Author: kannadanewsnow05

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಇಂದು ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠವು ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ, ಇಷ್ಟು ವಿಳಂಬವೇಕೆ ಎಂದು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜುಲೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಇನ್ನು ವಿಚಾರಣೆ ನಿಗದಿಪಡಿಸಿಲ್ಲ.ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಬಳಿಕ ಪೀಠ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಗೊಳಿಸಿತು.

Read More

ಬೆಂಗಳೂರು : ನಮ್ಮ ಸರ್ಕಾರ ಎಲ್ಲಾ ಸಮಾಜ ಹಾಗೂ ಎಲ್ಲಾ ಸಮುದಾಯದ ಪರ ನಿಲ್ಲುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಯೋಜನೆ ತಂದಿದೆ. ಚುನಾವಣೆಯ ವೇಳೆ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ರಾಜಕಾರಣ ಮಾಡುತ್ತಿರುವುದು ಭಾವನೆಯ ಮೇಲೆ ಅಲ್ಲ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅರ್ಚಕರ ಬೃಹತ್ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಗಣಪತಿಯನ್ನು ನೆನಪಿಸಿಕೊಂಡಿದ್ದಾರೆ. ಜೋರು ಮಳೆ ಬರುತ್ತಿದ್ದರು ಕೂಡ ಚಳ್ಳಕೆರೆಯಿಂದ ಓಡೋಡಿ ಬಂದೆ.ಈ ದೇಶಕ್ಕೆ ಆಸ್ತಿ ಅಂದರೆ ನಮ್ಮ ಸಂಸ್ಕೃತಿ. ದೇವರಿಗೆ ಪೂಜೆ ಸಲ್ಲಿಸುವ ಭಾಗ್ಯ ಅರ್ಚಕರಿಗೆ ಕೊಟ್ಟಿದ್ದಾನೆ ಎಂದು ಅರ್ಚಕರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನಾವು ಕಲ್ಲಿನಲ್ಲೇ ದೇವರನ್ನು ಕಾಣುತ್ತೇವೆ. ಪೂಜಿಸಲು ಜಾತಿ ಬೇಕಾಗಿಲ್ಲ. ಧರ್ಮದಲ್ಲಿ ಯಾರನ್ನು ಟೀಕಿಸಬಾರದು ಎಂದು ಹೇಳುತ್ತಾರೆ. ಮುಜರಾಯಿ ಇಲಾಖೆಯ ಸಚಿವರು ಅನೇಕ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಸಂಬಂಧಿಕರ ಮದುವೆಗೆಂದು ತೆರಳುತ್ತಿದ್ದ ದಂಪತಿಗಳ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದು ಅದೃಷ್ಟವಶಾತ್ ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ಬಳಿ ನಡೆದಿದೆ. ಟಿವಿಎಸ್ ಪ್ಯಾಲೇಸ್ ನಲ್ಲಿ ಸಂಬಂಧಿಕರ ಸಮಾರಂಭಕ್ಕೆ ದಂಪತಿಗಳು ನಾಗವಾರದಿಂದ ಬೈಕ್ ನಲ್ಲಿ ಮುನಿರಾಜು ಹಾಗೂ ಪತ್ನಿ ಮಲ್ಲಿಕಾ ದಂಪತಿಗಳು ಆಗಮಿಸಿದ್ದರು. ಈ ವೇಳೆ ಬೈಕ್ ಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಿಂದ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಮಲ್ಲಿಕಾ (56) ಸಾವನ್ನಪ್ಪಿದ್ದಾರೆ.ವೈದೇಹಿ ಆಸ್ಪತ್ರೆಗೆ ಮಲ್ಲಿಕಾ ಶವವನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಘಟನೆ ಕುರಿತಂತೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನನಗಿಂತ ಮೊದಲೇ ಸುಪ್ರೀಂ ಕೋರ್ಟ್ ಗೆ ಹೋಗಬೇಕಿತ್ತು, ತಡ ಮಾಡಿದ್ದಾರೆ. ಮುಖ್ಯವಾಗಿ ನನಗೆ ಸುಪ್ರೀಂ ಕೋರ್ಟ್ ನಲ್ಲಿ ಟಾಪ್ ವಕೀಲರು ಸಿಗದಂತೆ ಮಾಡಿದ್ದು, ಟಾಪ್ 17 ವಕೀಲರನ್ನು ಡಿಕೆ ಶಿವಕುಮಾರ್ ಎಂಗೇಜ್ ಮಾಡಿ ಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಬಿಐ ತಡ ಮಾಡಿದರೂ ನಾನು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ಹೋರಾಡುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಗೆದ್ದೇ ಗೆಲ್ಲುತ್ತೇನೆ ಎಂದು ಅವರು ತಿಳಿಸಿದರು.ಇನ್ನು ನೊಣವಿನಕೆರೆಯ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೇನೆ ಎಂಬ ಹೇಳಿಕೆಗೆ ಸ್ವಾಮಿಗಳು ದಕ್ಷಿಣೆ ಹೆಚ್ಚು ಕೊಟ್ಟವರ ಪರ ಹೇಳಿಕೆ ನೀಡುತ್ತಾರೆ ಎಂದು ಟಾಂಗ್ ನೀಡಿದರು. ಈ ಹಿಂದೆ ಕೆಲವು ಸಾಹಿತಿಗಳು ಪ್ರಶಸ್ತಿ ವಾಪಸ್ಸು ಕೊಡೋದು ಶುರುವಾಗಿತ್ತು. ಅದೇ ತೆರನಾಗಿ ಸಿಎಂ ಪತ್ನಿ ಹಾಗೂ ಎಐಸಿಸಿ…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಇದುವರೆಗೂ ಕೂಡ ಮೈತ್ರಿ ಪಕ್ಷವಾಗಲಿ ಹಾಗೂ ಕಾಂಗ್ರೆಸ್ಸಾಗಲಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಅಲ್ಲದೆ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಸಲಾಯಿತು. ಸಭೆಯ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನು ಸ್ಪರ್ಧಿಸುತ್ತೇನೆ ಅಂತ ಹೇಳಿಲ್ಲ. ಸಾಧಕ ಭಾದಕ ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ.ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಎಚ್ ಡಿ ಕುಮಾರಸ್ವಾಮಿಗೆ ಹೇಳಿದ್ದಾರೆ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರಿಗೆ ಹೇಳಿದ್ದಾರೆ. ಮೈತ್ರಿಗೆ ಭಂಗವಾಗಬಾರದು ಅಂತ ನಾವು ಸುಮ್ಮನಿದ್ದೇವೆ ಎಂದರು. ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಲು ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಒಬ್ಬ ವ್ಯಕ್ತಿಯ ನಡವಳಿಕೆ…

Read More

ಬೆಂಗಳೂರು : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಬೆಳೆಯುತ್ತಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಇದಿಗ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಮೆ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿತ್ತು. ಕೃಷ್ಣಶೆಟ್ಟಿ ಎಂಬುವವರು ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠವು ಎಫ್ಐರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ‌ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ‌ ಬೊಮ್ಮಾಯಿ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ‌ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿದ್ದರು.…

Read More

ಬೆಂಗಳೂರು : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಹೌದು ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೆ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಜೆಡಿಎಸ್ನಿಂದ ಸ್ಪರ್ಧೆಗೆ ನೀಡಿದ ಆಹ್ವಾನವನ್ನು ಸಿಪಿ ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಹೆಚ್‍ಡಿ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಹಾಗಾಗಿ ಎಚ್ ಡಿ ದೇವೇಗೌಡ ನೇತೃತ್ವ…

Read More

ಬೆಂಗಳೂರು : ಅವಾಚ್ಯ ಪದ ಬಳಕೆ ಮಾಡಿದ್ದರೆಂದು ಬಿಗ್ ಬಾಸ್ ಶೋ ನಿಂದ ಲಾಯರ್ ಜಗದೀಶ್ ಅವರನ್ನು ಹೊರಹಾಕಲ್ಪಟ್ಟಿದ್ದಾರೆದೆ. ಹೊರಗಡೆ ಬಂದ ಬಳಿ ಜಗದೀಶ್ ಅವರು ಬಿಗ್ ಬಾಸ್ ಮನೆಯ ಕೆಲವು ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನೊಂದು ಕಡೆ ಬಿಗ್ ಬಾಸ್ ಮನೆಯಲ್ಲಿ ಚೈತ್ರ ಕುಂದಾಪುರ, ಮಾನಸ ಸೇರಿದಂತೆ ಹಲವರಿಗೆ ನಟ ಕಿಚ್ಚ ಸುದೀಪ್ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದರ ಕುರಿತು ಹಾಗೂ ಅವರಿಗೂ ಕೂಡ ಮನೆಯ ಇತರೆ ಮಹಿಳಾ ಸದಸ್ಯರು ಬೈದಿದ್ದರ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಭವ್ಯ ಬಂದು ಪುಷ್ ಮಾಡ್ತಾಳೆ. ಏನ್ ಬೇಕಾದ್ರು ಮಾಡ್ತೀನಿ ಅಂತಾಳೆ. ಆಕೆ ಇನ್ನೂ ಕೂಡ ಟೈಗರ್ ಅನ್ನ ನೋಡಿಲ್ಲ. ಸಿಎಂ ಅವರೇ ಗಂಡಸರಿಗೆ ಒಂದು ಕಮಿಷನ್ ಅನ್ನು ಕ್ರಿಯೇಟ್ ಮಾಡಿ. ಹೆಣ್ಮಕ್ಕಳು ಅಟ್ಯಾಕ್ ಮಾಡಿದರೆ ಕೇಳೋರೇ ಇಲ್ಲ. ಹೆಣ್ಮಕ್ಕಲು ಅಬಲೆ ಅಂತಾರೆ.. ಸಂಘ ಸಂಸ್ಥೆ ಕಟ್ಟಿಕೊಳ್ತಾರೆ. ನಾವೇನು…

Read More

ಹುಬ್ಬಳ್ಳಿ : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ರಾಜಿನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಘೋಷಿಸಿದ್ದಾರೆ. ಹೌದು ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ಇಂದು ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ್ದು ಪಕ್ಷೇತರರಾಗಿ ಸ್ಪರ್ಧಿಸಲ ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗಿರುತ್ತದೆ. ಹಾಗಾಗಿ ಪರಿಷತ್ ನಾಮನಿರ್ದೇಶಿತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ಕೊಟ್ಟಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ…

Read More

ಬೆಂಗಳೂರು : ವಾಲ್ಮೀಕಿ, ಮುಡಾ ಹಗರಣದಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ತೀವ್ರ ಮುಜುಗರ ಉಂಟಾಗಿದೆ. ಇದರ ಬೆನ್ನಲ್ಲೇ ಪತ್ನಿಯ ಹೆಸರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಚಿವ ಎನ್ಎಸ್ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ. ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕುರಿತಂತೆ ರಾಯಚೂರು ಉಪವಲಯ ಅರಣ್ಯಾಧಿಕಾರಿ ತನಿಖೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಈ ಭಾಗದಲ್ಲಿ ಪ್ರತಿ ಚದರ ಅಡಿಗೆ ಕನಿಷ್ಟ 4 ಸಾವಿರ ರೂ. ದರ ಇದೆ. ಒಟ್ಟು ಭೂಮಿಗೆ ನೂರಾರು ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವಿದೆ. ಎನ್ಎಸ್ ಬೋಸರಾಜು ಪತ್ನಿ ಕೃಷ್ಣವೇಣಿ ಅವರು 17 ಗುಂಟೆ ಜಮೀನನ್ನು ಕಬಳಿಸಿದ್ದಾರೆ ಎಂದು ದೂರಿದ್ದಾರೆ. ಭೂಮಿ ಒತ್ತುವರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸೃಜನಪಕ್ಷಪಾತ ಎಸಗಲಾಗಿದೆ. ಗುಂಪು ರಚನೆ ಮಾಡಿಕೊಂಡು ರಕ್ಷಿತಾರಣ್ಯವನ್ನು…

Read More