Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ತೀರ್ಪು ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ. ಹೌದು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಮನವಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ವಸತಿ ಮತ್ತು ವಕ್ಫ್ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಇದು ನಿಮ್ಮೆಲ್ಲರ ಮುಂದೆ ರಾಜಕೀಯ ತೀರ್ಪು ಎಂದು ಬಹಿರಂಗವಾಗಿ ಕರೆದಿದ್ದಾರೆ ಎಂದು ಅಬ್ರಾಹಂ ತಿಳಿಸಿದ್ದರು. ಅಬ್ರಾಹಂ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದು, ಮುಂದಿನ…

Read More

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಸ್ಟೀಲ್ ಕಂಪನಿಯ ಹಣ ಬರುತ್ತಿದೆಯಾ ಎನ್ನುವುದರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚೆಲುವರಾಯಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಾಗಿ ಸ್ಟೀಲ್ ಕಂಪನಿಯ ಜೊತೆಗೆ ಯಾವ ಸಂಬಂಧ ಬೆಳೆಸುತ್ತಿದ್ದಾರೆ ಎಂದು ಎಲ್ಲವೂ ನಮಗೂ ಗೊತ್ತಿದೆ. ಉಪಚುನಾವಣೆಗಾಗಿ ಫಂಡ್ ಹೇಗೆ ಕಲೆಕ್ಟ್ ಮಾಡುತ್ತಾರೆ ಅನ್ನೋದು ಗೊತ್ತು. ಒಬ್ಬರ ಬಗ್ಗೆ ಕುಮಾರಸ್ವಾಮಿ ಲಘುವಾಗಿ ಮಾತನಾಡುವುದನ್ನು ಬಿಡಬೇಕು. ಎಚ್ ಡಿ ಕುಮಾರಸ್ವಾಮಿ ಬಗ್ಗೆಯೂ ಎಲ್ಲವೂ ಗೊತ್ತಿದೆ.ಆ ಬಗ್ಗೆ ನಾವು ಮಾತನಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ಆಕ್ರೋಶ ಅವರ ಹಾಕಿದರು.

Read More

ಶಿವಮೊಗ್ಗ : ಮದ್ಯದ ಅಮಲಿನಲ್ಲಿ ವೈದ್ಯನೊಬ್ಬ ಕಾರನ್ನು ಚಲಾಯಿಸುತ್ತಿರುವ ವೇಳೆ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹಡೆದ ರಭಸಕ್ಕೆ ಬೈಕ್ ಮೇಲೆ ಚಲಿಸುತ್ತಿದ್ದ ತಾಯಿ ಹಾಗೂ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು ಮದ್ಯದ ಅಮಲಿನಲ್ಲಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಸವಿ ಬೇಕರಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಾಯಿ ಉಮಾ ಹಾಗೂ ಮಗ ಶ್ರೇಯಸ್ಗೆ ಗಂಭೀರವಾದ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳದಿಂದ 200 ಮೀಟರ್ ದೂರ ಹೋಗಿ ತಾಯಿ ಹಾಗೂ ಮಗ ಬಿದ್ದಿದ್ದರು. ಸ್ಕೋಡಾ ಕಾರಿನಲ್ಲಿ ಡಾ. ಅಲ್ವಿನ್ ಅಂಥೋನಿ ಬರುವಾಗ ಈ ಒಂದು ಅಪಘಾತ ನಡೆದಿದೆ. ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್ ನಿಂದ ವೈದ್ಯ ಅಲ್ವಿನ್ ಹೊರಬಂದಿದ್ದರು. ಸವಿ ಬೇಕರಿ ಎದರು ಅಪಘಾತ ವೆಸಗಿ ಡಾ.…

Read More

ದಾವಣಗೆರೆ : ಸದ್ಯ ಕರ್ನಾಟಕದಲ್ಲಿ ಒಂದು ಕಡೆ ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆ ಪ್ರಚಾರ ಬಲು ಜೋರಾಗಿದ್ದು ಮತ್ತೊಂದು ಕಡೆ ವಕ್ಫ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಂದೂ ಮಠಗಳು ಆಯ್ತು ಸರ್ಕಾರಿ ಶಾಲೆಗಳು ಆಯ್ತು, ಸರ್ಕಾರಿ ಕಚೇರಿಗಳು ಸಹ ಆಯ್ತು ಇದೀಗ ದಾವಣಗೆರೆಯಲ್ಲಿ ಗೋಮಾಳದ ಜಾಗದ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ಹೌದು ದಾವಣಗೆರೆ ಜಿಲ್ಲೆಯಲ್ಲಿ ಗೋಮಾಳ ಜಾಗದ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ವಕ್ಫ್ ಬೋರ್ಡ್ ವಿರುದ್ಧ ನೀಲನಹಳ್ಳಿ ಗ್ರಾಮಸ್ಥರು ಇದೀಗ ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ತಾಲೂಕಿನ ನೀಲನಹಳ್ಳಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. 2020 ರ ಜನವರಿ 27 ರಂದು ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ದಾವಣಗೆರೆಯ ಎಸಿ ಆದೇಶ ಹಿನ್ನೆಲೆಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ಹಾಗಾಗಿ ಈ ಕುರಿತು ಸೂಕ್ತವಾದಂತಹ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನೊಂದೆಡೆ ಈ ಒಂದು ವಕ್ಫ್ ವಿವಾದದಿಂದ ಸಚಿವ ಜಮೀರ್ ಅಹ್ಮದ್ ಮುಜುಗರಕ್ಕೆ ಒಳಗಾಗಿದ್ದು…

Read More

ಮಂಗಳೂರು : ತಳ್ಳುಗಾಡಿಯ ಮೇಲೆ ವ್ಯಾಪಾರಿ ಒಬ್ಬರು ತರಕಾರಿ ಮಾರಾಟ ಮಾಡುತ್ತಿದ್ದರು. ಈ ವೇಳೆ ನೀರು ಚುಮುಕಿಸುವ ನೆಪದಲ್ಲಿ ತರಕಾರಿ ಮೇಲೆ ಉಗುಳಿರುವ ಘಟನೆ ಮಂಗಳೂರು ಜಿಲ್ಲೆಯ ಕಾರವಾರದ ಸಂಡೆ ಮಾರ್ಕೆಟ್ ನಲ್ಲಿ ಈ ಒಂದು ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ. ಹೌದು ತರಕಾರಿ ಮೇಲೆ ಉಗುಳುತ್ತಿರುವ ದೃಶ್ಯ ಇದೀಗ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾರವಾರದ ಸಂಡೆ ಮಾರ್ಕೆಟ್ ನಲ್ಲಿ ಈ ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಅಬ್ದುಲ್ ಹಸನ್ ಸಾಬ್ ರಜಾಕ್ ವಿರುದ್ಧ ಈ ಒಂದು ಆರೋಪ ಕೇಳಿಬಂದಿದೆ. ತರಕಾರಿ ಮೇಲೆ ನೀರು ಹಾಕುತ್ತಾ ತರಕಾರಿ ವ್ಯಾಪಾರಿ ಉಗುಳಿದಿರುವ ಆರೋಪ ಕೇಳಿ ಬಂದಿದೆ. ಮೊಬೈಲ್ ನಲ್ಲಿ ಸ್ಥಳೀಯರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಹಲಾಲ್ ಮಾಡುತ್ತಿದ್ದೀಯ ಎಂದು ಆರೋಪಿಸಿದ್ದಾರೆ. ತರಕಾರಿ ವ್ಯಾಪಾರಿಯ ಈ ಒಂದು ನಡೆಯಗೆ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ, ಮುಡಾ ಹಾಗೂ ವಕ್ಫ್ ವಿವಾದದಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಇದರ ಬೆನ್ನಲ್ಲೇ ಗೃಹ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಬೆಂಗಳೂರಿನ ಎರಡು ಪೊಲೀಸ್ ಠಾಣೆಗಳಲ್ಲಿ ಕಳೆದ ಆರು ತಿಂಗಳಿನಿಂದ ಇನ್ಸ್ಪೆಕ್ಟರ್ ಗಳನ್ನೇ ನೇಮಿಸಿಲ್ಲ. ಹೌದು ಗೃಹ ಇಲಾಖೆಯಿಂದ ಮತ್ತೊಂದು ಎಡವಟ್ಟು ಆಗಿದ್ದು ಕಳೆದ 6 ತಿಂಗಳಿಂದ ಗಂಗಮ್ಮನ ಗುಡಿ ಠಾಣೆಗೆ ಇನ್ಸ್ಪೆಕ್ಟರ್ ನೇಮಕ ಮಾಡಿಲ್ಲ. 6 ತಿಂಗಳ ಹಿಂದೆ ಇನ್ಸ್ಪೆಕ್ಟರ್ ಸಿದ್ದೇಗೌಡ ನಿವೃತ್ತಿಯಾಗಿದ್ದಾರೆ. ಹಾಗಾಗಿ ಕಳೆದ 6 ತಿಂಗಳಿಂದ ಗಂಗಮ್ಮನ ಗುಡಿ ಠಾಣೆಗೆ ಇನ್ಸ್ಪೆಕ್ಟರ್ ನೇಮಿಸಿಲ್ಲ. ಅದೇ ರೀತಿಯಾಗಿ ಸೋಲದೇವನಹಳ್ಳಿ ಠಾಣೆಯಲ್ಲೂ ಕಳೆದ 3 ತಿಂಗಳಿನಿಂದ ಇನ್ಸ್ಪೆಕ್ಟರ್ ನೇಮಕವಾಗಿಲ್ಲ. 3 ತಿಂಗಳ ಹಿಂದೆಯೇ ಸೋಲದೇವನಹಳ್ಳಿಯ ಇನ್ಸ್ಪೆಕ್ಟರ್ ಹರಿಯಪ್ಪ ನಿವೃತ್ತಿಯಾಗಿದ್ದಾರೆ. ಇದುವರೆಗೂ ಎರಡು ಠಾಣೆಗಳಿಗೆ ಇನ್ಸ್ಪೆಕ್ಟರ್ ನೇಮಕ ಮಾಡಿಲ್ಲ. ಡ್ರಗ್ಸ್, ಆಸ್ತಿ ಕಲಹ ಸೇರಿ ಹಲವು ದೂರು ನೀಡಲು ಜನರು ಠಾಣೆಗಳಿಗೆ ಬರುತ್ತಿದ್ದಾರೆ.ಎರಡು ಠಾಣೆಗಳ ಕೆಳಹಂತದ ಅಧಿಕಾರಿಗಳಿಂದ ಉಡಾಫೆ ಉತ್ತರ ನೀಡುತ್ತಿರುವ ಆರೋಪ ಇದೀಗ…

Read More

ಕೊಪ್ಪಳ : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾಹ ತೀವ್ರ ಸ್ವರೂಪ ಪಡೆದುಕೊಂಡಿದೆ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿದ ನೋಟಿಸ್ ಪಡೆಯುವಂತೆ ಸೂಚನೆ ನೀಡಿದರು ಕೂಡ ಬಿಜೆಪಿ ನಾಯಕರು ಪ್ರತಿಭಟನೆ ಹೋರಾಟ ನಡೆಸಿದರು. ಇದೀಗ ಕಾಂಗ್ರೆಸ್ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಿಎಂ ಸಿದ್ದರಾಮಯ್ಯ ಮಾತ್ರ ನಮ್ಮ ನಾಯಕರು ಸೋನಿಯಾ, ರಾಹುಲ್ ಗಾಂಧಿ ಅವರನ್ನು ನಮ್ಮ ನಾಯಕರೆಂದು ಒಪ್ಪಿಕೊಂಡಿಲ್ಲ ಎಂದು ತಿಳಿಸಿದ್ದಾರೆ. ಕೊಪ್ಪಳ ನಗರದಲ್ಲಿ ನಿನ್ನೆ ಸಂಜೆ ನಡೆದ ಸ್ವತಂತ್ರ ಹೋರಾಟಗಾರರ ಜಯಂತಿ ಕಾರ್ಯಕ್ರಮದಲ್ಲಿ ಇಕ್ಬಾಲ್ ಅನ್ಸಾರಿ ಮಾತನಾಡಿ,ಸಿದ್ದರಾಮಯ್ಯ ಸಿಎಂ ಇರೋವರಗೆ ನಮ್ಮ ಮುಸ್ಲಿಂ ಸಮಾಜದವರು ಏನಾದ್ರು ಮಾಡಿಕೊಳ್ಳಬೇಕು. ಅವರ ನಂತರ ನಮಗೆ ಚೋಂಬೆ ಗತಿಯಾಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿಕೆಯನ್ನು ನೀಡಿದ್ದಾರೆ. ಸಿದ್ದರಾಮಯ ಬಳಿ ಸಮಾಜದವರು ಆರು ತಿಂಗಳಿಗೊಮ್ಮೆ ಹೋಗಬೇಕು, ನೂರು ಕೋಟಿ ರೂ. ಅನುದಾನ ತಂದು, ಸಮಾಜದ ಕೆಲಸ ಮಾಡಬೇಕು. ನಾವು ನೀವು, ನಮ್ಮ ಸಮಾಜದವರು ಏನಾದ್ರು ಮಾಡಿಕೊಳ್ಳಬೇಕು. ನಂತರ ಚಂಬೇ ಗತಿಯಾಗುತ್ತದೆ ಎಂದು ಹೇಳಿದ್ದಾರೆ.…

Read More

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಮಹಿಳೆಯರಿಗೆ ಪ್ರಮುಖವಾದಂತಹದ್ದು ಗೃಹಲಕ್ಷ್ಮಿ ಯೋಜನೆ. ಈಗಾಗಲೇ ಈ ಯೋಜನೆಯಿಂದ ರಾಜ್ಯದ ಹಲವು ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದು, ಇದೀಗ ಮಂಗಳೂರಿನಲ್ಲಿ ಪತಿಗೆ ಪತ್ನಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಸ್ಕೂಟಿ ಗಿಫ್ಟ್ ಕೊಟ್ಟಿದ್ದಾರೆ. ಹೌದು ಮಂಗಳೂರಿನ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ತ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂಗಾಗಿ ಸ್ಕೂಟರ್ ಖರೀದಿಸಿದ್ದಾರೆ. ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ತ್ರಿಯಾರ ಗೃಹಲಕ್ಷ್ಮಿ ಹಣದಿಂದ ಸ್ಕೂಟರ್ ಕೊಡಿಸಿದ್ದಾರೆ. ಇದೆ ಸಂದರ್ಭದಲ್ಲಿ ಹೊಸ ಸ್ಕೂಟಿಯೊಂದಿಗೆ ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್‌ನೊಂದಿಗೆ ಶಾಸಕರನ್ನು ಭೇಟಿಯಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಶಾಸಕರು…

Read More

ಬೆಳಗಾವಿ : ಬೆಳಗಾವಿಯ ಮರಾಠಾ ರೆಜಿಮೆಂಟ್​ನಲ್ಲಿ ಇಂದು ನಡೆದ ಆರ್ಮಿ ಸೆಲೆಕ್ಷನ್ ಓಪನ್ ರ‍್ಯಾಲಿಯಲ್ಲಿ ನೂಕುನುಗ್ಗಲು ಉಂಟಾಯಿತು. ಇವಳೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಅರ್ಜಿ ಹಾಕಿದ್ದ ಅಭ್ಯರ್ಥಿಗಳ ಆಯ್ಕೆಗೆ ಇಂದು ಆಹ್ವಾನಿಸಲಾಗಿದ್ದು, ಓಪನ್ ರ‍್ಯಾಲಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಯುವಕರು ಭಾಗಿಯಾಗಿದ್ದರು.ರಾಜ್ಯದ ವಿವಿಧ ಜಿಲ್ಲೆಗಳು, ಮಹಾರಾಷ್ಟ್ರದಿಂದಲೂ ಯುವಕರು ಆಗಮಿಸಿದ್ದು, ಬೆಳಿಗ್ಗೆಯಿಂದಲೂ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ನಡೆದು, ಕೆಲ ಯುವಕರು ಬಿದ್ದು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಅಲ್ಲಾಭಕ್ಷ ಯರಗಟ್ಟಿ ಹಾಗೂ ಗೊಕಾಕ್ ತಾಲೂಕಿನ ಬೆಟಗೇರಿ ಗ್ರಾಮದ ಪ್ರವೀಣ್ ಮಕಾಳೆ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾಗೂ ಸೈನಿಕರು ಯುವಕರಿಗೆ ಲಾಠಿ ರುಚಿ ತೋರಿಸಿದರು. ಲಾಠಿ ಬೀಸುತ್ತಿದ್ದಂತೆ ಯುವಕರು ಚೆಲ್ಲಾಪಿಲ್ಲಿಯಾಗಿ ಓಡಿದರು. ನಂತರ ಯುವಕರನ್ನು ಪೊಲೀಸರು, ಮಿಲಿಟರಿ ಸಿಬ್ಬಂದಿ ಸಾಲಾಗಿ ನಿಲ್ಲಿಸಿದರು.

Read More

ಬೆಂಗಳೂರು : ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿ ಅರೆಸ್ಟ್ ಆಗಿದ್ದಾರೆ. ಪತಿ ಜೀವನ್ ಅಲಿಯಾಸ್ ಜೀವ (30)ಪತ್ನಿ ಆಶಾ (30) ಇಬ್ಬರ ಬಂಧನವಾಗಿದೆ. ಬಂಧಿತ ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವರು ಎಂದು ತಿಳಿದುಬಂದಿದೆ. 17 ಲಕ್ಷ ಮೌಲ್ಯದ 240 ಗ್ರಾಮ್ ಚೆನ್ನಾಭರಣ 90 ಗ್ರಾಂ ಬೆಳ್ಳಿಯನ್ನು ಅವರಿಂದ ಜಪ್ತಿ ಮಾಡಿಕೊಳ್ಳಲಾಗಿದೆ. ದರೋಡೆ ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಕೇಸ್ ಇವರ ಮೇಲೆ ದಾಖಲಾಗಿದ್ದವು. ಬಂಧಿತ ದಂಪತಿಯ ವಿರುದ್ಧ ಒಟ್ಟು 15 ಪ್ರಕರಣಗಳು ದಾಖಲಾಗಿದ್ದವು. ದರೋಡೆ ಸ್ಟೋರಿ ಕೇಳಿ ಪೊಲೀಸರೆ ಶಾಕ್! 2024 ಫೆಬ್ರವರಿ 13 ರಂದು ಲಕ್ಷ್ಮಿಪುರದಲ್ಲಿ ವೃದ್ದೆ ಭಾಗ್ಯಮ್ಮ ಎನ್ನುವ ಕೊಲೆಯಾಗಿತ್ತು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮಿಪುರದಲ್ಲಿ ಈ ಒಂದು ಕೊಲೆ ಆಗಿತ್ತು. ಕೊಲೆಯ ಬಳಿಕ ಸಂಪ್ನಲ್ಲಿ ಮೃತ ದೇಹ ಹಾಕಿ ಈ ಇಬ್ಬರು ದಂಪತಿಗಳು ಪರಾರಿಯಾಗಿದ್ದರು. ಕೇಂದ್ರವಲಯ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತಾವರೆಕೆರೆ ಇನ್ಸ್ಪೆಕ್ಟರ್ ಮೋಹನ್…

Read More