Author: kannadanewsnow05

ಚಿಕ್ಕಮಗಳೂರು : ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಕ್ಕಳು, ಮಹಿಳೆಯರು, ಅಷ್ಟೆ ಯಾಕೆ ವೃದ್ಧೆ ಎನ್ನದೆ ಎಲ್ಲರ ಮೇಲು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದೀಗ ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಗೆ ಸಲೂನ್ ಮಾಲೀಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ಕಡೂರು ಪಟ್ಟಣದಲ್ಲಿ ತಾಯಿಯೊಬ್ಬರು ತನ್ನ 8 ವರ್ಷದ ಮಗಳನ್ನು ಕಟಿಂಗ್ ಶಾಪ್ ಗೆ ಕರೆದುಕೊಂಡು ಬಂದಿರುತ್ತಾರೆ. ಈ ವೇಳೆ ಕಟಿಂಗ್ ಶಾಪಿನ ಮಾಲೀಕರಿಗೆ ಮನೆಗೆ ಬೇಗ ಹಾಕಿಲ್ಲ ಹೋಗಿ ಬರುತ್ತೇನೆ ಎಂದು ಹೇಳಿ ಮನೆಗೆ ತೆರಳುತ್ತಾರೆ. ಈ ವೇಳೆ ಕಟಿಂಗ್ ಶಾಪ್ ಬಾಗಿಲು ಮುಚ್ಚಿ ಮಾಲೀಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ತಾಯಿಯು ಮರಳಿ ಬರುವಷ್ಟರಲ್ಲಿ ಕಟ್ಟಿಂಗ್ ಶಾಪ್ ವ್ಯಕ್ತಿ ಸಲೂನ್ ಬಾಗಿಲು ಹಾಕಿಕೊಂಡು ಮಗುವಿನ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಈ ವೇಳೆ ಮಗು ಕಿರುಚಿ ಕೊಂಡಿದ್ದು ಸ್ಥಳಕ್ಕೆ ಬಂದ ತಾಯಿ ಕೂಡ ಕಿರುಚಾಡಿದ್ದಾಳೆ. ಈ ವೇಳೆ ಸಲೂನ್…

Read More

ಬೀದರ್ : ಇತ್ತೀಚಿಗೆ ಅನೈತಿಕ ಸಂಬಂಧಗಳಿಂದ ಅದೆಷ್ಟೋ ಸಂಸಾರಗಳು ನುಚ್ಚುನೂರಾಗುತ್ತಿವೆ, ಅಲ್ಲದೆ ಎಷ್ಟೋ ಪ್ರಕರಣಗಳಲ್ಲಿ ಜೀವಗಳು ಹೋಗಿವೆ. ಇದೀಗ ಬೀದರ್ ನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಹೆಂಡತಿಯೊಂದಿಗೆ ಯುವಕ ಏಕಾಂತದಲ್ಲಿ ಇದ್ದದ್ದನ್ನು ನೋಡಿ ರೊಚ್ಚಿಗೆದ್ದ ಪತಿ ಯುವಕನ ಮರ್ಮಾಂಗವನ್ನೇ ಕಟ್ ಮಾಡಿರುವ ಘಟನೆ ನಡೆದಿದೆ. ಹೌದು ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಯುವಕನನ್ನು ಸುನಿಲ್ ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಆಂಟಿ ನೋಡಲು ಮನೆ ಬಳಿ ತೆರಳಿದ್ದಾಗ ಸುನಿಲ್ ಲಾಕ್ ಆಗಿದ್ದ. ಈ ವೇಳೆ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ ಪತಿ, ಆತನ ಮರ್ಮಾಂಗವನ್ನೇ ಕಟ್ ಮಾಡಿ, ಯುವಕನ ಅನೈತಿಕ ಸಂಬಂಧಕ್ಕೆ ಅಂತ್ಯ ಹಾಡಿದ್ದಾನೆ. ಈ ವೇಳೆ ತಕ್ಷಣ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಯುವಕನ ಮರ್ಮಾಂಗವನ್ನು ಕಟ್ ಮಾಡಿದಂತಹ ಮಹಿಳೆ ಪತಿ ವಿರುದ್ದ ಮುನ್ನಾಏಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಆರೆಸ್ಟ್ ಮಾಡಲಾಗಿದೆ.

Read More

ಬೆಂಗಳೂರು : ನಿನ್ನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲಿ ಬೆಂಗಳೂರಲ್ಲಿ ಕೂಡ ಮಹಿಳೆಯ ಭೀಕರ ಕೊಲೆ ನಡೆದಿದೆ. ಇದೀಗ ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ. ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್‌ ಮೇಲೆ ನನಗೆ ಅನುಮಾನ ಇದೆ. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್‌ ವಿರುದ್ಧ ದೂರು ಕೊಟ್ಟಿದ್ದೆ. ಅಶ್ರಫ್ ಉತ್ತರಾಖಂಡ್ ಮೂಲದವನು. ಒಂದು ದಿನ ಮಹಾಲಕ್ಷ್ಮೀ ಮೊಬೈಲ್​ ಚೆಕ್ ಮಾಡಿದಾಗ…

Read More

ಚಿಕ್ಕಬಳ್ಳಾಪುರ : ಓವರ್ ಟೇಕ್ ಮಾಡಲು ಹೋಗಿ ಅತಿ ವೇಗದ ಚಾಲನೆಯಿಂದಾಗಿ ಲಾರಿಗೆ, ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇಟ್ ದಿನ್ನೇ ಬಳಿ ನಡೆದಿದೆ. ಈ ಒಂದು ಭೀಕರ ಅಪಘಾತದಲ್ಲಿ ಮೃತ ಪಟ್ಟವರನ್ನು ರಾಜಿಯಾ ಶಾಹಿನ್ (50) ಮೆಹಿಮುದಲ್ (45) ಹಾಗೂ ಮೊಲಾನಾ ಶಾಹಿನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಿಹಾರ ಮೂಲದವರು ಎಂದು ತಿಳಿದುಬಂದಿದ್ದು, ಕೋಲಾರದಲ್ಲಿ ವಾಸವಿದ್ದರು ಎಂದು ಹೇಳಲಾಗುತ್ತಿದೆ. ಮೃತ ವ್ಯಕ್ತಿಗಳು ಹಾಗೂ ಅವರ ಕುಟುಂಬ ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಟಾಟಾ ಸುಮೋದಲ್ಲಿ ಕೋಲಾರದಿಂದ ಆಂಧ್ರದ ಪೆನುಗೊಂಡ ದರ್ಗಾಗೆ ಹೋಗುವಾಗ ಅಪಘಾತ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Read More

ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ತುಮಕೂರಿನಲ್ಲಿ ಮಕ್ಕಳಿಬ್ಬರು ತಮ್ಮ ತಂದೆಯ ಶವವನ್ನು ಬೈಕ್ ಮೇಲೆ ಕೂರಿಸಿಕೊಂಡು ತೆರಳಿದ್ದ ಘಟನೆ ಮಾಸುವ ಮುನ್ನವೇ, ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ರಸ್ತೆ ಸರಿ ಇಲ್ಲವೆಂದು ಶವವನ್ನು ಕಟ್ಟಿಗೆಗೆ ಕಟ್ಟಿ ಮೃತದೇಹ ಸಾಗಿಸಿರುವ ಘಟನೆ ಕಾರವಾರದ ಗುಡ್ಡಹಳ್ಳಿಯಲ್ಲಿ ನಡೆದಿದೆ. ಹೌದು ರಾಮಾ ಮುನ್ನಾಗೌಡ ಎನ್ನುವವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಕಾರವಾರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ತಡರಾತ್ರಿ 12 ಗಂಟೆಗೆ ಏಕಾಏಕಿ ಹೃದಯಾಘಾತ ಸಂಭವಿಸಿ ರಾಮಾ ಮುನ್ನಾಗೌಡ ಅವರು ಮೃತಪಟ್ಟಿದ್ದರು. ಸದ್ಯ ಆಸ್ಪತ್ರೆಯಿಂದ ಮನೆಗೆ ಮೃತದೇಹವನ್ನು ರವಾನಿಸಲು ರಸ್ತೆ ಸರಿ ಇಲ್ಲ ಎಂಬ ಕಾರಣಕ್ಕೆ ಜನರೆಲ್ಲ ಸೇರಿ ಕಟ್ಟಿಗೆಗೆ ಮೃತದೇಹ ಕಟ್ಟಿ ರವಾನಿಸಿದ್ದಾರೆ. ಇನ್ನು ಮೃತ ರಾಮಾ ಮುನ್ನಾಗೌಡ ಎನ್ನುವವರ ಮನೆ ಗುಡ್ಡದ ಮೇಲೆ ಇರುವುದರಿಂದ, ಶವವನ್ನು ಕಟ್ಟಿಗೆಗೆ ಕಟ್ಟಿ ಕಟ್ಟಿಗೆ ಮೂಲಕ ಸಾಗಾಟ ಮಾಡಿರುವ ಮನಕಲಕುವ ಘಟನೆ ನಡೆದಿದೆ. ಆದ್ದರಿಂದ ಕೊಡಲೇ ರಾಜ್ಯ…

Read More

ಕೊಪ್ಪಳ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ಹಿನ್ನೆಲೆ ಬಂಧನ ಮಾಡಲಾಗಿದ್ದು, ಇದು ರಾಜಕೀಯ ಧ್ವೇಷದ ಕಾರಣ ಅಲ್ಲ, ಮುನಿರತ್ನಗೆ ಅಪರಾಧ ಮಾಡು ಅಂತ ನಾವು ಹೇಳಿದ್ವಾ ಎಂದು ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಕೊಪ್ಪಳಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನನಿಗೆ ಅಪರಾಧ ಮಾಡು ಅಂತ ನಾವು ಹೇಳಿದ್ವಾ, ಮುನಿರತ್ನ ಮೇಲೆ ಮೂರು ಪ್ರಕರಣ ದಾಖಲಾಗಿದೆ. ಈಗ ಹೇಳಿ ನಾವು ಕ್ರಮ ಕೈಗೊಳ್ಳೋದು ಬಿಡಬೇಕಾ ಹೇಳಿ ಎಂದರು. ಶಾಸಕ ಮುನಿರತ್ನ ಸಾಕಷ್ಟು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಎಫ್ ಐ ಆರ್ ದಾಖಲಾಗಿದೆ. ತನಿಖೆಗೆ ಎಸ್ ಐಟಿ ರಚನೆ ಮಾಡಲಾಗಿದೆ. ಅವರಿಗೆ ನಾವು ಕಾನೂನು ಉಲ್ಲಂಘಿಸಿ ಅಂತ ಹೇಳಿಲ್ಲವಲ್ಲ? ಅಥವಾ ನಾವೇನಾದ್ರು ಅವರಿಗೆ ಅಪರಾಧ ಮಾಡು ಅಂತ ಹೇಳಿದ್ವ? ಇಲ್ಲ ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read More

ಬೆಂಗಳೂರು : ತಿರುಪತಿಯ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಸೇರಿದಂತೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ವಿಚಾರವಾಗಿ, ಇದೀಗ ರಾಜ್ಯದಲ್ಲಿ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳ ಸ್ಯಾಂಪಲ್ ಪರಿಶೀಲಿಸಿ ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಹೌದು ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಯಲ್ಲಿ ದನದ ಮಾಂಸ, ಮೀನಿನ ಎಣ್ಣೆ, ಹಂದಿಯ ಕೊಬ್ಬು ಬಳಕೆಯ ವಿಚಾರವಾಗಿ ಇದೀಗ ಸಚಿವ ದಿನೇಶ್ ಗುಂಡೂರಾವ್ ಅವರು, ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದರು. ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ…

Read More

ಕೊಪ್ಪಳ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದಾದ ಬಳಿಕ ಕೇವಲ ಐದು ದಿನಗಳಲ್ಲಿ ಮತ್ತೆ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿಯಾಗಿತ್ತು. ಇಂದು ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಮುನಿರಾಬಾದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ ಎಂದು ಘೋಷಿಸಿದರು. ಈ ಮೂಲಕ ಈ ಭಾಗದ ರೈತರಿಗೆ ಎರಡನೇ ಬೆಳೆಗೆ ನೀರು ಕೊಡುವುದಾಗಿ ಸ್ಪಷ್ಟಪಡಿಸಿದರು. ಗೇಟ್ ದುರಸ್ತಿ ಕೆಲಸವನ್ನು ಬಹಳ ಜಾಗೃತೆಯಿಂದ ಮಾಡಲಾಗಿತ್ತು. ಎಲ್ಲರ ಶ್ರಮದಿಂದ 20ಕ್ಕೂ ಹೆಚ್ಚು ಟಿಎಂಸಿ ನೀರು ಉಳಿದಿದೆ. ಮಳೆರಾಯನಿಗೆ ಸರ್ಕಾರದ ಪರವಾಗಿ ಧನ್ಯವಾದ ಹೇಳುತ್ತೇನೆ.ತುಂಗಭದ್ರಾ ಜಲಾಶಯಕ್ಕೆ 70 ವರ್ಷಗಳ ಇತಿಹಾಸವಿದೆ. 50 ವರ್ಷಕ್ಕೆ ಗೇಟ್ ಬದಲಾವಣೆ ಮಾಡಬೇಕೆಂಬ ನಿಯಮವಿದೆ.…

Read More

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ, ಪರಪ್ಪನ ಅಗ್ರಹಾರ ಜೈಲು ಸೇರಿ, ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ಅದಾದ ಬಳಿಕ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ರಾಮನಗರ ಪೊಲೀಸ್ರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇದೀಗ ಶಾಸಕ ಮುನಿರತ್ನ ಅವರ ಕಚೇರಿ ಸಿಬ್ಬಂದಿಗಳಿಂದ ಸ್ಪೋಟಕವಾದಂತಹ ಆಡಿಯೋ ಇದೀಗ ವೈರಲ್ ಆಗಿದೆ. ಹೌದು ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ಫಲಾನುಭಾವಿಗಳಿಗೆ ವಾಹನ ವಿತರಿಸಲು, ಬಿಜೆಪಿ ಶಾಸಕ ಮುನಿರತ್ನ ಅವರ ಕಚೇರಿಯ ಸಿಬ್ಬಂದಿ ಫಲಾನುಭವಿಗಳ ಹತ್ತಿರ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವಂತಹ ಆಡಿಯೋ ಇದೀಗ ವೈರಲ್ ಆಗಿದೆ. ವಾಹನ ನೀಡಲು 1 ಲಕ್ಷ ರೂ. ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಉಷಾ ಕೇಳಿದ್ದಾರೆ ಅಂತ ಫಲಾನುಭವಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ. 3 ಲಕ್ಷ ರೂ. ಮೌಲ್ಯದ ವಾಹನ ನೀಡಲು 1 ಲಕ್ಷ ರೂ. ಲಂಚ ಕೊಡಿ ಎಂದು…

Read More

ಬಾಗಲಕೋಟೆ : ತಿರುಪತಿ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು ಹಂದಿಯ ಮಾಂಸ ಹಾಗೂ ಮೀನನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸನಾತನ ಧರ್ಮವನ್ನು ಮುಗಿಸಲು ಕೆಲವರು ಹೊರಟಿದ್ದಾರೆ ಹಾಗಾಗಿ ನಾವೆಲ್ಲ ಒಂದಾಗಬೇಕು ಎಂದು ಹಿಂದೂಗಳಿಗೆ ಕರೆ ನೀಡಿದರು. ಇಂದು ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸನಾತನ ಧರ್ಮ ಮುಗಿಸಲು ಕೆಲವರು ಹೊರಟಿದ್ದಾರೆ. ತಿರುಪತಿಯ ಬಾಲಾಜಿ ಮಂದಿರದಲ್ಲಿ ದನದ ಕೊಬ್ಬು, ಹಂದಿಯ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿ ಲಡ್ಡು ತಯಾರಿಸಲಾಗುತ್ತಿತ್ತು. ಇಂದು ಆಘಾತಕಾರಿ ಸುದ್ದಿ ಬಂದಿದ್ದು, ಗುಜರಾತಿನ ಎಟಿಎಂಸಿ ಒಂದು ಇದನ್ನು ದೃಢಪಡಿಸಿದೆ ಆಹಾರ ಗುಣಮಟ್ಟ ಪರೀಕ್ಷಾ ಏಜೆನ್ಸಿಯೇ ಇದನ್ನು ದೃಢಪಡಿಸಿದೆ. ನಮ್ಮ ಧರ್ಮ ನಾಶ ಮಾಡಬೇಕು ಅಂತಿರುವ ಈ ವೇಳೆ ನಾವೆಲ್ಲ ಒಂದಾಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕರೆ ನೀಡಿದರು.

Read More