Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಇಂದು ಅವರು, ರಾಮನಗರದಲ್ಲಿ ರೇಷ್ಮೆ ಮಾರುಕಟ್ಟೆಯನ್ನು ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಜನ ೧೩೬ ಮಂದಿ ಶಾಸಕರನ್ನ ಗೆಲ್ಲಿಸಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ.ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಾರೆ.ಯಾವುದೇ ವ್ಯತ್ಯಾಸ ಆಗಿಲ್ಲ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರೇ ಇರ್ತಾರೆ ಎಂದರು.
ಬೆಂಗಳೂರು : ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಚಾಲಕ ಮರಕ್ಕೆ ಬಸ್ ಡಿಕ್ಕಿ ಹೊಡೆಸಿದ ಘಟನೆ ಕಳೆದ ಭಾನುವಾರ ಬೆಗಳೂರಿನ ಜೈ ಮಾರುತಿ ನಗರದ ಸಮೀಪ ನಡೆದಿದೆ. ಈ ವೇಳೆ ರಸ್ತೆ ಬದಿಯ ವ್ಯಾಪಾರಿಗಳು ಅಪಾಯದಿಂದ ಜಸ್ಟ್ ಮಿಸ್ ಆಗಿದ್ದಾರೆ. ಹೌದು ಸುಮನಹಳ್ಳಿಯ ಬಿಎಂಟಿಸಿ ಡಿಪೋ 31ಕ್ಕೆ ಸೇರಿದ ಕೆಎ 57 ಎಫ್ 2319 ಬಸ್ ಎಂದು ತಿಳಿದುಬಂದಿದ್ದು, ಪದೇಪದೇ ಬಿಎಂಟಿಸಿ ಬಸ್ ಅಪಘಾತಗಳು ನಡೆಯುತ್ತಿದ್ದರು. ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ಬ್ರೇಕ್ ಫೇಲಾದ ಬಸ್ ನಲ್ಲಿ ಪ್ರಯಾಣಿಕರು ಇಲ್ಲದಿದ್ದರಿಂದ ಭಾರಿ ಅನಾಹುತ ಒಂದು ಇದೀಗ ತಪ್ಪಿದೆ. ಭಾನುವಾರ ಸಂಜೆ 7:45 ಕ್ಕೆ ಸಂಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈ ಮಾರುತಿ ನಗರದಿಂದ ಮೆಜೆಸ್ಟಿಕ್ ಕಡೆಗೆ ಬಿಎಂಟಿಸಿ ತೆರಳುತ್ತಿತ್ತು. ಬಸ್ ಬ್ರೇಕ್ ಆಗಿದ್ದರಿಂದ ಚಾಲಕ ಗಂಗಾಧರ್ ಕೂಡಲೇ ಮರಕ್ಕೆ ಗುದ್ದಿಸಿದ್ದಾರೆ. ಚಾಲಕ ಗಂಗಾಧರನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಗಾಯಗೊಂಡ ಕಂಡಕ್ಟರ್ ಮಂಜುಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ…
ಉತ್ತರಕನ್ನಡ : ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಗೋಕರ್ಣಕ್ಕೆ ತೆರಳಿದ್ದಾರೆ. ಈ ವೇಳೆ ಸಮುದ್ರದಲ್ಲಿ ಈಜಲು ತೆರಳಿದ್ದ ಯುವಕಯೊಬ್ಬ ಸಮುದ್ರಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಾವಿಕೊಡ್ಲ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಿದ್ದವರಲ್ಲಿ ಕೋಲಾರದ ಶ್ರೀನಿವಾಸಪುರದ ವಿನಯ ಎಸ್.ವಿ (22) ನೀರುಪಾಲಾದ ವಿದ್ಯಾರ್ಥಿಯಾಗಿದ್ದು, ಆತನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.ಇನ್ನುಳಿದಂತೆ ಆತನೊಂದಿಗೆ ತೆರಳಿದ್ದ ಇನ್ನೂ ಐವರನ್ನು ರಕ್ಷಿಸಲಾಗಿದ್ದು ಅಸ್ವಸ್ಥರಾಗಿರುವ ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಖಾಸಗಿ ಫಾರ್ಮಸಿ ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರಲ್ಲಿ ಮೋಜು ಮಸ್ತಿ ಮಾಡಲು ತೆರಳಿ ಈ ಅವಘಡ ನಡೆದಿದೆ.ಅಪಾಯದಲ್ಲಿದ್ದವರನ್ನ ಗಮನಿಸಿ ಸ್ಥಳೀಯರಾದ ದುಬ್ಬಸಸಿಯ ಸರ್ವೇಶ ಮೊರ್ಜೆ ಮತ್ತು ಪಂಢರಿನಾಥ ಮೂರ್ಜೆ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಇವರಿಗೆ ಕರಾವಳಿ ಕಾವಲು ಪೊಲೀಸ್ ಪಡೆಯವರು ಸಹಕರಿಸಿ ಹರಸಾಹಸ ಪಟ್ಟು ಒಟ್ಟು ಐವರನ್ನು ದಡಕ್ಕೆ ತಂದು ಪ್ರಾಣ ಉಳಿಸಿದ್ದಾರೆ.
ಬೆಳಗಾವಿ : ಸಿಎಂ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ಆಗುತ್ತಿದ್ದು, ಸದ್ಯ ಸಿಎಂ ಕುರ್ಚಿಯ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಬಿದ್ದಿದ್ದು, ಅವರವರ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಶ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದರು. ಇನ್ನೂ ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಕೈ ನಾಯಕರ ಹೇಳಿಕೆಗೆ ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ…
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದಾರೆ. ಇನ್ನು ನಿನ್ನೆ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದರು. ಅಲ್ಲದೆ ನಾಳೆ ಭೇಟಿಗೆ ಜೈಲಿಗೆ ಆಗಮಿಸಿ ಎಂದು ತಿಳಿಸಿದರು. ಆದರೆ ಇದೀಗ ಈ ಒಂದು ಭೇಟಿ ರದ್ದಾಗಿದೆ ಎಂದು ತಿಳಿದು ಬಂದಿದೆ. ಹೌದು ನಾಳೆ ದರ್ಶನ್ ರ ನ್ಯಾಯಾಂಗ ಬಂಧನದ ಮುಕ್ತಾಯ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಇದೆ ಅಂತ ಭೇಟಿಯನ್ನು ರದ್ದು ಮಾಡಿದ್ದಾರೆ. ಇಂದು ದರ್ಶನ್ ನೋಡಲು ಬರ್ತೀನಿ ಎಂದು ಪತ್ನಿ ವಿಜಯಲಕ್ಷ್ಮಿ ಹೇಳಿದ್ದರು. ಇದೀಗ ದರ್ಶನ್ ಭೇಟಿಯನ್ನು ಪತ್ನಿ ವಿಜಯಲಕ್ಷ್ಮಿ ರದ್ದು ಮಾಡಿದ್ದಾರೆ. ನಿನ್ನೆ ಪ್ರಿಸನ್ ಕಾಲ್ ಸಿಸ್ಟಂ ಮೂಲಕ ದರ್ಶನ್ ಪತ್ನಿ ವಿಡಿಯೋ ಲಕ್ಷ್ಮಿ ಅವರೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದರು. ನಾಳೆ ಜೈಲಿಗೆ ಬಂದು ಭೇಟಿ ಮಾಡಿ ಎಂದು ತಿಳಿಸಿದ್ದರು. ಈ ವೇಳೆ ದರ್ಶನ್ ಅವರು ಭಾವುಕರಾಗಿದ್ದರು. ನಾಳೆ ಪತ್ನಿ ವಿಜಯಲಕ್ಷ್ಮಿ…
ದಾವಣಗೆರೆ : ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಸಿಎಂ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಹೋಗುತ್ತಿದೆ. ಹಿರಿಯ ನಾಯಕರಾದ ಆರ್ ವಿ ದೇಶಪಾಂಡೆ, ಸಚಿವರಾದ ಶಿವಾನಂದ ಪಾಟೀಲ್, ಎಂ ಬಿ ಪಾಟೀಲ್ ಸೇರಿದಂತೆ ಸಿಎಂ ಸ್ಥಾನದ ಕುರಿತಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.ಇದೀಗ ದಾವಣಗೆರೆಯಲ್ಲಿ ಕಾಂಗ್ರೆಸ್ಸಿನ ಹಿರಿಯ ಶಾಸಕ ಶಮಣರು ಶಿವಶಂಕರಪ್ಪ ಅವರು ಪ್ರಸಂಗ ಬಂದರೆ ನಾನು ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸೀನಿಯರ್, ಜೂನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಹೈಕಮಾಂಡ್ ಯಾರನ್ನು ಹೇಳುತ್ತಾರೋ ಅವರೆ ಫೈನಲ್. ಚುನಾಯಿತ ಶಾಸಕರು ಯಾರಿಗೆ ಬಹುಮತ ಕೊಡುತ್ತಾರೋ ಅವರಿಗೆ ನಮ್ಮ ಹೈಕಮಾಂಡ್ ಸೂಚಿಸುತ್ತಾರೆ. ಅಂತ ಪ್ರಸಂಗ ಬಂದರೆ ನಾನು ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಬಿಡುವುದಿಲ್ಲ ಎಂದರು.
ಕಲಬುರ್ಗಿ : ನಿನ್ನೆ ಕಲಬುರ್ಗಿಯ ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಬಿದ್ದಿರುವ ಪ್ರಕರಣ ನಡೆದಿತ್ತು. ಆದರೆ ಇದು ಆಕಸ್ಮಿಕವಾಗಿ ನಡೆದಂತಹ ಘಟನೆ ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಠಾಣೆಗೆ ಗ್ರಾಹಕನೊಬ್ಬ ಬಂದು ಶರಣಾಗಿ ನಾನೇ ಬೆಂಕಿ ಹಚ್ಚಿದ್ದೇನೆ ಎಂಬ ತಪ್ಪು ಒಪ್ಪಿಕೊಂಡಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಹೌದು ಮೊಹಮ್ಮದ್ ನದೀಮ್ ಎಂಬಾತ ಈ ಕೃತ್ಯ ಎಸಗಿದ್ದು, ಮೂರು ದಿನಗಳ ಹಿಂದಷ್ಟೇ ಹೊಸ ಎಲೆಕ್ಟ್ರಿಕ್ ಬೈಕ್ ತೆಗೆದುಕೊಂಡಿದ್ದ. ಆದರೆ, ಪ್ರಾರಂಭದಿಂದಲೂ ಬೈಕ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಎರಡು ಬಾರಿ ದುರಸ್ತಿ ಮಾಡಿದರೂ ಸರಿಹೋಗಿರಲಿಲ್ಲ. ಹೀಗಾಗಿ ಶೋರೂಂಗೆ ಬಂದಿದ್ದ ವ್ಯಕ್ತಿ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದ. ಬಳಿಕ ಕೋಪಗೊಂಡು ಪೆಟ್ರೋಲ್ ತೆಗೆದುಕೊಂಡು ಬಂದು ಶೋರೂಂನಲ್ಲಿದ್ದ ಬೈಕ್ಗಳ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ. ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಗ್ರಾಹಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ತಾನಾಗಿಯೇ ಪೊಲೀಸ್ ಠಾಣೆಗೆ ತೆರಳಿ ತಪ್ಪು ಒಪ್ಪಿಕೊಂಡಿದ್ದಾನೆ. ಕಲಬುರಗಿ ನಗರದ…
ಬೆಂಗಳೂರು : ಕರ್ನಾಟಕದಲ್ಲಿ ಕನ್ನಡಿಗರಿಗೆಲ್ಲಾ ಸುರಕ್ಷತೆ ಇಲ್ಲದಂತಾಗಿದೆ. ಬೇರೆ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿ ಇಲ್ಲಿಯೇ ಜೀವನ ರೂಪಿಸಿಕೊಂಡು, ಅವರಿಗೆ ಇಲ್ಲಿಯ ಅನ್ನ ನೀರು ಬೇಕೇ ಹೊರತು, ಕನ್ನಡಿಗರು ಮಾತ್ರ ಬೇಡ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಕನ್ನಡ ಮಾತನಾಡಿದ್ದಕ್ಕೆ ಯುಪಿ ಗ್ಯಾಂಗ್ ನಿಂದ ಕನ್ನಡಿಗ ಕಾರ್ಮಿಕನ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಆನೇಕಲ್ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹಿಂದಿ ಮಾತಾಡುವಂತೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶಿವಲಿಂಗ (40) ಹಲ್ಲೆಗೆ ಒಳಗಾದಂತಹ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವಲಿಂಗ ಕೈಮಗ್ಗದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಬೆಳಿಗ್ಗೆ ಕೆಲಸ ಮಾಡುವ ವೇಳೆ ಸ್ವಲ್ಪ ಕಾಲು ತೆಗಿ ಎಂದು ಯುಪಿ ಮೂಲದ ಕಾರ್ಮಿಕನಿಗೆ ಹೇಳಿದ್ದಕ್ಕೆ, ಹಿಂದಿ ಮಾತನಾಡು ಕನ್ನಡ ಅಲ್ಲ ಎಂದು ನನ್ನ ಮೇಲೆ ಉತ್ತರ ಪ್ರದೇಶದ ಮೂಲದ ಕಾರ್ಮಿಕರು ಹಲ್ಲೆ ಮಾಡಿದ್ದಾರೆ. ಮಾಲಿಕರಿಗೆ ನಾವು ಎಷ್ಟು ಮುಖ್ಯವೋ ಅವರು ಕೂಡ ಅಷ್ಟೇ…
ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಈಗಾಗಲೇ ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಅನುಮಾನ ಬೇಡ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಾನು ಸಿಎಂ ಆಗಬಹುದು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದು, ಅವರು ಅವರ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಯಾವುದೇ ಅನುಮಾನ ಬೇಡ ಮುಖ್ಯಮಂತ್ರಿ ಸ್ಥಾನದಲ್ಲಿ ನಾನೇ ಮುಂದುವರೆಯಲಿದ್ದೇನೆ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಇನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಎಂದಿಗೂ ದ್ವೇಷದ ರಾಜಕೀಯ ಮಾಡಿಲ್ಲ . ಆದರೆ ಬಿಜೆಪಿಯವರು ನಮ್ಮ ವಿರುದ್ಧ ದ್ವೇಷದ ರಾಜಕೀಯ ಮಾಡಿದರು. ನಾವು ಈ ಹಿಂದೆಯೂ ದ್ವೇಷದ ರಾಜಕಾರಣ ಮಾಡಿಲ್ಲ ಈಗಲೂ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ 21…
ನವದೆಹಲಿ : ರಾಜ್ಯದಲ್ಲಿ ಸಿಎಂ ಕುರ್ಚಿಯ ಕುರಿತು ಈಗಾಗಲೇ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ನಿನ್ನೆ MLC ಗಳು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನದ ಕುರಿತು ಸಚಿವರ ಹೇಳಿಕೆಗೆ ಬ್ರೇಕ್ ಹಾಕಿ ಎಂದು ಪತ್ರ ಬರೆದಿದ್ದಾರೆ.ಇದರ ಮಧ್ಯ ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಹೌದು 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಂಡ ಪಾಟೀಲ ಅವರು, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು. ಬಳಿಕ ರಕ್ಷಣಾ ಸಚಿವ ರಾಜನಾಥ್…













