Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಿಸಿದ ಬೆನ್ನಲ್ಲೇ ಸಾರ್ವಜನಿಕ ಕಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಇದರ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ BMRCL ಅಧಿಕಾರಿಗಳಿಗೆ ಮೆಟ್ರೋ ಪ್ರಯಾಣದ ಟಿಕೆಟ್ ದರ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ ತಂದ ರೀತಿ ಅಸಂಗತತೆಗೆ ಕಾರಣವಾಗಿದೆ, ಕೆಲವು ವಿಭಾಗಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಹಾಗಾಗಿ ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಮತ್ತು ಟಿಕೆಟ್ ದರಗಳನ್ನು ಕಡಿಮೆ ಮಾಡಲು ನಾನು ಬಿಎಂಆರ್ಸಿಎಲ್ ಎಂಡಿಗೆ ಕೇಳಿದ್ದೇನೆ. ಪ್ರಯಾಣಿಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ. ಟಿಕೆಟ್ ದರ ಹೆಚ್ಚಳವಾದ ಬೆನ್ನಲ್ಲೇ ನಮ್ಮ ಮೆಟ್ರೋ ರೈಲಿನಲ್ಲಿ 35 ರಿಂದ 40 ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಕೆ ಕಂಡಿದೆ. https://twitter.com/siddaramaiah/status/1889878768237551906?t=0guPSIUPwRxOFH5PJbk1SA&s=19
ಶಿವಮೊಗ್ಗ : ನಗರದ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಪ್ರಥಮ ಪಿಯು ಕಾಮರ್ಸ್ ವಿದ್ಯಾರ್ಥಿ ಯಶವಂತ್ (17) ಎಂದ್ ತಿಳಿದುಬಂದಿದೆ. ಯಶವಂತ ಬಸ್ನಲ್ಲಿ ಪುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ. ಸಿಟಿ ಬಸ್ ಮೈಲಾರೇಶ್ವರ ದೇವಾಲಯದ ಬಳಿ ಬರುವಾಗ, ಚಾಲಕ ಬ್ರೇಕ್ ಹಾಕಿದ್ದಾನೆ. ಇದಕ್ಕಿದ್ದಂತೆ ಬ್ರೇಕ್ ಬಿದ್ದ ಹಿನ್ನೆಲೆಯಲ್ಲಿ ಪುಟ್ ಬೋರ್ಡ್ನ ಮೇಲಿದ್ದ ವಿದ್ಯಾರ್ಥಿ ಬಸ್ನಿಂದ ಕೆಳಕ್ಕೆ ಬಿದ್ದಿದ್ದಾನೆ. ಬಸ್ ಫುಟ್ ಬೋರ್ಡ್ ನಿಂದ ಕೆಳಗೆ ಬಿದ್ದ ಕೂಡಲೇ ಯಶವಂತ್ ಮೇಲೆ ಬಸ್ ಹರಿದಿದೆ. ತಕ್ಷಣ ಆತ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾನೆ. ಘಟನೆಯ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಜಯಪುರ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ವಿಜಯಪುರ ನಗರದ ಹೊರವಲಯದ ಅಥಣಿ ರಸ್ತೆಯಲ್ಲಿ ನಡೆದಿದೆ. ಬೆಳ್ಳಂ ಬೆಳಗ್ಗೆ ಪೊಲೀಸರು ಕೊಲೆ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ವಿಜಯಪುರ ನಗರದ ಹೊರವಲಯದ ಅಥಣಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಲಾಗಿದೆ. ಜನವರಿ 28ರಂದು ಸತೀಶ್ ರಾಥೋಡ್ ಕೊಲೆ ನಡೆದಿತ್ತು. ಅರಕೇರಿ ಎಲ್ ಟಿ 1 ರ ಬಳಿ ಸತೀಶ್ ರಾಥೋಡ್ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದರು. ಸತೀಶ್ ಕೊಲೆಗೆ ಆರೋಪಿ ಸುರೇಶ್ ಕಂಟ್ರಿ ಪಿಸ್ತೂಲ್ ಪೂರೈಸಿದ್ದ ಎನ್ನಲಾಗಿದೆ. ಸತೀಶ್ ಕೊಲೆ ಬಳಿಕ ಆರೋಪಿ ಸುರೇಶ್ ತಲೆಮರೆಸಿಕೊಂಡಿದ್ದ. ಸುರೇಶ್ ಅಡಗಿದ್ದ ಮಾಹಿತಿ ಪಡೆದು ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ…
ಬೆಂಗಳೂರು : ಪರಸ್ತ್ರೀಗಾಗಿ ಪತ್ನಿಯ ಕೊಲೆಗೆ ಯತ್ನಿಸಿದ ಬೆಂಗಳೂರಿನ ಡಿವೈಎಸ್ಪಿ ಗೋವರ್ಧನ್ ಹಾಗೂ ಅವರ ತಂದೆ ತಾಯಿಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ Dysp ಗೋವರ್ಧನ್ ಪತ್ನಿ ಅಮೃತ ದೂರು ನೀಡಿದ್ದಾರೆ. ಪ್ರೊಫೆಷನಲ್ ಡಿವೈಎಸ್ಪಿ ಗೋವರ್ಧನ್ ವಿರುದ್ಧ ಇದೀಗ ಪತ್ನಿ ಗಂಭೀರವಾದ ಆರೋಪ ಮಾಡಿದ್ದಾರೆ. ಪತಿಯ ಜೊತೆಗೆ ಸಂಪರ್ಕದಲ್ಲಿದ್ದ ಮಹಿಳಾ ಪ್ರೊಬೆಷನರಿ ಡಿವೈಎಸ್ಪಿ ವಿರುದ್ಧ ಕೂಡ ಅಮೃತ ದೂರು ನೀಡಿದ್ದಾರೆ. ಅಲ್ಲದೇ ಅತ್ತೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಾಸಿದ್ದಾಳೆ ಎಂದು ಆರೋಪಿಸಿದ್ದಾರೆ. ಪರಸ್ತ್ರೀಗೆ ಮಕ್ಕಳಿದ್ದರೂ ತನ್ನ ಪತಿಯ ಜೊತೆಗೆ ಸಲುಗೆಯಿಂದ ಇದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಪತಿ ಎಲ್ಲೇ ಕೆಲಸಕ್ಕೆ ಸೇರಿದರು ಪತಿಯ ಗೆಳತಿ ಅಲ್ಲಿಗೆ ಬರುತ್ತಿದ್ದಳು. ಪರಸ್ತ್ರೀ ಸಂಪರ್ಕದಲ್ಲಿ ಇದ್ದಿದ್ದಕ್ಕೆ ಪತ್ನಿ ಅಮೃತ ವಿರೋಧಿಸಿದ್ದಳು ಇದರಿಂದ ಕೋಪಗೊಂಡು Dysp ಗೋವರ್ಧನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹೊಟ್ಟೆಗೆ ಒಂದು ಡಿವೋರ್ಸ್ ಕೊಡೊದಾಗಿ ಪತಿಯಿಂದ ಬೆದರಿಕೆ ಆರೋಪ ಕೇಳಿ ಬಂದಿದೆ. ಪತಿ ಜೊತೆಗಿನ ಸಹವಾಸ ಬಿಡುವಂತೆ ಆತನ ಗೆಳತಿಗೂ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಗೆ ಲಕ್ಷ್ಮಿ ದೇವಿ ಬರುತ್ತಾಳೆ ಎಂದರೆ ಈ ರೀತಿಯ 5 ಸೂಚನೆಗಳು ಗೋಚರ ಆಗುತ್ತದೆ.ಲಕ್ಷ್ಮಿ ಒಲಿದರೆ ಜೀವನದಲ್ಲಿ ಖುಷಿಯಾಗಿ ಸಂತೋಷವಾಗಿ ಇರಬಹುದು. ಪ್ರತಿಯೊಂದಕ್ಕೂ ಹಣಕಾಸು ತುಂಬಾನೇ ಮುಖ್ಯ ಆಗಿರುತ್ತದೆ.ಲಕ್ಷ್ಮಿ ದೇವರಿಗೆ ಪೂಜೆಯನ್ನು ಮಾಡಬೇಕು.ಲಕ್ಷ್ಮಿ ದೇವಿ ನಿಮ್ಮ ಮನೆಗೆ ಬಂದು ಸ್ಥಿರ ನಿವಾಸ ಆಗುತ್ತಳೆ ಎನ್ನುವುದಾದರೆ ಈ 5 ಸೂಚನೆಗಳು ಮುಂಚಿತವಾಗಿ ಗೊತ್ತಾಗುತ್ತದೆ. 1, ಸುಮಂಗಲಿಯರು ಪ್ರತಿನಿತ್ಯ ಅತ್ತೆ ಮಾವರ ಸೇವೆ ಮತ್ತು ಹಿರಿಯರ ಸೇವನೆ ಮಾಡುತ್ತಾರೆ. ಅಂತವರ ಮನೆಯಲ್ಲಿ ಲಕ್ಷ್ಮಿ ದೇವಿ ಬರುವುದಕ್ಕೆ ಇಷ್ಟ ಪಡುತ್ತಾಳೆ. 2, ಪ್ರತಿನಿತ್ಯ ಅಂಗಳವನ್ನು ಗುಡಿಸಿ ಮತ್ತು ರಂಗೋಲಿ ಹಾಕಿ ಪ್ರತಿನಿತ್ಯವೂ ಕೂಡ ಈ ರೀತಿ ಮಾಡಿದರೆ ಅಂತವರ ಮನೆಗೆ ಲಕ್ಷ್ಮಿ ದೇವಿ ಪ್ರವೇಶ ಮಾಡುವುದಕ್ಕೆ ಇಷ್ಟ ಪಡುತ್ತಾಳೆ. 3, ಸ್ವಚ್ಛತೆ ಇರುವ ಜಾಗಾದಲ್ಲಿ ಲಕ್ಷ್ಮಿ ದೇವತೆ ಇರುವುದಕ್ಕೆ ಇಷ್ಟ ಪಡುತ್ತಾಳೆ 4, ಮನೆಯಲ್ಲಿ ಇರುವ…
ಮೈಸೂರು : ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿ ಪ್ರಕರಣಗಳು ಆಗಾಗ ನಡೆಯುತ್ತಿರುತ್ತವೆ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮೈಸೂರಲ್ಲಿ ಕಾಡಾನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಗದೆಹಳ್ಳ ಗ್ರಾಮದಲ್ಲಿ ಆನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.ಅವಿನಾಶ್ ಎಂದಿನಂತೆ ಜಮೀನಿಗೆ ತೆರಳಿದ ವೇಳೆ ದಾಳಿ ಮಾಡಿದೆ.ಆನೆ ದಾಳಿಯಿಂದ ಅವಿನಾಶ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ : ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಈ ಒಂದು ಘಟನೆಯಲ್ಲಿ ಮಕ್ಕಳಿಗೆ ಕೈ, ಕಾಲು ಮುರಿತವಾಗಿದ್ದು, ಇನ್ನು 5 ಜನರ ಸ್ಥಿತಿ ಚಿಂತಾಜನಕವಾಗಿದೆ.ಅಲಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಮತ್ತು ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತಕ್ಷಣ ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತದ ಕುರಿತಂತೆ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಬಳಿ ಇರುವ ತುಂಗಾ ನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಜಕ್ಕಣ್ಣನವರ್ ನನ್ನು ಅಮಾನತು ಮಾಡಲಾಗಿದೆ. ಹೌದು ತುಂಗಾನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಿಎಸ್ಐ ಠಾಣೆ ಜಕ್ಕಣ್ಣನವರ್ ನನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮರಳು ದಂಧೆ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಸೇರಿದಂತೆ ಒಟ್ಟು ನಾಲ್ಕು ಕಾರಣಗಳನ್ನು ನೀಡಿ ಪಿಎಸ್ಐ ಜಕ್ಕಣ್ಣನವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಐಶ್ವರ್ಯ ಗೌಡ ಕೇಸ್ ಸಂಬಂಧಿಸಿದಂತೆ ಈಗ ಸ್ಫೋಟಕ ತಿರುವು ಸಿಕ್ಕಿದ್ದು ಪೊಲೀಸರೇ ಸಿಡಿಆರ್ ನೀಡಲು ಸಹಕರಿಸಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಈಗಾಗಲೇ ಎಸಿಪಿ ಚಂದನ್ ಕುಮಾರ್ ನೋಟಿಸ್ ನೀಡಿದ್ದು, ಆಕೆಯ ಕಾಲ್ ಡಿಟೇಲ್ ಆಧರಿಸಿ ಮತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ. ಇಂದು ವಿಚಾರಣೆಗೆ ಐಶ್ವರ್ಯ ಗೌಡ ಹಾಜರಾಗುವ ಸಾಧ್ಯತೆ ಇದೆ. ಎಸಿಪಿ ಚಂದನ್ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಐಶ್ವರ್ಯಗೌಡ ಹಾಜರಾಗುವ ಸಾಧ್ಯತೆ ಇದೆ. ಅಕ್ರಮವಾಗಿ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದಿದ್ದ ಆರೋಪ ಹಿನ್ನೆಲೆಯಲ್ಲಿ 2022 ಮಾರ್ಚ್ ನಿಂದ 2024ರ ನವೆಂಬರ್ ವರೆಗೆ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದ ಆರೋಪ ಕೇಳಿ ಬಂದಿದೆ. ಈ ಕುರಿತು ಎಸಿಪಿ ಭರತ್ ರೆಡ್ಡಿ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ನಡೆಸುತ್ತಿದ್ದಾರೆ ಐಶ್ವರ್ಯ ವಿಚಾರಣೆ ಬೆನ್ನಲ್ಲೇ ಸದ್ಯ ಕೆಲ…
ಮೈಸೂರು : ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ಬಳಿಕ ಇಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದ ಮರುದಿನವೇ ಆರ್ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಮೂರು ದಿನಗಳ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಇಂದು ಡಾ.ಜಿ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 15 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅದರಲ್ಲಿ ಓರ್ವ ಬಾಲಕ ಕೂಡ ಇದ್ದಾನೆ. ಈಗಾಗಲೇ ಎಲ್ಲಾ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಓರ್ವ ಬಾಲಾಪರಾಧಿಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.













