Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಚಿಕ್ಕಮಂಗಳೂರಿನ 6 ಜನ ನಕ್ಸಲರು ಶರಣಾಗಿದ್ದರು. ಬಳಿಕ ಬೆಂಗಳೂರಿನ NIA ಕೋರ್ಟ್ 7 ದಿನಗಳ ಕಾಲ ಚಿಕ್ಕಮಂಗಳೂರು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು. ಇದೀಗ ನಾಳೆ ಈ ಒಂದು ಪೊಲೀಸ್ ಕಸ್ಟಡಿ ಆದೇಶ ಅಂತ್ಯವಾಗಲಿದೆ. ಹೌದು 6 ಜನ ನಕ್ಸಲರ ಪೊಲೀಸ್ ಕಸ್ಟಡಿ ಅವಧಿ ನಾಳೆ ಅಂತ್ಯವಾಗಲಿದೆ. ಹಾಗಾಗಿ ನಾಳೆ ಕೋರ್ಟಿಗೆ ಪೊಲೀಸರು ನಕ್ಸಲರನ್ನು ಹಾಜರುಪಡಿಸಲಿದ್ದಾರೆ. ಬೆಂಗಳೂರಿನ NIA ಕೋರ್ಟಿಗೆ ಪೊಲೀಸರು 6 ಜನ ನಕ್ಸಲರನ್ನು ಹಾಜರುಪಡಿಸಲಿದ್ದಾರೆ. 7 ದಿನಗಳ ಕಾಲ ಚಿಕ್ಕಮಂಗಳೂರು ಪೊಲೀಸ್ ಕಸ್ಟಡಿಗೆ ನೀಡಿ NIA ಕೋರ್ಟ್ ಆದೇಶ ನೀಡಿತ್ತು. ತಮಗೂ ನಕ್ಸಲರ ವಿಚಾರಣೆ ನಡೆಸಲು ತಮಗೂ ಕಸ್ಟಡಿಗೆ ನೀಡುವಂತೆ ನಾಳೆ ಕೇರಳ ಪೊಲೀಸರು ಕೂಡ ಮನವಿ ಮಾಡುವ ಸಾಧ್ಯತೆ ಇದೆ. NIA ಅಧಿಕಾರಿಗಳು ಕೂಡ ಈ 6 ಜನ ನಕ್ಸಲರ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂಡಗಾರು…
ಬೆಂಗಳೂರು : ಒಂದು ಕಡೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾರು ಮಾತನಾಡದಂತೆ ಬಾಯಿ ಮುಚ್ಚಿ ನಿಮ್ಮ ನಿಮ್ಮ ಕೆಲಸ ಮಾಡಿ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಬೆಂಬಲಿಗರು ನೆಕ್ಸ್ಟ್ ಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗುತ್ತಿದ್ದಾರೆ. ಇದರ ಮಧ್ಯ ಬಿಜೆಪಿ ಎಂಎಲ್ಸಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಸಿಎಂ ಸಿದ್ದರಾಮಯ್ಯ ಅವರು ಹಬ್ಬಿಸುತ್ತಿರುವ ಗೋಜಲು ಇದು. ಕಾಂಗ್ರೆಸ್ ಪಕ್ಷದ ನೇಮ್ ಅಂಡ್ ಫೇಮ್ ಹಾಳು ಮಾಡುತ್ತಿದ್ದಾರೆ. ಇವರೇನು ಕಾಂಗ್ರೆಸ್ ಕಟ್ಟಿದವರಲ್ಲವಲ್ಲ, ಅವರಿಗೆ ಏನಾಗಬೇಕು. ಅವರದ್ದು ಮುಗಿಯಿತಲ್ಲ, ಇದು ಅನಾವಶ್ಯಕ. ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷವನ್ನು…
ಬೆಂಗಳೂರು : ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಹಾವೇರಿ ಜಿಲ್ಲೆಯಿಂದ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹೌದು ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ್ ಸಮಾವೇಶ ನಡೆದಿತ್ತು. ಈ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಬಸಪ್ಪನನ್ನು ಜನರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಸಪ್ಪ ಪಾಮನಹಳ್ಳಿ ಮೃತಪಟ್ಟಿದ್ದರು ಮೃತ ಬಸಪ್ಪ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಇದೀಗ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ 5ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿಸಿದ ಹಿನ್ನೆಲೆಯಲ್ಲಿ ಆತಂಕದಲ್ಲಿ ಪ್ರಯಾಣಿಕರು ರೈಲಿನ ಪಕ್ಕದ ಹಳಿಗೆ ಜಿಗಿದಿದ್ದಾರೆ.ಈ ವೇಳೆ ಮತ್ತೊಂದು ಹಳಿಯ ಮೇಲೆ ಬಂದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 20 ಜನರು ಸಾವನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ರೈಲ್ವೆ ಅಧಿಕಾರಿಯ ಮಾಹಿತಿ ಪ್ರಕಾರ 8 ಪ್ರಯಾಣಿಕರು ಸಾವನ್ನಪ್ಪಿದು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದು, ಪ್ರಯಾಣಿಕರು ಇಳಿಯುವ ಭರದಲ್ಲಿ ಇನ್ನೊಂದು ಹಳಿಯ ಮೇಲೆ ನಿಂತಿದ್ದಾರೆ. ಈ ವೇಳೆ ದೆಹಲಿಯಿಂದ ಆಗಮಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಈ ವೇಳೆ ಸುಮಾರು 8 ಜನ ಪ್ರಯಾಣಿಕರು ಸಾವನ್ನಪ್ಪಿದ್ದು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಪರಾಂಡ ನಿಲ್ದಾಣದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಘಟನೆಯ ಕುರಿತಂತೆ ಮೊದಲು ಪ್ರಯಾಣಿಕರು…
ಮಹಾರಾಷ್ಟ್ರ : ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದು, ಪ್ರಯಾಣಿಕರು ಇಳಿಯುವ ಭರದಲ್ಲಿ ಇನ್ನೊಂದು ಹಳಿಯ ಮೇಲೆ ನಿಂತಿದ್ದಾರೆ. ಈ ವೇಳೆ ದೆಹಲಿಯಿಂದ ಆಗಮಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಈ ವೇಳೆ ಸುಮಾರು 20 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಪರಾಂಡ ನಿಲ್ದಾಣದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಹೌದು ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಬೆಂಕಿ ಹತ್ತಿಕೊಂಡಿದೆ ಎಂದು ವದಂತಿ ಹಬ್ಬಿಸಲಾಗಿದೆ. ಈ ವೇಳೆ ಆತಂಕ್ಕಕ್ಕೊಳಗಾದ ಪ್ರಯಾಣಿಕರು ಗಡಿಬಿಡಿಯಲ್ಲಿ ಪಕ್ಕದಲ್ಲಿರುವ ಇನ್ನೊಂದು ಹಳಿಗೆ ಇಳಿದಾಗ ಇನ್ನೊಂದು ಕಡೆಯಿಂದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಬಂದಿದೆ.ಈ ವೇಳೆ ರೈಲು ಹರಿದು ಸುಮಾರು 20 ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಕುರಿತಂತೆ ಮೊದಲು ಪ್ರಯಾಣಿಕರು ಚೈನ್ ಎಳೆದು ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಅಳಿಯಲಿ ಬರುತ್ತಿದ್ದ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಮೇಲೆ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದಿದೆ ಎಂದು ಸೆಂಟ್ರಲ್…
ರಾಯಚೂರು : ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರ್ಭಿಣಿಯರ ಸಾವು ಹಾಗೂ ಶಿಶುಗಳ ಸಾವು ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ತಾಯಿ ಹಾಗೂ ಮಗುವಿನ ಮರಣದ ಪ್ರಮಾಣ ಕಡಿಮೆಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ರಾಜ್ಯದಲ್ಲಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಅಭಿಯಾನದ ಮೂಲಕ ಪ್ರತಿ ತಿಂಗಳು 9 ಮತ್ತು 24 ರಂದು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಯಲಿದ್ದು, ರಾಜ್ಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಭಿಯಾನ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ತಾಯಿ ಮುಗುವಿನ ಮರಣ ಪ್ರಮಾಣ ಲಕ್ಷಕ್ಕೆ 64 ಇದೆ. ಇದನ್ನ ಶೂನ್ಯಕ್ಕೆ ತರಬೇಕು. ಆದರೆ ಕೆಲವು ವೈದ್ಯಕೀಯ ಕಾರಣಗಳಿಂದ…
ರಾಯಚೂರು : ರಾಜ್ಯದಲ್ಲಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಅಭಿಯಾನದ ಮೂಲಕ ಪ್ರತಿ ತಿಂಗಳು 9 ಮತ್ತು 24 ರಂದು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಯಲಿದ್ದು, ರಾಜ್ಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಭಿಯಾನ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ತಾಯಿ ಮುಗುವಿನ ಮರಣ ಪ್ರಮಾಣ ಲಕ್ಷಕ್ಕೆ 64 ಇದೆ. ಇದನ್ನ ಶೂನ್ಯಕ್ಕೆ ತರಬೇಕು. ಆದರೆ ಕೆಲವು ವೈದ್ಯಕೀಯ ಕಾರಣಗಳಿಂದ ಸಾವುಗಳು ಸಂಭವಿಸುತ್ತವೆ. ಸಾವಾಗದಂತೆ ತಡೆಯಲು ಸಾಧ್ಯವಿರುವ ಪ್ರಕರಣಗಳ ವಿಚಾರದಲ್ಲಿ ನಾವು ಹೆಚ್ಚು ಒತ್ತು ನೀಡಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸಬಹುದಾಗಿದೆ.ಈ ಗುರಿಯೊಂದಿಗೆ ಮಾತೃತ್ವ ಸುರಕ್ಷಾ ಅಭಿಯಾನವನ್ನ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಕೈಗೊಳ್ಳಲು ಮುಂದಾಗಿದ್ದೇವೆ.. ರಾಯಚೂರಿನಲ್ಲಿ ತಾಯಿ ಮಗುವಿನ ಮರಣ ಪ್ರಮಾಣ ಹೆಚ್ಚಿರುವುದರಿಂದ ಇಲ್ಲಿಂದಲೇ ಅಭಿಯಾನ ಆರಂಭಿಸುತ್ತಿರುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಗರ್ಭಿಣಿಯರಿಗೆ ಗುಣಮಟ್ಟದ ಆರೋಗ್ಯ…
ಬೆಂಗಳೂರು : 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಇನ್ನು ಅದೇ ರೀತಿಯಾಗಿ ಪಿ ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿ, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್ ಗೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. ಇನ್ನು ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಅಲ್ಲದೇ ತ್ರಯಂಬಕಂ ಸಿನಿಮಾಗಾಗಿ ಅನುಪಮ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ತಬಲ ನಾಣಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ಕೆಮೆಸ್ಟ್ರಿ ಆಫ್ ಕರಿಯಪ್ಪ ಚಿತ್ರಕ್ಕೆ ತಬಲ ನಾಣಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ಅದೇ ರೀತಿಯಾಗಿ ಅನುಷಾ ಕೃಷ್ಣಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ.ಬ್ರಾಹ್ಮಿ ಚಿತ್ರಕ್ಕಾಗಿ ಅನುಷಾ ಕೃಷ್ಣಾಗೆ ಈ ಪ್ರಶಸ್ತಿ ಲಭಿಸಿದೆ.
ಮಧ್ಯಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ತಮ್ಮ ಪತ್ನಿಯ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ, ಇಂದೋರ್ ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದ್ದು, ವ್ಯಕ್ತಿ ಒಬ್ಬರು ಯುವಕರೇ ಮದುವೆಯಾಗಬೇಡಿ ಎಂದು ಬರೆದಿಟ್ಟು ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ಪತ್ನಿ ಹಾಗೂ ಆಕೆಯ ಸಂಬಂಧಿಕರಿಂದ ಕಿರುಕುಳ ಅನುಭವಿಸಿದ್ದಾಗಿ ಆರೋಪಿಸಿರುವ 28 ವರ್ಷದ ವ್ಯಕ್ತಿಯೊಬ್ಬರು, ಯಾರೂ ಮದುವೆಯಾಗಬೇಡಿ ಎಂದು ಯುವಕರಿಗೆ ಕರೆ ನೀಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿತಿನ್ ಪಡಿಯಾರ್ ಬರೆದಿರುವ ಮರಣ ಪತ್ರ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪತ್ನಿಯು ದೇಶದ ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾಳೆ ಎಂದು ಅದರಲ್ಲಿ ಆರೋಪಿಸಲಾಗಿದೆ. ಯಾರ ಹೆಸರನ್ನೂ ಉಲ್ಲೇಖಿಸದೆ, ಕೇಂದ್ರ ಸರ್ಕಾರವು ಕಾನೂನುಗಳಿಗೆ ಬದಲಾವಣೆ ತರಬೇಕು ಎಂದು ಮನವಿ ಮಾಡಲಾಗಿದೆ. ಪತ್ರದಲ್ಲಿ ಏನಿದೆ? ಮೃತ ವ್ಯಕ್ತಿಯು ತಮ್ಮ ಪತ್ರದಲ್ಲಿ, ನಾನು ನಿತಿನ್ ಪಡಿಯಾರ್, ಮಹಿಳೆಯರು ಕಾನೂನುಗಳನ್ನು ದುರುಪಯೋಗ…
ಹುಬ್ಬಳ್ಳಿ : ವಿವಾಹಿತೆಯ ಜೊತೆ ಮಾತನಾಡಿದ್ದಕ್ಕೆ, ವಿವಾಹಿತೆಯ ಸಂಬಂಧಿಕರು ಯುವಕನನ್ನು ಅಪಹರಿಸಿ ಬೆತ್ತಲೆ ಗೊಳಿಸಿ ಬ್ಲೇಡ್ ನಿಂದ ಸಿಕ್ಕಸಿಕ್ಕ ಕಡೆ ಕುಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಲ್ಲೆಗೆ ಒಳಗಾದ ಯುವಕ ಮುಜಾಫಿರ್ ನನ್ನು ನಿನ್ನೆ 10 ರಿಂದ 15 ಜನರ ಗುಂಪು ಹಲ್ಲೆ ಮಾಡಿದ್ದು ಬೆತ್ತಲೆ ಮಾಡಿ ಬ್ಲೇಡ್ ನಿಂದ ಆರೋಪಿಗಳು ಇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.













