Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದರು. ದೇವಸ್ಥಾನವು ಪ್ರತಿವರ್ಷ ಅಂದಾಜು ₹ 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲ್ಯಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು. ಇದಲ್ಲದೇ ಪ್ರವಾಸೋದ್ಯಮ ಇಲಾಖೆಯ…
ಗದಗ : ಗದಗದಲ್ಲಿ ಮತ್ತೊಬ್ಬ ನಟ ಯಶ್ ಅಭಿಮಾನಿ ಸಾವನ್ನಪ್ಪಿದ್ದು, ಯಶ್ ಅಭಿಮಾನಿ ನಿಖಿಲ್ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಖಿಲ್ ಕೊನೆಯುಸಿರೆಳದಿದ್ದಾನೆ. ಎಂದು ಹೇಳಲಾಗುತ್ತಿದೆ ಯಶ್ ನೋಡಲು ಅಭಿಮಾನಿ ನಿಖಿಲ್ ಬೈಕ್ ನಲ್ಲಿ ಬಂದಿದ್ದ ಎಂದು ಹೇಳಲಾಗುತ್ತಿದೆ. ಈ ವೇಳೆ ಹಿಂಬಾಲಿಸುತ್ತಿದ್ದ ಅಭಿಮಾನಿ ನಿಖಿಲ್ ಬೈಕ್ ಗೆ ಈ ಸಂದರ್ಭದಲ್ಲಿ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಉತ್ತಮ ವಾಹನದಲ್ಲೇ ನಿಖಿಲನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಗದಗದ ಮುಳಗುಂದ ನಾ ಕಾ ಬಳಿ ಈ ಪದದ ನಡೆದಿತ್ತು ಯಶ್ ವಾಪಸ್ ತೆರಳು ವೇಳೆ ನಡೆದ ದುರಂತವಾಗಿತ್ತು. ಇದಿಗnಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಾಯಾಳು ನಿಖಿಲ ಸಾವನ್ನಪ್ಪಿದ್ದಾರೆ, ನಿಖಿಲ್ ಗದಗ ತಾಲೂಕಿನ ಬಿಂಕದಕಟ್ಟೆ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದ್ದು, ಗದಗ ನಗರದ ಮುಳಗೊಂಡ ನಾಕಾ ಬಳಿ ನಿನ್ನೆ ಯಶ್ ಬೆಂಗಾವಲು ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿತ್ತು. ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಶಾಕ್ ನಿಂದ ಗದಗ…
ಬೆಂಗಳೂರು : ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡರು. ನಾರಾಯಣಗೌಡ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ನ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಪರಪ್ಪನ ಅಗ್ರಹಾರದ ಜೈಲಿನಿಂದ ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆಯಾಗಿದ್ದಾರೆ. ನಾರಾಯಣಗೌಡ ರಿಲೀಸ್ ಆಗುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿ ಹಲವರು ಭಾಗಿಯಾಗಲಿದ್ದಾರೆ.ಸಭೆಗೆ ಹಾಜರಾಗಲು ಕಲ್ಯಾಣ ಕರ್ನಾಟಕ ಭಾಗದ ಸಚಿವರಿಗೂ ಕೂಡ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಒಳಪಡುವಂತಹ ಜಿಲ್ಲೆಗಳ ಅಭಿವೃದ್ಧಿ ಕೋರಿದಂತೆ ಚಲಿಸಲಾಗುತ್ತದೆ ಹಾಗೂ ಅಭಿವೃದ್ಧಿಗಾಗಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದರ ಕುಡಿತಂತೆ ಚರ್ಚಿಸಲಾಗುತ್ತದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿ ಹಲವು ಸರಕಾರಿ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ವಿಜಯನಗರ ಜಿಲ್ಲೆಯ ಬೆಸ್ಕಾಂ ಅಧಿಕಾರಿಯಾಗಿರುವ ನಾಗರಾಜ್ ಎನ್ನುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ನಾಗರಾಜ್ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೂಡ್ಲಿಗಿ ಪಟ್ಟಣ ಗುಡೆಕೋಟೆ ಗ್ರಾಮದ ಮನೆಗಳಲ್ಲಿ ಲೋಕಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಕೂಡ್ಲಿಗಿ ಪಟ್ಟಣ ಗುಡೆಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಆರೋಪ ಹಿನ್ನೆಲೆಯಲ್ಲಿ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್,ಮನೆ,ಜಮೀನು ಖರೀದಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಚಿತ್ರದುರ್ಗ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಮಂಡ್ಯದ ಮೂರು ಕಡೆ ದಾಳಿ ಅದೇ ರೀತಿ ಮಂಡ್ಯದ ಬಿಬಿಎಂಪಿ ಅಧಿಕಾರಿ ಮಂಜೇಶ್ ಎನ್ನುವವರಿಗೆ ಬೆಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಜೇಶ್ ಮನೆ ಸೇರಿದಂತೆ ಹಾಗೂ ಅವರ…
ಮಂಡ್ಯ : ಬಿಬಿಎಂಪಿ ಅಧಿಕಾರಿ ಮಂಜೇಶ್ ಎನ್ನುವವರಿಗೆ ಬೆಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಜೇಶ್ ಮನೆ ಸೇರಿದಂತೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಕುಂದಾಪುರ ಗ್ರಾಮದ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.ಅಲ್ಲದೆ ಮಂಜೇಶ್ ಸಂಬಂಧಿ ಸುರೇಂದ್ರಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದೆ.ಮದ್ದೂರು ತಾಲೂಕಿನ ಎಸ್ ಐ ಕೋಡಿಹಳ್ಳಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್ಐ ಕೋಡಿಹಳ್ಳಿಯಲ್ಲಿರುವ ಬಿಬಿಎಂಪಿ ಅಧಿಕಾರಿ ಮಂಜೇಶ್ ಅಜ್ಜಿ ಮನೆ ಸೇರಿದಂತೆ ಮಂಜೇಶ್ಗೆ ಸಂಬಂಧಿಸಿದಂತಹ ಪ್ರತಿಯೊಬ್ಬರ ನಿವಾಸದ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅದೇ ರೀತಿಯಾಗಿ ವಿಜಯನಗರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮನೆ ಮೇಲೆ ದಾಳಿ ನಡೆಸಿದೆ. ಅಲ್ಲದೆ ನಾಗರಾಜ್ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ…
ಬೆಂಗಳೂರು : ಬೆಂಗಳೂರಿನ ಮಹದೇವಪುರದ ಪಾರ್ಕಿನ ಸರ್ವಿಸ್ ರಸ್ತೆಯಲ್ಲಿ ಯುವಕನೊಬ್ಬ ಯುವತಿಯ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಸಂಭವಿಸಿದೆ. ಈ ಕುರಿತಂತೆ ಯುವತಿ ಇದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾಳೆ. ಮಹದೇವಪುರ ಪಾರ್ಕಿಂಗ್ ರಸ್ತೆಯಲ್ಲಿ ಕಾರ್ ಪಾರ್ಕ್ ಮಾಡಿ ಯುವತಿ ಕಾರಿನಲ್ಲಿ ಕುಳಿತುಕೊಂಡಿದ್ದಳು.ಈ ವೇಳೆ ಕಾರಿನ ಮುಂಭಾಗದಲ್ಲಿ ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ.ಹಸ್ತ ಮೈಥುನ ಮಾಡಿಕೊಂಡು ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ತಿಳಿಸಿದ್ದಾಳೆ. ಇದರಿಂದ ಹೆದರಿದ ಯುವತಿಯು ತಕ್ಷಣ ಕಾರ್ ಡೋರ್ ಅನ್ನು ಲಾಕ್ ಮಾಡಿಕೊಂಡಿದ್ದಾಳೆ. ಆನಂತರ ಕಾರಿನ ಬಳಿ ಬಂದು ಅಪರಿಚಿತ ವ್ಯಕ್ತಿ ಕಾರಿನ ಸುತ್ತ ಓಡಾಡಿದ್ದಾನೆ. ನಂತರ ಬೆದರಿಕೆ ಆಗೋ ದೃಷ್ಟಿಯಲ್ಲಿ ಯುವತಿಯನ್ನು ನೋಡಿದ್ದಾನೆ ಇದರಿಂದ ತಪ್ಪಿಸಿಕೊಳ್ಳಲು ಯುವತಿ ಕಾರಿನ ಸ್ಟಿಯರಿಂಗ್ ಕೆಳಗೆ ಅವಿತುಕೊಂಡಿದ್ದಾಳೆ. ನಂತರ ಸ್ನೇಹಿತರೊಬ್ಬರು ಬಂದ ನಂತರ ಕಾರಿನಿಂದ ಯುವತಿ ಕೆಳಗಿಳಿದಿದ್ದಾಳೆ ಟ್ವೀಟ್ ನಲ್ಲಿ ತಾನು ಅನುಭವಿಸಿದ ಸಮಸ್ಯೆ ಬಗ್ಗೆ ಯುವತಿ ಮಾಹಿತಿ ಹಂಚಿಕೊಂಡಿದ್ದಾಳೆ.ಜನವರಿ 5ರಂದು ಮಹದೇವಪುರದಲ್ಲಿ ನಡೆದಿರುವ ಘಟನೆ ಬಗ್ಗೆ ಉಲ್ಲೇಖಿಸಲಾಗಿದೆ.ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ…
ಕೋಲಾರ : ಜಿಲ್ಲೆಯ, ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯಲ್ಲಿ ಇಡಿ ಹಾಗೂ ಐಟಿ ಅಧಿಕಾರಿಗಳಿಂದ ಶೋಧಕಾರ್ಯ ಮುಂದುವರಿಡಿದ್ದು, ಕಳೆದ 24 ಗಂಟೆಯಿಂದ ಇಡೀ ಅಧಿಕಾರಿಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಶಾಸಕ ಕೆ ವೈ ನಂಜೇಗೌಡ ಮನೆ ಸೇರಿದಂತೆ 15 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ವೇಳೆ ಲಕ್ಷಾಂತರ ರೂಪಾಯಿ ಹಣ ಹಾಗೂ ದಾಖಲೆಗಳು ಸಿಕ್ಕಿರುವ ಮಾಹಿತಿ ಬಂದಿದ್ದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಮ್ಮನಹಳ್ಳಿ ಶಾಸಕರ ನಿವಾಸ ಕೋಚಿಮಲ್ ಕಚೇರಿ, ಕೋಚಿಮಲ್ ಎಂಡಿ ಗೋಪಾಲಮೂರ್ತಿ ಅವರ ಮನೆ ಹಾಗೂ ಅಡ್ಮಿನ್ ಮ್ಯಾನೇಜರ್ ನಾಗೇಶ್, ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್ ಮನೆ ಕಚೇರಿಗಳಲ್ಲಿ ಇಡಿ ಹಾಗು ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ. ಸರ್ಕಾರಿ ಜಮೀನು ಅಕ್ರಮ ಮಂಜೂರಾತಿ ಹಾಗೂ ವಿದೇಶಿ ಹಣ ವರ್ಗಾವಣೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಎಲ್ಲಿ ನಿನ್ನೆ ಇಡಿ ಹಾಗು ಐಟಿ ಅಧಿಕಾರಿಗಳು ನಿನ್ನೆ ಕೆ ವೈ…
ಬೆಂಗಳೂರು: ರಾಜ್ಯದ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ 1 ರೂ ಹೆಚ್ಚಳ ಮಾಡಿದ್ದೂ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ ಗಳಲ್ಲಿ ಜ.1 ರಿಂದ 50 ರೂ. ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ. ಹೆಚ್ಚಿಗೆ ಪಡೆದ 1 ರೂ.ಗಳನ್ನು ಅಪಘಾತ ವಿಮೆಗೆ ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ಜನೆವರಿ 1ಕ್ಕೆ ಜಾರಿಯಾಗಿದೆ ಹೀಗಾಗಿ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ.ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ…
ವಿಜಯಪುರ : ಮೇಯರ್ ಮೀಸಲಾತಿ ವಿಚಾರ ಕುರಿತಂತೆ ವಿಜಯಪುರ ಮೇಯರ್ ಹಾಗೂ ಉಪಮೆಯರ್ ಚುನಾವಣೆಗೆ ಸಂಬಂಧಸಿದಂತೆ ಹೈಕೋರ್ಟ್ ಮೆಟ್ಟಿಲೇರಿತ್ತು ಇದೀಗ ವಿಚಾರಣೆ ನಂತರ ಮೇಯರ್ ಚುನಾವಣೆಗೆ ಹೈಕೋರ್ಟ್ ಅನುಮತಿ ನೀಡಿದೆ ಕಲಬುರ್ಗಿ ಹೈಕೋರ್ಟ್ ಪೀಠದಿಂದ ಚುನಾವಣೆಗೆ ಹಸಿರು ನಿಶಾನೆ ದೊರಕಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಇಂದು ಚುನಾವಣೆ ನಡೆಸಲಾಗುತ್ತಿದ್ದು, ವಿಜಯಪುರ ಮಹಾನಗರ ಪಾಲಿಕೆಯು , ಒಟ್ಟು 35 ಸದಸ್ಯರ ಬಲ ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರರು 5, ಎಂಐಎಂ2, ಜೆಡಿಎಸ್ ಒಂದು ಸ್ಥಾನ ಹೊಂದಿವೆ. ವಿಜಯಪುರ ಪಾಲಿಕೆ ಅಧಿಕಾರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರ ರಾಜಕೀಯ ಚಾಣಾಕ್ಷತೆಯಿಂದ ಬಹುತೇಕ ಕಾಂಗ್ರೆಸ್ ನಗರ ಪಾಲಿಕೆ ಅಧಿಕಾರಿ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಕಾಂಗ್ರೆಸ್ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ ಕಟಕಡದೊಂಡ, ಎಂಎಲ್ಸಿಗಳಾದ ಸುನಿಲ್ ಗೌಡ, ಪಾಟೀಲ್ ಪ್ರಕಾಶ್ ರಾಥೋಡ್, ನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್…