Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಪುಂಡರ ವ್ಹಿಲಿಂಗ್ ಹಾವಳಿ ಹೆಚ್ಚಾಗಿದ್ದು,ಇದೀಗ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿಯ ತಂದೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಈ ಒಂದು ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದ್ದು. ಚನ್ನಪಟ್ಟಣದ ಸಂಚಾರಿ ಠಾಣೆ ಪೊಲೀಸರಾದ ಜಯಕುಮಾರ್ ಹಾಗೂ ಬಸವರಾಜ್ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋದ ಆರೋಪ ಕೇಳಿ ಬಂದಿದೆ. ಸೈಫ್ ಖಾನ್ ಮತ್ತು ಆತನ ಗ್ಯಾಂಗ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ರಾಮನಗರದ ಬೀಡಿ ಕಾಲೋನಿ ನಿವಾಸಿಯಾಗಿರುವ ಸೈಫ್ ಖಾನ್ ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಚನ್ನಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸೈಫ್ ಖಾನ್…

Read More

ಹಾವೇರಿ : ಹಾವೇರಿಯಲ್ಲಿ ಮಹಿಳೆಯೊಬ್ಬಳು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಡ್ರಾಮಾ ಮಾಡಿದ್ದು ಆದರೆ ಪೊಲೀಸರು ವಾಕ್ಯವನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಸತ್ಯ ಹೊರ ಬಂದಿದೆ. ಹೌದು ಗ್ಯಾಂಗ್ ರೇಪ್ ಕಥೆ ಕಟ್ಟಿ ಮಹಿಳೆ ಒಬ್ಬಳು ಪೊಲೀಸರಿಗೆ ಟೆನ್ಶನ್ ಕೊಟ್ಟಿದ್ದಾಳೆ. ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಫೀರಾಂಬಿ ಎನ್ನುವ ಮಹಿಳೆ ಅತ್ಯಾಚಾರದ ಕಥೆ ಕಟ್ಟಿದ್ದಾಳೆ. ಐದು ಜನರಿಂದ ಗ್ಯಾಂಗ್ ರೇಪ್ ನಡೆದಿರುವುದಾಗಿ ಮಹಿಳೆಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರ ಬಳಿ ತನ್ನ ಮೇಲೆ ಅತ್ಯಾಚಾರ ನಡೆದಿಲ್ಲ, ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಒಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಯಾರೋ ಕೆಲವರು ತನ್ನ ಬೆನ್ನಿಗೆ ಪ್ರಜ್ಞೆ ತಪ್ಪಿಸುವ ಇಂಜೆಕ್ಷನ್ ಕೊಟ್ಟು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ದೈಹಿಕವಾಗಿ ಹಲ್ಲೆ ಮಾಡಿದ್ದರು, ನಾನು ಅವರಿಂದ ತಪ್ಪಿಸಿಕೊಂಡು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ ಎಂದು ಮಹಿಳೆ ಮಾಧ್ಯಮಗಳ ಬಳಿ ಹೇಳಿಕೆ ನೀಡಿದ್ದಳು. ಮಹಿಳೆಯ…

Read More

ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದ್ದು, ಬಳಿಕ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಜತ್ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ ನಿಗದಿಪಡಿಸಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಜೈಲು ಸೇರಿ ಜಾಮೀನು ಮೇಲೆ ರಿಲೀಸ್ ಆಗಿದ್ದ ರಜತ್ ಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ…

Read More

ಬೆಳಗಾವಿ : ಕಳೆದ ಜನವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ‌ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.‌ ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿ ಹಲವು ಸಾಕ್ಷ್ಯಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ‌ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗಳಾಗಿದ್ದರಿಂದ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 13…

Read More

ಕಲಬುರ್ಗಿ : ಕೋಮು ದ್ವೇಷ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.15ರಂದು ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀ ರಾಮೋತ್ಸವ ಸಮಿತಿ ಆಯೋಜಿಸಿದ್ದ ಶ್ರೀ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಆಂದೋಲಾ ಶ್ರೀ, ಹಿಂದೂ -ಮುಸ್ಲಿಮರ ಮಧ್ಯೆ ಕೋಮು ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈಗಾಗಲೇ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು ಇದೀಗ ಮತ್ತೊಂದು ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆಯಾಗಿದ್ದು, ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕ ಸೇವಾ ಆಯೋಗ ತಿದ್ದುಪಡಿ -2025ನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಈ ಹಿಂದೆ ಕೆಪಿಎಸ್ಸಿಯಲ್ಲಿ ಬದಲಾವಣೆ ತರಬೇಕಾದರೂ ರಾಜ್ಯ ಸರ್ಕಾರ ಮೊದಲು ಕೆಪಿಎಸ್ಸಿಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಕೆಪಿಎಸ್ಸಿಯನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂಬ ಅಂಶ ಸೇರಿಸಿತಿದ್ದು ಪಡಿ ತರಲಾಗಿತ್ತು. ಕಾನೂನು ಸಲಹೆ ಪಡೆದು ಮರುಸಲ್ಲಿಕೆ ಮಾಡುವಂತೆ ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. 3 ವಿಧೇಯಕಕ್ಕೆ ಅಂಕಿತ ಇನ್ನು 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆ ಮತ್ತು ಪರಿಹಾರ ನೀಡುವುದಕ್ಕೆ ಸಂಬಂಧಿಸಿದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕ ಗಳಿಗೆ ರಾಜ್ಯಪಾಲರು…

Read More

ಬೆಂಗಳೂರು : ಇಂದಿನಿಂದ ಬೆಂಗಳೂರಿನಲ್ಲಿ ಮುಂದಿನ 5 ದಿನ ಸಂಜೆ, ರಾತ್ರಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಗುಡುಗು ಸಹಿತ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವಡೆ ಹಗುರ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಂಜೆ ಮತ್ತು ರಾತ್ರಿಯ ವೇಳೆ ಮಳೆ ಆಗುವ ಸಾಧ್ಯತೆ ಇದೆ ಏಪ್ರಿಲ್ 20ರವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಧಾರಾಕಾರ ಮಳೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯಿತು ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಜೆಪಿ ನಗರ,ಜಯನಗರ, ವಿಜಯನಗರ, ರಾಜಾಜಿನಗರ ಮಹದೇವಪುರ ಕೆ ಆರ್…

Read More

ಬೆಂಗಳೂರು : ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ಆಹಾರ ಇಲಾಖೆ ಇದೀಗ ಡೆಡ್ ಲೈನ್ ನೀಡಿದ್ದು, ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅಷ್ಟರೊಳಗಾಗಿ ಇ-ಕೆವೈಸಿ ಮಾಡಿಸದೆ ಹೋದರೆ ಮೇ ತಿಂಗಳಿನಿಂದ ರೇಷನ್ ಕಾರ್ಡ್ ಸ್ಥಗಿತಗೊಳ್ಳಲಿದೆ. ಹೌದು ಆಹಾರ ಇಲಾಖೆಯು ಇ-ಕೆವೈಸಿ ಮಾಡಿಸದ ಪಡಿತರ ಫಲಾನುಭವಿಗಳಿಗೆ ಏಪ್ರಿಲ್ 30ರವರೆಗೆ ಅಂತಿಮ ಗಡುವು ನೀಡಿದೆ. ಗಡುವು ಮುಗಿದ ನಂತರ, ಮೇ ತಿಂಗಳಿಂದ ಪಡಿತರ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ಜಿಲ್ಲೆಗಳಲ್ಲಿ ಲಕ್ಷಾಂತರ ಫಲಾನುಭವಿಗಳು ಇ -ಕೆವೈಸಿ ಮಾಡಿಸುವುದು ಬಾಕಿ ಇದ್ದು, ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿ ನವೀಕರಿಸಿಕೊಳ್ಳಲು ಸೂಚಿಸಲಾಗಿದೆ. ಗಡುವು ಅವಧಿಯೊಳಗೆ ಇ – ಕೆವೈಸಿ ಪ್ರಕ್ರಿಯೆ ಮಾಡಿಸದ ಫಲಾನುಭವಿಗಳಿಗೆ ಮುಂದಿನ ಮೇ ತಿಂಗಳಿಂದ ಪಡಿತರ ಪದಾರ್ಥಗಳ ಹಂಚಿಕೆ ನಿಲ್ಲಿಸುವ ಎಚ್ಚರಿಕೆಯನ್ನು ಅಹಾರ ಇಲಾಖೆ ನೀಡಿದೆ. ಹೀಗಾಗಿ ಮುಂದಿನ ತಿಂಗಳಿಂದ ಪಡಿತರ ಪದಾರ್ಥಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿಪಡೆಯಬೇಕು ಎಂದರೆ ಅಂತಹ ಫಲಾನುಭವಿಗಳು ಇ – ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇ…

Read More

ಬೆಂಗಳೂರು : ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಹಿಂದಿನ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದ್ದು, ಹಲವು ಸಚಿವರು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಳಿಕ ಏಪ್ರಿಲ್ 17ರಂದು ಅಂದರೆ ಇಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿತು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಈಗಾಗಲೇ ಈ ಒಂದು ಜಾತಿ ಗಣತಿ ವರದಿ ಜಾರಿ ಸಂಬಂಧ ಸ್ವಪಕ್ಷ ಕಾಂಗ್ರೆಸ್ ನಲ್ಲಿಯೇ ಹಲವು ಸಚಿವರು ಶಾಸಕರು ಬೆಂಬಲ ವ್ಯಕ್ತಪಡಿಸಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾತಿ ಗಣತಿ ಅಂಕಿ ಅಂಶ ಕೂಡ ಕೆಲವು ದಿನಗಳ ಹಿಂದೆ ಬಹಿರಂಗವಾಗಿದ್ದು, ಮುಸ್ಲಿಮರು ಅತ್ಯಧಿಕ ಜನಸಂಖ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಜಾತಿಗಣತಿ ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಸಚಿವರಿಂದ ಒತ್ತಾಯ ಕೇಳಿ ಬಂದಿದೆ.ಇಂದು ಕ್ಯಾಬಿನೆಟ್ ನಲ್ಲಿ ವಿಶೇಷ ಅಧಿವೇಶನಕ್ಕೆ ಒತ್ತಾಯ ಮಾಡುವ ಸಾಧ್ಯತೆ ಇದೆ. ಸದನದಲ್ಲಿ…

Read More

ಬೆಂಗಳೂರು : ಜೂನ್ 1, 2025 ರ ವೇಳೆಗೆ 5 ವರ್ಷ 5 ತಿಂಗಳು ವಯಸ್ಸಿನ ಮತ್ತು ಪ್ರಿ ಪ್ರೈಮರಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ವರ್ಷಕ್ಕೆ ಮಾತ್ರ 1 ನೇ ತರಗತಿ ಪ್ರವೇಶಕ್ಕೆ ಅರ್ಹರು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಜೂನ್ 1, 2025 ರ ವೇಳೆಗೆ 5 ವರ್ಷ 5 ತಿಂಗಳು ವಯಸ್ಸಿನ ಮತ್ತು ಪ್ರಿ ಪ್ರೈಮರಿ ಉತ್ತೀರ್ಣರಾದ ಮಕ್ಕಳು 1 ನೇ ತರಗತಿ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ – ಆದರೆ 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು. ವಯಸ್ಸಿನ ಮಾನದಂಡಗಳಲ್ಲಿ ಇದು ಒಂದು ಬಾರಿಯ ಸಡಿಲಿಕೆಯಾಗಿದ್ದು, 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು ಎಂದು ಸಚಿವರು ಹೇಳಿದರು.ಪ್ರಮಾಣಿತ ಕನಿಷ್ಠ ವಯಸ್ಸಿನ ಅವಶ್ಯಕತೆ ಆರು ವರ್ಷಗಳು 2026-27 ರಿಂದ ಜಾರಿಯಲ್ಲಿರುತ್ತದೆ. ಈ ಸಡಿಲಿಕೆ ರಾಜ್ಯ ಮಂಡಳಿಯ ಅಡಿಯಲ್ಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ…

Read More