Subscribe to Updates
Get the latest creative news from FooBar about art, design and business.
Author: kannadanewsnow05
ಹೆಚ್ಚುತ್ತಿದೆ ‘ಆನ್ ಲೈನ್ ಟ್ರೇಡಿಂಗ್’ ವಂಚನೆ : ಸ್ನೇಹಿತೆಯ ಮಾತನ್ನು ನಂಬಿ 1 ಕೋಟಿಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ!
ಮಂಗಳೂರು : ಇತ್ತೀಚಿಗೆ ಈ ಆನ್ಲೈನ್ ಟ್ರೇಡಿಂಗ್ ಆಪ್ ಗಳ ಹಾವಳಿ ಹೆಚ್ಚಾಗಿದ್ದು, ಅನೇಕರು ಇಂತಹ ಆನ್ಲೈನ್ ಆಪ್ ಗಳನ್ನು ನಂಬಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದೀಗ ಮಂಗಳೂರಿನಲ್ಲಿ ಡೇಟಿಂಗ್ ಆಪ್ ಮೂಲಕ ಪರಿಚಯವಾದ ಮಹಿಳೆಯ ಮಾತನ್ನು ಕೇಳಿ ಆನ್ಲೈನ್ ಟ್ರೇಡಿಂಗ್ ನಲ್ಲಿ ಸುಮಾರು 1 ಕೋಟಿಗೂ ಅಧಿಕ ಹೆಚ್ಚು ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಹೌದು ವ್ಯಕ್ತಿಯೊಬ್ಬರು ಡೇಟಿಂಗ್ ಆಪ್ ಮೂಲಕ ಲೀನಾ ಜೋಸ್ ಎಂಬ ಹೆಸರಿನ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ಬಳಿಕ ಆಕೆಯ ಬಳಿ ಆನ್ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಹಂತಹಂತವಾಗಿ ಅವರು ಹೇಳಿರುವ ಆನ್ಲೈನ್ ಟ್ರೇಡಿಂಗ್ ಆ್ಯಪ್ ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಯುವತಿಯ ಮಾತಿನಂತೆ admiral market forex trading ನಲ್ಲಿ ವ್ಯಕ್ತಿ ಮೊದಲಿಗೆ 50 ಸಾವಿರ ಹಣ ಹೂಡಿಕೆ ಮಾಡಿದ್ದಾರೆ. ಬಳಿಕ 80 ಸಾವಿರ ಲಾಭ ಬಂಧಿರುವುದನ್ನು ತೋರಿಸುತ್ತಿತ್ತು. ಅದಾದ ಬಳಿಕ ಹಣ ವಿತ್ ಡ್ರಾ ಮಾಡಲು ಕಸ್ಟಮರ್ ಕೇರ್ ಬಳಿ…
ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸಚಿವ ರೋಷನ್ ಬೇಗ್ ಅವರು ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿ ಆರೋಪಿಗಳ ಮೇಲಿನ ಕೇಸ್ ಗಳನ್ನು ಕೂಡ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಕೇಸ್ಗಳನ್ನು ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದ್ದಾರೆ. ಇದಾದ ಬಳಿಕ ಬೆಂಗಳೂರಿನಲ್ಲಿ ಸಮಾಜದ ಜನರು ಬಂದು ನನಗೆ ಮನವಿ ಮಾಡಿದ್ದರು. ನಾನು ಸಮಾಜದ ನಾಯಕರ ಜೊತೆಗೆ ನಾಯಕರನ್ನು ಭೇಟಿ ಮಾಡಿದೆ. ಸುಮಾರು 35 ಜನರು ಜೈಲಿನಲ್ಲಿದ್ದಾರೆ. ನಾವು ಈ ದೇಶದವರು ಇಲ್ಲೇ ಇರುತ್ತೇವೆ. ನಮ್ಮನ್ನು ಸಮುದ್ರಲ್ಲಿ ಹಾಕುತ್ತೀರಾ? ಯುಎಪಿಎ ಕೇಸ್ ದಾಖಲಿಸಿದ್ದರು ಅದನ್ನು ವಾಪಸ್ ಪಡೆಯಲು ದಾರಿಗಳಿದೆ. ದಾರಿ ಇಲ್ಲ ಅಂತಾ ಹತ್ತು ವರ್ಷ ಜೈಲಿನಲ್ಲಿ ಇರಬೇಕಾ?…
ಚಿತ್ರದುರ್ಗ : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಈ ಒಂದು ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಗಳಾಗಿವೆ. ಇದೀಗ ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಒಬ್ಬರು ಸಾವನಪ್ಪಿದ್ದಾರೆ. ಹೌದು, ಚಿತ್ರದುರ್ಗ ತಾಲೂಕಿನ ಈಚನ ನಾಗೇನಹಳ್ಳಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಮನೆಯ ಗೋಡೆ ಒಂದು ಕುಸಿದು ಬಿದ್ದು ವೃದ್ಧೆ ರಂಗಮ್ಮ (75) ಸಾವನ್ನಪ್ಪಿದ್ದರೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿ ಬಳಿ ಸೇತುವೆಯ ಮೇಲೆ ನಡೆದಿದೆ. ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ್ದಾರೆ.ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ ಎಂದು ತಿಳಿದುಬಂದಿದೆ. ಘಟಪ್ರಭಾ ನದಿಯಿಂದ ಜಯಶ್ರೀ ಶವ ಹೊರ ತೆಗೆದ ಅಗ್ನಿಶಾಮಕ ದಳ ಸಿಬ್ಬಂದಿ ಜಯಶ್ರೀ ಪತಿ ಸುರೇಶ್ ಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಅಲ್ಲದೆ ಸೇತುವೆ ತಡೆಗೋಡೆ ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಹಲವು ಬಾರಿ ಸ್ಥಳೀಯರಿಂದ ಹಾಗೂ ಪೊಲೀಸ್ ಇಲಾಖೆಯಿಂದಲೂ ಕೂಡ ಒತ್ತಾಯ ಕೇಳಿಬಂದಿತ್ತು.ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ದಂಪತಿಗಳು ಬಲಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಭಯ ಬಿದ್ದು ಕೋಮುವಾದಿ ಪಕ್ಷಕ್ಕೆ ಹೋಗಿದ್ದಾರೆ. ಇಡಿ, ಸಿಬಿಐ ಭಯದಿಂದ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದಾರೆ. ಹೊಸ ಪಕ್ಷ ಕಟ್ಟಿದಾಗ ಬಿಜೆಪಿ ವಿರುದ್ಧ ಎಷ್ಟು ಆರೋಪ ಮಾಡಿದ್ದರು ಗೊತ್ತಾ? ರೆಡ್ಡಿ ಸಂಡೂರಿನಲ್ಲಿ ಅರಮನೆ ಮಾಡಿದ್ರು ಕಾಂಗ್ರೆಸ್ ಗೆಲುವು ಫಿಕ್ಸ್ ರೆಡ್ಡಿ ಬಳ್ಳಾರಿಗೆ ಬಂದಿರುವುದು ಪಕ್ಷದ ಮೇಲೆ ಪರಿಣಾಮ ಬೀರಲ್ಲ ಎಂದು ಬಿಜೆಪಿ ವಿರುದ್ಧ ಶಾಸಕನಾಗಿದ್ರೆ ವಾಗ್ದಾಳಿ ನಡೆಸಿದರು. ಬಳ್ಳಾರಿಯಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನು ಯಾವುದೇ ಹಗರಣ ಮಾಡಿಲ್ಲ. ಇದೆಲ್ಲ ಬಿಜೆಪಿ ಕುತಂತ್ರ ಎಂದು ಬಳ್ಳಾರಿಯಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಗಂಭೀರವಾದ ಆರೋಪ ಮಾಡಿದರು. ಸರ್ಕಾರವನ್ನು ಅಸ್ಥಿರಗೊಳಿಸಲು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಸಿಬಿಐ ಇಡಿ ಬಳಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದಿಂದ ಸಂಪೂರ್ಣವಾಗಿ ಮುಕ್ತನಾಗುತ್ತೇನೆ ಎಂದರು. ಯುಪಿಎ ಸರ್ಕಾರ ಇದ್ದಾಗ ನಾಗೇಂದ್ರ ಜೈಲಿಗೆ ಹೋಗಿದ್ದಾರೆ ಎಂದು ಜನಾರ್ಧನ್ ರೆಡ್ಡಿ ಹೇಳಿಕೆ ವಿಚಾರವಾಗಿ, ಆಗ ಅವರ ಜೊತೆ ಇದ್ದಾಗ ನಾನು ಒಳ್ಳೆಯವನು ಇದ್ದೆ. ಈಗ ಪಕ್ಷ…
ಬೆಂಗಳೂರು : ತಂತ್ರಜ್ಞಾನ ಮತ್ತು ಇತರೆ ಹಲವು ವಿಷಯಗಳಲ್ಲಿ ಭಾರತ ಅದೆಷ್ಟೋ ಮುಂದುವರೆಯುತ್ತಿದೆ. ಆದರೆ ದೇಶದಲ್ಲಿ ಇನ್ನೂ ಕೂಡ ಹಲವಾರು ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಅದೆಷ್ಟೋ ಹೋಟೆಲ್ಗಳಲ್ಲಿ, ಸಭೆ ಸಮಾರಂಭಗಳಲ್ಲಿ ಆಹಾರವನ್ನು ವೇಸ್ಟ್ ಮಾಡುತ್ತೇವೆ. ಈ ಕಾರಣದಿಂದ ಇದೀಗ ಆಹಾರ ವ್ಯರ್ಥವಾಗದಂತೆ ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಇಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಹೋಟೆಲ್ಗಳು ಮತ್ತು ಮದುವೆ ಮಂಟಪಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಸರ್ಕಾರವು ಕರಡು ನಿಯಮ ರೂಪಿಸಲಿದೆ. ದೇಶದಲ್ಲಿ ವಾರ್ಷಿಕವಾಗಿ 90,000 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥವಾಗುತ್ತದೆ. ಭಾರತದಲ್ಲಿ ಸುಮಾರು ಶೇ 70 ರಷ್ಟು ಜನಸಂಖ್ಯೆಯು ಕೃಷಿಯ ಮೇಲೆ ಅವಲಂಬಿತವಾಗಿದೆ. ರಾಗಿಯ ಬಳಕೆಯನ್ನು ಹೆಚ್ಚಿಸಬೇಕು, ಇದು ಆರೋಗ್ಯ ಸುಧಾರಿಸಲು ಉತ್ತಮವಾಗಿದೆ. ಆಹಾರವನ್ನು ವ್ಯರ್ಥ ಮಾಡದಂತೆ ಮಕ್ಕಳಿಗೆ ಕಲಿಸುವುದು ಮತ್ತು ಆಹಾರವನ್ನು ಸರಿಯಾಗಿ ಬಳಸಿಕೊಳ್ಳುವುದರ ಬಗ್ಗೆ ಜಾಗೃತಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲಿನಿಂದ A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಂತಹ ದೀಪಕ್ ಇಂದು ಬಿಡುಗಡೆಯಾಗಿದ್ದರೆ.ಕಳೆದ ಸೋಮವಾರ ದೀಪಕ್ ಗೆ ಜಾಮೀನು ಮಂಜೂರು ಆಗಿತ್ತು. ನಿನ್ನೆ ಬಿಡುಗಡೆ ಆದೇಶದ ಪ್ರತಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳ ಕೈ ಸೇರಿದೆ. ಹೀಗಾಗಿ ಇಂದು A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾನೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಕೋರಿ ಹೈಕೋರ್ಟಿಗೆ ಅವರ ಪರ ವಕೀಲ ಸುನಿಲ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯ ವಿಚಾರಣೆ ಅಕ್ಟೋಬರ್ 22ರಂದು ನಡೆಯಲಿದೆ. ಅದೇ ರೀತಿಯಾಗಿ ಪವಿತ್ರ ಗೌಡ ಕೂಡ ನಿನ್ನೆ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು : ಹಿಂದೂ ಧರ್ಮದಲ್ಲಿ ಒಂದು ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ. ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ…
ಶಿವಮೊಗ್ಗ : ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು : ಕ್ಷುಲ್ಲಕ ಕಾರಣಕ್ಕೆ ಇಬ್ಬರು ವಕೀಲರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಘಟನೆಯ ಕುರಿತಂತೆ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೊಲೆರೋ ವಾಹನದಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.ಈ ವೇಳೆ ಕಾರಿನಲ್ಲಿ ವೇಗವಾಗಿ ಅಡ್ಡ ಬಂದು ಬೊಲೆರೋ ಚಾಲಕನಿಗೆ ವಕೀಲ ಪ್ರಶ್ನೆ ಮಾಡಿದ್ದಾರೆ. ರೋಗಿಯನ್ನು ಬೊಲೆರೋ ವಾಹನ ಚಾಲಕ ಆಸ್ಪತ್ರೆಗೆ ಸಾಗಿಸುತ್ತಿದ್ದ. ಆಸ್ಪತ್ರೆಯ ಮುಂದೆ ರೋಗಿಯನ್ನು ನೋಡಿ ಬೋಲೇರೊ ಚಾಲಕರನ್ನು ಪ್ರಶ್ನೆ ಮಾಡಿದ್ದಕ್ಕೆ ವಕೀಲ ಕ್ಷಮೆ ಕೇಳಿದ್ದಾರೆ. ವಕೀಲರು ಕ್ಷಮೆ ಕೇಳಿದರೂ ಸಹ ಯುವಕರ ಗುಂಪೊಂದು ವಕೀಲರ ಮೇಲೆ ಹಲ್ಲೆ ಮಾಡಿದ್ದಾರೆ. ವಕೀಲರಾದಂತಹ ಪೃಥ್ವಿ ಮತ್ತು ಮಂಜುನಾಥ್ ಎನ್ನುವ ಇಬ್ಬರು ವಕೀಲರ ಮೇಲೆ ನಾಲ್ವರು ಯುವಕರು ಹಲ್ಲೆ ಮಾಡಿದ್ದಾರೆ. ಸದ್ಯ ಇಬ್ಬರು ವಕೀಲರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಯನ್ನು ಖಂಡಿಸಿ ಬಸವನಹಳ್ಳಿ ಠಾಣೆಯ ಮುಂದೆ ಇದೀಗ ವಕೀಲರು ಜಮಾಾವಣೆ ಆಗಿದ್ದಾರೆ. ವಕೀಲರ ಮೇಲೆ…













