹಿಂದೂಗಳ ಮಠದ ಆಸ್ತಿ, ರೈತರ ಆಸ್ತಿ ನುಂಗಲು ಮುಂದಾಗಿದ್ದಾನೆ. ವಕ್ಫ್​ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಜನ ಸುವರ್ಣಸೌಧಕ್ಕೆ ಮುತ್ತಿಗೆ…

Read More

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಹಾಗೂ ಜನರಲ್ ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣ ವಾಟ್ಸ್ ಅಪ್ ನಲ್ಲಿ ಅವಮಾನಕರವಾದಂತ ಪೋಸ್ಟ್ ಹಾಕಿದ್ದು, ಇದೀಗ ಕೊಡವ ಸಂಘಟನೆಗಳು ಪೊಲೀಸರಿಗೆ ದೂರು ನೀಡಿ, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿವೆ. ಆರೋಪಿಯನ್ನು ಶ್ರಿವತ್ಸ ಭಟ್ ಎಂದು ತಿಳಿದುಬಂದಿದೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಚ್ಛವಾಗಿ ಅಪಮಾನ ಮಾಡಿದ್ದರೆ.ಶ್ರಿವತ್ಸ ಭಟ್​ರನ್ನು ಬಂಧನ ಹಾಗೂ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಕೊಡಗು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೂ ಲಿಖಿತ ದೂರು ನೀಡಲಾಗಿದ್ದು, ಆರೋಪಿಯನ್ನ ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಜಿಲ್ಲೆಯ ಸಪ್ತ ಸಾಗರ ಎಂಬ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದರು. ಬಳಿಕ ಇದರ ಸ್ಕ್ರೀನ್ ಶಾಟ್​ ಎಲ್ಲಾ ಕಡೆ ವೈರಲ್ ಆಗಿದ್ದು, ಅವರ ವಿರುದ್ಧ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ಮಕ್ಕಳನ್ನೇ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೇ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ. 7 ವರ್ಷದ ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕೊಲೆಯಾದ ಮಕ್ಕಳನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು (7) ಮತ್ತು ಶಿಯಾ (3) ಎನ್ನುವ ಮಕ್ಕಳನ್ನು ಮಮತಾ ಸಾಹು ಎನ್ನುವ ತಾಯಿ ಕೊಂದಿದ್ದಾಳೆ. ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಭೀಕರವಾದಂತಹ ಕೊಲೆ ನಡೆದಿದ್ದು, ಕೊಲೆ ಕುರಿತಂತೆ ಮಕ್ಕಳ ತಂದೆ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಇದೀಗ ದೂರು ನೀಡಿದ್ದಾರೆ. ಸದ್ಯ ತಂದೆಯ ದೂರಿನ ಮೇರೆಗೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಕೊಲೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು ಸುದ್ದಿಯಾಗಿತ್ತು. ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿ, ಯಾರೋ ಅದು ಹಾಗೆ ಹೇಳಿದ್ದು, ಈ ವಿಷಯಾನ ಗಂಭೀರವಾಗಿ ತಗೊಳ್ಬೇಕು, ಯಾರು ಅಂತ ಫೈಂಡ್ ಔಟ್ ಮಾಡಿ ಕ್ರಮ ತಗೊಳ್ಳಿ ಎಂದು ಪಕ್ಕದಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಹೇಳಿದರು. ಈ ಕುರಿತಾಗಿ ಸ್ಪಷ್ಟನೆ ನೀಡಿದ ಅವರು, ನಾನು ವಿದ್ಯಾರ್ಥಿ ಮೇಲೆ ಕ್ರಮದ ಬಗ್ಗೆ ಎಲ್ಲೂ ಮಾತನಾಡಿಲ್ಲ. ಮಕ್ಕಳ ಮೇಲೆ ಪ್ರಾಂಶುಪಾಲರಿಗೆ ಹತೋಟಿ ಇರಬೇಕು. ಅದಕ್ಕೆ ಪ್ರಾಂಶುಪಾಲರಿಗೆ…

Read More