Author: kannadanewsnow05

ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಅತೀವ ಜನಮನ್ನಣೆ ಪಡೆದಿರುವ ಮಂಜುನಾಥ್ ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು.ಇದೀಗ ಅವರನ್ನು ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. https://kannadanewsnow.com/kannada/if-i-get-anything-from-modi-i-will-take-leg-and-beat-him-up-gs-manjunath/ ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್​ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು. ಸಭೆಯಲ್ಲಿ ಮಾಜಿ‌ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದರು. https://kannadanewsnow.com/kannada/modi-doosri-mitti-ka-insaan-hai-pm-attacks-opposition-over-poll-promises/ ಬೆಂಗಳೂರು ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಎಂದು ಪರಿಗಣಿಸಲಾಗಿರುವ ಸಿಪಿ ಯೋಗಿಶ್ವರ್ ಕೂಡ ಮಂಜುನಾಥ್ ಸ್ಪರ್ಧೆಗೆ ಒಲವು ವ್ಯಕ್ತಪಡಿಸಿದ್ದರು.ಇನ್ನು ಕಳೆದ ವಾರ ಮಂಜುನಾಥ್ ಸ್ಪರ್ಧೆ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಯೋಗೇಶ್ವರ್, ಅವರನ್ನು ಕಣಕ್ಕಿಳಿಸುವ ಪ್ರಯತ್ನ ನಡೆದಿದೆ. ಮುಂಜುನಾಥ ಅವರ ಮನವೊಲಿಸಲು ಅವರ ಮನೆಗೆ ಹೋಗಿದ್ದೆ. ರಾಜ್ಯ ರಾಜಕಾರಣದಲ್ಲಿ…

Read More

ಚಿತ್ರದುರ್ಗ : ಇತ್ತೀಚಿಗೆ ಮಹಿಳಾ ದಿನಾಚರಣೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಡುಗೆ ಅನಿಲ ದರವನ್ನು ನೂರು ರೂಪಾಯಿಗೆ ಇಳಿಸಿದರು ಈ ಕುರಿತಾಗಿ ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಲೋಕಸಭಾ ಚುನಾವಣೆ ಹಿನ್ನೆಲೆ 100 ರೂಪಾಯಿ ಹೇಳಿಕೆ ಮಾಡಿದ್ದಾರೆ ಒಂದು ವೇಳೆ ನನಗೆ ಏನಾದರೂ ಸಿಕ್ಕರೆ ಮೋದಿಗೆ ಕಾಲಲ್ಲಿ ಇರುವುದನ್ನು ತೆಗೆದು ಹೊಡೆಯುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/modi-doosri-mitti-ka-insaan-hai-pm-attacks-opposition-over-poll-promises/ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನನಗೆ ಏನಾದರೂ ಸಿಕ್ಕರೆ ಕಾಲಲ್ಲಿ ಇರುವುದು ತೆಗೆದು ಹೊಡಿತಿದ್ದೆ ಎಂದು ಪ್ರಧಾನಿ ಮೋದಿ ಬಗ್ಗೆ ಕೈ ಮುಖಂಡ ಜಿಎಸ್ ಮಂಜುನಾಥ್ ವಿವದತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷರಾಗಿರುವ ಜಿ ಎಸ್ ಮಂಜುನಾಥ್ ಹಿರಿಯೂರಿನ ಸಮುದಾಯಪನ ಉದ್ಘಾಟನೆ ವೇಳೆ ಇವರ ಬಗ್ಗೆ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/breaking-lineman-dies-due-to-electrocution-in-kalaburagi-gescom-officials-allege-negligence/ ಹೀಗಿ ಯಾಕಲೇ ಮಾಡ್ತೀಯಾ ಎಂದು ನಾವು ಇದನ್ನು ಪ್ರಶ್ನೆ ಮಾಡಬಹುದು. ನಾನು ಒಬ್ಬ ಕಾಂಗ್ರೆಸ್ಗೆನಾಗಿ…

Read More

ಕಲಬುರ್ಗಿ : ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೆಶ್ವರ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. https://kannadanewsnow.com/kannada/russias-nuclear-attack-on-ukraine-averted-by-pm-modis-intervention-report/ ಹೌದು ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮಸ್ತಾನ್ (24) ಎನ್ನುವ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಬಳಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/cricketer-andre-russell-sings-shah-rukh-khans-song-lut-put-gaya-while-driving/ ಕೆಲದಿನಗಳಿಂದ ಮಸ್ತಾನ್ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತಂತೆ ರಟ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-%e0%b2%b0%e0%b2%b6%e0%b3%8d%e0%b2%ae%e0%b2%bf%e0%b2%95%e0%b2%be-%e0%b2%ae%e0%b2%82%e0%b2%a6%e0%b2%a3%e0%b3%8d%e0%b2%a3-big-news-after-rashmika-mandanna-deep-fake-hits-up-cm-yogi-adityan/

Read More

ಲಖನೌ : ಈ ಹಿಂದೆ ಡೀಪ್ ಫೇಕ್ ಮುಖಾಂತರ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಅಲ್ಲದೆ ಹಲವು ಸ್ಟಾರ್ಗಳ ವಿಡಿಯೋ ಕೂಡ ವೈರಲಾಗಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕೂಡ ಡಿಪ್ ಫೇಕ್ ಬಿಸಿ ತಟ್ಟಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/gamini-gives-birth-to-5-cheetah-cubs-in-kuno-taking-the-countrys-cheetah-count-to-26/ ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ. https://kannadanewsnow.com/kannada/why-do-some-medicines-have-a-red-line-union-health-ministry-shares-important-information/ ಹೌದು, ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.ಈ ವಿಡಿಯೋ ಭಾರಿ ಸಂಚಲನ ಸೃಷ್ಟಿಸುತ್ತಿದ್ದಂತೆ ಪ್ರಕರಣ ದಾಖಲಾಗಿದೆ. ಇದೀಗ ಸೈಬರ್ ಪೊಲೀಸರು ಆರೋಪಿಗಳನ್ನು…

Read More

ಭೋಪಾಲ್‌: ಕೇಂದ್ರ ಸರ್ಕಾರದ ಚೀತಾ ಪ್ರಾಜೆಕ್ಟ್ ಅಡಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆತರಲಾಗಿರುವ ಐದು ವರ್ಷದ ಚೀತಾ, ಐದು ಮರಿಗಳಿಗೆ ಜನ್ಮ ನೀಡಿರುವ ಸುದ್ದಿಯನ್ನು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಖಚಿತಪಡಿಸಿದ್ದಾರೆ. https://kannadanewsnow.com/kannada/ban-on-gobi-manchuri-cotton-candy-in-karnataka-karnataka-govt-to-take-big-decision-today/ ದಕ್ಷಿಣ ಆಫ್ರಿಕಾದ ಸ್ವಾಲು ಕಲಹರಿ ರಿಸರ್ವ್ ಫಾರೆಸ್ಟ್‌ನಿಂದ ಭಾರತಕ್ಕೆ ಕರೆತರಲಾದ ಗಮಿನಿ ಹೆಸರಿನ 5 ವರ್ಷದ ಹೆಣ್ಣು ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ. ಇದರಿಂದ ಭಾರತದಲ್ಲೇ ಜನಿಸಿದ ಚೀತಾ ಮರಿಗಳ ಸಂಖ್ಯೆ 13ಕ್ಕೇರಿದೆ. ಮರಿಗಳಿಗೆ ಜನ್ಮ ನೀಡಿದ ನಾಲ್ಕನೇ ಮತ್ತು ದಕ್ಷಿಣ ಆಫ್ರಿಕಾದಿಂದ ಕರೆತರಲಾದ ಮೊದಲನೇ ಚೀತಾ ಇದಾಗಿದೆ ಎಂದು ಯಾದವ್ ಅವರು ತಮ್ಮ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ. https://kannadanewsnow.com/kannada/bjp-rss-conspiring-to-amend-constitution-destroy-it-congress-on-anantkumar-hegdes-remarks/ ಪ್ರಾಜೆಕ್ಟ್ ಚೀತಾದಡಿಯಲ್ಲಿ 2022 ರಲ್ಲಿ 8 ಚೀತಾಗಳನ್ನು ನಮೀಬಿಯಾದಿಂದಲೂ, 2023ರಲ್ಲಿ 12 ಚೀತಾಗಳನ್ನು ದ.ಆಫ್ರಿಕಾದಿಂದಲೂ ತರಲಾಗಿತ್ತು. ಈ ನಡುವೆ ಜ್ವಾಲಾ ಎಂಬ ಚೀತಾ 4 ಮರಿಗಳಿಗೆ ಜನ್ಮ ನೀಡಿತ್ತು. ಇದರಲ್ಲಿ 3 ಮರಿಗಳು ಸಾವನ್ನಪ್ಪಿದರೆ, 6 ದೊಡ್ಡಚೀತಾಗಳೂ ಸಾವನ್ನಪ್ಪಿದ್ದವು. ನಂತರ ಜ.3,…

Read More

ಬೆಂಗಳೂರು : ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಗಳಲ್ಲಿ ಕೃತಕ ಬಣ್ಣ ಬೇರಸುವಿಕೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಬಗ್ಗೆ ವಿಶ್ಲೇಷಣೆಗೊಳಪಡಿಸಲಾಗಿದೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತಂತೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ…

Read More

ನವದೆಹಲಿ: ಸಂವಿಧಾನಕ್ಕೆ ಕಾಂಗ್ರೆಸ್ ಅನಾವಶ್ಯವಾಗಿ ಸೇರಿಸಿರುವ ಅಂಶಗಳನ್ನು ತಿದ್ದುಪಡಿ ಮಾಡಬೇಕಾದರೆ ಈ ಬಾರಿ ನಾವು ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವುದು ಅನಿವಾರ್ಯ ಎಂಬ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. https://kannadanewsnow.com/kannada/oscar-2024-john-cena-goes-nude-to-give-away-best-costume-award-watch-video/ ಇದು ಸಂವಿಧಾನವನ್ನು ಹೊಸದಾಗಿ ಬರೆ ಯುವ ಮತ್ತು ಅದನ್ನು ನಾಶಪಡಿಸುವ ಬಿಜೆಪಿ ರಹಸ್ಯ ಮತ್ತು ವಂಚಕ ಕಾರ್ಯಸೂಚಿಯನ್ನು ತೋರಿಸುತ್ತದೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿ, ‘ಬಿಜೆಪಿ ಸಂಸದರ ಹೇಳಿಕೆ ಸರ್ವಾಧಿಕಾರ ಹೇರುವ ದೇಶದಲ್ಲಿ ಮೋದಿ-ಆರ್‌ಎಸ್‌ಎಸ್‌ನರಹಸ್ಯಕಾರ್ಯಸೂ ಚಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಟೀಕಿಸಿದ್ದಾರೆ. ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. https://kannadanewsnow.com/kannada/oscar-2024-robert-downey-jr-wins-academy-award-for-best-supporting-actor/ ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ‘ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಏಕೈಕ ಗುರಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರ ಸಂವಿಧಾನ ನಾಶ ಮಾಡು ವುದು ಎಂದು ಕಿಡಿ ಕಾರಿದ್ದಾರೆ.

Read More

ಬೆಂಗಳೂರು : ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತನ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮತ್ತು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಶಂಕಿತ ಬೆಂಗಳೂರಿನಿಂದ ತುಮಕೂರು, ಬಳ್ಳಾರಿ, ಕಲಬುರಗಿವರೆಗೆ ತೆರಳಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಿಂದ ಆತ ಎಲ್ಲಿಗೆ ಹೋಗಿದ್ದಾನೆ ಎಂಬುದು ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ತಂಡಗಳು ಕಲಬುರಗಿ ಹಾಗೂ ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ಶಂಕಿತನಿಗಾಗಿ ಶೋಧ ನಡೆಸುತ್ತಿವೆ. https://kannadanewsnow.com/kannada/5-8-9%e0%b2%a8%e0%b3%87%e0%b2%a4%e0%b2%b0%e0%b2%97%e0%b2%a4%e0%b2%bf-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf/ ಶಂಕಿತ ಬಳ್ಳಾರಿಯಲ್ಲಿ ಕಲಬುರಗಿ ಬಸ್‌ ಹತ್ತಿರುವ ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ. ಆದರೆ ಕಲಬುರಗಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಆತ ಬಳ್ಳಾರಿ-ಕಲಬುರಗಿ ಮಾರ್ಗ ಮಧ್ಯೆಯೇ ಇಳಿದು ಹೈದರಾಬಾದ್ ಕಡೆಗೆ ಪರಾರಿಯಾಗಿರುವಶಂಕೆ ವ್ಯಕ್ತವಾಗಿದೆ. ಹೀಗಾಗಿ ತನಿಖಾ ತಂಡವೊಂದು ಹೈದರಾಬಾದ್‌ನಲ್ಲಿ ಶಂಕಿತನ ಪತ್ತೆಗೆ ಶೋಧ ಕಾರ್ಯ ತೀವ್ರಗೊಳಿಸಿದೆ. https://kannadanewsnow.com/kannada/i-have-made-a-house-in-shivamogga-i-will-stay-there-geetha-shivarajkumar/ ನಾಲ್ಕು ಶಾಖೆಗಳಸಿಸಿಟಿವಿ ದೃಶ್ಯಾವಳಿ ಸಂಗ್ರಹ:ಈಗಾಗಲೇ ಎನ್‌ಐಎ ಅಧಿಕಾರಿಗಳು ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆಯ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದ್ದಾರೆ. ಆದರೆ,…

Read More

ಬೆಂಗಳೂರು : ಶಾಲಾ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಕಾನೂನು ಸಂಘರ್ಷ ನಡೆಯುತ್ತಿದ್ದು,ಇದರ ಮಧ್ಯ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗೆ ಆಯಾ ಶಾಲೆಗಳಲ್ಲೇ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. https://kannadanewsnow.com/kannada/i-have-made-a-house-in-shivamogga-i-will-stay-there-geetha-shivarajkumar/ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸೇರಿ ಒಟ್ಟು 69,137 ಶಾಲೆಗಳಿಂದ 28.14 ಲಕ್ಷ ವಿದ್ಯಾರ್ಥಿಗಳಿಗೆ ಮಾ.18ರವರೆಗೆ ಮೌಲ್ಯಾಂಕನ ಪರೀಕ್ಷೆಗಳು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದೆ. https://kannadanewsnow.com/kannada/congress-that-worships-periyar-who-burnt-constitution-has-no-morality-to-talk-about-it-bjp/ 5ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ಮಾ.11ರಿಂದ 14ರ ವರೆಗೆ, 8, 9ನೇ ತರಗತಿಗೆ ಮಾ.11- 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಎಲ್ಲ ಮಕ್ಕಳಿಗೂ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು ಕ್ರಮವಾಗಿ 4.30ರವರೆಗೆ, ಸಂಜೆ 5, 5.15ಕ್ಕೆ ಮುಕ್ತಾಯ ವಾಗಲಿವೆ. 5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ…

Read More

ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಬಿಟ್ಟ ಕಾರಣಕ್ಕೆ ಮಂಡ್ಯದಲ್ಲಿ ರೈತರು ಕಪು ಬಾವುಟ ಪ್ರದರ್ಶಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸ್ತಿದ್ದ ಕಾವೇರಿ ಹೋರಾಟಗಾರರನ್ನು ಬಂಧಿಸಲಾಯಿತು. ರೈತ ನಾಯಕಿ ಸುನಂದಾ ಜಯರಾಂ,ಮಾಜಿ ಪರಿಷತ್ ಸದಸ್ಯ, ಕೆ.ಟಿ.ಶ್ರೀಕಂಠೇಗೌಡ,ಕನ್ನಡ ಸೇನೆ ಮಂಜು ಸೇರಿದಂತೆ ಹಲವು ರೈತ ಸಂಘದ ಕಾರ್ಯಕರ್ತರ ಬಂಧನವಾಗಿದೆ.ಇದೆ ವೇಳೆ ಬಂಧನದ ವೇಳೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. KRS ನಿಂದ ಕಾವೇರಿ ನದಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳಿಂದ ಹೋರಾಟ ನಡೆಸಲಾಗುತ್ತಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಸುತ್ತಿದ್ದಾರೆ. ಸಂಕಷ್ಟದಲ್ಲಿಯೂ ನದಿಗೆ ನೀರು ಹರಿಸಲಾಗ್ತಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಜನ ಜಾನುವಾರುಗಳಿಗೆ ಅನ್ಯಾಯವಾಗಿದೆ. ನಮ್ಮ ನೀರು ರಕ್ಷಸೋಣ ಎಂಬ ಸ್ಲೋಗನ್ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ. ಹಳೆ ಬೆ-ಮೈ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.…

Read More