Author: kannadanewsnow05

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಉತ್ಸವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಳಿ ಇರುವ ಅವತಿ ಗ್ರಾಮದಲ್ಲಿ ಜ್ಯೋತಿ ಹೊತ್ತ ರಥಕ್ಕೆ ಸಚಿವ ಕೆಎಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಅವತಿ ಗ್ರಾಮದ ಚೆನ್ನಕೇಶವ ಸ್ವಾಮಿ ದೇಗುಲದಲ್ಲಿ ಕೆ ಎಚ್ ಮುನಿಯಪ್ಪ ಅವರು ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಿದರು. ಜ್ಯೋತಿ ಹೊತ್ತ ರಥಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಅವತಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 9 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಆಗಲಿದೆ ಎಂದು ಅವತಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡರ ವಂಶಸ್ಥರ ಜನ್ಮಸ್ಥಳವಾದ ಅವತಿ ಗ್ರಾಮದಲ್ಲಿ ಸ್ಮಾರಕ ನಿರ್ಮಾಣ ಆಗಲಿದೆ ಕೆಂಪೇಗೌಡರು ಮತ್ತು ಅವರ ಜೀವನ ಚರಿತ್ರೆ ತಿಳಿಸುವ ಸ್ಮಾರಕ ನಿರ್ಮಾಣ ಆಗಲಿದೆ. ಇನ್ನೊಂದು ವಾರದಲ್ಲಿ ಸ್ಮಾರಕ ನಿರ್ಮಾಣಕ್ಕೆ…

Read More

ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಬೀದರ್, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ದೊಡ್ಡ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದವು. ಇದೀಗ ಬೆಂಗಳೂರಿನಲ್ಲಿ ಹಾಡಹಗಲೇ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಕಳೆದ ಜೂನ್ 25ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಜೂನ್ 25ರಂದು ಬೆಂಗಳೂರಿನ ವಿದ್ಯಾರಣ್ಯಪುರಂನ ಎಂ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. USDT ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದಾಗ ಖದೀಮರು ಎರಡು ಕೋಟಿ ರೂಪಾಯಿ ದೋಚಿದ್ದಾರೆ. ಕೆಂಗೇರಿ ನಿವಾಸಿ ಶ್ರೀಹರ್ಷ ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಶ್ರೀಹರ್ಷ ಹೊಸ ಕಂಪನಿಗೆ ಜಪಾನ್ ನಿಂದ ಯಂತ್ರ ಬೇಕಾಗಿರುತ್ತದೆ. ಹೀಗಾಗಿ ಯುಎಸ್‌ಡಿಟಿಗೆ ಹಣ ಕನ್ವರ್ಟ್ ಮಾಡಿಸಲು ಶ್ರೀ ಹರ್ಷ ಮುಂದಾಗಿದ್ದಾರೆ. ಈ ವೇಳೆ ಸ್ನೇಹಿತರ ಮೂಲಕ ಬೆಂಜಮಿನ ನ್ ಎಂಬಾತ ವ್ಯಕ್ತಿ ಪರಿಚಯ ಆಗಿದ್ದಾನೆ. ಜೂನ್ 25 ಮಧ್ಯಾಹ್ನ 3 ಗಂಟೆಗೆ ಶ್ರೀಹರ್ಷನನ್ನು ಬೆಂಜಮಿನ್ ಭೇಟಿ…

Read More

ಬೆಂಗಳೂರು : ಇತ್ತೀಚಿಗೆ ಯುವಕರಲ್ಲಿ ಏನಾಗುತ್ತಿದೆ ಅಂತ ಗೊತ್ತಾಗುತ್ತಿಲ್ಲ. ಏಕೆಂದರೆ ಕಳೆದ ಒಂದು ತಿಂಗಳಲ್ಲೇ ಹಾಸನದಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ಮನೆಯಲ್ಲಿಯೇ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ ಸುಪ್ರಿಯಾ ಎಂಬ ವಿದ್ಯಾರ್ಥಿನಿ ಇದೀಗ ಸಾವನ್ನಪ್ಪಿದ್ದಾಳೆ. ಹಾಸನ ಮೂಲದ ಸುಪ್ರಿಯ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಹೊಳೆ ನರಸಿಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ಸದ್ಯ ಬ್ಯಾಟರಾಯನಪುರದಲ್ಲಿ ಕುಟುಂಬ ಸಮೇತ ವಾಸವಿದ್ದಳು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸುಪ್ರಿಯ ಪದವಿ ಓದುತ್ತಿದ್ದಳು. ನಿನ್ನೆ ಮನೆಯಲ್ಲಿ ಕುಸಿದು ಬಿದ್ದು ಬಿದ್ದಿದ್ದಾಳೆ. ತಕ್ಷಣ ಆಸ್ಪತ್ರೆಗೆ ಕರೆದೋಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದೊಯುವಷ್ಟರಲ್ಲಿ ಸುಪ್ರಿಯಾ ಕೊನೆಯುಸಿರೆಳೆದಿದ್ದಾಳೆ. ಹಾಸನ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಇದೀಗ ಸರಣಿ ಸಾವುಗಳು ಸಂಭವಿಸುತ್ತಿವೆ.

Read More

ಬೆಂಗಳೂರು : ಒಂದೆಡೆ ನವೆಂಬರ್ ನಲ್ಲಿ ಸಿಎಂ ಬದಲಾವಣೆ ಆಗುತ್ತಾರೆ ಅಂತ ಸುದ್ದಿ ಹರಿದಾಡುತ್ತಿದ್ದು, ಇನ್ನೊಂದೆಡೆ ವರ್ಷಾಂತ್ಯಕ್ಕೆ ಕಾಂಗ್ರೆಸ್​​ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.‌ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡೆಸಿಯೇ ಇಲ್ಲ.‌ ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ, ಅಲ್ಲೇ ಇದ್ದೇನೆ. ನಮ್ಮನ್ನು ಪುಶ್ ಮಾಡೋರು ಇಲ್ವಲ್ಲ. ಬಿಜೆಪಿ ರಾಜ್ಯಾದ್ಯಕ್ಷ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಾ ಅನ್ನೋ‌ ಪ್ರಶ್ನೆಗೆ, ಬಿಜೆಪಿ ಫಾರ್ಮುಲಾ ಬೇರೆ, ನಮ್ಮದು ಬೇರೆ. ಅವರ ಐಡಿಯಾಲಜಿ ಬೇರೆ, ನಮ್ಮದು ಬೇರೆ.‌ ಬಿಜೆಪಿಗೂ ನಮ್ಮ ಆಯ್ಕೆಗೂ ಸಂಬಂಧವಿಲ್ಲ ಎಂದು ತಿಳಿಸಿದರು.‌ ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಮೊದಲಿನಿಂದ ನೀರಾವರಿ ಸಮಸ್ಯೆ…

Read More

ಬೆಂಗಳೂರು : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿದ್ದು, ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಕಳೆದ 24 ಗಂಟೆಯಲ್ಲೇ ಓರ್ವ ಯುವಕ, ಯುವತಿ ಸೇರಿದಂತೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ನಿನ್ನೆ ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ ಚಾಲಕ ಸಾವು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ…

Read More

ಬೆಂಗಳೂರು : ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಇಂದು ಬೆಳಿಗ್ಗೆ ಸಹಕಾರ ಸಚಿವ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡಿದ್ದು, ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿ ಸ್ಥಾನ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನವನ್ನು ಬಿಡುತ್ತೇನೆ. ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗಬಹುದು ಆಗದೇ ಇರಬಹುದು ಎಂದು ಸಚಿವ ಕೆ. ಎನ್ ರಾಜಣ್ಣ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಕುರಿತಂತೆ ಆಗಸ್ಟ್ ತಿಂಗಳಲ್ಲಿ ಕ್ರಾಂತಿ ಆಗುತ್ತೆ ಅಂತ ಹೇಳಿಲ್ವಾ? ಯಾವ ಕ್ರಾಂತಿ ಅಂತ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಪಕ್ಷದ…

Read More

ಹಾವೇರಿ : ನೆರೆಯಿಂದ ಮಳೆ ನೆರೆಯಿಂದ ಮನೆ ಹಾನಿ ಪರಿಹಾರ ಮಂಜೂರಾತಿಗೆ ಲಂಚ ನೀಡಿರುವ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯ ಚಿನ್ನ ಅಡವಿಟ್ಟು ಲಂಚ ನೀಡಿದ್ದೆ ಎಂದು ತಹಶೀಲ್ದಾರ್ ಗೆ ದೂರು ನೀಡಿದ ದಂಪತಿಗಳು ಇದೀಗ ನಮಗೇನು ಗೊತ್ತೇ ಇಲ್ಲ ಅಂತ ಉಲ್ಟಾ ಹೊಡೆದಿದ್ದಾರೆ. ಹೌದು ನೆರೆಯಿಂದ ಮಳೆ ನೆರೆಯಿಂದ ಮನೆ ಹಾನಿ ಪರಿಹಾರ ಮಂಜೂರಾತಿಗೆ ಲಂಚ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಂಚ ಪಡೆದಿದ್ದ ಎಸ್ ಡಿ ಎ ನೌಕರ ಮದನ್ ಮೋಹನ ರಕ್ಷಣೆಗೆ ಅಧಿಕಾರಿಗಳು ನಿಂತಿದ್ದಾರೆ. ಎಸ್ಡಿಎ ಮದನ್ ಗೆ ಲಂಚ ನೀಡಿದ್ದಾಗಿ ಮಹಾಂತೇಶ್ ಎನ್ನುವವರು ದೂರು ನೀಡಿದ್ದರು. ಹಾವೇರಿ ತಾಲೂಕಿನ ಬೆಳವಿಗೆ ಗ್ರಾಮದ ಮಹಾಂತೇಶ್ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರ ಜೊತೆಗೆ ತೆರಳಿತಶೀಲ್ದಾರ್ ಅವರಿಗೆ ದೂರು ನೀಡಿದ್ದರು. ಪತ್ನಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಅಡವಿಟ್ಟು ಆ ಹಣದಲ್ಲಿ ಲಂಚ ನೀಡಿದ್ದೆ. ಗುತ್ತಲದ ಫೈನಾನ್ಸ್ ನಲ್ಲಿ ಚಿನ್ನ ಅಡವಿಟ್ಟು ಸಾಲ ತಂದು…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಟ್ರ್ಯಾಕ್ಟರ್ ಚಕ್ರದ ಅಡಿ ಸಿಲುಕಿ ಇಬ್ಬರು ನರಳಾಟ ನಡೆಸಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಬಮ್ಮೇಗಟ್ಟಿ ಕ್ರಾಸ್ ನಲ್ಲಿ ಒಂದು ಘಟನೆ ನಡೆದಿದ್ದು, ಟ್ರಾಕ್ಟರ್ ಮತ್ತು ಗೂಡ್ಸ್ ಚಾಲಕನ ನಡುವೆ ಜಗಳ ಆಗಿತ್ತು. ಅಪಘಾತದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗೂಡ್ಸ್ ಚಾಲಕ ಟ್ರ್ಯಾಕ್ಟರ್ ಏರಿ ವಾಗ್ವಾದ ನಡೆಸುತ್ತಿದ್ದ. ಗೂಡ್ಸ್ ಚಾಲಕ ಟ್ರಾಕ್ಟರ್ ಏರಿದಾಗಲೇ ಟ್ರಾಕ್ಟರ್ ಚಾಲಕ ಕೂಡಲೇ ಟ್ರಾಕ್ಟರ್ ಅನ್ನು ಮುಂದೆ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ಟ್ರಾಕ್ಟರ್ ಕೆಳಗೆ ಇಬ್ಬರು ಸಿಲುಕಿ ನಳಾಡಿದ್ದಾರೆ. ಟ್ಯಾಕ್ಟರ್ ಹಿಂಬದಿ ಚಕ್ರಕ್ಕೆ ಇಬ್ಬರು ಸಿಲುಕಿ ನರಳಾಡಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಉತ್ತರಕನ್ನಡ : ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷಕ್ಕೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಒಬ್ಬ ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅಣಲೇಸರ ಗ್ರಾಮದಲ್ಲಿ ನಡೆದಿದೆ.ಮೃತ ಕಾರ್ಮಿಕನನ್ನು ಆನಂದ್ ಸಿದ್ದಿ (25) ಎಂದು ತಿಳಿದುಬಂದಿದೆ. ಹೆಸ್ಕಾಮ ಅಧಿಕಾರಿ ಮತ್ತು ಲೈನ್ ಮ್ಯಾನ್ ಎಡವಟ್ಟಿಗೆ ಅಮಾಯಕ ಕಾರ್ಮಿಕ ಬಲಿಯಾಗಿದ್ದಾನೆ. ಮಳೆಯ ನಡುವೆ ಕಂಬ ಹತ್ತಿದ್ದಾಗ, ವಿದ್ಯುತ್ ಪ್ರವಹಸಿ ಆನಂದ್ ಸಿದ್ದಿ ಸಾವನ್ನಪ್ಪಿದ್ದಾನೆ. ಮಳೆ ನಡುವೆ ಅಧಿಕಾರಿ ನಾಗರಾಜ್ ವಿದ್ಯುತ್ ಕಂಬವನ್ನು ಹತ್ತಿಸಿದ್ದಾನೆ. ವಿದ್ಯುತ್ ಕಂಬ ಹತ್ತಿದಾಗ ಕರೆಂಟ್ ಶಾಕ್ ನಿಂದ ಈ ಒಂದು ದುರ್ಘಟನೆ ನಡೆದಿದೆ.

Read More

ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊರ್ತಿ ಕೋಲಾರ ಸೇತುವೆ ಬಳಿ ನಡೆದಿದೆ. ಮೃತರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇನ್ನೋರ್ವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More