Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ರಾಜ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎನ್ನಲಾಗುತ್ತಿದೆ. ಹಗರಣಗಳಿಗೆ ಸಂಬಂಧಿಸಿದಂತೆ ಈಡಿ ಅಧಿಕಾರಿಗಳು ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಹೌದು ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ ಸುಮಾರು 4 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದನ್ನು ಇಡಿ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ರಾಯಚೂರು ತಾಲೂಕಿನ ಆಸ್ಕಿಹಾಳ ಗ್ರಾಮದಲ್ಲಿ ದದ್ದಲ್ ಸಂಬಂಧಿ ಕಾರ್ತಿಕ್ ಎಂಬಾತ ಲಕ್ಷ್ಮೀದೇವಿ ಎಂಬ ಮಹಿಳೆಯಿಂದ 4 ಕೋಟಿ ರೂಪಾಯಿ ಕೊಟ್ಟು ಜಮೀನು ಖರೀದಿ ಮಾಡಿದ್ದ. ಕಾರ್ತಿಕ್, ಆಂಜನೇಯ ಎಂಬುವರ ಹೆಸರಿನಲ್ಲಿ ಜಮೀನು ನೋಂದಣಿಯಾಗಿದೆ. ಲಕ್ಷ್ಮೀದೇವಿಗೆ 25 ಲಕ್ಷ ಮೊತ್ತದ 3 ಚೆಕ್ಗಳನ್ನು ಕಾರ್ತಿಕ್, ಆಂಜನೇಯ ನೀಡಿದ್ದರು. ಉಳಿದ ಹಣವನ್ನ ನಗದು ರೂಪದಲ್ಲಿ ನೀಡಲಾಗಿತ್ತು…
ಬೆಂಗಳೂರು : ಸದ್ಯ ರಾಜ್ಯದಲ್ಲಿ ಮುಡಾ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಸದ್ದು ಮಾಡುತ್ತಿದ್ದು, ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮೈಸೂರಲ್ಲಿ ಇಂದು ಬಿಜೆಪಿ ಪ್ರತಿಭಟನೆ ಮಾಡಿತ್ತು.ಬಿಜೆಪಿ ನಾಯಕರ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದು, ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯ ಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸೈಟ್ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತು. ಈಗ 50:50 ಅನುಪಾತವೇ ಇಲ್ಲ. ನಿಮಗೆ ಜಮೀನು ಕೊಟ್ಟವನ ಅಸ್ತಿತ್ವವೇ ಯಕ್ಷ ಪ್ರಶ್ನೆಯಾಗಿದೆ. ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.1985ರಲ್ಲಿ ಇಂದಿರಾಗಾಂಧಿ ಸರ್ವಾಧಿಕಾರಿಯಾಗಿದ್ದರು. 2023-24ರಲ್ಲಿ ಸಿದ್ದರಾಮಯ್ಯ ಸರ್ವಾಧಿಕಾರಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮಗೆ ಹೋರಾಟ ಮಾಡಲು ಹಕ್ಕು ಇಲ್ವಾ? ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಗೆ ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಹೌದು ವಾಲ್ಮೀಕಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಈಗಾಗಲೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಲ ಗೆ ಮೂರು ಬಾರಿ ನೋಟಿಸ್ ನೀಡಿದ್ದರು.ಇಂದು ದದ್ದಲ್ ವಿಚಾರಣೆಗೆ ಹಾಜರಾಗಿದ್ದರು. ಆದರೆ ಇದೀಗ ಮತ್ತೆ ಎಸ್ಐಟಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಸತತ ಎಂಟು ಗಂಟೆಗಳ ನಂತರ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂದಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಳೆ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ಹಾಗೂ 8ನೇ ವೇತನ ಆಯೋಗದ ವರದಿ ಜಾರಿಗಾಗಿ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲಾಗಿದೆ.ಒಂದು ವೇಳೆ ಹಳೆಯ ಪಿಂಚಣಿ ಯೋಜನೆ ಜಾರಿಯಾಗದಿದ್ದರೆ ಜುಲೈ 29ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 7ನೇ ವೇತನ ಆಯೋಗ ಹಾಗೂ ಹಳೆ ಪಿಂಚಣಿ ಯೋಜನೆ (OPS) ಜಾರಿ ಕುರಿತು ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆ ಆಗಿದ್ದು ತಮ್ಮ ಬೇಡಿಕೆ ಈಡೇರಿಸಿದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಕೆಲಸ ಮಾಡದೇ ಮನೆಯಲ್ಲಿರುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ಈ ಹಿಂದೆ ಕೂಡ ಕರೆಕೊಟ್ಟಿತ್ತು. ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗಬಾರದು ಸರ್ಕಾರ ಕಸರತ್ತು ನಡೆಸಿತ್ತು. ಸರ್ಕಾರದ…
ಹುಬ್ಬಳ್ಳಿ : ಮಳೆಗಾಲದ ಪ್ರಯುಕ್ತ ವಿಶ್ವವಿಖ್ಯಾತ ಜೋಗ್ ಫಾಲ್ಸ್ ವೀಕ್ಷಣೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ವಿಶೇಷ ಬಸ್ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.ಹಾಗಾಗಿ ಹೆಚ್ಚಿನ ಬೇಡಿಕೆ ಬಂದಿರುವುದರಿಂದ ಬಸ್ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ್ ತಿಳಿಸಿದ್ದಾರೆ. ವಾರಂತ್ಯದಲ್ಲಿ ಜುಲೈ 14 ರಿಂದ ಪ್ರತಿ ಭಾನುವಾರ ಒಂದು ಮಲ್ಟಿ ಆಕ್ಸೆಲ್ ವೋಲ್ವೋ ಐರಾವತ ಎಸಿ ಹಾಗೂ ಒಂದು ರಾಜಹಂಸ ವಿಶೇಷ ಬಸ್ನ ವ್ಯವಸ್ಥೆ ಮಾಡಲಾಗಿತ್ತು. ಖಾಸಗಿ, ವೈಯಕ್ತಿಕ ವಾಹನ ಪ್ರಯಾಣಕ್ಕಿಂತ ಹೆಚ್ಚು ಆರಾಮದಾಯಕ ಹಾಗೂ ಮಿತವ್ಯಯಕರವಾಗಿರುವುದರಿಂದ ಮಾಹಿತಿ ಪ್ರಕಟಿಸಿದ 48 ತಾಸುಗಳಲ್ಲಿ ಎರಡೂ ಬಸ್ಗಳು ಭರ್ತಿಯಾಗಿದ್ದು, ಹೆಚ್ಚುವರಿ ಬಸ್ಗಳಿಗಾಗಿ ಸಾರ್ವಜನಿಕರಿಂದ ನಿರಂತರ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಮಲ್ಟಿ ಆ್ಯಕ್ಸಲ್ ವೋಲ್ವೋ ಎಸಿ ಐರಾವತ ಬಸ್ ಹಾಗೂ ರಾಜಹಂಸ ಬಸ್ನ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ. www.ksrtc.in ಅಥವಾ KSRTC Mobile…
ಬಾಗಲಕೋಟೆ : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದೂ, 11 ಯುವತಿಯರನ್ನ ರಕ್ಷಿಸಿದ್ದು, 9 ಜನರ ವಿರುದ್ಧ FIR ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಹೌದು ಬಾಗಲಕೋಟೆಯ ಮುಧೋಳ ನಗರದಲ್ಲಿ ನಾಲ್ಕು ಲಾಡ್ಜ್ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ಕು ತಂಡದಿಂದ ನಾಲ್ಕು ಲಾಡ್ಜ್ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ನಾಲ್ಕು ತಂಡದಿಂದ ನಾಲ್ಕು ಲಾಡ್ಜ್ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮುಧೋಳ ನಗರದ ಓಂಕಾರ, ಶಿವದುರ್ಗಾ,ಸಪ್ತಗಿರಿ, ಸುರಭಿ ಲಾಡ್ಜ್ ಮೇಲೆ ದಾಳಿ ಮಾಡಲಾಗಿದೆ. ಮುಧೋಳ ನಗರದ ಓಂಕಾರ, ಶಿವದುರ್ಗಾ,ಸಪ್ತಗಿರಿ, ಸುರಭಿ ಲಾಡ್ಜ್ ಮೇಲೆ ದಾಳಿ ಮಾಡಲಾಗಿದೆ. 11 ಯುವತಿಯರ ರಕ್ಷಣೆ ಮಾಡಲಾಗಿದ್ದು, ಲಾಡ್ಜ್ ಮ್ಯಾನೇಜರ್ ,ಮಾಲೀಕರು ಸೇರಿ ಒಂಬತ್ತು ಜನರ ಮೇಲೆ ಎಫ್ಐ ಆರ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ಆಸ್ಸಾಂ,ಕಲ್ಕತ್ತಾ,ಮುಂಬೈ ಮೂಲದ ಯುವತಿಯರು ಇದ್ದು, ಎಲ್ಲ 26, 27, 30 ವರ್ಷದವರಾಗಿದ್ದಾರೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ಆರೋಪದ ಮೇರೆಗೆ ದಾಳಿ ಮಾಡಿ,…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಹಗರಣದ ಕುರಿತು ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳಿಗೆ ಕೊಡದೆ ಇನ್ನೇನು ಬಿಜೆಪಿ ಅವರಿಗೆ ಕೊಡಬೇಕಾ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಭೈರತಿ ಸುರೇಶ್ ನಡೆದು ಐಎಎಸ್ ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ ಬಿಜೆಪಿಯವರಿಗೆ ತನಿಖೆಗೆ ಕೊಡಬೇಕಾ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಪ್ರಕರಣ ಮೆಚ್ಚಿ ಹಾಕುವುದಿಲ್ಲ ಸರ್ಕಾರ ಯಾರನ್ನು ಬಿಡುವುದಿಲ್ಲ ಸ್ವಲ್ಪ ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತದೆ. ವಿಶೇಷ ವಿಮಾನ ಹೆಲಿಕ್ಯಾಪ್ಟರ್ ನಲ್ಲಿ ದಾಖಲೆ ತಂದಿದ್ದಾರೆ ಎಂದು ವಿಪಕ್ಷ ನಾಯಕರ ರೂಪಕ್ಕೆ ಬೈರತಿ ಸುರೇಶ್ ತಿರುಗಿ ನೀಡಿದ್ದು ಯಾರು ದಾಖಲಿತರು ಆಗುತ್ತಾ? ನಾನೇನಾದರೂ ದಾಖಲೆ ತಂದಿದ್ರೆ ರಾಜೀನಾಮೆ ಕೊಡ್ತೀನಿ ಇಲ್ಲಾಂದ್ರೆ ಅವರು ಏನು ಮಾಡ್ತಾರೆ ಕೇಳಿ 20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ 2005ರವರೆಗಿನ ಎಲ್ಲಾ ವಿಚಾರ ತನಿಖೆಗೆ ಕೊಡಲು ಪ್ಲಾನ್ ಸುಮ್ಮ…
ಮೈಸೂರು : ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಗರಣಗಳ ಸರಮಾಲೆಗಳೇ ಹುಟ್ಟಿಕೊಳ್ಳುತ್ತಿವೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಬಳಿಕ ಇದೀಗ ಮತ್ತೊಂದು ಹಗರಣಾದ ಆರೋಪದ ಅಡಿಯಲ್ಲಿ ಮಾಜಿ ಸಚಿವರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಡಿ ಎಸ್ ವಿರಯ ಅವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಅಧ್ಯಕ್ಷರಾಗಿದ್ದ ಕಾಲದಲ್ಲಿ ಸುಮಾರು 47 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇದೀಗ ಸಿಐಡಿ ಅಧಿಕಾರಿಗಳು ಮಾಜಿ ಸಚಿವ ಡಿಎಸ್ ವೀರಯ್ಯರನ್ನ ಬಂಧಿಸಿದ್ದಾರೆ. ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ಬಳಿಕ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ.
ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಇಂದು ಇಡಿ ಅಧಿಕಾರಿಗಳು ಇಡೀ ದಿನ ವಿಚಾರಣೆ ನಡೆಸಿದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು ಈ ಪ್ರಕರಣದಲ್ಲಿ ಇದೊಂದು ರಾಜಕೀಯ ಷಡ್ಯಂತ್ರವಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬಂಧನದ ಕುರಿತು ನನಗೆ ಮಾಹಿತಿ ಇಲ್ಲ. ಹೇಳಿಕೆ ದಾಖಲಿಸಲು ಈಡಿಯವರು ಕರೆದುಕೊಂಡು ಹೋಗಿದ್ದಾರೆ ಬಿ ನಾಗೇಂದ್ರ ಅರೆಸ್ಟ್ ಮಾಡಿರುವುದು ನನಗೆ ಗೊತ್ತಿಲ್ಲ ವಶಕ್ಕೆ ಪಡೆದಿದ್ದು ಅಷ್ಟೇ ಗೊತ್ತು ಎಂದು ಸಿದ್ದರಾಮಯ್ಯ ತಿಳಿಸಿದರು. ಈಗಾಗಲೇ ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದರೆ ಇದರ ಮೇಲೆ ಇಡಿ ತನಿಖೆ ಮಾಡುವುದಕ್ಕೆ ಹೊರಟಿದೆ. ಇದು ರಾಜಕೀಯ ಷಡ್ಯಂತ್ರ ಅಂತ ಹೇಳುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನಿಯಂತ್ರಣ ಸಮಿತಿ ಆದೇಶ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಹಿರಿಯ ಅಧೀಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಸುಧೀರ್ ವಾರದ ಚರ್ಚೆ ಬಳಿಕ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲ್ಲ ಎಂದು ತಿಳಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡುವುದಕ್ಕೆ ಆಗುವುದಿಲ್ಲ. ಈ ಆದೇಶದ ವಿರುದ್ಧ ಅಪೀಲ್ ಹಾಕಬೇಕು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ. ನಾನು ಹಾಗೂ ಎಲ್ಲಾ ಸಚಿವರು ಈ ನಿರ್ಧಾರ ಕೈಗೊಂಡಿದ್ದೇವೆ. ಜುಲೈ 14ರಂದು ಸರ್ವಪಕ್ಷಗಳ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಒಟ್ಟಾಗಿ ಇದರ ವಿರುದ್ದ ನಿಲ್ಲಬೇಕಾಗಿದೆ ಎಂದು ಹೇಳಿದರು. CWRC ಮುಂದೆ ನಮ್ಮ ನಿಲುವು ಹೇಳಿದ್ದೇವೆ. ಜೊತೆಗೆ ಯಾವುದೇ ತೀರ್ಮಾನ ಮಾಡಕೂಡುದು ಅಂತಾನೂ ಹೇಳಿದ್ದೀವಿ. ಜುಲೈ ಅಂತ್ಯದವರೆಗೂ ಕಾಯಬೇಕು ಎಂದು ಹೇಳಿದ್ದೀವಿ. ಆದರೂ ಕಾವೇರಿ ಸಮಿತಿಯವರು ಜುಲೈ 12ರಿಂದ ಪ್ರತಿ ದಿನ ಒಂದು…