Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು ಬರುತ್ತಿದ್ದ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದಾರೆ. ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಅ.29 ರಿಂದ ನ.5 ವರೆಗೆ ಪ್ರತ್ಯೇಕವಾಗಿ ಈ ಕಾರ್ಯಾಚರಣೆ ನಡೆದಿದ್ದು, ಬ್ಯಾಂಕ್‌ ಹಾಂಗ್‌ ನಿಂದ ಬಂದಿಳಿದ ನಾಲ್ವರು ಪ್ರಯಾಣಿಕರು ಕಸ್ಟಮ್ಸ್ ಬಲೆಗೆ ಬಿದ್ದಿದ್ದಾರೆ. ಈ ಪೆಡ್ಲರ್‌ಗಳಿಂದ 52.87 ಕೋಟಿ ರು. ಮೌಲ್ಯದ 52 ಕೆಜಿ ಹೈಡ್ರೋ ಗಾಂಜಾ ಜಪ್ತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾಂಕ್‌ಹಾಂಗ್‌ನಿಂದ ಹೈಡ್ರೋ ಗಾಂಜಾ ಸಾಗಾಣಿಕೆ ಬಗ್ಗೆ ಸಿಕ್ಕ ಮಾಹಿತಿ ಆಧರಿಸಿ ಬ್ಯಾಂಕ್‌ಹಾಂಗ್‌ ನಿಂದ ಕೆಐಎಗೆ ಆಗಮಿಸಿಸುವ ವಿಮಾನಗಳ ಮೇಲೆ ಕಣ್ಣಿಡಲಾಯಿತು. ಅ.29 ರಂದು ಓರ್ವ ಪ್ರಯಾಣಿಕ ಸಿಕ್ಕಿಬಿದ್ದರು. ಈತನ ಬಳಿ 37.88 ಕೋಟಿ ಮೌಲ್ಯದ 37 ಕೆಜಿ ಗಾಂಜಾ ಪತ್ತೆಯಾಗಿದೆ. ಮರುದಿನ ಮತ್ತಿಬ್ಬರು ಬ್ಯಾಂಕ್ ಹಾಂಗ್‌ನಿಂದ ಬಂದವರ ಬಳಿ 8.49 ಕೋಟಿ ಮೌಲ್ಯದ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ತಕ್ಷಣ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತು. ಅದರಲ್ಲೂ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆಯಿಂದ ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2023ರ ಜೂನ್ 11ರಂದು ಆರಂಭಿಸಲಾದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ. 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ. ಮಹಿಳೆ…

Read More

ಬೆಂಗಳೂರು : ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳಗಾವಿ ಜಿಲ್ಲೆಯ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸುತ್ತೇನೆ ಎಂದು ಸಚಿವ ಸಂಪುಟ ಸಭೆಯವಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ಮಾಡುತ್ತೇವೆ. ನಾಳೆ ಎಫ್‌ಆರ್‌ಪಿ ಬಗ್ಗೆಯೂ ಚರ್ಚೆ ಮಾಡುತ್ತೇವೆ . ನಾಳೆ ಪ್ರಧಾನ ಮಂತ್ರಿಗಳಿಗೆ ನಾನು ಪತ್ರ ಬರೆಯುತ್ತೇನೆ. ನನಗೆ ಭೇಟಿ ಮಾಡೋಕೆ ಅವಕಾಶ ಕೊಡಬೇಕು ಅಂತ ಪತ್ರ ಬರೆಯುತ್ತೇನೆ ರೈತರ ಸಮಸ್ಯೆ ಬಗ್ಗೆ ನಾನು ಮೋದಿ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ನಾಳೆ ಮಧ್ಯಾಹ್ನ ಒಂದು ಗಂಟೆಗೆ ರೈತ ಮುಖಂಡರ ಜೊತೆಗೆ ಸಭೆ ನಡೆಸುತ್ತೇನೆ ಬೆಳಗಾವಿ ಹಾವೇರಿ ಬಾಗಲಕೋಟೆ ಹಾಗೂ ವಿಜಯಪುರ ರೈತರ ಜೊತೆ ಸಭೆ ನಡೆಸುತ್ತೇನೆ ಕಬ್ಬು ಬೆಳೆಗಾರರ ಬೇಡಿಕೆ ಬಗ್ಗೆ ಸಭೆಯಲ್ಲಿ…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತೆ ತಂಗಿಯ ಮೇಲೆ ಸ್ವಂತ ಅಣ್ಣನೇ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ನಿರಂತರ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭವತಿಯಾಗಿದ್ದು ಅಲ್ಲದೆ ಮಗುವಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು ಆರೋಪಿ ತನ್ನ ತಂಗಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ದಿಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದ. ಬಾಲಕಿ ಗರ್ಭಿಣಿಯಾಗಿದ್ದರೂ ಪೋಷಕರಿಗೆ ಗೊತ್ತಿರಲಿಲ್ಲ. ಕೆಲ ದಿನಗಳ ಹಿಂದೆ ಬಾಲಕಿ ಮನೆಯಲ್ಲಿ ಜಾರಿ ಬಿದ್ದಿದ್ದ ವೇಳೆ ಸೊಂಟಕ್ಕೆ ಪೆಟ್ಟಾಗಿತ್ತು. ವೈದ್ಯರು ಸ್ಕ್ಯಾನಿಂಗ್ ಗೆ ಸೂಚಿಸಿದ್ದರು. ಈ ವೇಳೆ ಬಾಲಕಿ ಗರ್ಭವತಿ ಎಂಬುದು ಗೊತ್ತಾಗಿದೆ. ಅಣ್ಣನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ. 21 ವರ್ಷದ ಅಣ್ಣನ ವಿರುದ್ಧ ಸಂಸ್ತೆ ದೂರು ನೀಡಿದ್ದು, ಪೊಕ್ಸ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಅಣ್ಣನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಆಸ್ಪತ್ರೆಯಲ್ಲಿಯೇ ಬಾಲಕಿ ಹೆರಿಗೆಯಾಗಿದ್ದಾಳೆ. ತಾನು ಗರ್ಭವತಿಯಾಗಿದ್ದೆ ಎಂಬುದೇ ತನಗೆ ಗೊತ್ತಾಗಿಲ್ಲ ಎಂದು…

Read More

ಬೆಂಗಳೂರು : ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ’ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಿಸಿದ್ದಾರೆ. ರಾಷ್ಟ್ರಗೀತೆಗೆ ಅಪಮಾನ ಮಾಡಿರುವುದರಿಂದ ದೇಶದ್ರೋಹ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ‘ಜನಗಣಮನ’ ಗೀತೆಯನ್ನು ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದು ಎಂಬ ಹೇಳಿಕೆ ನೀಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ದೂರು ನೀಡಲಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ನವರಿಗೆ ತಮ್ಮ ಇತಿಹಾಸ ಗೊತ್ತಿಲ್ಲ. ಆರ್ಗನೈಸರ್ ಮ್ಯಾಗಜೀನ್ ಲೇಖನಗಳನ್ನು ಓದಿ ನೋಡಿ, ನೀವು ಎಂತಹ ದೇಶದ್ರೋಹಿಗಳೇ ಎಂದು ತಿಳಿಯುತ್ತದೆ. ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ನೀವು ಯಾವತ್ತೂ ಗೌರವ ಕೊಟ್ಟಿಲ್ಲ ಎಂದು ವಾಗ್ದಾಳಿ ನಡಿಸಿದ್ದಾರೆ. ಇದು ‘ಜನಗಣಮನ’ ಬ್ರಿಟಿಷರನ್ನ ಸ್ವಾಗತಿಸುವುದಕ್ಕೆ ರಚಿಸಿದ್ದು ಎಂದು ಹೇಳ್ತಾರಲ್ಲ, ಇದು ಅವರು ಸೃಷ್ಟಿಸಿದಂತ ಇತಿಹಾಸ.…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ಇದೀಗ ಬೆಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ರಸ್ತೆಯ ಮೇಲೆ ನಡ್ಕೊಂಡು ಹೋಗುತ್ತಿದ್ದವನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ಏಕಾಏಕಿ 20 ಬೀದಿ ನಾಯಿಗಳು ದಾಳಿ ಮಾಡಿವೆ ಬೆಂಗಳೂರಿನ ಕೊಡಿಗೆಹಳ್ಳಿಯ ಕೆಂಪೇಗೌಡ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿ ದಾಳಿಯಿಂದ 20 ವರ್ಷದ ವೀರೇಶ್ ಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ವೀರೇಶ್ ಗೆ ಚಿಕಿತ್ಸೆ ನೀಡದೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಬೆಜವಾಬ್ದಾರಿ ವರ್ತನೆ ತೋರಿದ್ದಾರೆ. ಚಿಕಿತ್ಸೆ ನೀಡದೆ ವೈದ್ಯರು ಮನೆಗೆ ವೀರೇಶ ವಾಪಸ್ ಕಳುಹಿಸಿದ್ದಾರೆ. ದೇಹದ ತುಂಬಾ ರಕ್ತ ಸುರಿಯುತ್ತಿದ್ದರು ಸಿಬ್ಬಂದಿ ಹಾಗೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಬ್ಯಾಂಡೇಜ್ ಕೂಡ ಹಾಕದೆ ವೈದ್ಯರು ಮನೆಗೆ ಕಳುಹಿಸಿದ್ದಾರೆ. ಮೊದಲು ಯಲಹಂಕ ಸರ್ಕಾರಿ ಆಸ್ಪತ್ರೆಗೆ ವೀರೇಶ್ ದಾಖಲಾಗಿದ್ದರು. ಆನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು ರಾತ್ರಿಯೇ ವೀರೇಶನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಮನೆಯಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಒಬ್ಬ ವಿಚಿತ್ರ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನನ್ನು ಅರೆಸ್ಟ್ ಮಾಡಲಾಗಿದ್ದು, 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರಿಂದ ಕಳ್ಳನ ಬಂಧನವಾಗಿದೆ. ಅಸ್ಲಾಂ ಪಾಷಾ ವಿರುದ್ಧ 150 ಪ್ರಕರಣ ದಾಖಲಾಗಿತ್ತು. ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಈತ ಮನೆಗಳ ತನ ಮಾಡಿದ್ದ. ಕದ್ದ ಮಾಲ್ ಅಲ್ಲಿ ದೇವರಿಗೆ ಪಾಲು! ಕಳ್ಳತನದಲ್ಲೂ ಅಸ್ಲಾಂ ಪಾಶಾಗೆ ದೇವರ ಮೇಲೆ ನಂಬಿಕೆ ಹೆಚ್ಚಾಗಿತ್ತು. ಪ್ರತಿ ಬಾರಿಯೂ ಕದ್ದ ಮಾಲಿನಲ್ಲಿ ದೇವರಿಗೆ ಪಾಲು ನೀಡುತ್ತಿದ್ದ. ಕಳ್ಳತನ ಮಾಡಿ ಅಜ್ಮೀರ್ ದರ್ಗಾ ಗೆ ಪಾಶ ಹೋಗುತ್ತಿದ್ದ. ದರ್ಗಾದಲ್ಲಿ ಹುಂಡಿಗೆ ಹಣ ಹಾಕುತ್ತಿದ್ದ ಅಜ್ಮೀರ್ ದರ್ಗಾ ಗೆ ಪ್ರಾರ್ಥನೆ ಬಳಿಕ ಈತ ವಿಲಾಸಿ ಜೀವನ ನಡೆಸುತ್ತಿದ್ದ. ಇದೀಗ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಕಳ್ಳತನವನ್ನೇ ತನ್ನ ಕಾಯಕವನ್ನಾಗಿ ಮಾಡಿಕೊಂಡಿದ್ದ ಕಳೆದ 20 ವರ್ಷಗಳಿಂದ…

Read More

ಬೆಂಗಳೂರು : ಮೆಕ್ಕೆಜೋಳ ಖರೀದಿಯಲ್ಲಿ ಭಾರಿ ವಂಚನೆ ಆಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ಎದುರಾಗಿದ್ದು, ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದೂರು ನೀಡಿದ್ದಾರೆ. ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಂಚನೆ ಮಾಡಿದ ವ್ಯಕ್ತಿಯ ಪರವಾಗಿ ಜಮೀರ್ ನಿಂತಿರುವ ಆರೋಪ ಕೇಳಿ ಬಂದಿದೆ. ಹೈದರಾಬಾದ್ ವ್ಯಕ್ತಿಗೆ ಜಮೀರ್ ಅಹ್ಮದ್ ಸಹಕರಿಸುವಂತೆ ಫೋನ್ ಕರೆ ಮಾಡಿದ್ದರಂತೆ, ಅಲ್ಲದೇ ಆರೋಪಿ ಅಕ್ಬರ್ ಪಾಷಾಗೆ ಸರ್ಕಾರಿ ವಾಹನ ಬಳಕೆ ಮಾಡಲು ಕೂಡ ಜಮೀರ್ ಅಹ್ಮದ್ ಅವಕಾಶ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ. ಹೀಗಾಗಿ ರಾಜ್ಯಪಾಲರಿಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎನ್ನುವವರು ದೂರು ನೀಡಿದ್ದು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಮಾನ್ಯ ಸಚಿವರ ಗಮನಕ್ಕೆ ತಂದಿದ್ದರು. ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿರುತ್ತಾರೆ. ಮೊದಲನೇ ಹಂತದಲ್ಲಿ ಸದರಿ‌‌ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ…

Read More

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ. ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ ಬಗ್ಗೆ ಸಣ್ಣ ತನದ ಮಾತುಗಳನ್ನಾಡುತ್ತಿದ್ದಾರೆ. ಶಾಲಾ ಶಿಕ್ಷಕರ ಸಂಬಳಕ್ಕೆ ಹಣ ಕೊಡ್ತೀನಿ ಎಂದು ಕೊಟ್ಟಿಲ್ಲ ಅಂತಿದ್ದಾರೆ. ಸಿಎಸ್ಆರ್ ಫಂಢ್ ನಲ್ಲಿ ಸಂಬಳ ಕೊಡಲು ಆಗಲ್ಲ. ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ. ಅದು ಪಾಪದ ಹಣ ಅಲ್ಲ ಎಂದು ತಿಳಿಸಿದರು. ನಾನು ವರ್ಗಾವಣೆಗೆ ಯಾರಿಂದಲೂ ದುಡ್ಡು ಪಡೆಯಲ್ಲ, ಕಮಿಷನ್ ಪಡೆದಿಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಲಿ.ಜನರಿಗೆ ದ್ರೋಹ ಮಾಡುವವನು ನಾನು ಅಲ್ಲ.…

Read More