Author: kannadanewsnow05

ತುಮಕೂರು : ಕಳೆದ 50 ವರ್ಷಗಳ ಹಿಂದೆ ಕಾರಣಾಂತರಗಳಿಂದ ನಿಲ್ಲಿಸಿದ್ದ ಮಧುಗಿರಿ ತೆಪ್ಪೋತ್ಸವ ಇಂದು ಮತ್ತೆ ಆರಂಭವಾಗಲಿದ್ದು, ಇಂದು ತುಮಕೂರು ಜಿಲ್ಲೆಯ ಮಧುಗಿರಿಯ ಚೋಳೇನಹಳ್ಳಿ ಯಲ್ಲಿ ಕೆರೆಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲದೇ ಸಂಜೆ 7:00ಗೆ ಗೋಧೋಳಿ ಲಗ್ನದಲ್ಲಿ ಗಂಗಾವತಿ ನಡೆಯಲಿದೆ. ಕಾಶಿಯಿಂದ ಆಗಮಿಸಿರುವ ಸುಮಾರು 40 ಪಂಡಿತರಿಂದ ಗಂಗಾವತಿ ನಡೆಯಲಿದ್ದು, ಈ ಹಿಂದೆ 1974 ರಲ್ಲಿ ಮಧುಗಿರಿ ತಕ್ಕೋತ್ಸವ ನಡೆದಿತ್ತು. 50 ವರ್ಷಗಳಿಂದ ಕಾರಣಾಂತರಗಳಿಂದ ಈ ಒಂದು ತಪೋತ್ಸವವನ್ನು ಕೈ ಬಿಡಲಾಗಿತ್ತು.ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ಅಧ್ಯಕ್ಷತೆ ಹಾಗೂ ಎಂಎಲ್ಸಿ ರಾಜೇಂದ್ರ ರಾಜಣ್ಣ ನೇತೃತ್ವದಲ್ಲಿ ತೆಪ್ಪೋತ್ಸವ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 7:30 ರಿಂದ ರಾತ್ರಿ 10 ಗಂಟೆಯವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ತೆಪ್ಪೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್, ಕೇಂದ್ರ ಸಚಿವ ವಿ ಸೋಮಣ್ಣ, ಸಿದ್ದಗಂಗಾ ಮಠದ ಶ್ರೀಗಳು, ಸಿದ್ದರಬೆಟ್ಟದ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ…

Read More

ಬೆಂಗಳೂರು : ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಇಂದು ನಡೆಯುವ ತುರ್ತು ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದ್ದು, ಟಿಡಿಆರ್​ ನೀಡಿದರೆ ಮುಂದಿನ ಭೂಸ್ವಾಧೀನ‌ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕ ಎದುರಾಗಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರದ ನಿರ್ಧಾರವಾಗಿದ್ದು, ನಾಳೆಯ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನ ಮಾಡಿದೆ. 1996ರಲ್ಲಿ ಅರಮನೆ ಮೈದಾನವನ್ನು ವಶಪಡಿಸಿಕೊಂಡ ಕಾಯ್ದೆ ಸಿಂಧುತ್ವವನ್ನು ಎತ್ತಿ ಹಿಡಿಯುವಂತೆ ಸುಪ್ರೀಂ ಕೋರ್ಟ್‌ಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸಲು ಇತ್ತೀಚ್ಚಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮೊದಲ ಮಂಕೀಪಾಕ್ಸ ಸೋಂಕು ಪತ್ತೆಯಾಗಿದ್ದು, ದುಬೈ ನಿಂದ ಬೆಂಗಳೂರಿಗೆ ನೀಡಿದ 40 ವರ್ಷದ ವ್ಯಕ್ತಿಯಲ್ಲಿ ಈ ಒಂದು ಮಂಕಿಪಾಕ್ಸ್ ದೃಢವಾಗಿದೆ. ಆದರೆ ವೈದ್ಯರು, ವ್ಯಕ್ತಿಯ ಆರೋಗ್ಯ ಸ್ಥಿರವಾಗಿದ್ದು ಶೀಘ್ರದಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು.ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್​ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್‌ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ದೃಢ ಪಟ್ಟಿದೆ. ಮಂಕಿಪಾಕ್ಸ್​ನ ಲಕ್ಷಣಗಳಿವು 1) ಊದಿಕೊಂಡ ದುಗ್ಧರಸ ಗ್ರಂಥಿಗಳು 2) ಜ್ವರ 3) ಚಳಿಯ ಅನುಭವ 4) ಸ್ನಾಯು ನೋವು 5) ತಲೆನೋವು 6) ಸುಸ್ತು ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌…

Read More

ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಬೇಲ್ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟಿಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರಾಜ್ಯ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಸೇರಿ7 ಮಂದಿ ಜಾಮೀನು ರದ್ದು ಕೋರಿ ರಾಜ್ಯ ಪೊಲೀಸರು ಸುಪ್ರೀಂ ಕೋರ್ಟಲ್ಲಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ನಿಗದಿಯಾಗಿದೆ. ಹಾಗಾಗಿ ನಟ ದರ್ಶನ್ ಗೆ ಇಂದು ಮಹತ್ವದ ದಿನ ಎನ್ನಲಾಗುತ್ತದೆ. ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನು ಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ನ್ಯಾಯ ಮೂರ್ತಿಗಳಾದ ಜೆ.ಬಿ.ಪರಿದಿವಾಲಾ ಹಾಗೂ…

Read More

ಬೆಂಗಳೂರು : ಇತ್ತೀಚಿಗೆ ಸೈಬರ್ ವಂಚಕರ ಮೋಸಕ್ಕೆ ಅದೆಷ್ಟೋ ಜನರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.ಇದೀಗ ಬೆಂಗಳೂರಲ್ಲಿ ಮತ್ತೊಂದು ಘಟನೆ ನಡೆದಿದ್ದು ಹೂಡಿಕೆ ನೆಪದಲ್ಲಿ ಲಾಭದಾಸೆ ತೋರಿಸಿ ಸೈಬರ್ ವಂಚಕರು ಹೋಟೆಲ್ ನೌಕರರೊಬ್ಬರಿಗೆ ಬರೋಬ್ಬರಿ 43.15 ಲಕ್ಷ ರು. ಹಣ ಪಡೆದು ವಂಚಿಸಿದ ಆರೋಪದಡಿ ವೈಟ್ ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ವಂಚನೆಗೆ ಒಳಗಾದಂತ ವ್ಯಕ್ತಿಯನ್ನು ಕೆ.ಆರ್.ಪುರ ಸೀಗೆಹಳ್ಳಿ ನಿವಾಸಿ ಜಯಕುಮಾ‌ರ್ (40) ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ರಾಶಿ ಅರೋರಾ ಸೇರಿ ಇತರರ ವಿರುದ್ದ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ? ದೂರುದಾರ ಜಯಕುಮಾ‌ರ್ ಅವರನ್ನು ಕಳೆದ ಡಿಸೆಂಬರ್ ನಲ್ಲಿ ಅಪರಿಚಿತರು ಆಕ್ಸಿಸ್ ಸ್ಟಾಕ್ ಎಕ್ಸ್‌ ಚೇಂಜ್ ಗ್ರೂಪ್ ಮತ್ತು ಏಂಜೆಲ್ ಒನ್ ಎಂಬ ವಾಟ್ಸಾಪ್ ಗ್ರೂಪ್‌ ಗೆ ಸೇರಿಸಿದ್ದಾರೆ. ಬಳಿಕ ರಾಶಿ ಅರೋರಾ ಮತ್ತು ಪ್ರಿಯಾಂಕಾ ಸಿಂಗ್…

Read More

ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 18ಕ್ಕೂ ಅಧಿಕ ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿನ್ನೆ ಹೈ ಕೋರ್ಟ್ ನಲ್ಲಿ ಸಿಬಿಐ ಸಂಪೂರ್ಣ ವಸ್ತುಸ್ಥಿತಿ ವರದಿ ಸಲ್ಲಿಸಿದಾಗ ಎಲ್ಲವೂ ಬೆಳಕಿಗೆ ಬರಲಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಆದೇಶಿಸಬೇಕು ಎಂದು ಕೋರಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಸಿಬಿಐ ಪರ ವಕೀಲರು, ಜ.15ರವರೆಗಿನ ತನಿಖೆಗೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆ ಮಾಡದ ಹಲವು…

Read More

ಚಿತ್ರದುರ್ಗ : ಬಿಜೆಪಿ ಶಾಸಕ ಜನಾರ್ಧನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಉಂಟಾಗಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಡಿಕೆ ಶಿವಕುಮಾರ್ ಇಲ್ಲೇ ಇದೀವಲ್ಲ ನಮ್ಮಲ್ಲಿ ಎಲ್ಲಿ ಭಿನ್ನಾಭಿಪ್ರಾಯವಿದೆ? ಬಿಜೆಪಿಯಲ್ಲಿ ಒಳಜಗಳದಿಂದ 4-5 ಗುಂಪುಗಳಾಗಿವೆ. ನಮ್ಮಲ್ಲಿ ಒಗ್ಗಟ್ಟಿದೆ ಎಂದು ತಿಳಿಸಿದರು. ನಿನ್ನೆ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಒಳಜಗಳದಿಂದಾಗಿ ಒಡೆದ ಮನೆಯಾಗಿದೆ. ಅವರ ಪಕ್ಷದಲ್ಲಿ ನಿತ್ಯ ಒಂದೊಂದು ಹೊಸ ಕಚ್ಚಾಟ ಬೆಳಕಿಗೆ ಬರುತ್ತಿದೆ, ಆದರೆ ನಮ್ಮಲ್ಲಿ ಈ ತರಹದ ಸಮಸ್ಯೆ ಇಲ್ಲ. ನಾವು ಒಗ್ಗಟ್ಟಾಗಿದ್ದೇವೆ. 5 ವರ್ಷಗಳೂ ನಮ್ಮದೇ ಸರ್ಕಾರ ಇರುತ್ತದೆ, 2028ರ ಚುನಾವಣೆಯಲ್ಲಿಯೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ತಿಳಿಸಿದರು. ಇದೆ ಸಂದರ್ಭದಲ್ಲಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ವಾಣಿವಿಲಾಸ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು.ವಾಣಿ ವಿಲಾಸ್ ಸಾಗರ ಜಲಾಶಯ ನಿರ್ಮಾಣವಾದ…

Read More

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ. ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರ ‘ಹಸಿವು ಮುಕ್ತ ಕರ್ನಾಟಕ’ ಗುರಿಯೊಂದಿಗೆ ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ ಕುಂಟು ನೆಪ ಹೇಳಿದ ಕೇಂದ್ರ ಸರ್ಕಾರ, 78,000 ಟನ್‌ ಅಕ್ಕಿಯನ್ನು ಎಥೆನಾಲ್‌ ಉತ್ಪಾದನೆಗಾಗಿ ಕೇವಲ ₹20ಕ್ಕೆ ಕೊಡಲು ನಿರ್ಧರಿಸಿತ್ತು‌! ರಾಜ್ಯ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ 5 ಕೆ.ಜಿ ಅಕ್ಕಿಯ ಬದಲಿಗೆ ಹಣ…

Read More

ಬೆಳಗಾವಿ : ಏನು ಅರಿಯದ 4 ವರ್ಷದ ಕಂದಮ್ಮಳಿಗೆ ಮಲತಾಯಿ ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದು, ಬಳಿಕ ನನ್ನ ಮಗಳು ಫಿಟ್ಸ್ ಇಂದ ಸಾವನ್ನಪ್ಪಿದ್ದಾಳೆ ಎಂದು ಡ್ರಾಮಾ ಮಾಡಿದ್ದ ಮಲತಾಯಿಯನ್ನು ಇದೀಗ ಬೆಳಗಾವಿಯ APMC ಠಾಣೆ ಪೊಲೀಸರು 8 ತಿಂಗಳ ಬಳಿಕ ಬಂಧಿಸಿದ್ದಾರೆ. ಹೌದು ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಮಗುವಿನ ಕೊಲೆ ಪ್ರಕರಣ ಸಂಬಂಧ ಇಂದು ಸಪ್ನಾ ನಾವಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.ಕಳೆದ 8 ತಿಂಗಳ ಹಿಂದೆ ಅಂದರೆ ಮೇ ತಿಂಗಳಲ್ಲಿ ಸಪ್ನಾ ತನ್ನ 4 ವರ್ಷದ ಮಗಳು ಸಮೃದ್ಧಿಯನ್ನು ಕೊಲೆ ಮಾಡಿ, ಫಿಟ್ಸ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಳು.ಆದರೆ ಬಾಲಕಿಯ ಮರಣ್ಣೋತ್ತರ ಪರೀಕ್ಷೆಯಲ್ಲಿ ಮಲತಾಯಿಯ ಘೋರ ಕೃತ್ಯ ಬಯಲಾಗಿದೆ. ಮರಣ್ಣೋತ್ತರ ವರದಿಯಲ್ಲಿ ಏನಿದೆ? ಪ್ರಾಥಮಿಕ ತನಿಖೆಯಲ್ಲಿ, ಮಗುವನ್ನು ಕೊಲ್ಲುವ ಉದ್ದೇಶದಿಂದ ಸಪ್ನಾ ನಿಯಮಿತವಾಗಿ ಕಿರುಕುಳ ನೀಡುತ್ತಿದ್ದಳು ಮತ್ತು ಹೊಡೆಯುತ್ತಿದ್ದಳು ಎಂದು ಬೆಳಕಿಗೆ ಬಂದಿದೆ.ಮಗುವಿನ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಗುವು ಆಕೆಯ ಮೇಲೆ ನಡೆದ ಹಲ್ಲೆಯ ಗಾಯಗಳಿಂದ ಸಾವನ್ನಪ್ಪಿದೆ ಎಂದು…

Read More

ಮಂಗಳೂರು : ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳ ಎಲ್ಲವನ್ನು ದ್ವಂಸಗೊಳಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಬರ್ಕೆ ಠಾಣೆ ಪೋಲೀಸರು 14 ರಾಮಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು, FIR ಕೂಡ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ರಾಮಸೇನೆ ಮುಖ್ಯ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದಂತಹ ಸಚಿನ್, ಹರ್ಷರಾಜ್, ಮೋಹನ್ ದಾಸ್, ಪುರಂದರ, ರವೀಶ್, ಸುಕೇಶ, ಅಂಕಿತ್, ಕಾಳಿಮುತ್ತು, ಅಭಿಲಾಶ್, ದೀಪಕ್, ವಿಜ್ಞೇಶ್, ಶರಣ್ ರಾಜ್ ಹಾಗೂ ಪ್ರದೀಪ್ ಪೂಜಾರಿ ಎಂದು ತಿಳಿದುಬಂದಿದೆ. BNS ಕಾಯ್ದೆ 329(2), 324(5), 74, 351(3), 115 (2) 109, 352, 190ರ ಅಡಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಿಜೈ ಬಳಿ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ಏಕಾಏಕಿ ದಾಳಿ ಮಾಡಿದರು ಈ ವೇಳೆ…

Read More