Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಇದೀಗ ವಿಮಾನಗಳಿಗೂ ಆ ಒಂದು ಬಿಸಿ ತಟ್ಟಿದ್ದು, ವಿಮಾನಗಳಿಗೂ ತೈಲ ಅಭಾವ ಬಿಸಿ ತಟ್ಟಿದೆ ಹಾಗಾಗಿ ಏಪ್ರಿಲ್ ಒಂದರಿಂದ ವಿಮಾನ ಪ್ರಯಾಣದ ಏರಿಕೆ ಆಗುವ ಸಾಧ್ಯತೆ ಇದೆ. ಹೌದು ಈ ಬಗ್ಗೆ ಕೇಂದ್ರ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು ದರ ಏರಿಕೆ ಕುರಿತು ಇದೀಗ ಸುಳಿವು ನೀಡಿದ್ದಾರೆ. ವಿಮಾನಯಾನ ಸಂಸ್ಥೆಯ ವೆಚ್ಚದಲ್ಲಿ ಇಂಧನಂದೇ ಪಾಲಾಗಿದ್ದು ಶೇಕಡ 35 ರಿಂದ 45ರಷ್ಟು ಇಂಧನದ್ದೆ ಪಾಲು ಇದೆ ಕೊಲ್ಲಿ ರಾಷ್ಟ್ರಗಳ ಉದ್ವಿಗ್ನತೆಯಿಂದ ಕಚ್ಚಾ ತೈಲಗಳ ಬೆಲೆ ಏರಿಕೆಯಾಗಿದ್ದು ಹಾಗಾಗಿ ವಿಮಾನಯನ ಪ್ರಯಾಣದರ ಏರಿಕೆ ಆಗಲೇ ಬೇಕಾಗುತ್ತದೆ ಎನ್ನುವ ಸುಳಿವು ನೀಡಿದ್ದು ಈಗಾಗಲೇ ಇಂಧನ ಸರ ಚಾರ್ಜ್ ವಿಧಿಸಿರುವ ಕೆಲ ಸಂಸ್ಥೆಗಳು ಏರ್ ಇಂಡಿಯಾ, ಇಂಡಿಗೋ, ಏರ್ ಅಕಾಸ್ ಸಂಸ್ಥೆಗಳು ಸಮಸ್ಯೆಗಳ ಕುರಿತು ವಿವರಿಸಿವೆ.
ನವದೆಹಲಿ : ವಿಮಾನಯಾನ ಟಿಕೆಟ್ ದರ ಮಿತಿಯನ್ನು ಹಿಂಪಡೆದ ಕೇಂದ್ರ ಸರ್ಕಾರ, ದೇಶೀಯ ವಿಮಾನಯಾನ ಟಿಕೆಟ್ ದರಗಳ ಮೇಲಿನ ತಾತ್ಕಾಲಿಕ ಮಿತಿಯನ್ನು ಇದೀಗ ಕೇಂದ್ರ ಸರ್ಕಾರ ಹಿಂಪಡೆದಿದೆ. ಆದೇಶ ಹಿಂಪಡೆದ ನಾಗರಿಕ ವಿಮಾನಯಾನ ಸಚಿವಾಲಯ ಟಿಕೆಟ್ ದರ ಮಿತಿ ಹಿಂಪಡೆದ ಆದೇಶ ನಾಳೆಯಿಂದಲೇ ಜಾರಿ ಆಗಲಿದೆ. ಕಳೆದ ವರ್ಷ ಇಂಡಿಗೋ ಏರ್ಲೈನ್ಸ್ನಲ್ಲಿ ಉಂಟಾಗಿತ್ತು. ಪೈಲೆಟ್ ರೋಸ್ಟರಿಂಗ್ ಬಿಕ್ಕಟಿನಿಂದ ವಿಮಾನಗಳು ರದ್ದಾಗಿದ್ದವು. ಇದರಿಂದ ವಿಮಾನ ಪ್ರಯಾಣದ ಟಿಕೆಟ್ ಗಗನಕ್ಕೆ ಏರಿತು. ಪ್ರಯಾಣಿಕರ ದೃಷ್ಟಿಯಿಂದ ಟಿಕೆಟ್ ದರದ ಮೇಲೆ ಮಿತಿ ವಿಧಿಸಿತ್ತು. ಸರ್ಕಾರ ವಿಮಾನಗಳ ಟಿಕೆಟ್ ದರದ ಮೇಲೆ ಗರಿಷ್ಠ ಮಿತಿ ವಿಧಿಸಿತ್ತು ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ, ಆದೇಶವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ದರ ಮಿತಿ ಆದೇಶ ಹಿಂಪಡೆದರು ಕೂಡ ಮನಬಂದಂತೆ ವಿಮಾನಯನ ಸಂಸ್ಥೆಗಳು ದರ ಹೆಚ್ಚಿಸಬಾರದು, ದರ ಏರಿಕೆ ಕುರಿತು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಸಮಸ್ಯೆ ಆಗುವಂತೆ ದರ ಏರಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ…
ಕಲಬುರ್ಗಿ : ಕಲ್ಬುರ್ಗಿ ವಿಭಾಗೀಯ ಕಚೇರಿಯ ಜೆಇ ಸುನಿಲ್ ಹಕ್ಕಿ ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ನಾಪತ್ತೆಯಾಗಿದ್ದಾರೆ. ಕಳೆದ ಭಾನುವಾರದಿಂದ ಪಿಡಬ್ಲ್ಯೂಡಿ ಇಂಜಿನಿಯರ್ ಸುನಿಲ್ ಹಕ್ಕಿ ನಾಪತ್ತೆಯಾಗಿದ್ದಾರೆ. ಮಾರ್ಚ್ 15 ಮಧ್ಯಾಹ್ನ 12 ಗಂಟೆಗೆ ಸುನಿಲ್ ಮನೆಯಿಂದ ಹೋಗಿದ್ದಾರೆ. ತಾಯಿಯ ಬಳಿ 15,000 ಹಣ ತೆಗೆದುಕೊಂಡು ಸುನಿಲ್ ಮನೆ ಬಿಟ್ಟು ಹೋಗಿದ್ದಾರೆ ಮೊಬೈಲ್ ಮನೆಯಲ್ಲಿ ಬಿಟ್ಟು ಆಫೀಸ್ಗೆ ಹೋಗುವುದಾಗಿ ಹೇಳಿದ್ದರು. ಮೊಬೈಲ್ ತೆಗೆದುಕೊಂಡು ಹೋಗುವಂತೆ ತಾಯಿ ಹೇಳಿದರೂ ಕೂಡ ಬಹಳ ಕಾಲ್ಗಳು ಬರುತ್ತವೆ ಬೇಡ ಅಂತ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ. ವಾಪಸ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಸುನಿಲ್ ಗಾಗಿ ಹುಡುಕಾಟ ನಡೆಸಿದ್ದಾರೆ ಸುನಿಲ್ ಅತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಕುಟುಂಬಸ್ಥರು ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂ ಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮನೆಯಲ್ಲಿಯೇ ಮೊಬೈಲ್ ಬಿಟ್ಟು ಪಿಡಬ್ಲ್ಯೂಡಿ ಇಂಜಿನಿಯರ್ ನಾಪತ್ತೆಯಾಗಿದ್ದಾರೆ.
ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.
ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…
ನವದೆಹಲಿ : ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು ನೀಡಿದ್ದಾರೆ. ಹೌದು ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು. ಇದು ಜಾಗತಿಕ ತೈಲ ಪೂರೈಕೆ, ಬೆಲೆ ಏರಿಕೆಗೆ ಕಾರಣವಾಗಿದೆ. ವಿಶ್ವದ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಈ ಜಲಸಂಧಿ ನಿರ್ಬಂಧವು ಹಲವು ದೇಶಗಳ ಆತಂಕಕ್ಕೆ ಕಾರಣವಾಗಿದೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ನಂತರ, ಇರಾನ್ ವಿರುದ್ಧ ದಾಳಿಯಲ್ಲಿ ಭಾಗಿಯಾಗಿರುವ ದೇಶಗಳಿಗೆ, ಹೆಚ್ಚಿನ ಹಡಗು ಸಂಚಾರಕ್ಕಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇನ್ನು ಟ್ರಂಪ್ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ಇದ್ದ ನಮಿಷ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡಕರ್ ಪ್ಲಾಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ನಾಗರಾಜ ರಾಯ್ಕರ್ ಈ ಒಂದು ಕಾರು ಖರೀದಿಸಿದ್ದ. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ಬಾಗಲಕೋಟೆ : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣೆಗು ಮುನ್ನ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು ಡಾ. ದೇವರಾಜ್ ಪಾಟೀಲ್ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾತನಾಡಿದ ಅವರು ತನ್ನ ಬೆಂಬಲಿಗರ ಜೊತೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಮೂಲ ಕಾಂಗ್ರೆಸ್ಸಿಗ ಆಗಿರುವ ಮಕ್ಕಳ ದೇವರಾಜ್ ಪಾಟೀಲ್ ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೆ. 2013 ರಲ್ಲಿ ಟಿಕೆಟ್ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದರು. 2018ರಲ್ಲೂ ಟಿಕೆಟ್ ಘೋಷಣೆ ಮಾಡಿದ್ದರು ಸಿದ್ದರಾಮಯ್ಯ ಸ್ಪರ್ಧಿಸಿದ್ದರಿಂದ ಕ್ಷೇತ್ರವನ್ನು ಬಿಟ್ಟು ಕೊಡಬೇಕಾಯಿತು. ಇನ್ನು 2023ರಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೇ ಅನ್ಯಾಯ ಮಾಡಿದರು. ಕೊನೆಗೆ 2013ರ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಸ್ಪರ್ಧೆ ಮಾಡಿದೆ. ಆದ್ದರಿಂದ ನನಗೆ ಗೌರವ ಸಿಗುವ ಪಕ್ಷ ಅಂತ ಬಿಜೆಪಿ ಸೇರುತ್ತಿದ್ದೇನೆ. ಬಾಗಲಕೋಟೆ ಬಿಜೆಪಿ ನಾಯಕರು ಸಮ್ಮುಖದಲ್ಲಿ ಪಕ್ಷ ಸೇರಲಿದ್ದೇನೆ ಎಂದು ಬಾಗಲಕೋಟೆಯಲ್ಲಿ ಡಾ. ದೇವರಾಜ್…
BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!
ದಕ್ಷಿಣಕನ್ನಡ : ಮೂಡಬಿದರೆ ಇನ್ಸ್ಪೆಕ್ಟರ್ ಸಂದೇಶನ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ. ಅತ್ಯಾಚಾರ ಆರೋಪದ ಅಡಿ ಪೊಲೀಸರು ಇದೀಗ ಸಂದೇಶ ವಿರುದ್ಧ FIR ದಾಖಲಾಗಿದ್ದು, ಸಂತ್ರಸ್ತೇ ಶಿಕ್ಷಕಿ ನೀಡಿದ ದೂರಿನ ಮೇರೆಗೆ fir ದಾಖಲಾಗಿದೆ. 2018 ರಿಂದ 2023ರ ವರೆಗೆ ಬೆದರಿಸಿ ಸಂದೇಶ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತ ಶಿಕ್ಷಕಿ ಆರೋಪಿಸಿದ್ದಾರೆ. ಶಿಕ್ಷಕಿ ಮನೆಗೆ ಹೋಗಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನೇ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆ ರಂಗೆರಿದ್ದು, ಇದೀಗ ನೀತಿ ಸಂಹಿತೆ ಉಲ್ಲಂಘನೆ ಮಾಡಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಾರಿನಲ್ಲಿ ದಾಖಲೆಯಿಲ್ಲದೆ ಹಣ ಸಾಗಿಸುತ್ತಿದ್ದರು. ಈ ವೇಳೆ ಸಿಬ್ಬಂದಿಗಳು 32,50,000 ಸಿಬ್ಬಂದಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಹೊನ್ನಕಟ್ಟಿ ಚೆಕ್ಪೋಸ್ಟ್ ನಲ್ಲಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದು, ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸುತಿರುವುದು ಪತ್ತೆಯಾಗಿದೆ. KA-32, P-3991 ನಂಬರ್ ಕಾರ್ ನಲ್ಲಿ ಹಣ ಸಾಗಟ ಮಾಡುತ್ತಿದ್ದರು. ದಾಖಲೆ ಇಲ್ಲದೆ ಹಾಗೂ ಸೂಕ್ತವಾದ ಕಾರಣ ನೀಡದೆ ಹಿನ್ನಲೆ ಇದೀಗ ಹಣ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಇಂದು ಮುಂಜಾನೆ ಈ ಒಂದು ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ತಲೆಯ ಮೇಲೆ ಹಲ್ಲೆ ನಡೆಸಿ ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕಿರಣನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














