Author: kannadanewsnow05

ಬೆಂಗಳೂರು : ಬಿಜೆಪಿಯಲ್ಲಿ ಬಣ ರಾಜಕೀಯ ಇದೀಗ ಮತ್ತೆ ಮುಂದುವರೆದಿದ್ದು, ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಅತೃಪ್ತ ನಾಯಕರು ಭೇಟಿ ನೀಡಿ ಸಭೆ ನಡೆಸಿದ್ದಾರೆ. ಅರವಿಂದ್ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಸೇರಿದಂತೆ ಅತೃಪ್ತ ಬಣದ ನಾಯಕರು ಭೇಟಿ ನೀಡಿ, ವಕ್ಫ್ ಹೋರಾಟದ ಕುರಿತು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಅತೃಪ್ತ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ ಈ ಮೂಲಕ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಈ ನಾಯಕರು ಸೆಡ್ಡು ಹೊಡೆದಿದ್ದಾರೆ. ಭೇಟಿ ಬಳಿ ಒಂದೇ ಕಾರಿನಲ್ಲಿ ನಾಯಕರು ತೆರಳಿದ್ದಾರೆ ಹೀಗಾಗಿ ಅತೃಪ್ತ ನಾಯಕರು ಸಭೆ ಇದೀಗ ತೀವ್ರ ಕುತೂಹಲ ಮೂಡಿಸಿದೆ ಎಂದು ಹೇಳಲಾಗುತ್ತಿದೆ.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕು ಗೊಳಿಸಿದ್ದು, ಇದರ ಬೆನ್ನಲ್ಲೇ ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಸ್ನೇಹಮಯಿ ಕೃಷ್ಣ ಅವರ ಆಡಿಯೋ ಒಂದು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ದೂರು ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಈಗ ಹುಚ್ಚರಾಗಿದ್ದಾರೆ. ರಾತ್ರಿ ವೇಳೆಯಲ್ಲೂ ಲೋಕಾಯುಕ್ತ ಕಚೇರಿಯ ಸುತ್ತ ಸುತ್ತುತ್ತಿದ್ದಾರೆ. ಅವರ ಇನ್ನೊಂದು ಆಡಿಯೋ ನನಗೆ ಸಿಕ್ಕಿದೆ. ಈ ಬಗ್ಗೆ ಕಾನೂನಾತ್ಮವಾಗಿ ಹೋರಾಟ ಮಾಡುತ್ತೇನೆ. ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರನ್ನ ದಾಖಲಿಸುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ. ಕೆ. ಆರ್ ಕ್ಷೇತ್ರದ ಶಾಸಕ ಶ್ರೀವತ್ಸ, ಸಿಎಂ ಸಿದ್ದರಾಮಯ್ಯ ಅವರು ಮುಡಾದ 14 ಸೈಟ್​ಗಳನ್ನ ವಾಪಸ್‌ ಕೊಡುವವರೆಗೆ ಹೋರಾಟ ಮಾಡಿ ಈಗ ಸುಮ್ಮನಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಸ್ನೇಹ ಮೈ ಕೃಷ್ಣ…

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಗೂ ಇದೀಗ ನಂದಿನಿ ಉತ್ಪನ್ನಗಳು ಕಾಲಿಟ್ಟಿದ್ದು, ಇಂದು ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ದೇವತೆಗಳು ಸಾರಾಯಿ ಕುಡಿಯುತ್ತಿದ್ದರು. ಆದರೆ ನಿಮಗೆ ಸಾರಾಯಿ ಕುಡೀರಿ ಎಂದು ಹೇಳಲ್ಲ. ಹಾಲು ಕುಡಿಯಿರಿ ಹಾಲು ಕಂಪ್ಲೀಟ್ ಫುಡ್ ಎಂದು ತಿಳಿಸಿದರು. ಇಂದು ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ನಂದಿನಿ ಉತ್ಪನ್ನಗಳ ಬಿಡುಗಡೆ ಹಾಗೂ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಶು ಸಂಗೋಪನೆ ರೈತರು ಉಪ ಕಸುಬಾಗಿದೆ. ಗುಜರಾತ್ ನಲ್ಲಿ ಕುರಿಯನ್ ಹಾಲು ಉತ್ಪಾದಕರ ಸಂಘಟನೆ ಮಾಡಿದರು. ಹಾಗಾಗಿ ಇಡೀ ದೇಶಾದ್ಯಂತ ಗುಜರಾತ್ ಪ್ರಥಮ ಸ್ಥಾನದಲ್ಲಿದೆ. ಹೈನುಗಾರಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು. ನಾನು ಪಶು ಸಂಗೋಪನೆ ಇಲಾಖೆಯ ಸಚಿವನಾಗಿ ಕೆಲಸ ಮಾಡಿದ್ದೇನೆ. ಅಲ್ಲದೆ ಒಂದು ವರ್ಷ ಕೆಎಂಎಫ್ ಅಧ್ಯಕ್ಷನಾಗಿ ಕೂಡ ಕೆಲಸ ಮಾಡಿದ್ದೇನೆ. ಕರ್ನಾಟಕಕ್ಕೆ ಒಂದು…

Read More

ಚಿಕ್ಕಮಗಳೂರು : ರದ್ದುಪಡಿಸಿರುವ BPL ಕಾರ್ಡ್ ನಲ್ಲಿ ಬಡವರಿದ್ದರೆ, ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ?ಎಂದು ಚಿಕ್ಕಮಂಗಳೂರಿನಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನರ್ಹರರನ್ನು, ನೌಕರರನ್ನು, ಟ್ಯಾಕ್ಸ್ ಕಟ್ಟುವವರ ಕಾರ್ಡುಗಳನ್ನು ರದ್ದುಪಡಿಸಲಿ. ಕಾನೂನು ಪ್ರಕಾರ ಹೋದರೆ ಎಷ್ಟು ಕಾರ್ಡ್ ರದ್ದಾಗುತ್ತದೆ ಲೆಕ್ಕ ಹಾಕಿದ್ದೀರಾ? ಕೆಲವು ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಶಾಸಕರುಗಳು ಇವರು ನಮ್ಮ ಪಕ್ಷದವರೆಂದು ಕೆಲ ಕಾಡುಗಳನ್ನು ಉಳಿಸಿಕೊಂಡಿದ್ದಾರೆ. ಮುಸ್ಲಿಮರಿಗೆ ಮಾತ್ರ ಬಿಪಿಎಲ್ ಕಾರ್ಡ್, ಹಿಂದುಗಳಿಗೆ ಇಲ್ವಾ? ಒಂದು ಕೋಮಿನವರನ್ನು ತೆಗೆದು ಮತ್ತೊಬ್ಬರನ್ನು ಬಿಡುವುದು ಯಾವ ನ್ಯಾಯ? ಎಂದು ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Read More

ಉಡುಪಿ : ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯ ವೇಳೆ ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡುಗಳು ರದ್ದಾಗಿರುವ ಕುರಿತಾಗಿ, ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿಯ ಕೊಲ್ಲೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತಂತೆ ಹೇಳಿಕೆ ನೀಡಿದ್ದು, ಯಾರ್ಯಾರ ಕಾರ್ಡ್ ವಜಾ ಮಾಡಿದ್ದಾರೆ ಪಟ್ಟಿ ಕೊಡಬೇಕು ಎಂದು ಈಗಾಗಲೇ ಆಯಾ ಜಿಲೆಗಳ ಮಂತ್ರಿಗಳಿಗೆ ಸೂಚಿಸಲಾಗಿದೆ. ಯಾರು ಬಿಪಿಎಲ್ ಕಾರ್ಡ್ ಗಳಿಗೆ ಅರ್ಹರಿದ್ದಾರೋ ಅದನ್ನು ಸರಿ ಮಾಡಿ ಮರು ಅರ್ಜಿ ಸಲ್ಲಿಸಬೇಕು. ಅರ್ಹರಿಗೆ ನ್ಯಾಯ ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಯಾರು ಕೂಡ ಭಯಪಡಬಾರದು ಎಂದು ತಿಳಿಸಿದರು. ಬಿಪಿಎಲ್ ಅರ್ಹರಿಗೆ ಸರ್ಕಾರ ಅನ್ಯಾಯ ಆಗೋಕೆ ನಮ್ಮ ಪಕ್ಷ ಸರ್ಕಾರ ಬಿಡುವುದಿಲ್ಲ. ನಾವು ಈಗಾಗಲೇ ಮಂತ್ರಿಗಳಿಗೆ ಹೇಳಿದ್ದೇವೆ ಅದರ ಪಟ್ಟಿ ಕೊಡಬೇಕು ಎಂದು ಹೇಳಿದ್ದೇವೆ. ಅದಕ್ಕೆ ನಮ್ಮ ಗ್ಯಾರಂಟಿಗಳ…

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊಲೆ ನಡೆದ ಸ್ಥಳದ ಫೋಟೋವನ್ನು ಪೊಲೀಸರು ಇದೀಗ ರಿಕವರಿ ಮಾಡಿದ್ದಾರೆ. ಹೌದು ಪ್ರತ್ಯಕ್ಷದರ್ಶಿ ಮೊಬೈಲ್ ಫೋನಿನಿಂದ ಎರಡು ಫೋಟೋಗಳನ್ನು ಪೊಲೀಸರು ರಿಕವರಿ ಮಾಡಿದ್ದಾರೆ. ಆರೋಪಿ ಪುನೀತ್ ಮೊಬೈಲ್ ನಲ್ಲಿದ್ದ ಎರಡು ಫೋಟೋಗಳನ್ನು ಇದೀಗ ಪೊಲೀಸರು ರಿಕವರಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ಶೆಡ್ ನಲ್ಲಿ ದರ್ಶನ್ ನಿಂತಿರುವ ಫೋಟೋ ಇದಾಗಿದ್ದು, ಬ್ಲಾಕ್ ಜೀನ್ಸ್ ಪ್ಯಾಂಟ್ ಹಾಗೂ ಬ್ಲೂ ಟಿ-ಶರ್ಟ್ ಧರಿಸಿ ದರ್ಶನ್ ನಿಂತಿದ್ದರು. ಎಲ್ಲಾ ಆರೋಪಿಗಳ ಜೊತೆಗೆ ದರ್ಶನ್ ನಿಂತಿರುವ ಫೋಟೋವನ್ನು ರಿಕವರಿ ಮಾಡಿದ್ದಾರೆ. ಕೊಲೆ ಬಳಿಕ ತನ್ನ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಆರೋಪಿ ಪುನೀತ್ ಡಿಲೀಟ್ ಮಾಡಿದ್ದ. ಪುನೀತ್ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದರು. ಚಾರ್ಜ್ ಶೀಟ್ ನಲ್ಲಿ ಎರಡು ಫೋಟೋ ಬಗ್ಗೆ ಪೊಲೀಸರು ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳ ಕೆಲವು ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ, ಅಂತಹ ಅರ್ಹ ಫಲಾನುಭವಿಗಳಿಗೆ ಒಂದು ವಾರದಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮರುಹಂಚಿಕೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿಲ್ಲ ಆದಾಯ ತೆರಿಗೆದಾರರ ಮಾಹಿತಿ ಪಡೆದು ಅಂಥವರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.ಅಲ್ಲದೆ ಸರ್ಕಾರಿ ನೌಕರರನ್ನು ಪರಿಶೀಲಿಸಿ ಅವರ ಕಾರ್ಡುಗಳನ್ನು ಎಪಿಎಲ್ ಗೆ ಬದಲಾವಣೆ ಮಾಡಲಾಗುತ್ತದೆ. ಇನ್ನು ಬಿಪಿಎಲ್ ಕಾರ್ಡಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಕ್ರಮ ಕೈಗೊಂಡು ಅವರಿಗೂ ಅಕ್ಕಿ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಕರ್ನಾಟಕದಲ್ಲಿ ಶೇಕಡ 60ರಷ್ಟು ಬಿಪಿಎಲ್ ಕಾರ್ಡುಗಳು ಇವೆ ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ಕೇಂದ್ರದ ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಲಾಗಿದೆ. ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ 436 ಕಾರ್ಡ್ ಗಳು…

Read More

ಬೆಂಗಳೂರು : ಅರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಇದೀಗ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಸರ್ಕಾರ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಡ್ಗಳನ್ನು ಪರಿಶೀಲಿಸಿ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಗೆ ಸೇರಿಸಲಾಗಿದೆ. ಆದಾಯ ತೆರಿಗೆ ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿಲ್ಲ. ರಾಜ್ಯದಲ್ಲಿ 66 ಪರ್ಸೆಂಟ್ ಬಿಪಿಎಲ್ ಕಾರ್ಡ್ ಗಳಿವೆ. ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರದ ನಿಯಮಗಳ ಅನ್ವಯ ಕಾರ್ಡುಗಳನ್ನು ಪರಿಷ್ಕರಣೆ ಮಾಡಲಾಗಿದೆ ಬಿಪಿಎಲ್ ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್ ಎಪಿಎಲ್ ಗೆ ಬದ್ಲಾವಣೆ ಮಾಡಿದ್ದೇವೆ. ಆದರೆ…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇನ್ನೇನು ಎರಡೇ ದಿನಗಳಲ್ಲಿ ಪ್ರಕಟವಾಗುತ್ತದೆ. ಈ ಕುರಿತಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾತನಾಡಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವುದೇ ಅನುಮಾನವಿಲ್ಲ ಎನ್.ಡಿ.ಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲುತ್ತಾರೆ. ಚನ್ನಪಟ್ಟಣದಲ್ಲಿ ನಾನು 15 ದಿನ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಚನ್ನಪಟ್ಟಣ ಕ್ಷೇತ್ರದ ಜನತೆಯ ಭಾವನೆ ಏನು ಅಂತ ಗೊತ್ತಿದೆ. ಯಾವುದೇ ಅನುಮಾನ ಇಲ್ಲ ಎನ್‌ಡಿಎ ಅಭ್ಯರ್ಥಿಯೇ ಗೆಲ್ಲುತ್ತಾರೆ.ಇನ್ನು ಮಹಾರಾಷ್ಟ್ರ, ಜಾರ್ಖಂಡ್ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಜನರ ಆಶೀರ್ವಾದದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರದ ಮಾನದಂಡದಂತೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಇಂದು ಬಂದ ವರದಿ ಆಧಾರದಲ್ಲಿ ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಕಳೆದೊಂದು ವಾರ ಯಾಕೆ ಹೇಳಿಲ್ಲ? ಸರ್ಕಾರ ತನ್ನ ನಿಲುವಿಗೆ ಮತ್ತು ಜನರ ಪ್ರತಿಕ್ರಿಯೆಗೆ ಉತ್ತರ…

Read More

ಹಾಸನ : ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೂ ಕೂಡ ಇವರ ಗಲಾಟೆ ಮುಂದುವರೆದಿದ್ದು, ಇದರಿಂದ ಮನನೊಂದ ಕರುಣಾಕರ್ ಇಂದು ಬೆಳಿಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕರುಣಾಕರಿಗೆ ಒಂದು ಗಂಡು ಒಂದು ಹೆಣ್ಣು ಮಗುವಿದೆ. ಘಟನಾ ಸ್ಥಳಕ್ಕೆ ಎಳಸೂರು ಠಾಣೆ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Read More