Author: kannadanewsnow05

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹತ್ಯೆಯಾದ ಬಳಿಕ ಸ್ಥಳದಲ್ಲಿದ್ದ ನಿಗೂಢ ವ್ಯಕ್ತಿ ಇದೀಗ ಪತ್ತೆಯಾಗಿದ್ದಾನೆ. ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದ ಕಾಣದ ವ್ಯಕ್ತಿ ಇದೀಗ ಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.ಪತ್ತೆಯಾದ ವ್ಯಕ್ತಿಯನ್ನು MLA ರವಿ ಸುಬ್ರಮಣ್ಯ ಕಾರು ಚಾಲಕ ಕಾರ್ತಿಕ್ ಪುರೋಹಿತ ಎಂದು ತಿಳಿದುಬಂದಿದೆ. ಪ್ರದೋಷ ಸೂಚನೆ ಮೇರೆಗೆ ಕಾರ್ತಿಕ್ ಪುರೋಹಿತ್ ಸ್ಪಾಟ್ ಗೆ ಬಂದಿದ್ದ ಕೊಲೆ ಸ್ಥಳದಿಂದ ಪ್ರದರ್ಶನನ್ನು ಕಾರ್ತಿಕ್ ಪುರೋಹಿತ್ ಕಾರಲ್ಲಿ ಕರೆದು ಸದ್ಯ ಅಪ್ಪು ಕಾರ್ತಿಕ್ರಿಯ ಪೊಲೀಸರು ನೋಟಿಸಿದ್ದಾರೆ ನೋಟಿಸ್ ನೀಡಿದ ನಂತರ ಕಾರ್ತಿಕ್ ಪರಾರಿಯಾಗಿದ್ದಾನೆ ಎಂಎಲ್ಎ ಬಳಿ ಕಾರ್ತಿಕ್ ಪರೋಹಿತ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಎಂಎಲ್ಎ ರವಿ ಸುಬ್ರಮಣ್ಯ ಕಚೇರಿಯಲ್ಲಿ ಇದೀಗ ನಿಗೂಢ ವ್ಯಕ್ತಿ ಕಾರ್ತಿಕ್ ಪುರೋಹಿತ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಇದೀಗ ಪೊಲೀಸರು ಕಾರ್ತಿಕ್ ಪುರೋಹಿತಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದು, ನೋಟಿಸ್ ಬಂದ ತಕ್ಷಣ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಗೆ ಆರೋಪಿ ದೀಪಕ್ ಅಮೌಂಟ್ ಆಫರ್ ಮಾಡಿದ್ದ ನಿಂಗೆ 10…

Read More

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯ ಸಿಪಿ ಯೋಗೇಶ್ವರ್ ಅಭ್ಯರ್ಥಿ ಆಗಲಿದ್ದಾರೆ ಎಂದು ಇದೀಗ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಒಂದು ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವ‌ರ್‌ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ಪಾಳೆಯದಲ್ಲಿ ಒಲವು ವ್ಯಕ್ತವಾಗಿದೆ. ಹೌದು ಎಚ್.ಡಿ.ಕುಮಾರಸ್ವಾಮಿ ಸಹ ಉಪಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಎಂದು ಹೇಳಿದರೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಸಿ.ಪಿ.ಯೋಗೇಶ್ವರ್ ನಾಯಕರಲ್ಲಿ ಅವರೇ ಅಭ್ಯರ್ಥಿ ಎಂಬ ನಿಲುವು ಬಿತ್ತಿದ್ದಾರೆ. ಅವರನ್ನು ಗೆಲ್ಲಿಸುವಲ್ಲಿ ಅವಿರತವಾಗಿ ಶ್ರಮಿಸಲು ಉಭಯಪಕ್ಷಗಳಕಾರ್ಯಕರ್ತರು ಸಹ ಮುಂದಾಗಿದ್ದಾರೆ. ಆದರೂ ಬಿಜೆಪಿ-ಜೆಡಿಎಸ್‌ನ ಹೈಕಮಾಂಡ್ ತೀರ್ಮಾನವೇ ಅಂತಿಮವಾ ಗಿರುವುದರಿಂದ ಯಾರಿಗೆ ಟಿಕೆಟ್ ಲಭಿಸಲಿದೆ ಎಂಬುದು ತೀವ್ರ ಕೂತುಹಲ ಮೂಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸುವಲ್ಲಿ ಮತ್ತು ಗೆಲ್ಲಿಸುವಲ್ಲಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಗೆಲುವಿಗೆ ಯೋಗೇಶ್ವರ್ ಶ್ರಮ ಸಾಕಷ್ಟು ಇದೆ. ಈ ಋಣ ತೀರಿಸಲು ಯೋಗೇಶ್ವರ್ ಅವರನ್ನು…

Read More

ಬೆಂಗಳೂರು : ಬೆಂಗಳೂರಿನ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬಿಬಿಎಂಪಿ 500 ರೂಪಾಯಿ ದಂಡ ವಿಧಿಸಿ ಕ್ರಮಕ್ಕೆ ಮುಂದಾಗಿದೆ,  ಈ ಕುರಿತಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಷ್ಟು ದಿನ 50 ರೂಪಾಯಿ ಇದ್ದ ದಂಡದ ಮೊತ್ತ 500ಕ್ಕೆ ಹೆಚ್ಚಿಸಲು ಇದೀಗ ಆಯುಕ್ತರು ಸೂಚನೆ ನೀಡಿದ್ದಾರೆ. ನಗರದ 7 ಜೋನ್ ಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ಬೆಂಗಳೂರ ನಗರದಲ್ಲಿ 153 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ.ಹಾಗಾಗಿ ಬೆಂಗಳೂರಿನಲ್ಲಿ  ಸದ್ಯ 547ಕ್ಕೆ ಪ್ರಕರಣಗಳು ಏರಿಕೆ ಕಂಡಿವೆ. ಹಾಗಾಗಿ ಎಲ್ಲೆಂದರಲ್ಲಿ ಕಸ ಬಿಸಾಡಿದರೆ 500 ರೂಪಾಯಿ ದಂಡ ವಿಧಿಸುವಂತೆ ಆಯುಕ್ತ ತುಷಾರ ಗಿರಿನಾಥ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Read More

ಮಂಡ್ಯ : ಇಂದಿನ ಜನತಾ ದರ್ಶನ ಸಭೆಗೆ ಬರದಂತೆ ಅಧಿಕಾರಿ ವರ್ಗಕ್ಕೆ ರಾಜ್ಯಸರ್ಕಾರ ಸುತ್ತೋಲೆ ಹೋರಡಿಸಿರುವದಕ್ಕೆ ಕೇಂದ್ರ ಸಚಿವ HD ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ನನ್ನ ಜನತಾ ದರ್ಶನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗುಡಗಿದ್ದು ಕಾರ್ಯಕ್ರಮಕ್ಕೆ ಬರುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೆ. ಕಾರ್ಯಕ್ರಮಕ್ಕೆ ತೆರಳದಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕಾರ್ಯಕ್ರಮಕ್ಕೆ ತೇರಳದಂತೆ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ದೋಷಿಸುವುದಿಲ್ಲ. ಆದರೆ ರಾಜ್ಯ ಸರ್ಕಾರ ತನ್ನ ಸಣ್ಣತನ ತೋರುತ್ತಿದೆ ಇದು ನನ್ನ ಮನೆಯ ಕಾರ್ಯಕ್ರಮವಲ್ಲ ಇದು ಜನರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮ.ಅಧಿಕಾರಿಗಳು ಇಲ್ಲದಿದ್ದರೂ ಜನತಾದರ್ಶನ ಮಾಡುತ್ತೇವೆ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ನನ್ನ ಜನತಾ ದರ್ಶನ ಯಾರಿದಂಲೂ ತಪ್ಪಿಸಲು ಸಾಧ್ಯವಿಲ್ಲ.ರಾಜ್ಯ ಸರ್ಕಾರ ಜನರ ಸಮಸ್ಯೆ ಬಗೆ ಹರಿಸುವ ಕೆಲಸಕ್ಕೆ ಕಡಿವಾಣ ಹಾಕಿ…

Read More

ಉಡುಪಿ : ಕಳೆದ ವರ್ಷ ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಅಂತದ್ದೆ ಘಟನೆ ಉಡುಪಿಯಲ್ಲಿ ನಡೆದಿದ್ದು ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಯಿಂದ ದೈಹಿಕ ಶಿಕ್ಷಕನ ಭಾಷಾ ಶಾಲೆಯ ಸ್ವಚ್ಛಗೊಳಿಸಿರುವ ಅಮಾನವ ಘಟನೆ ಬೆಳಕಿಗೆ ಬಂದಿದೆ. ಹೌದು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ದೈಹಿಕ ಶಿಕ್ಷಣಕ್ಕನೊಬ್ಬ ವಿದ್ಯಾರ್ಥಿಯಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಉಡುಪಿ ಜಿಲ್ಲೆಯ ನಿಟ್ಟೂರು ತಾಲೂಕಿನ ಅನುದಾನಿತ ಶಾಲೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾನೆ.ಉಡುಪಿಯ ಶಾಲೆ ಒಂದರಲ್ಲಿ ಈ ಒಂದು ಘಟನೆ ನಡೆದಿದೆ. ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ. ಅಲ್ಲದೆ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಸತಿ ಶಾಲೆ ಮಕ್ಕಳನ್ನು ಮಲದ ಗುಂಡಿಗೆ…

Read More

ಬೆಂಗಳೂರು : ಖಾಸಗಿ ಸಾರಿಗೆ ಸಂಘಟನೆಗಳು ನಿನ್ನೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಶಾಂತಿ ನಗರದಲ್ಲಿರುವ RTO ಕಚೇರಿಗೆ ಮುತ್ತಿಗೆ ಹಾಕಿದ್ದವು. ಇದರ ಬೆನ್ನಲ್ಲೆ ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ಓಡಿಸುವಂತಿಲ್ಲ. ಖಾಸಗಿ ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ. ಹೌದು ಖಾಸಗಿ ಸಾರಿಗೆ ಸಂಘಟನೆಗಳ ಮನವಿಗೆ ಇದೀಗ ಸಾರಿಗೆ ಇಲಾಖೆ ಸ್ಪಂದಿಸಿದ್ದು, ಇಂದು ಸಾರಿಗೆ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ನಿಂತಿದ್ದು, 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಅನಧಿಕೃತ ಎಲೆಕ್ಷ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಕಾರ್ಯಾಚರಣೆ‌ ನಡೆಸಲಾಗುತ್ತಿದೆ. ಸಾರಿಗೆ ಇಲಾಖೆ ಸೂಚನೆ ಇದ್ದರೂ ಕೂಡ ಡೋಂಟ್ ಕೇರ್ ಎನ್ನದೆ ಚಾಲಕರು ಅನಧಿಕೃತವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ರಸ್ತೆಗಿಳಿಸುತ್ತಿದ್ದಾರೆ. ಆದ್ದರಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Read More

ಮಂಡ್ಯ : ಸಾಕಷ್ಟು ವಿರೋಧದ ನಡುವೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ವಿವಾದಿತ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​​ಗೆ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ ಸ್ಫೋಟ ಕೂಡ ನಡೆಯಲಿದೆ. ಇದಕ್ಕೆ ರೈತರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯ ಕೆ.ಆರ್.ಎಸ್ ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದ ಸಂಜಯ್ ವತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ.ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ವಿರುದ್ದ ಆಕ್ರೋಶ ಹೊರಹಕಿದ್ದಾರೆ. ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಧಿಕ್ಕಾರ ಕೂಗಿ ಅಸಮಧಾನಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ವಿಜ್ಞಾನಿಗಳಿಗೆ ಗೋ ಬ್ಯಾಕ್ ಕೂಗಿ ಆಕ್ರೋಶ ಹೊರಹಕಿದ್ದಾರೆ.

Read More

ಮಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೇಂಗಿಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಹೀಗಾಗಿ ಪುಣ್ಯಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯು ಎಲ್ಲಾ ಜಿಲ್ಲೆಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಕ್ರಮ ಕೈಗೊಂಡಿದೆ. ಅಲ್ಲದೆ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ದರ ವಿಧಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘಿ ಟೆಸ್ಟಿಂಗ್ ದರ ಹೆಚ್ಚಿಸಿದರೆ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿವೆ.ಅದನ್ನು ಮೊದಲು ನಿಯಂತ್ರಿಸಬೇಕು. ಜನರು ಗಂಭೀರವಾಗಿ ಇದನ್ನು ಪರಿಗಣಿಸಿಲ್ಲ.ಡೆಂಗಿ ಪ್ರಕರಣದಲ್ಲಿ ಸೂಕ್ತ ಚಿಕಿತ್ಸೆ ಕೊಡುವ ವ್ಯವಸ್ಥೆ ಆಗಿದೆ ಎಂದು ತಿಳಿಸಿದರು. ಇನ್ನೂ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲೇ 153 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣ ಸಂಖ್ಯೆ 547 ಕ್ಕೆ ಏರಿಕೆ ಕಂಡಿದೆ. ಇನ್ನು ಹಾಸನದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಆರು ಮಕ್ಕಳು ಡೇಂಗು…

Read More

ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹಚ್ಚುತ್ತಿದ್ದು ಅದರ ಜೊತೆಗೆ ಡೇಂಗು ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಇದೀಗ ಹಾಸನದಲ್ಲಿ ಕಳೆದ ನಾಲ್ಕು ದಿನಗಳಲ್ಲೇ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೌದು ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಸೋಕಿನಿಂದ ಮರಣ ಮೃದಂಗ ಬಾರಿಸುತ್ತಿದ್ದೂ, 4 ದಿನಗಳಲ್ಲಿ ಮಾರಕ ಡೆಂಗಿಗೆ 6 ಮಕ್ಕಳು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಗೂ ಮೈಸೂರಲ್ಲಿ 1 ಮಗು ಸಾವನ್ನಪ್ಪಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕ್ಕಮಗಳೂರು ಮೂಲದ ಒಂದು ಮಗು ಸಾವನ್ನಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿರುವ ಹಾಸನ ಜಿಲ್ಲೆಯ ಮತ್ತೊಂದು ಮಗು ಇದೀಗ ಮೃತಪಟ್ಟಿದೆ.ಹಾಸನ ಜಿಲ್ಲೆಯ 3 ಹೊರ ಜಿಲ್ಲೆಯ 2 ಮಕ್ಕಳು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಡೆಂಘಿ ಸೊಂಕಿನಿಂದ ಮರಣ ಮೃದಂಗ ಬಾರಿಸುತ್ತಿದೆ. ನಿನ್ನೆ ಹಾಸನದ ಸಮೃದ್ಧಿ ಎನ್ನುವ 8 ವರ್ಷದ ಮಗು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿತ್ತು ಇಂದು ಚಿಕಿತ್ಸೆ ಫಲಿಸದೇ ಸಾವನಪ್ಪಿದೆ. ಹಾಸನದಲ್ಲಿ ನಿರಂತರವಾಗಿ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಿಂತ ನೀರಿನ…

Read More

ಬೆಂಗಳೂರು : ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಹಿಳಾ ಟೆಕ್ಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪೂಜಾ (22) ಎಂದು ಹೇಳಲಾಗುತ್ತಿದ್ದು, ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವನನ್ನು ಮದುವೆಯಾಗಿದ್ದರು. ವರದಕ್ಷಣೆಗೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಪೂಜಾ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನವರು ಎಂದು ಹೇಳಲಾಗುತ್ತಿದೆ ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವರನ್ನು ಮದುವೆಯಾಗಿದ್ದರು. ಆದರೆ ಮನೆಯಲ್ಲಿ ಪತಿಯ ಹಾಗೂ ಮೈದುನ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹೀಗಾಗಿ ಪತಿ ಹಾಗೂ ಮೈದುನನ ವಿರುದ್ಧ ಮೃತ ಪೂಜಾಳ ಕುಟುಂಬಸ್ಥರು ಗಂಗಮ್ಮನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿ ಕೊಂಡು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

Read More