Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ತುಮಕೂರು : ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ತುಮಕೂರು ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ರಚನೆಯಾಗಿದ್ದ ತನಿಖಾ ತಂಡವನ್ನು ಇದೀಗ ಏಕಾಏಕಿ ಬದಲಾಯಿಸಲಾಗಿದೆ. ಹೌದು ಡಿವೈಎಸ್ಪಿ ಮಂಜುನಾಥ್ ತನಿಖಾ ತಂಡದಿಂದ ಕಿಕ್ ಔಟ್ ಮಾಡಲಾಗಿದೆ. ಮಾಗಡಿ ಡಿವೈಎಸ್ಪಿ ಪ್ರವೀಣ್ ಗೆ ತನಿಖಾ ತಂಡದ ಹೊಣೆ ವಹಿಸಲಾಗಿದೆ. ಶಿರಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ, ಕ್ಯಾತ್ಸಂದ್ರ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಬದಲು ಎಸ್ಪಿ ಕಚೇರಿಯ ಇನ್ಸ್ಪೆಕ್ಟರ್ ಅವಿನಾಶ್ ಹಾಗೂ ಕ್ಯಾತ್ಸಂದ್ರ ಸಿಪಿಐ ರಾಮಪ್ರಸಾದ್ ತನಿಖಾ ತಂಡ ಸೇರ್ಪಡೆಯಾಗಿದ್ದಾರೆ. ಮಾರ್ಚ್ 22 ರಂದು ಎಂಎಲ್‌ಸಿ ರಾಜೇಂದ್ರ ಎಸ್ ಪಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕ್ಯಾತ್ಸಂದ್ರ ಠಾಣೆಯಲ್ಲಿ ಎಫ್ಐಆರ್ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ತನಿಖಾ ತಂಡವನ್ನು ರಚಿಸಲಾಗಿತ್ತು. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ತನಿಕಾ ತಂಡ ರಚನೆ ಮಾಡಲಾಗಿತ್ತು. ಕಳೆದ ನಾಲ್ಕು…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದು ನಾಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ಹೌದು ನಾಳೆಯಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ…

Read More

ಬೆಂಗಳೂರು : ಮನೆಯಲ್ಲಿ ವಿಷಕಾರಿ ವಸ್ತುಗಳು ಆಗಿರಬಹುದು ಅಥವಾ ದ್ರವರೂಪದ ವಸ್ತುಗಳನ್ನು ಮಕ್ಕಳ ಕೈಗೆ ಸಿಗದಂತೆ ಪೋಷಕರು ಎಚ್ಚರಿಕೆ ವಹಿಸಿ ಮಕ್ಕಳ ಕೈಗೆ ಸಿಗದಂತೆ ಇಡಬೇಕು. ಇಲ್ಲವಾದರೆ ಮಕ್ಕಳ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಹರ್ಬಿಸೈಡ್ ಔಷಧಿ ಕುಡಿದು ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಜ್ಯೂಸ್ ಎಂದು ತಿಳಿದು ನಿಧಿಕೃಷ್ಣ (14) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಗ್ಯ ಕಪಡಿಕೊಳ್ಳಲು ನಿಧಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಈ ವೇಳೆ ಕುಟುಂಬಸ್ಥರು ಅಲೋವೆರಾ ಜ್ಯೂಸ್ ಖಾಲಿಯಾದ ಡಬ್ಬದಲ್ಲಿ ಔಷಧ ತುಂಬಿಟ್ಟಿದ್ದರು. ಮಾರ್ಚ್ 4 ರಂದು ಜ್ಯೂಸ್ ಎಂದು ಹರ್ಬಿಸೈಡ್ ಔಷದ ಕುಡಿದಿದ್ದಾಳೆ. ಅನಾರೋಗ್ಯ ಹಿನ್ನೆಲೆಯಲ್ಲಿ ತಕ್ಷಣ ನಿಧಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಮೃತಪಟ್ಟಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ…

Read More

ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್ ಆಗಿದ್ದಾನೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ. ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಡೀಲ್ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ. ವಿಚಾರ ತಿಳಿದು ಮನೆಯಲ್ಲಿ ಪೊಲೀಸ್ ಜೀಪ್ ಬಿತ್ತು ಪಿಐ ಕುಮಾರ್ ಎಸ್ಕೆಪ್ ಆಗಿದ್ದಾನೆ. ಡೀಲ್ ಮಾಡುವ ವೇಳೆ ಇಬ್ಬರೂ ಪೊಲೀಸ್ ಕಾನ್ಸ್ಟೇಬಲ್ತಿದ್ದಾರೆ ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಅರೆಸ್ಟ್ ಮಾಡಲಾಗಿದೆ ಭ್ರಷ್ಟಾಚಾರ ತಡೆ ಕಾಯಿದೆಯ ಅಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ. ಪಿಐ ವಿರುದ್ಧ ಆರೋಪವೇನು? ಸಿವಿಲ್ ಕಾಂಟ್ರಾಕ್ಟರ್ ಚನ್ನೇಗೌಡ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಐ ಕುಮಾರ್ ಇಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಸುಳ್ಳು ಕೇಸ್ ದಾಖಲಿಸಿ 4 ಕೋಟಿ…

Read More

ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ಒಂದು ವಿದ್ಯುತ್ ಕಂಬ ಹಾಗು ಕಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ ಹಳೆ ಬೈಕ್ ಗಳು ಸಹ ಸುಟ್ಟು ಕರಕಲಾಗಿವೆ. ಖಾಸಗಿ ಬಸ್ ಗೆ ತಗುಲಿದ್ದ ಬೆಂಕಿ ಪಕ್ಕದಲ್ಲೇ ಇದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ತಗುಲಿದೆ. ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಬೈಕ್ ಗಳನ್ನು ಜಪ್ತಿ ಮಾಡಿದ್ದರು. ಬೆಂಕಿ ಹತ್ತಿಕೊಂಡ ಜಾಗದ ಬಳಿಯೇ ಪೆಟ್ರೋಲ್ ಬಂಕ್ ಕೂಡ ಇದೆ. ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಒಂದು ಖಾಸಗಿ ಬಸ್ ಶ್ರೀನಿವಾಸ ನಾಯ್ಡು ಎಂಬವರಿಗೆ ಸೇರಿತ್ತು. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದ್ದು ನಟ ದರ್ಶನ್ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಹೌದು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ್ದು. ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಇಂದು…

Read More

ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ಹಾಲು ಸೇರಿ ವಿವಿಧ ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲಿದೆ. ಈ ಮೂಲಕ ಏ.13ರವರೆಗೆ ವಿವಿಧ ಹಂತಗಳಲ್ಲಿ ಈ ಕುರಿತು ನಡೆಸುವ ಹೋರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಈ ಧರಣಿ ಆರಂಭವಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಧರಣಿಯಲ್ಲಿ ಪಾಲ್ಗೊಳ್ಳುತ್ತೇನೆ : BSY ರಾಜ್ಯ ಸರ್ಕಾರ ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ಬುಧವಾರ ಅಹೋರಾತ್ರಿ ಧರಣಿ ನಡೆಸಲಿದ್ದು, ನಾನೂ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ತಿಂಗಳು ಒಂದಲ್ಲ ಒಂದು ರೀತಿ ಬೆಲೆ ಹೆಚ್ಚಿಸುತ್ತಿದ್ದಾರೆ. ಪೆಟ್ರೋಲ್, ಬಸ್ ಪ್ರಯಾಣ ದರ ಹೆಚ್ಚಿಸಿದ್ದಾರೆ. ಸಾಮಾನ್ಯ ಜನ ಬಳಸುವ ಹಾಲಿನ…

Read More

ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದೆ. ಇದೀಗ ಯುವ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲಮೂಡ ಗ್ರಾಮದ ಯುವ ರೈತ ಓಂಕಾರ ಚಂದ್ರಪ್ಪ ಬಿರಾದಾರ (24) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಗಿಡಕ್ಕೆ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ನೋಡಿದ ಸಾರ್ವಜನಿಕರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಓಂಕಾರ ತಾಯಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಕಮಲಾಪುರ ಕೆನರಾ ಬ್ಯಾಂಕಿನಲ್ಲಿ ₹1.25 ಲಕ್ಷ ಸಾಲವಿದೆ. ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ದೇಶದಲ್ಲಿ ಅರಣ್ಯ ಭೂಮಿ ಒತ್ತುವರಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ದೊರೆತಿದೆ. ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು,ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13,000 ಚದರ ಕಿಲೋಮೀಟರ್‌ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿ ಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು. ಅರಣ್ಯ ಭೂ ಅತಿಕ್ರಮಣದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತನಗೆ ಸಲ್ಲಿಸಿದ ಮಾಹಿತಿಯನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದೆ. ಅದರನ್ವಯ 25 ರಾಜ್ಯಗಳಲ್ಲಿ ಒಟ್ಟು 13056 ಚ.ಕಿ.ಮೀ ನಷ್ಟು ಅರಣ್ಯ ಒತ್ತುವರಿಯಾಗಿದೆ. ಇನ್ನೂ 10 ರಾಜ್ಯಗಳು ಅರಣ್ಯ ಭೂಮಿ ಒತ್ತುವರಿ ಮಾಹಿತಿ ಸಲ್ಲಿಸಬೇಕಿದೆ ಎಂದು ಹೇಳಿದೆ. 2024ರ ಮಾರ್ಚ್‌ವರೆಗಿನ ಅಂಕಿ ಅಂಶಗಳ ಪ್ರಕಾರ 5460.9 ಕಿ.ಮೀ ಅರಣ್ಯ ಭೂಮಿ ಒತ್ತುವರಿಯೊಂದಿಗೆ ಮಧ್ಯಪ್ರದೇಶ ಮೊದಲ…

Read More

ಬೆಂಗಳೂರು : IPL ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡ ಬೆಂಗಳೂರು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೌದು ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ…

Read More