Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕೇಸ್ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಹೊಸ ತಿರುವು ಎನ್ನುವಂತೆ ತನ್ನ ಕೇಸ್ ತಾನೇ ಇಂದು ದೂರುದಾರ ಸ್ನೇಹಮಯಿ ಕೃಷ್ಣ ವಾದಿಸಲಿದ್ದಾರೆ. ಈಗಾಗಲೇ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ತಕರಾರು ಅರ್ಜಿ ವಿಚಾರಣೆ ಆರಂಭವಾದಾಗ, ಜಮೀನ ಮಾಲೀಕರು ಯಾರು ಎಂಬುದನ್ನು ತನಿಖೆ ಮಾಡಿಲ್ಲ. ಡಿನೋಟಿಫಿಕೇಶನ್ ಆದ ಮೇಲೆ ಬಡಾವಣೆ ರಚನೆ ಹೇಗೆ ಮಾಡಿದರು? ಡಿ ನೋಟಿಫಿಕೇಶನ್ ಪರಕ್ರಿಗೆ ಸಂಬಂಧಿಸಿದ ದಾಖಲೆಗಳೇ ಇಲ್ಲ. ಬಡಾವಣೆಯನ್ನು ಕೃಷಿ ಜಮೀನು ಎಂದು ಮಾರಾಟ ಮಾಡಿದ್ದಾರೆ. 2024ರಲ್ಲಿ ದೇವನೂರು ಬಡಾವಣೆಯಲ್ಲಿ 369 ನಿವೇಶನಗಳಿದ್ದವು. ಹೀಗಾಗಿಯೇ ದೇವನೂರು ಬಡಾವಣೆ ಎಂದು ಬರೆದಿದ್ದ ಪತ್ರಕ್ಕೆ ವೈಟ್ನರ್ ಹಾಕಿದ್ದಾರೆ. ದೇವನೂರು ಬಡಾವಣೆಯಲ್ಲಿ ನಿವೇಶನವಿದ್ದರೂ ದುಬಾರಿ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ದೇವನೂರಲ್ಲಿ ನಿವೇಶನವಿದ್ದರೂ ದುಬಾರಿ ಬಡಾವಣೆಯಲ್ಲಿ ಹಂಚಿಕೆ ಎಂದು ವಾದ ಮಂಡಿಸಿದರು. ಈ…
ಬೆಂಗಳೂರು : ರಸ್ತೆ ಬದಿ ವ್ಯಾಪಾರಿಗಳಿಗೆ ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಂಡವರಿಗೆ ತಳ್ಳು ಗಾಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಇನ್ನು ಮುಂದೆ ಯಾರೂ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ, ಅವರು ಬಿಬಿಎಂಪಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ತಳ್ಳುವ ಗಾಡಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುವುದು, ಮೋಟಾರರ ವಾಹನಗಳು ಸೇರಿದಂತೆ 4-5 ಬಗೆಯ ವಾಹನಗಳನ್ನು ವ್ಯಾಪಾರಿಗಳಿಗೆ ನೀಡುವ ನಿರ್ಧಾರ ಮಾಡಲಾಗಿದೆ, ವ್ಯಾಪಾರಿಗಳು ತಮಗಿಷ್ಟ ಬರುವ ಗಾಡಿಯನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.
ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇದೀಗ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಬಾಲಚಂದ್ರ ಜಾರಕಿಹೊಳಿ ಹಾಗು ಜಿಲ್ಲಾ ಒಕ್ಕೂಟದ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ದರ ರೂ.5 ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾಪ ಇಟ್ಟಿದೆ. ಹಾಲಿನ ದರ ಏರಿಕೆ ಹಾಗೂ ಪಶುಗಳಿಗೆ ಆಹಾರ ಸೇರಿ ಹಲವು ವಿಚಾರಗಳು ಈ ಒಂದು ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯದ ಜನತೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ, ಮೆಟ್ರೋ ಟಿಕೆಟ್ ದರ ಏರಿಕೆ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಇದರ ಬೆನ್ನಲ್ಲೆ ಹಾಲಿನ ದರ ಏರಿಕೆ ಮಾಡಿದರೆ, ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.
ನವದೆಹಲಿ : ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್ನ ನಿಜವಾದ ಮುಖವಾಡ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ದೂರಿದ್ದರು. ಹೌದು ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುವುದರ ಕುರಿತು ಹೇಳಿಕೆ ನೀಡಿದ ವಿಚಾರವಾಗಿ, ಇಂದು ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿತ್ತು. ಮುಸ್ಲಿಮರಿಗೆ ಶೇಖಡ ನಾಲ್ಕರಷ್ಟು ಮೀಸಲಾತಿ ಸಂಬಂಧ ಸಂವಿಧಾನ ಬದಲಾವಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜುಗೆ ಹಕ್ಕುಚ್ಯುತಿ ಮಂಡನೆ ನೋಟಿಸ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಹಕ್ಕುಚ್ಯುತಿ ನೋಟಿಸ್ ಜಾರಿ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಸದನವನ್ನು ತಪ್ಪು…
ಚಾಮರಾಜನಗರ : ರಾಜ್ಯದಲ್ಲಿ ಮತ್ತೆ ಮತಾಂತರ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಚಾಮರಾಜನಗರದಲ್ಲಿ ಆಘಾತಕಾರಿ ಘಟನೆ ಒಂದು ನಡೆದಿದ್ದು HUDA ಖಾಸಗಿ ಶಾಲೆಯೊಂದರಲ್ಲಿ ವಸ್ತು ಪ್ರದರ್ಶನದ ವೇಳೆ ವಿದ್ಯಾರ್ಥಿನಿ, ಬುರ್ಖಾ ಧರಿಸಿದರೆ ಸತ್ತ ಮೇಲೆ ನಮಗೆ ಏನು ಆಗಲ್ಲ. ಆದರೆ ತುಂಡು ಬಟ್ಟೆ ಧರಿಸಿದರೆ ನಾವು ಸತ್ತ ಮೇಲೆ ನರಕಕ್ಕೆ ಹೋಗುತ್ತೇವೆ. ಹಾವು ಚೇಳುಗಳು ನಮ್ಮ ದೇಹವನ್ನು ತಿನ್ನುತ್ತವೆ ಎಂದು ಹೇಳಿಕೆ ನೀಡಿದ್ದಾಳೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹೌದು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಘಾತಕಾರಿ ಘಟನೆ ಬೆಳಗೆಗೆ ಬಂದಿದೆ. ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ವೇಳೆ, ಬುರ್ಖಾ ಧರಿಸಿದರೆ ಸತ್ತ ಮೇಲೆ ನಮಗೆ ಏನು ಆಗಲ್ಲ. ತುಂಡು ಉಡುಗೆ ಕೊಟ್ಟರೆ ನರಗಕ್ಕೆ ಹೋಗುತ್ತಾರೆ ನಿಮ್ಮ ದೇಹವನ್ನು ಹಾವು ಚೇಳು ತಿನ್ನುತ್ತವೆ ಎಂದು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿ ಈ ರೀತಿ ಹೇಳಿಕೆ ನೀಡಿದ್ದಾಳೆ. ಮಕ್ಕಳು…
ನವದೆಹಲಿ : ದೇಶದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಗಳು, ತರಬೇತಿ ಸಂಸ್ಥೆಗಳು ಮತ್ತು ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಇದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಿದೆ. ಕಳೆದ ಎರಡು ತಿಂಗಳಲ್ಲಿ ಲೈಂಗಿಕ ಕಿರುಕುಳ, ರ್ಯಾಗಿಂಗ್, ತಾರತಮ್ಯ ಮತ್ತು ಇತರ ಕಾರಣಗಳಿಂದ ಅನೇಕ ವಿದ್ಯಾರ್ಥಿಗಳು ಕಾಲೇಜು ಸಭಾಂಗಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಅವರ ಪೀಠ ಹೇಳಿದೆ. ಮಾರ್ಚ್ 19 ರಂದು ಗುಜರಾತ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ಕಳೆದ ತಿಂಗಳು ಐಐಟಿ ಪಾಟ್ನಾದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು ಎಂದು ಪೀಠ ಹೇಳಿದೆ. ಅಧ್ಯಯನದ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಒಡಿಶಾದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನೇಪಾಳಿ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಅವಳು ತನ್ನ ಸಹಪಾಠಿಯ ಮೇಲೆ ಲೈಂಗಿಕ ಶೋಷಣೆ ಮತ್ತು…
ವಿಜಯಪುರ : ಶಾರ್ಟ್ ಸರ್ಕ್ಯೂಟ್ ನಿಂದ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಬಸ್ಮವಾಗಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯಪುರ ಗಾಂಧಿ ಚೌಕ್ ಹಿಂಭಾಗದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಅಪಘಾತ ಮತ್ತು ಇತರೆ ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಬೆಂಕಿಯ ಕೆನ್ನಾಲಿಗೆಗೆ ವಾಹನಗಳ ಟೈರ್ ಗಳು ಸ್ಫೋಟಗೊಳ್ಳುತ್ತಿವೆ. ಇತರೆ ವಾಹನಗಳಿಗೂ ಕೂಡ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು ಸೇರಿದಂತೆ ವಿರೋಧ ಪಕ್ಷದ ಎಲ್ಲಾ ನಾಯಕರ ಫೋನ್ ಟ್ಯಾಪಿಂಗ್ ನಡೆಯುತ್ತಿದೆ.ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಫೋಟಕವಾದ ಹೇಳಿಕೆ ನೀಡಿದರು. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಸಿಎಂ ಸಿದ್ದರಾಮ್ಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆದಿದೆ. ನಾವು ತನಿಖೆ ನಡೆಸಿ ಎಂದು ಪ್ರತಿಭಟನೆ ನಡೆಸಿದೆವು. ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನಮ್ಮ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ, ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ…
ಬೆಂಗಳೂರು : ಮಾರ್ಚ್ 22 ರಂದು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ನಡೆದಿತ್ತು. ಆದರೆ ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವ ರಹಸ್ಯ ಬಯಲಾಗಿದೆ. ಮಾರ್ಚ್ 22 ರಂದು ಲೋಕನಾಥ್ ಸಿಂಗ್ ಭೀಕರವಾಗಿ ಕೊಲೆಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆಯಿಂದಲೇ ಅಳಿಯನ ಭೀಕರ ಕೊಲೆಯಾಗಿದೆ. ಹೌದು ಲೋಕನಾಥ್ ಸಿಂಗ್ ನನ್ನು ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಬಿಜಾಡಿಯ ಗ್ರಾಮದ ಬಿಜಿಎಸ್ ಲೇಔಟ್ನಲ್ಲಿ ನಿನ್ನೆ ಸಂಜೆ ರಿಯಲ್ ಎಸ್ಟೇಟ್ ಯುವ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆಯಾಗಿದೆ. ತಾನು ತಂದಿದ್ದ ಕಾರಿನಲ್ಲೇ ಲೋಕನಾಥ್ ಸಿಂಗ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಕಾರಿನಿಂದ ಓಡಿ ಬಂದ ಲೋಕನಾಥ್ 1000 ಮೀಟರ್ ದೂರದಲ್ಲಿದ್ದ ಆಟೋ ಹತ್ತಿ ಪ್ರಾಣ ಬಿಟ್ಟಿದ್ದ. ಕೊಲೆ ನಡೆದದ್ದು ಹೇಗೆ? ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್…
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆಯಲ್ಲಿ ಆರ್ಮ್ ಆಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ. ಬಸವೇಶ್ವರನಗರ ಪಿಎಸ್ಐ ಭಾನುಪ್ರಕಾಶ್ ದೂರು ಆಧರಿಸಿ ರೀಲ್ಸ್ ಮಾಡುವಾಗ ಕೈಯಲ್ಲಿ ಲಾಂಗ್ ಹಿಡಿದುಕೊಂಡು ಪೋಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಜತ್ ಕೈಯಲ್ಲಿ ಲಾಂಗ್ ಹಿಡಿದು ಪೋಸ್ ಕೊಟ್ಟು ರಿಲ್ಸ್ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ. ಲಾಂಗ್ ಹಿಡಿದು ಬರೆದ ವಾತಾವರಣ ಸೃಷ್ಟಿಯಾಗುವಂತೆ ರಜತ್ ರಿಲೀಸ್ ಮಾಡಿದ್ದ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡುವ ರೀತಿ ದುರ್ವರ್ತನೆ ತೋರಿದ್ದರಿಂದ 18 ಸೆಕೆಂಡ್ ಗಳ ವಿಡಿಯೋ ಲಿಂಕ್ ಮೂಲಕ ದೂರು ದಾಖಲಾಗಿದೆ.…