Author: kannadanewsnow05

ಬೆಂಗಳೂರೂ : ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾದ ಮಳೆ ಸುರಿಯುತ್ತಿರುವದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಕೂಡ ಪರದಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಶಾಲಾ ಮತ್ತು ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ಹೋಗಲು ಪರದಾಡುತ್ತಿದ್ದಾರೆ.ಅಲ್ಲದೆ ಹಲವಡೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಸ್ತೆಗಳು ಕೆರೆಗಳಂತೆ ನೀರು ತುಂಬಿಕೊಂಡಿವೆ . ಹಾಗಾಗಿ ಜಿಲ್ಲಾಧಿಕಾರಿ ಜಗದೀಶ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈಗಾಗಲೇ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ಅಂಗವಾಗಿ ಅಕ್ಟೋಬರ್ 20ರವರೆಗೆ ರಜೆ ಇದೆ. ಆದರೆ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜುಗಳಿಗೆ ತೆರಳಲು ಸಮಸ್ಯೆ ಉಂಟಾಗಿದ್ದರಿಂದ ಜಿಲ್ಲಾಧಿಕಾರಿ ಜಗದೀಶ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ಇನ್ನೂ ನಾಳೆ ಮತ್ತು ನಾಡಿದ್ದು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.…

Read More

ಬೆಂಗಳೂರು : ನಾನು ಕೂಡ ಕಾಲೇಜಿನಲ್ಲಿ ಓದುತ್ತಿರುವಾಗ ಸಿಗರೇಟ್ ಸೇದತಿದ್ದೆ, ಬಳಿಕ ಶಾಸಕನಾದ ಮೇಲೆ ಸಿಗರೇಟ್ ಸೇದುವುದನ್ನು ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿ,ನಾನು ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್ ಸೇದುತ್ತಿದ್ದೆ. ಆಮೇಲೆ ಶಾಸಕ ಆದ್ಮೇಲೆ ಬಿಟ್ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜಿನ ಹಳೆಯ ದಿನಗಳನ್ನು ನೆನಪಿಸಿಕೊಂಡರು. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಬಳಕೆ ಹೆಚ್ಚಾಗುತ್ತಿದೆ. ಯುವ ಜನ ದುರಭ್ಯಾಸಗಳನ್ನು ಮಾಡಬಾರದು, ಮಾಡುತ್ತಿದ್ದರೆ ತಕ್ಷಣ ಬಿಡಬೇಕು. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕು. ಹೀಗಾಗಿ ವಿದ್ಯಾರ್ಥಿಗಳು ದುಶ್ಚಟ ಮಾಡುತ್ತಿದ್ರೆ ದಯಮಾಡಿ ಬಿಡ್ಬೇಕು ಎಂದು ಕಿವಿಮಾತು ಹೇಳಿದರು. ಡ್ರಗ್ಸ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ,…

Read More

ಬೆಂಗಳೂರು : ಸಾಮಾನ್ಯವಾಗಿ ಇಂದಿನ ಕಾಲದಲ್ಲಿ ಬಹಳ ಬೇಗ ದುಡ್ಡು ಮಾಡಬೇಕು, ಅತ್ಯಂತ ವೇಗವಾಗಿ ಶ್ರೀಮಂತರಾಗಬೇಕು ಎನ್ನುವ ಆಸೆ ಎಲ್ಲರಿಗೂ ಸಹಜವಾಗಿ ಇದ್ದೆ ಇರುತ್ತೆ. ಆದರೆ ಈ ಷೇರು ಮಾರುಕಟ್ಟೆಯಲ್ಲಿ ಅದೆಷ್ಟೋ ಅಮಾಯಕ ಜನರು ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿದ್ದಾರೆ. ಇದೀಗ ಇಂಥದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ವ್ಯಕ್ತಿ ಒಬ್ಬರಿಗೆ ಹಣ ದುಪ್ಪಟ್ಟು ಆಗುತ್ತದೆ ಎಂದು ಷೇರು ಟ್ರೇಡಿಂಗ್​ನಲ್ಲಿ ಹಣ ಹೂಡಿದರೆ ದುಪ್ಪಟ್ಟು ಹಣ ಹಿಂತಿರುಗಿಸುವುದಾಗಿ ಆಮಿಷವೊಡ್ಡಿ 1.5 ಕೋಟಿ ರೂ.ವಂಚಿಸಿದ್ದ ಪ್ರಕರಣದಲ್ಲಿ ನಾಲ್ವರು ಬ್ಯಾಂಕ್ ನೌಕರರು ಸೇರಿ ಒಟ್ಟು ಎಂಟು ಮಂದಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ಯಲಹಂಕ ಮೂಲದ ವ್ಯಕ್ತಿಗೆ ಷೇರು ಟ್ರೇಡಿಂಗ್​ನಲ್ಲಿ ಹಣ ಹೂಡಿದರೆ ಹಣ ದ್ವಿಗುಣ ಮಾಡುವುದಾಗಿ ಆಮಿಷವೊಡ್ಡಿ ವಂಚಕರು ಆರಂಭದಲ್ಲಿ 50 ಸಾವಿರ ಕಟ್ಟಿಸಿಕೊಂಡಿದ್ದರು. ಹಣ ದ್ವಿಗುಣವಾಗಿದೆ ಎಂದು ವಾಟ್ಸ್​ಆ್ಯಪ್​ ಮಾಡಿ ಕಳೆದ ಮಾರ್ಚ್​ನಿಂದ ಜೂನ್ ವರೆಗೂ ಹಂತ – ಹಂತವಾಗಿ 1.50 ಕೋಟಿ ಪಾವತಿಸಿಕೊಂಡು ವಂಚಿಸಿದ್ದರು. ಈ ಸಂಬಂಧ ದೂರು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ವಿಪಕ್ಷಗಳು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ, ಇನ್ನೊಂದು ಕಡೆ ನಾನು ಯಾವುದೇ ತಪ್ಪು ಮಾಡಿಲ್ಲ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಹೌದು ಮುಡಾದಲ್ಲಿ ಅವ್ಯವಹಾರ ಹಾಗೂ ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾಗೆ ಆಡಳಿತ ಅಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. 50:50 ಅನುಪಾತದ ಅಡಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಪರಿಣಾಮ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ.ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರೀಗೌಡಗೆ ಸೂಚನೆ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆ ಇದೆ…

Read More

ಗದಗ : ಕೋರ್ಟ್ ಹಾಗೂ ಇತರೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣವನ್ನು ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಒಟ್ಟು ಆರು ಜನರನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ಹೌದು ತಿಪ್ಪೇಸ್ವಾಮಿ ಎಂಬಾತ ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ (JDS) ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು ಬಯಲಾಗಿದೆ. ಅಲ್ಲದೆ ಗದಗ್ ಜಿಲ್ಲೆಯ ಸುಮಾರು 35ಕ್ಕೂ ಹೆಚ್ಚು ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಈ ಒಂದು ಪ್ರಕರಣದಲ್ಲಿ ತಿಪ್ಪೇಸ್ವಾಮಿ ಅಲ್ಲದೆ ಇನ್ನೂ 9 ಜನರು ಭಾಗಿ ಆಗಿದ್ದು, ಇದೀಗ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಈ ಖದೀಮರು ಬಡವರನ್ನು ವಂಚಿಸಿ ಅವರ ಹಣದಲ್ಲಿ ಐಶಾರಾಮಿ ಕಾರುಗಳನ್ನು ಖರೀದಿ ಮಾಡಿ ಮಸ್ತ್ ಮಜಾ ಮಾಡ್ತಾಯಿದ್ದರು. ಸದ್ಯ ಈ ಗ್ಯಾಂಗ್ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.…

Read More

ಬೆಂಗಳೂರು : ನಿನ್ನೆ ರಾಜಧಾನಿ ಬೆಂಗಳೂರುನಲ್ಲಿ ಭೀಕರ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನತೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರು ನಗರದ ಆರ್ ಆರ್ ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೆರೆ ಅಂತಾಗಿದ್ದು ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ವರುಣನ ಅಬ್ಬರಕ್ಕೆ ರಾಜಧಾನಿ ಬೆಂಗಳೂರು ಅಲ್ಲೋಲ ಕಲ್ಲೋಲವಾಗಿದೆ.ರಸ್ತೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ನಿಂದಾಗಿ ಜನ ಜೀವನ ಸಂಪೂರ್ಣವಾಗಿ ಆಸ್ತವೆಸ್ತವಾಗಿದೆ. ಅದರಲ್ಲೂ ಬೆಂಗಳೂರಿನ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತೆ ಆಗಿದೆ.ಆರ್ ಆರ್ ನಗರದ ಕೆರೆ ಕೋಡಿ ರಸ್ತೆಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಸಂಪೂರ್ಣ ಕೆಸರುಗದ್ದೆಯಾಗಿ ರಸ್ತೆ ಬದಲಾಗಿದೆ ಗುಂಡಿ ರಸ್ತೆಯಲ್ಲಿ ಟ್ರ್ಯಾಕ್ ಕಾರು ಚಾಲಕರು ಪರದಾಟ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಹೌದು ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಡಿಸಿಪಿ ಕನ್ನಿಕಾ ಹಾಗೂ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಮೊಬೈಲ್, ಗುಟ್ಕಾ ಪ್ಯಾಕೆಟ್ ಹಾಗೂ 2 ಕಬ್ಬಿಣದ ರಾಡ್ ಗಳನ್ನು ಪೋಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಕಮಿಷನರ್…

Read More

ಬಸವಕಲ್ಯಾಣ : ಕೆಲವು ದಿನಗಳ ಹಿಂದೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿ ಬಳಿಕ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಆಪ್ತ ಸಂಜುಕುಮಾರ್ ಸುಗರೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಂಜುಕುಮಾರ್ ಶಾಸಕ ಶರಣು ಸಲಗಾರ್ ಪರಮಾಪ್ತ ಎಂದೇ ಹೇಳಲಾಗುತ್ತಿದೆ. ನಿನ್ನೆ ಬೆಳಿಗ್ಗೆ ಸಂಜುಕುಮಾರ್ ಅವರು, ಬಸವಕಲ್ಯಾಣದ ಜೈಶಂಕರ ಕಾಲೋನಿಯ ತಮ್ಮ‌ ನಿವಾಸದಿಂದ‌ ತೆರಳಿದ್ದಾರೆ ಎನ್ನಲಾಗಿದ್ದು, ಇದುವರೆಗೂ ಇವರ ಸುಳಿವು ಇನ್ನೂ ಸಿಕ್ಕಿಲ್ಲ.‌ ಹೀಗಾಗಿ ಸಹಜವಾಗಿ ಕುಟುಂಬಸ್ಥರು ಆತಂಕದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಎರಡು ಫೋನ್ ಗಳು ಮನೆಯಲ್ಲಿ ಇಟ್ಟಿದ್ದಾರೆ. ಇವರು ಮನೆಯಿಂದ ಒಬ್ಬರೇ ಹೋಗುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಈ ಸಂಬಂಧ ಸುಗರೆ ಪುತ್ರ‌ ಬಸವಕಲ್ಯಾಣ ನಗರ ಠಾಣೆಗೆ ದೂರು ನೀಡಿದ್ದು, ತಂದೆಯ ಪತ್ತೆಗೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುಗರೆ ಪತ್ತೆಗಾಗಿ ವಿಶೇಷ ತಂಡ ರಚಿಸಿ‌…

Read More

ಬೆಂಗಳೂರು : ಉದ್ಯಮಿ ವಿಜಯ್ ತಾತಾಗೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರು ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ಉದ್ಯಮಿ ವಿಜಯ್ ತಾತಾಗೆ ಎಚ್ ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು.ಅಲ್ಲದೆ ಬೆದರಿಕೆ ಕೂಡ ಹಾಕಿದ್ದರು. ಈ ಒಂದು ಪ್ರಕರಣದಲ್ಲಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಕೂಡ ಬೆಂಗಳೂರಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಇದೀಗ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ನೀಡಿ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿದೆ. ಇದಾದ ಬಳಿಕ ಎಂಎಲ್ಸಿ ರಮೇಶ್ ಗೌಡ ಅವರೇ ನನಗೆ 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಜಯ್…

Read More

ವಿಜಯಪುರ : ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸವನ್ನು ತಿರುಗಿ ನೋಡಿದಾಗ ಹಲವು ರಾಜಕಾರಣಿಗಳು ಈ ಒಂದು ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಯಾರೆಂದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗಾಗಿ ಅವರ ಹೆಸರು ಹೇಳುವ ಅವಶ್ಯಕತೆ ಇಲ್ಲ. ಆದರೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮುಸ್ಲಿಂ ಮುಖಂಡರು ನಿಮ್ಮ ಸಿಡಿ ಕೂಡ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ. ಹೌದು ನಾಳೆ ವಿಜಯಪುರದಲ್ಲಿ ‘ವಕ್ಫ್​ ಹಠಾವೋ ದೇಶ ಬಚಾವೋ’ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಇಂದು ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಿ…ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್…

Read More