Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಪವಿತ್ರ ಗೌಡ ಸೇರಿದಂತೆ ದರ್ಶನ್ ಹಾಗೂ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ನಿನ್ನೆ ನಟ ದರ್ಶನ್ ಅವರನ್ನು ಭೇಟಿಯಾಗಲು ವಿಜಯಲಕ್ಷ್ಮಿ ಹಾಗೂ ಅವರ ಪುತ್ರ ಆಗಮಿಸಿದ್ದರು ಇದನ್ನು ತಿಳಿದ ಪವಿತ್ರ ಗೌಡ ನನ್ನನ್ನು ನೋಡಲು ನನ್ನ ಪೋಷಕರು ಯಾಕೆ ಬಂದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಹೌದು ನಿನ್ನೆ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿಯಾಗಿದ್ದರು. ಈ ವಿಷಯ ತಿಳಿದು ನಟಿ ಪವಿತ್ರ ಗೌಡ ಸಹಜವಾಗಿ ಬೇಸರಗೊಂಡಿದ್ದು ನನ್ನ ಪೋಷಕರು ಇನ್ನು ಯಾಕೆ ನನ್ನನ್ನು ಭೇಟಿ ಮಾಡಲು ಬಂದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರಿಗೆ ಕರೆ ಮಾಡಿ ಕಣ್ಣೀರು ಹಾಕಿದ್ದಾರೆ. ಕರೆ ಮಾಡಿ ತಿಳಿಸಿದ ಬೆನ್ನಲ್ಲೆ ಪವಿತ್ರ ಗೌಡರನ್ನು ಕುಟುಂಬಸ್ಥರು ಭೇಟಿಯಾಗಿದ್ದಾರೆ. ಮನೆಯವರಿಗೆ ಕರೆ ಮಾಡಿ ಪವಿತ್ರ ಗೌಡ ಆವಾಜ್ ಹಾಕಿದ್ದಳು ನನ್ನನ್ನು ಏಕೆ ನೋಡಲು ಬಂದಿಲ್ಲ. ನಾನು ಹೇಳಿದ ವಸ್ತುಗಳನ್ನು ಯಾಕೆ ತಂದಿಲ್ಲ…
ಹಾಸನ : ಹಣ ದುರುಪಯೋಗ ಆರೋಪದ ಅಡಿ ಇದೀಗ ಸೂರಜ್ ರೇವಣ್ಣ ಆಪ್ತ ಎನ್ನಲಾದ ಶಿವಕುಮಾರ್ ವಿರುದ್ಧ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ. ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು. ಇದೀಗ ಹಣ ಆರೋಪದ ಅಡಿಯಲ್ಲಿ ಶಿವಕುಮಾರ್ ವಿರುದ್ಧವೆ ದಾಖಲಾಗಿದೆ. ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶಿವಕುಮಾರ್ ಶ್ರೀರಾಮ್ ಫೈನಾನ್ಸ್ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರು ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2 ಲಕ್ಷ 91 ಸಾವಿರ ರೂಪಾಯಿ ಹಣವನ್ನ ದುರ್ಬಳಕೆ ಮಾಡಿದ್ದ ಆರೋಪದಡಿ ಕೇಸ್ ದಾಖಲಾಗಿದ್ದು, ಈ ಕುರಿತು ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ದೂರು ನೀಡಿದ್ದರು. ಇನ್ನು ಪ್ರಕರಣ…
ದಕ್ಷಿಣಕನ್ನಡ : ರಾಜ್ಯದಲ್ಲಿ ಎದುರಾದ ದರ ಬಿಸಿ ಏರಿಕೆ ನಡುವೆ ಕೆಎಂಎಫ್ ಕೂಡ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಹಾಲಿನ ಪ್ರಮಾಣವನ್ನ ಹೆಚ್ಚಿಸೋದ್ರ ಜೊತೆಗೆ ದರವನ್ನೂ ಏರಿಸಿದೆ. ಒಂದು ಲೀಟರ್ ಬದಲಿಗೆ 1050 ಎಂಎಲ್ನ ಪ್ಯಾಕೆಟ್ ಹಾಲು ಸಿಗಲಿದೆ. 50 ಎಂಲ್ ಹಾಲಿನ ಪ್ಯಾಕೆಟ್ಗೆ 2 ರೂಪಾಯಿ ದರ ಏರಿಸಲಾಗಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಾಲಿನ ದರ ಏರಿಕೆ ಕುರಿತು ಸಮರ್ಥಿಸಿಕೊಂಡಿದ್ದು, ನೀರಿನ ಬೆಲೆಯು ಲೀಟರ್ಗೆ 25 ರೂಪಾಯಿ ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ಹಾಗಾಗಿ ರೈತರ ಒತ್ತಾಯದ ಮೇಲೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಇದೀಗ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬಳ್ಳಾರಿ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹೌದು ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಇನ್ನೂ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ. ದರ್ಶನ್ ಅನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಅವರ ಅಭಿಮಾನಿಗಳು ಬರುತ್ತಲೇ ಇದ್ದಾರೆ. ದರ್ಶನ್ ಬೇಟಿಗೆ ಬಂದಂತಹ ಅಭಿಮಾನಿ ಒಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿ, ದರ್ಶನ್ ಅವರು ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಆದರೆ ಅವರ ಮೇಲಿರುವ ಅಭಿಮಾನ ನಮಗೆ ಯಾವತ್ತಿಗೂ ಕಡಿಮೆಯಾಗುವುದಿಲ್ಲ. ಈ ಒಂದು ಘಟನೆ ನಡೆಯಬಾರದಿತ್ತು ಆದರೂ ಕೂಡ ನಮ್ಮ ದರ್ಶನ್ ಅವರ ಮೇಲೆ ಅಭಿಮಾನ ಎಳ್ಳಷ್ಟು ಕಡಿಮೆಯಾಗಿಲ್ಲ.…
ಬೀದರ್ : ಸಚಿವ ಈಶ್ವರ ಖಂಡ್ರೆ ಪುತ್ರ ಮುಸ್ಲಿಮರ ಮತಗಳಿಂದಲೇ ಗೆದ್ದಿದ್ದಾನೆ. ಹೀಗಾಗಿ ಮುಸ್ಲಿಮರ ಕೆಲಸವನ್ನು ಮುಲಾಜಿಲ್ಲದೆ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಹೌದು ಬೀದರ್ನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಚಿವ ಈಶ್ವರ ಖಂಡ್ರೆ ಪುತ್ರ ಮುಸ್ಲಿಮರ ಮತಗಳಿಂದಲೇ ಗೆದ್ದಿದ್ದಾನೆ. ಹೀಗಾಗಿ ಮುಸ್ಲಿಮರ ಕೆಲಸವನ್ನು ಮುಲಾಜಿಲ್ಲದೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಬೀದರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಬೀದರ್ ಕ್ಷೇತ್ರದಲ್ಲಿ ಸಾಗರ್ ಖಂಡ್ರೆ ಮುಸ್ಲಿಮರ ಮತದಿಂದ ಗೆಲುವು ಕಂಡಿದ್ದಾನೆ. ನಾನು ಈಶ್ವರ ಖಂಡ್ರೆ ಜೊತೆಗೆ ಮಾತನಾಡುತ್ತೇನೆ, ಕೆಲಸ ನಾನು ಮಾಡಿಸುತ್ತೇನೆ. ಸರ್ವೇ ನಂಬರ್ 93ರ ಖಬರಸ್ಥಾನ ಜಾಗದ ವಿಚಾರವಾಗಿ ಜಮೀರ್ ಅಹ್ಮದ್ ಮಾತನಾಡಿದರು. ಅರಣ್ಯ ಪ್ರದೇಶದ ಜಾಗವಾಗಿದ್ದರಿಂದ ಖಬರಸ್ಥಾನಗೆ ಜಾಗ ನೀಡುತ್ತಿಲ್ಲ ಎಂದು ಕಾರ್ಯಕ್ರಮದಲ್ಲಿ ವ್ಯಕ್ತಿ ಒಬ್ಬರು ಅಳಲು ತೋಡಿಕೊಂಡಿದ್ದರು. ಅಕ್ಕ ಪಕ್ಕದಲ್ಲಿ ಎಲ್ಲೂ ಜಾಗ ಇಲ್ಲವಾ ಎಂದು ಸಚಿವ ಜಮೀರ್ ಅಹ್ಮದ್ ಖಾನ್…
ಚಿಕ್ಕಬಳ್ಳಾಪುರ : ತನ್ನ ಪತ್ನಿಯು ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಶೀಲ ಶಂಕಿಸಿ ಪತಿಯೊಬ್ಬ ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೋಣೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮುನಿರೆಡ್ಡಿ (60) ತನ್ನ ಮೊದಲನೇ ಪತ್ನಿ ಪದ್ಮಮ್ಮ (50)ಳನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿದ್ದಾನೆ.ಮೃತ ಪದ್ಮಮ್ಮ ಅವರು ಜಮೀನು ವಿವಾದ ಸಂಬಂಧ ಕೋರ್ಟ್ನಲ್ಲಿ ವ್ಯಾಜ್ಯ ಹೂಡಿದ್ದಾರೆ. ಅಲ್ಲದೆ ತನ್ನ ಪತ್ನಿ ಅದೇ ಗ್ರಾಮದ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಮುನಿರೆಡ್ಡಿ ಮತ್ತು ಅವರ ಮಗ ಇಬ್ಬರೂ ಸೇರಿ ಪದ್ಮಮ್ಮಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಗಳು ತಿಳಿಸಿವೆ. ಕೊಲೆ ಮಾಡಿದ ನಂತರ ಆರೋಪಿಗಳು ತಾವೇ ಪೊಲೀಸರಿಗೆ ಶರಣಾಗಿದ್ದಾರೆ. ಕೊಲೆ ಪ್ರಕರಣದ ಹಿನ್ನೆಲೆ ಗ್ರಾಮದಲ್ಲಿ ಆತಂಕ ಮೂಡಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಂಗಳೂರು : ಎಸ್ ಎಸ್ ಎಲ್ ಸಿ ಫೇಲ್ ಆಗಿ ಮನೆಯಲ್ಲಿ ಇದ್ದಂತಹ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನ YMRAC ಸರ್ಕಲ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಮಂಜುನಾಥ್ ಅಪ್ಪ ಅಮ್ಮನ ಕಳೆದುಕೊಂಡು ಅಬ್ಬಿಗೆರೆಯಲ್ಲಿ ಚಿಕ್ಕಪ್ಪನ ಆಶ್ರಯದಲ್ಲಿದ್ದ.ಈ ವರ್ಷವಷ್ಟೇ SSLC ಪರೀಕ್ಷೆ ಬರೆದು ಫೇಲ್ ಆಗಿದ್ದ. ಆದರೆ ಮೊನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಮಂಜುನಾಥ್ ನನ್ನ ಭೀಕರವಾಗಿ ಕೊಲೆ ಮಾಡಲಾಗಿದ್ದು, ಹತ್ಯೆ ಮಾಡಿದ ಪಾಪಿಗಳು ಎಸ್ಕೇಪ್ ಆಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮಂಜುನಾಥ್ ಡ್ರಿಂಕ್ಸ್ ಮಾಡಿದ್ದು ಅಲ್ಲದೆ ಗಾಂಜಾ ಸೇವನೆ ಕೂಡ ಮಾಡಿ ಬೀದಿಯಲ್ಲಿ ನಿಂತಿದ್ದ. ಈ ವೇಳೆ ಪೋಷಕರು ಹೋಗಿ ಮಂಜುನಾಥ್ ನನ್ನ ಮನೆಗೆ ಕರ್ಕೊಂಡ ಬಂದಿದ್ರು. ಆದರೆ ಮತ್ತೆ ಮಂಜುನಾಥ್ ಮಧ್ಯರಾತ್ರಿ ಎದ್ದು ಹೊರಗಡೆ ಹೋಗಿದ್ದವನು ವಾಪಾಸ್ ಬಂದಿಲ್ಲ. ಇದರಿಂದ ಸಹಜವಾಗಿ ಮನೆಯವರು ಗಾಬರಿಗೆ ಒಳಗಾಗಿದ್ದಾರೆ.ಈ ವೇಳೆ ಪೋಷಕರು…
ಬೀದರ್ : ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೀದರ್ ತಾಲ್ಲೂಕಿನ ಯಾಕತನಪುರ ಗ್ರಾಮದ ಬಳಿ ಈ ದುಷ್ಕೃತ್ಯ ನಡೆದಿದೆ. ಮೊಹಮ್ಮದ್ ಸಿರಾಜ್ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ನ ಬಾಲ್ಯ ಸ್ನೇಹಿತ ಯಾಸಿನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಪ್ರಕರಣದ ಆರೋಪಿಯಾಗಿರುವ ಯಾಸಿನ್ ನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮನ್ನಾಖೆಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ರಾಮನಗರ : ಕಳೆದ ಕೆಲವು ತಿಂಗಳುಗಳ ಹಿಂದೆ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಭಾರಿ ಸದ್ದು ಮಾಡಿದ್ದವು. ಇದೀಗ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಶಿಕ್ಷಕರ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ಹೌದು ಕನಕಪುರ ತಾಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ.ಕೊಳವೆ ಆಕಾರದ ಸಿಮೆಂಟ್ ಟ್ಯಾಂಕ್ಗೆ ಏಣಿ ಸಹಾಯದಿಂದ ಮಕ್ಕಳನ್ನು ಒಳಗಡೆ ಇಳಿಸಿ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕರು ಸೂಚಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಶಾಲೆಗೆ ಧಾವಿಸಿದ ಪೋಷಕರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಶಾಲೆಯ ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರು ತಮ್ಮ ಜತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿರುವುದು ಗೊತ್ತಿಲ್ಲ ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ಅವರು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.ಇದರಿಂದ ಸಮಾಧಾನಗೊಳ್ಳದ ಪೋಷಕರು, ಮುಖ್ಯ…
ಹಾಸನ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ನೆಲೆಸಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ. ಸರ್ವಜನಾಂಗದ ಶಾಂತಿಯ ತೋಟ ಆಗಬೇಕೆಂದು ನಾವು ಹೇಳಿದ್ದೆವು. ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿದ್ದೆವು. ವಿಪಕ್ಷದವರು ಕಾನೂನು ವ್ಯವಸ್ಥೆ ಕೆಟ್ಟು ಹೋಗಿದೆ ಎಂದು ಹೇಳುತ್ತಾರೆ.ಪೊಲೀಸರು ಇದ್ದರೂ ಕೊಲೆಗಳಾಗಿವೆ ಎಂದು ಆರೋಪ ಮಾಡಿದ್ದಾರೆ ಎಂದರು. ವಿರೋಧ ಪಕ್ಷಗಳ ಆರೋಪವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಕಳೆದ ಒಂದು ವರ್ಷದಿಂದ ಯಾವುದೇ ಧರ್ಮ ಸಂಘರ್ಷವಾಗಿಲ್ಲ.ಗೌರಿ ಗಣೇಶ ಹಬ್ಬ ಆಚರಣೆಯ ವೇಳೆ ಯಾವುದೇ ಗಲಾಟೆಯಾಗಿಲ್ಲ. ಮಂಗಳೂರು ಹುಬ್ಬಳ್ಳಿ ಶಿವಮೊಗ್ಗ ಕೋಮ ಸಂಘರ್ಷ ನಿಂತಿದೆ. ವಿಪಕ್ಷದವರಿಗೆ ಕಾನೂನು ಸವ್ಯವಸ್ಥೆ ಬಗ್ಗೆ ಅರ್ಥ ಕೇಳಬೇಕಾಗಿದೆ.ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು.…