Author: kannadanewsnow05

ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಂಗಳೂರು : ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಸೂರಜ್ ರೇವಣ್ಣ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಅವರು ತಮ್ಮ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 10ಕ್ಕೆ ವಿಚಾರಣೆ ಮುಂದೂಡಿದೆ. ಹೌದು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರು ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸಿಐಡಿ ತನಿಖಾಧಿಕಾರಿ ಎಂ ಹೆಚ್ ಉಮೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲೂ ಕೂಡ ಸಿಐಡಿ ಪೋಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ನೀಡುವಂತೆ ಸೂರಜ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ಕೋರಿದರು. ಇದೆ ಸಂದರ್ಭದಲ್ಲಿ ನ್ಯಾಯಾಲಯವು ಆಕ್ಷೇಪಣಿ…

Read More

ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಾಗಾಗಿ ಕೊಲೆಗೆ ಏನು ಕಾರಣ ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ. ಇದೀಗ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Read More

ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ರಸ್ತೆ ಬದಿಯಲ್ಲಿ ಕಾರು ನಿಂತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಈ ವೇಳೆ ಪೊಲೀಸರು ಆಗಮಿಸಿ ಕೂಡಲೇ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಾರೆ ಆದರೆ ಅಲ್ಲಿಂದ ನಂತರ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಎಂದು ಹೇಳಲಾಗುತ್ತಿದೆ.ಮೃತ ಪ್ರತಾಪ್ ಕುಮಾರ್ ಅವರು ಬಿಸಿ ಪಾಟೀಲ್ ಅವರ ಮೊದಲನೇ ಮಗಳ ಪತಿಯಾಗಿದ್ದು,ಸದ್ಯ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಪೊಲೀಸರು ತನಿಖೆ ನಡೆಸುತ್ತಿದ್ದು, ಹೊನ್ನಾಳಿ ಪೊಲೀಸ್…

Read More

ಶಿವಮೊಗ್ಗ : ಇತ್ತೀಚಿಗೆ ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಮ್ಮೆಹಟ್ಟಿಯ 13 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಟ ಶಿವರಾಜಕುಮಾರ್ ಪತ್ನಿ ಗೀತಾ ಮೃತ ಕುಟುಂಬಸ್ಥರಿಗೆ ಭೇಟಿ ನೀಡಿ ಸಾಂತ್ವನ ಹೇಳಿ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಹೌದು ಅಪಘಾತದಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಗಳಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಕುಟುಂಬದವರಿಗೆ ನೋವು ಸಹಿಸುವ ಶಕ್ತಿಯನ್ನು ದೇವರ ನೀಡಲಿ ಎಂದು ಶಿವರಾಜ್​ಕುಮಾರ್​-ಗೀತಾ ದಂಪತಿ ಪ್ರಾರ್ಥಿಸಿದ್ದಾರೆ. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಶಿವರಾಜಕುಮಾರ, ಸಹಾಯ ಮಾಡುವುದು ಸುಲಭ. ಆದರೆ ಈ ಕುಟುಂಬದವರಿಗೆ ಸಮಾಧಾನ ಮಾಡುವುದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಇರುವುದೇ ದೊಡ್ಡ ವಿಷಯ. ಕುಟುಂಬದವರಿಗೆ ಆದ ನಷ್ಟ ಪ್ರತಿದಿನವೂ ಕಾಡುತ್ತಾ ಇರುತ್ತದೆ. ನೋವನ್ನು ಸಹಿಸುವ ಶಕ್ತಿ…

Read More

ಹುಬ್ಬಳ್ಳಿ : ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಭೀಕರವಾಗಿ ಕೊಲೆಯಾಗಿದ್ದಳು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ನೇಹಾ ಕೊಲೆಗೆ ಸಂಬಂಧಿಸಿದಂತೆ ಇಂದು CID ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾನಿ ಕೋರ್ಟಿಗೆ ಇದೀಗ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಸುಮಾರು 483 ಪುಟಗಳ ಚಾರ್ಜ್ ಶೀಟ್ ಗಳನ್ನು ಸಲ್ಲಿಸಿದರು. ಕಳೆದ ಏಪ್ರಿಲ್ 28ರಂದು ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಭೀಕರವಾಗಿ ಹತ್ಯೆಯಾಗಿತ್ತು. ನಿಹಾಗೆ ಚಾಕುವಿನಿಂದ ಹಿಡಿದು ಫಯಾಜ್ ಬರ್ಬರವಾಗಿ ಕೊಂದಿದ್ದ. ನೇಹಾ ಹಿರೇಮಠ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆದಿತ್ತು.ಇದೀಗ ಸಿಐಡಿ ಪೋಲೀಸರು 483 ಪುಟಗಳಷ್ಟು ಚಾರ್ಜ್ ಶೀಟ್ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪಡೆದುಕೊಂಡಿದ್ದರೆ ಅಂತಹ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇದೀಗ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೌದು ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮಹತ್ವದ ಸೂಚನೆಗಳನ್ನು ಅವರು ನೀಡಿದರು.ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು ಎಂದು ವಿವರಿಸಿದರು. ಹಾಗಾಗಿ ಅನರ್ಹ ಡಿಪಿಎಲ್ ಕಾರ್ಡುಗಳನ್ನು ಪತ್ತೆ ಹಚ್ಚಿ ಕೂಡಲೇ ಅವುಗಳನ್ನು ರದ್ದುಪಡಿಸುವಂತೆ…

Read More

ಬೆಂಗಳೂರು : ಇತ್ತೀಚಿಗೆ ಮಂಗಳೂರಿಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡಿದ್ದರು. ಈ ವಿಷಯದ ಕುರಿತಾಗಿ ಬಿಜೆಪಿ ನಾಯಕರು ಕಿಡಿ ಕಾರಿದ್ದರು. ಇದಕ್ಕೆ ತಿರುಗೆಟು ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಯವರು ಡೆಂಗ್ಯೂ ಸೊಳ್ಳೆಗಿಂತಲೂ ವೇಗವಾಗಿ ಸುಳ್ಳುಗಳನ್ನು ಹರಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕೆಲಸ ಇಲ್ಲ. ಸ್ವಿಮಿಂಗ್ ಮಾಡುವುದು ಒಂದು ಉತ್ತಮ ಹವ್ಯಾಸ. ವಾಕಿಂಗ್, ಜಾಗಿಂಗ್, ರೀತಿ ಸ್ವಿಮ್ಮಿಂಗ್ ಕೂಡ ಆರೋಗ್ಯಕರ ಹವ್ಯಾಸವಾಗಿದೆ. ಬಿಜೆಪಿಯವರ ರೀತಿ ರೆಸಾರ್ಟಿಗೆ ಹೋಗಿ ಸ್ವಿಮ್ ಮಾಡಿದ್ದಲ್ಲ. ಅದು ಬಿಜೆಪಿ ಅವರಿಗೆ ಬರಿ ಮೋಜು ಮಸ್ತಿ ಅಂತ ಮಾತನಾಡಿ ಅಭ್ಯಾಸವಿದೆ ಎಂದರು. ನಿನ್ನೆ ನೆಲಮಂಗಲ ಬಳಿ ಜನರಿಗೆ ಬಾಡೂಟದ ಜೊತೆ ಮದ್ಯ ಹಂಚಿದ್ದಾರಲ್ಲ. ನಾನೇನಾದ್ರೂ ಆ ರೀತಿ ಮಾಡಿದ್ದೀನಾ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಸ್ವಿಮ್ ಮಾಡಿದೆ ತಪ್ಪೇನಿದೆ? ನಂತರ ಆಸ್ಪತ್ರೆಗಳಿಗೆ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪ್ರಮುಖ 5 ಗ್ಯಾರಂಟಿ ಯೋಜನೆಗಳ ರದ್ದು ಮಾಡಲಾಗುತ್ತದೆ ಎಂಬ ಚರ್ಚೆಯ ಬೆನ್ನಲ್ಲೇ ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಓಗಳ ಸಭೆಯಲ್ಲಿ ಸೂಚನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಬೇಕಾಗಿದೆ. ಸುಮಾರು 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ. ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 8452317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸೂಚನೆ ನೀಡಿದರು.

Read More

ಬೆಂಗಳೂರು : ನಟಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, ವರದಿ ಬರಬೇಕು ಅಷ್ಟೆ. ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಮಾಡಿ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ಗೆ ಕರೆತಂದು ದರ್ಶನ್ ಸೇರಿದಂತೆ ಆತನ ಸಹಚರರು ಭೀಕರವಾಗಿ ಅಲೆ ನಡೆಸಿ ಕೊಲೆ ಮಾಡಿದ್ದರು. ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ…

Read More