Author: kannadanewsnow05

ತುಮಕೂರು : ಕಳೆದ ಕೆಲವು ದಿನಗಳ ಹಿಂದೆ ತುಮಕೂರಿನಲ್ಲಿ ಮಕ್ಕಳ ಕಳ್ಳರ ಗ್ಯಾಂಗನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದರು. ಈಗ ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಸಾಲ ತೀರಿಸಲಾಗದೇ ಸ್ವಂತ ಅಕ್ಕನ ಮಗಳನ್ನೇ ಮಾರಾಟ ಮಾಡಿರುವ ಘಟನೆ ನಡೆದಿದೆ. ಹೌದು ಸ್ವಂತ ಚಿಕ್ಕಮ್ಮಳೆ ಸಾಲ ತೀರಿಸಲಾಗದೇ ಮಾರಾಟ ಮಾಡಿದ್ದು, ತನ್ನ ತಾಯಿಯ ಸ್ವಪ್ರಜ್ಞೆಯಿಂದ 11 ವರ್ಷದ ಬಾಲಕಿ ವಾಪಸ್ ಮನೆಗೆ ಹಿಂತಿರುಗಿದ್ದಾಳೆ. ತುಮಕೂರಿನ ದಿಬ್ಬೂರು ನಿವಾಸಿಯಾದ ಚೌಡಮ್ಮ ತನ್ನ ಮಗಳನ್ನ ಮತ್ತೆ ವಾಪಾಸ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. ಚೌಡಮ್ಮ, ತನ್ನ ಮಗಳನ್ನ ಆಂಧ್ರ ಪ್ರದೇಶದ ಹಿಂದೂಪುರಕ್ಕೆ ತಂಗಿ ಸುಜಾತಳ ಮನೆಗೆ ಬಾಣಂತನಕ್ಕೆಂದು ಕಳಿಸಿದ್ದಳು. ಬಾಣಂತನ ಮುಗಿಸಿ ವಾಪಸ್ ಮಗಳು ಬರಲಿಲ್ಲ. ಹೀಗಾಗಿ ಚೌಡಮ್ಮ ಹಿಂದೂಪುರಕ್ಕೆ ಹೋದಾಗ ತನ್ನ ಮಗಳು ಇಲ್ಲದೆ ಇರುವುದು ತಿಳಿದಿದೆ. ಚೌಡಮ್ಮ, ಮಗಳ ಇಲ್ಲದನ್ನ ಕಂಡು ಗಾಬರಿಯಾಗಿದ್ದಾಳೆ. ಈ ವೇಳೆ ಸುಜಾತ ‘ನಾನು ಸಾಲ ಮಾಡಿಕೊಂಡಿದ್ದೆ ಸಾಲ‌ ತೀರಿಸಲಾಗದೇ 35 ಸಾವಿರಕ್ಕೆ ಮಗಳನ್ನ ಜೀತಕ್ಕಾಗಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಎಂದು ಮೈಸೂರಿನ ಮುಡಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿದ್ದು, ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಪ್ರಕರಣ ಮುಚ್ಚಿ ಹಾಕಲು ಮುಡಾ ವಾಲ್ಮೀಕಿ ವಿಚಾರ ಹೊರ ತಂದಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಐಟಿ,ಇಡಿ, ಸಿಬಿಐ ಕರೆಸೋದು ಮಾಡುತ್ತಿದ್ದಾರೆ. ಅವರಿಗೆ ಬಹಳ ಆತಂಕವಿದೆ. ಬಿಜೆಪಿ ಅವಧಿಯಲ್ಲಿನ ಒಂದು ಹಗರಣಕ್ಕು ಐಟಿ ಇಡಿ ಸಿಬಿಐ ಕರೆಸಿಲ್ಲ. ಪ್ರತಿಭಟನಾ ಮೆರವಣಿಗೆಗೆ ಸಿದ್ಧವಾಗಿದವರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಜೆಪಿಯವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿಯವೂ ನಮಗೂ ಹೀಗೆ ಮಾಡಿರಲಿಲ್ವಾ? ಪಿಎಸ್ಐ ನೇಮಕಾತಿ ಹಗರಣ ಹೊರಗೆ ಎಳೆದಿದ್ದಕ್ಕೆ ನೋಟಿಸ್ ನೀಡಿದರು. ಬಿಜೆಪಿ ಅವಧಿಯಲ್ಲಿ ಮೂಡಾದಲ್ಲಿ ಅಕ್ರಮ ನಡೆದಿದೆ. ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಯಾಕೆ ಅಂದೆ ಪ್ರಶ್ನೆ ಮಾಡಿರಲಿಲ್ಲ? 2011 ರಲ್ಲಿ ಬಿಎಸ್ ಯಡಿಯೂರಪ್ಪ ಸ್ಪೀಕರ್ಗೆ ನೀಡಿದ್ದ ನೋಟ್ ಬಗ್ಗೆ…

Read More

ಬೆಂಗಳೂರು : ವಾಲ್ಮೀಕಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗೆ SIT ಅಧಿಕಾರಿಗಳು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾದ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಎಸ್ಐಟಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಡಿ ಕಣ್ತಪ್ಪಿಸಿ ನನ್ನನ್ನು ಬಂಧಿಸಿ ಅಂತ ಎಸ್ ಐ ಟಿ ಮುಂದೆ ಕುಳಿತ ದದ್ದಲ್. ಡಿವೈಎಸ್ಪಿ ಶ್ರೀನಿವಾಸ್ ಎದುರು ಬಂಧಿಸಿ ಅಂತ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. SIT ತನಿಖಾಧಿಕಾರಿಗಳ ಮುಂದೆ ಬಸನಗೌಡ ಪಾಟೀಲ್ ನನ್ನನ್ನು ಅರೆಸ್ಟ್ ಮಾಡಿ ಅಂದು ಪಟ್ಟು ಹಿಡಿದಿದ್ದಾರೆ. ಪ್ರಕರಣಕ್ಕೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ವೇಳೆ ವಿಚಾರಣೆಗೆ ಹಾಜರಾಗಿದ್ದ ಅವರು ನನ್ನನ್ನು ಅರೆಸ್ಟ್ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ ಮನವಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಕಳೆದ ಒಂದು ತಿಂಗಳಿನಿಂದ ತನಿಖೆ ಮಾಡುತ್ತಿದ್ದು, ಇತ್ತ ಇಡಿ ಅಧಿಕಾರಿಗಳು ಕೂಡ ಮಾಜಿ ಸಚಿವ ಬಿ…

Read More

ಮೈಸೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿ ಮುಡಾ ಕಚೇರಿ ಎದುರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ದೊಡ್ಡ ಹೈಡ್ರಾಮವೇ ನಡೆಯಿತು. ಹೌದು ಮುಡಾ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ಬಿಜೆಪಿ ಪ್ರತಿಭಟನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಪ್ರತಿಭಟನೆ ನಡೆಸಿದ್ದರು. ಆದರೆ, ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಲಿಲ್ಲ. ಈ ಹಿನ್ನಲೆ ನಮ್ಮನ್ನೂ ಬಂಧಿಸಿ ಎಂದು ಕೈ ಕಾರ್ಯಕರ್ತರು ಹೈಡ್ರಾಮ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುತ್ತಿಗೆ ಹಾಕಲು ಬಿಡದಿದ್ದಾಗ ತಮ್ಮನ್ನೂ ಅರೆಸ್ಟ್ ಮಾಡುವಂತೆ ಪಟ್ಟು ಹಿಡಿದಿದ್ದರು. ಇದೇ ವೇಳೆ ಮೈಸೂರು ಕಮಿಷನರೇಟ್ ಪೊಲೀಸರ ವಿರುದ್ಧ ಕಾಂಗ್ರೆಸ್​ ಮುಖಂಡರು ಆಕ್ರೋಶ ಹೊರಹಾಕಿ, ನಮ್ಮನ್ನೂ ಬಂಧಿಸಿ, ನಮ್ಮನ್ನು ಅರೆಸ್ಟ್ ಮಾಡದೆ ನೀವು ಅವಮಾನ ಮಾಡಿದ್ದೀರಿ, ನಿಮ್ಮ ಕಮಿಷನರ್ ಎಲ್ಲಿ ಎಂದು ಡಿಸಿಪಿ ಜಾಹ್ನವಿಗೆ ಕೆಪಿಸಿಸಿ ವಕ್ತಾರ…

Read More

ಹುಬ್ಬಳ್ಳಿ : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಮ್ಮದ್ ನಲಪಾಡ್ ಮಾತನಾಡಿದ್ದು, ನಾವು 100 ED ಅಧಿಕಾರಿಗಳ ತಂಡ ಬಂದರೂ ಹೆದರುವುದಿಲ್ಲ. 100 CBI ಅಧಿಕಾರಿಗಳ ತಂಡ ಬಂದರೂ ಹೆದರುವುದಿಲ್ಲ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಡೆಸೋಕೆ ಅಧಿಕಾರಿಗಳು ಬಹಳ ಮುಖ್ಯ. ಅಧಿಕಾರಿಗಳನ್ನು ಕಂಟ್ರೋಲ್ ಮಾಡೋದು ಮಿನಿಸ್ಟರ್ ಕೆಲಸ. ಸದ್ಯ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರು ಹಗರಣ ಮಾಡಿದಾಗ ಇಡಿ ಅಧಿಕಾರಿಗಳು ಎಲ್ಲಿದ್ದರು? ಬಿಜೆಪಿ ಅವರ ಮೇಲೆ ಯಾವುದಾದರೂ ಕ್ರಮ ತೆಗೆದುಕೊಂಡಿದ್ದಾರಾ? ಎಂದು ಪ್ರಶ್ನಿಸಿದರು. ಬಿಜೆಪಿಯವರು ಹರಿಶ್ಚಂದ್ರನ ಮೊಮ್ಮಕ್ಕಳ? ಮಾಜಿ ಸಿಎಂ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು ನೆನಪಿಲ್ಲವೇ? ಮಾತಿನ ಭರದಲ್ಲಿ ನಾವೇ ಜೈಲಿಗೆ ಕಳಿಸಿದ್ದೇವೆ ಎಂದ ನಲಪಾಡ್ ಯಡಿಯೂರಪ್ಪರನ್ನು ನಾವೇ ಕಳಿಸಿದ್ದೇವೆ ಎಂದು ಹೇಳಿ ಬಳಿಕ ಅವರ ಸರ್ಕಾರದಲ್ಲಿ ಜೈಲಿಗೆ ಹೋಗಿದ್ದರು ಎಂದು ನಲಪಾಡ್ ಹೇಳಿದರು. ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸತ್ಯ ಹರಿಶ್ಚಂದ್ರನ…

Read More

ಬೆಂಗಳೂರು : ಬೆಂಗಳೂರಲ್ಲಿ ನಿಯಮ ಮೀರಿ ಕಾನೂನು ಉಲ್ಲಂಘನೆ ಮಾಡಿ ಫ್ಲೆಕ್ಸ್ ಹಾಗೂ ಹೋರ್ಡಿಂಗ್ ಗಳ ಅವಳ ಹೆಚ್ಚಾಗಿದ್ದು ಆದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವಾದ್ದರಿಂದ ಹೈಕೋರ್ಟ್ ಬಿಬಿಎಂಪಿ ಆಯುಕ್ತಹಾಗೋ ಪೊಲೀಸ್ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿದ್ದು, ಜುಲೈ 26ರ ಒಳಗಾಗಿ ಕಾರಣ ನೀಡುವಂತೆ ನೋಟಿಸ್ ನೀಡಿದೆ. ಹೌದು ಬೆಂಗಳೂರಿನಲ್ಲಿ ಅಕ್ರಮ ಫ್ಲೇಕ್ಸ್ ಗಳ ಹಾವಳಿ ಸಂಬಂಧ ಇಂದು ಹೈಕೋರ್ಟ್ ನಲ್ಲಿ ಈ ಸಂಬಂಧ ವಿಚಾರಣೆ ನಡೆಯಿತು. ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್ ಹೋರ್ದಿಂಗ್ಸ್ ಹಾವಳಿ ಹಿನ್ನೆಲೆ ಕ್ರಮ ಕೈಗೊಳ್ಳದ ಬಿಬಿಎಂಪಿ ಪೊಲೀಸ್ ಇಲಾಖೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ 6.8 ಲಕ್ಷ ಅಕ್ರಮ ಜಾಹೀರಾತುಗಳಿವೆ ಎಂಬ ವರದಿ ಇದೆ. ರಸ್ತೆಗಳಲ್ಲಿ ಅಕ್ರಮ ಹೋರ್ಡಿಂಗ್ ಹಾವಳಿ ಮುಂದುವರೆದಿದೆ. ಅಕ್ರಮ ಜಾಹೀರಾತುಗಳಿಂದ ಪಾದಚಾರಿಗಳಿಗೆ ಸಮಸ್ಯೆ ಹಾಗೂ ಸಂಚಾರದ ದಟ್ಟನೆಗೆ ಕಾರಣವಾಗಿದೆ. ಕೋರ್ಟ್ ಆದೇಶಗಳಿದ್ದರೂ ಸಂಬಂಧಪಟ್ಟ ಪ್ರಾಧಿಕಾರಗಳು ಈ ಆದೇಶವನ್ನು ಪಾಲಿಸಿಲ್ಲ. ನ್ಯಾಯಾಂಗ ನಿಂದನೆ ಏಕೆ ದಾಖಲಿಸಬಾರದು ಎಂದು ನೋಟಿಸ್ ನೀಡಲಾಗಿದೆ. ಬಿಬಿಎಂಪಿ ಆಯುಕ್ತ…

Read More

ಮೈಸೂರು : ನಾನು ಹಿಂದುಳಿದ ವರ್ಗದ ನಾಯಕನೆಂದು ಕೆಲವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿನ್ನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ವಿಪಕ್ಷ ನಾಯಕ ನೀಡಿದ್ದು ನಿಜವಾದ ಹಿಂದುಳಿದ ವರ್ಗಗಳ ನಾಯಕ ಎಂದರೆ ಅದು ಬಿಕೆ ಎಂದು ತಿರುಗೇಟು ನೀಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದುಳಿದ ವರ್ಗದವನು ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಸಿಎಂ ಹೇಳಿಕೆಗೆ ಆರ್ ಅಶೋಕ ಪ್ರತಿಕ್ರಿಯೆ ನೀಡಿದ್ದು, ಹಿಂದುಳಿದ ವರ್ಗದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಏನು ಹೇಳಿದ್ದಾರೆ? ಬಿಜೆಪಿಯವರು ಬಿಟ್ಟರೂ ನಾನು ಬಿಡಲ್ಲ ಅಂತ ಹರಿಪ್ರಸಾದ್ ಹೇಳಿದ್ದಾರೆ. ಇಬ್ಬರು ನಾಯಕರ ಕೈವಾಡ ಇದೆ ಹೋರಾಟ ಮಾಡುತ್ತೇನೇ. ಅಂದಿದ್ದಾರೆ. ಬಿಕೆ ಹರಿಪ್ರಸಾದ್ ನಿಜವಾದ ಹಿಂದುಳಿದ ನಾಯಕ ವಾಲ್ಮೀಕಿ ನಿಗಮದ ಹಗರಣದಲ್ಲೂ ಉಪ್ಪು ತಿಂದವರು ನೀರು ಕುಡಿಯುತ್ತಾರೆ. ಕೆಲ ಪ್ರಕರಣದಲ್ಲಿ ರೇವಣ್ಣ ಸೇರಿ ಎಲ್ಲರನ್ನು ತಕ್ಷಣ ಅರೆಸ್ಟ್ ಮಾಡುತ್ತಾರೆ ಅದೇ ರೀತಿ ನಾಗೇಂದ್ರ ಅವರನ್ನು ಬಂಧಿಸಬೇಕಿತ್ತು. ಆದರೆ ಕಾಂಗ್ರೆಸ್…

Read More

ಹಾವೇರಿ : ವಸತಿ ಶಾಲಾ ಶಿಕ್ಷಕನ ಕುಟುಂಬದ ಕಿರುಕುಳಕ್ಕೆ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಅರ್ಚನಾ ಗೌಡನವರ್ (16) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಅರ್ಚನಾ ಹಿರೇಕೆರೂರು ತಾಲೂಕಿನ ದೂದಿಹಳ್ಲಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅರ್ಚನಾ, ಶಿಕ್ಷಕ ಆರಿಫ್ ಉಲ್ಲಾ ಪುತ್ರಿ ಝೋಯಾ ಮತ್ತು ಅರ್ಚನಾ ಒಂದೇ ತರಗತಿಯಲ್ಲಿ ಓದುತ್ತಿದ್ದರು. ತರಗತಿಯಲ್ಲಿ ಶಿಕ್ಷಕನ ಪುತ್ರಿಗಿಂತಲೂ ಅರ್ಚನಾ ಓದಿನಲ್ಲಿ ಮುಂದಿದ್ದಳು. ಮಗಳಿಗಿಂತ ಅರ್ಚನಾ ಬುದ್ದಿವಂತೆಯಾಗಿದ್ದಕ್ಕೆ ಮನೆಗೆ ಕರೆಸಿ, ಕಿರುಕುಳ ನೀಡಿದ್ದಾರೆ. ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ವಿದ್ಯಾರ್ಥಿನಿ ಅರ್ಚನಾ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಂತ್ಯಕ್ರಿಯೆ ಮಾಡಿ ಅರ್ಚನಾ ಕುಟುಂಬ ಸದಸ್ಯರು ಸುಮ್ಮನಾಗಿದ್ದಾರೆ. ಸದ್ಯ ವಿದ್ಯಾರ್ಥಿನೀ ಮೃತ ದೇಹ ಮರಣೋತ್ತರ ಪರೀಕ್ಷೆ ಆಗಿರಲಿಲ್ಲ. ಹೀಗಾಗಿ ಮರುದಿನ ಹೊರತೆಗೆದು ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅಧಿಕಾರಿಗಳ ಸಮ್ಮುಖದಲ್ಲಿ…

Read More

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಈ ಮೂಲಕ ಯು-ಟರ್ನ್ ತೆಗೆದುಕೊಂಡಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ತೀವ್ರ ತರದ ತೊಂದರೆಯಾಗಲಿದೆ. ಆದ್ದರಿಂದ ಎನ್​ಇಪಿ ಜಾರಿಗೆ…

Read More

ಮಂಡ್ಯ: ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು ನಾಲೆ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗುರುವಾರ ಸಂಭವಿಸಿದೆ. ಹೌದು ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್‌ರಾಜ್ ಎನ್ನುವ 3 ವರ್ಷದ ಮಗು ಆಟವಾಡುತ್ತ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ಕೊಚ್ಚಿ ಹೋಗಿದೆ. ನಾಲೆ ನೀರಿನಲ್ಲಿ ಮಗುವಿಗಾಗಿ ಪೋಲಿಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ನಾಲೆಯಲ್ಲಿ 700 ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ಹರಿಯುತ್ತಿದ್ದು, ಮಗುವಿನ ಹುಡುಕಾಟಕ್ಕೆ ತೊಂದರೆಯಾಗಿದೆ. ಹೀಗಾಗಿ ನಾಲೆಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು , ಸಂಪರ್ಕ ನಾಲೆಗಳ ಗೇಟನ್ನು ತೆರೆದು ನಾಲೆ ನೀರನ್ನು ಖಾಲಿ ಮಾಡುವ ಪ್ರಯತ್ನ ಸಾಗಿದೆ. ಮುಂಗಾರು ಕೃಷಿ ಚಟುವಟಿಕೆಗಳು ಹಾಗೂ ಕೆರೆಕಟ್ಟೆಗಳನ್ನು ತುಂಬಿಸುವ ಸಲುವಾಗಿ ಕೆ ಆರ್ ಎಸ್ ಜಲಾಶಯದಿಂದ ಬುಧವಾರವಷ್ಟೇ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿತ್ತು. ಈ ನೀರು ಹೊನಗಳ್ಳಿಮಠ ಗ್ರಾಮವನ್ನು ಗುರುವಾರ ಮಧ್ಯಾಹ್ನ ತಲುಪಿತ್ತು. ಈ ಸಂದರ್ಭದಲ್ಲಿ…

Read More