Author: kannadanewsnow05

ಬಳ್ಳಾರಿ : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಅದ್ಯಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಇಂದು ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂದು ಜೈಲಿನ ಬಳಿ ದರ್ಶನ್ ಅಭಿಮಾನಿಗಳು ಸೇರಿದ್ದರು. ಆರೋಪಿ ದರ್ಶನ್ ಫೋಟೋ ಹಿಡಿದುಕೊಂಡು ಅಭಿಮಾನಿಗಳು ಬಳ್ಳಾರಿ ಜೈಲಿನ ಬಳಿ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಜೈಲಿನ ಬಳಿ ಸೇರಿದ್ದ ಅಭಿಮಾನಿಗಳನ್ನು ಚದುರಿಸಿದ್ದಾರೆ. ಈ ವೇಳೆ ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಹಾಗಾಗಿ ಸಂದರ್ಶಕರ ಕೊಠಡಿಗೆ ದರ್ಶನ್ ಅವರು ಆಗಮಿಸುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನು ನೋಡಿ ಕಿರುನಗೆ ಬೀರಿದ್ದಾರೆ. ಹಾಗಾಗಿ ನಟ ದರ್ಶನ್ ಅವರು ಇಂದೇ ನನಗೆ ಜಾಮೀನು ಸಿಗುವ ದೃಢ ವಿಶ್ವಾಸ ಹೊಂದಿದ್ದಾರೆ ಎನ್ನಲಾಗುತ್ತಿದೆ.

Read More

ದಾವಣಗೆರೆ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರವನ್ನು ಕೇಂದ್ರ ಹೆಚ್‍ಡಿ ಕುಮಾರಸ್ವಾಮಿ ಬಿಟ್ಟುಕೊಡಲ್ಲ ಅಂದಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಲವು ತೋರಿದ್ದಾರೆ.ಇದರ ಮಧ್ಯ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್ ತೀವ್ರ ಕುತೂಹಲ ಮೂಡಿಸಿದೆ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಏನೇ ಆಗಲಿ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ನಾನೇ ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಇನ್ನೇನು ಕೇವಲ ಒಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು. ಬಳಿಕ ಬಿಜೆಪಿಯ ಮಾಜಿ ಶಾಸಕ ಸಿಪಿ…

Read More

ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಲೋಕಾಯುಕ್ತ ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿವೆ. ಯಾವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದರಾಯ್ತೋ ಪತ್ನಿ ಪಾರ್ವತಿ ಮುಡಾಗೆ 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆನೂ ಕೊಡಲ್ಲ ಎಂದು ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡುವುದಿಲ್ಲ. ಬಿಜೆಪಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ 8 ತಿಂಗಳಿನಲ್ಲಿ 5 ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗೆ 56,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದ್ದು, ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕುರಿತಂತೆ ತೀರ್ಪು ಪ್ರಕಟಿಸಲಿದೆ. ಇನ್ನು ಕೊಲೆ ಆರೋಪಿ ನಟ ದರ್ಶನವರು ಬಳ್ಳಾರಿ ಜೈಲಲ್ಲಿ ಇದ್ದು ಅವರು ಇತ್ತೀಚಿಗೆ ತೀವ್ರವಾಗಿ ಬೆನ್ನು ನೋವು ನಿಂದ ಬೀಳುತ್ತಿದ್ದಾರೆ ಅಲ್ಲದೆ ವೈದ್ಯರು ಕೂಡ ತಪಾಸಣೆ ಮಾಡಿದ್ದು, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಆದರೆ ಇಂದು ಅವರ ಜಾಮೀನು ತೀರ್ಪು ಅವರ ಬೀಳುವ ಹಿನ್ನೆಲೆಯಲ್ಲಿ ಟೆನ್ಶನ್ ಅಲ್ಲಿ ಇದ್ದಾರೆ. ಈಗಾಗಲೇ 125 ದಿನಗಳ ಕಾಲ ಜೈಲಲ್ಲಿ ಕಳೆದಿದ್ದಾರೆ. ಇದರ ಮಧ್ಯ ಜಾಮೀನು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿ ಚಡಪಡಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಸಿಗದೇ ನಟ ದರ್ಶನ್ ಅವರು ಟೆನ್ಶನ್ ಅಲ್ಲಿ ಇದ್ದಾರೆ. ಅಲ್ಲದೆ ಊಟ ಕೊಡಲು ಬಂದ ಸಿಬ್ಬಂದಿಯ ಬಳಿಯೂ ಕೂಡ ದರ್ಶನ್ ಅವರು ಜಾಮೀನು ವಿಚಾರವಾಗಿ ಮಾಹಿತಿ ಕೇಳಿದ್ದಾರೆ…

Read More

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಅವರು ಟ್ವೀಟ್ ನಲ್ಲಿ ಬೌದ್ಧ ಧರ್ಮ ಸ್ವೀಕಾರದ ಕುರಿತಂತೆ ತಿಳಿಸಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ.ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು…

Read More

ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸ ಬಸ್ ನಿಲ್ದಾಣದ ನಿರ್ವಹಣೆ ಮತ್ತು ಸ್ವಚ್ಛತೆಯ ಕುರಿತು ಅಧಿಕಾರಿಗಳು ಫೈಲ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ ಜಮೆಯ ವಿಚಾರವಾಗಿ 2 ಕಂತಿನ ಹಣವನ್ನು ಕ್ಲಿಯರ್ ಮಾಡಿದ್ದೇವೆ. ನಾವು ಕೊಟ್ಟ ಭರವಸೆಯಂತೆ ಎರಡು ತಿಂಗಳ ಹಣವನ್ನು ಹಾಕಿದ್ದೇವೆ. 1.22 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ.ಎರಡು ತಿಂಗಳಿಗೆ 5000 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. 80000 ಫಲಾನುಭವಿಗಳಿಗೆ ತಾಂತ್ರಿಕ ದೋಷ ಅಂತ ಬರುತ್ತಿದೆ. ಜಿಎಸ್​ಟಿ ಐಟಿ ಇಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಹಣ ಹಾಕಲು ಆಗುತ್ತಿಲ್ಲ ಎಂದು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Read More

ಬೆಂಗಳೂರು : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ನನ್ನ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.ಯಾವ ಕೇಸ್ ವಾಪಸ್ ಪಡೆಯಿರಿ ಅಂತ ನಾನು ಅರ್ಜಿ ಹಾಕಿದ್ದೇನೆ ಹೇಳಿ? ಸರ್ಕಾರದ ಮುಂದೆ ನಾನು ಭಿಕ್ಷೆ ಬೇಡಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕೋಲಾರ ಚಿಕ್ಕಬಳ್ಳಾಪುರದಲ್ಲಿ ಕೇಸ್ ದಾಖಲಾಗಿರಲಿಲ್ಲ. ನಾನು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರಿಗೆ ಹೊಡೆದಿರಲಿಲ್ಲ. ಪಿಎಫ್ ಐ ಮುಖಂಡರ ಮೇಲಿನ ಕೆಎಸ್ ವಾಪಸ್ ತೆಗೆದುಕೊಂಡರು ಬಳಿಕ ರುದ್ರೇಶ್ ಪ್ರಶಾಂತ್ ಪೂಜಾರಿಯ ಹತ್ಯೆಯಾಯಿತು. ಸರ್ಕಾರ ಈ ಹಂತಕರ ಕೇಸ್ ವಾಪಸ್ ಪಡೆದು ಸುಪಾರಿ ಕೊಟ್ಟಿದೆ. ಇದರ ವಿರುದ್ಧ ನಾವು ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಸಿಟಿ ರವಿ ತಿಳಿಸಿದರು.

Read More

ಬೆಂಗಳೂರು : ಮನೆ ಬಾಡಿಗೆಗೆ ಇದ್ದಂತಹ ವ್ಯಕ್ತಿ ಒಬ್ಬ ವೃದ್ಧ ದಂಪತಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಮನೆಯನ್ನೇ ದೋಚಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ರಾಬರಿ ಮಾಡಿದ ಮೂವರು ಆರೋಪಿಗಳ ಬಂಧನವಾಗಿದೆ. ಕಳೆದ ಸೆಪ್ಟೆಂಬರ್ 21 ರಂದು ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಈ ಒಂದು ರಾಬರಿ ನಡೆದಿತ್ತು. ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಆರೋಪಿಗಳು ರಾಬರಿ ಮಾಡಿದ್ದರು. ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಏನೆಂದರೆ ಬಾಡಿಗೆದಾರೆ ರಾಬರಿ ಮಾಡಿದ್ದಾರೆ ಎಂಬುವುದು ತನಿಖೆಯ ವೇಳೆ ಬಯಲಾಗಿದೆ. ಹೌದು ಶಿವಕುಮಾರ್ ಮಣಿಕಂಠ ಮತ್ತು ಪ್ರಶಾಂತ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ವೃದ್ದ ದಂಪತಿ ಮನೆಯಲ್ಲಿ ಬಾಡಿಗೆಗೆ ಇದ್ದ ಶಿವಕುಮಾರ್ ದಂಪತಿಗಳಿಗೆ ಸಹಾಯ ಕೂಡ ಮಾಡುತ್ತಿದ್ದ. ದಂಪತಿಗಳ ಮನೆ ರಾಬರಿಗೆ ಸ್ಕೆಚ್ ಹಾಕಿದ್ದ ಎನ್ನಲಾಗುತ್ತಿದೆ. ಇದಕ್ಕಾಗಿ ಮಣಿಕಂಠ ಮತ್ತು ಪ್ರಶಾಂತ ಜೊತೆ ರಾಬರಿಗೆ ಸ್ಕೆಚ್ ಹಾಕಿದ್ದ. ಶಿವಕುಮಾರ್ ಸೆಪ್ಟೆಂಬರ್ 21ರ ಬೆಳಿಗ್ಗೆ…

Read More

ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ ಕುಳಿತು ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ, ಗಾಂಜಾ ಸೇದುತ್ತಿದ್ದಾರೆ ಎನ್ನಲಾದ ದೃಶ್ಯಗಳು ಬಹಿರಂಗವಾಗಿವೆ.ಈ ಮೂವರು ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ಇರುವ ಕೆಲ ಕೈದಿಗಳು ಐಷರಾಮಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಮೂವರು ಕೈದಿಗಳು ಸ್ಮಾರ್ಟ್‌ಫೋನ್‌ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ಕಳೆದ…

Read More