Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ವನ್ಯಜೀವಿ ರಾಯಭಾರಿ ಹುದ್ದೆಯಿಂದ ವಜಾ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದ್ದು, ನಮ್ಮ ಇಲಾಖೆಯಲ್ಲಿ ಯಾರು ರಾಯಭಾರಿಗಳಿಲ್ಲ ಎಂದು ತಿಳಿಸಿದರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ ಬಳಿಕ ನಮ್ಮ ರಾಜ್ಯದ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ವಿಚಾರವಾಗಿ ಮಾತನಾಡಿದ ಅವರು, ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ.ದಸರಾ ಆನೆಗಳು ನಮ್ಮ ಅಸ್ಮಿತೆ. ಇತರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇನ್ನೂ ರಾಜ್ಯದಲ್ಲಿ ಇತ್ತೀಚಿಗೆ ವಿದ್ಯುತ್ ಸ್ಪರ್ಶಸಿ ಆನೆಗಳ ದುರಂತ ಸಾವು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾಯುತ್ತಿರುವುದು ದುಃಖದ ಸಂಗತಿ. ಆನೆಗಳ ಸಾವಿನ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ…
ಉತ್ತರಾಖಂಡ : ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 26 ಜನರಿದ್ದ ಟೆಂಪೋ ಟ್ರಾವೆಲರ್ ಒಂದು ಅಲಕನಂದ ನದಿಗೆ ಉರುಳಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 14 ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಖಾಂಡಿನ ರುದ್ರಪ್ರಯಾಗದ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಅಲಕನಂದ ನದಿಗೆ ಟಿಟಿ ಉರುಳಿ ಬಿದ್ದು 14 ಪ್ರಯಾಣಿಕರ ಸಾವನ್ನಾಪ್ಪಿದ್ದರೆ. ಉತ್ತರಖಾಂಡಿನ ರುದ್ರ ಪ್ರಯಾಗದಲ್ಲಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ 14 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟೆಂಪೋ ಟ್ರಾವೆಲರ್ ನಲ್ಲಿ 26ಪ್ರಯಾಣಿಕರು ಎಂದು ತಿಳಿದುಬಂದಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಬಂಧಿತ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ನಂತರ ನ್ಯಾಯಾಧೀಶರು, 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭವಾದ ನಂತರ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ ಎಂದು ಕೇಳಿದಾಗ ಎಲ್ಲರೂ ಇಲ್ಲ ಎಂದು ತಿಳಿಸಿದರು. ನ್ಯಾಯಾಧೀಶರು, ಪೊಲೀಸರು ತೊಂದರೆ ಕೊಟ್ಟಿದ್ದಾರಾ ಎಂದು ನಟ ದರ್ಶನ್ ಹಾಗೂ ಪವಿತ್ರ ಗೌಡಗೆ ಪ್ರಶ್ನಿಸಿದ್ದಾರೆ. ಈ ವೇಳೆ ಎಸ್ ಪಿ ಪಿ ಸ್ಥಳ ಮಹಜರು ಹಾಗೂ ವಾಹನ ಸೀಸ್ ಮಾಡಿರೋ ಬಗ್ಗೆ ಮಾಹಿತಿ ನೀಡಿದರು. ಆರೋಪಿಗಳ ಬಳಿ ಇದ್ದ 10 ಮೊಬೈಲ್ ಗಳನ್ನು ಮಾಡಲಾಗಿದೆ. ಆರೋಪಿಗಳ ಮೊಬೈಲ್ ರಿಟ್ರಿವ್ ಮಾಡಬೇಕಿದೆ. ಆರೋಪಿಗಳಿಂದ 30 ಲಕ್ಷ ಹಣವನ್ನು…
ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ವಿಚಾರವಾಗಿ ಆರ್.ಅಶೋಕ್ ಮಾತನಾಡಿದ್ದು, ಯಡಿಯೂರಪ್ಪ ವಿರುದ್ದ ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಆದರೆ ಇದೀಗ ಅವರ ಪರವಾಗಿ ಹೈಕೋರ್ಟ್ ಸೂಕ್ತ ಆದೇಶ ಕೊಟ್ಟಿದೆ. ಆದರೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವುದು ಪಕ್ಕಾ ದ್ವೇಷದ ರಾಜಕಾರಣ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಹೇಳಿದ್ದಾರೆ ರಾಹುಲ್ ಗಾಂಧಿ ಮೇಕೆ ಕೇಸ್ ಹಾಕ್ತೀರಾ ಅಂತಾ. ಆಗ ಸ್ಪಷ್ಟವಾಗಿ ಗೊತ್ತಾಯಿತು ಅಲ್ವಾ? ಯಾರು ದ್ವೇಷದ ರಾಜಕಾರಣ ಮಾಡಿದ್ದಾರೆ ಎಂಬುವುದು. ಗೃಹ ಸಚಿವರೇ ಹೇಳಿದ್ದಾರೆ ಅವರು ಮಾನಸೀಕ ಅಸ್ವಸ್ಥತೆ ಎಂದು. 50 ಕೇಸ್ ಐಪಿಎಸ್ ಐಎಎಸ್ ಅಧಿಕಾರಿಗಳ ಮೇಲೆ ಕೇಸ್ ಹಾಕಿದ್ದಾರೆ ಎಂದು. ಹೀಗಾಗಿ ಸರ್ಕಾರದ ನಡೆಯನ್ನ ನಾನು ಖಂಡಿಸುತ್ತೇನೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟರ್ಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ಕಾಣೆಯ ಪೊಲೀಸರು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಬಂದಿತ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇದಕ್ಕೂ ಮೊದಲು ನಟ ದರ್ಶನ್ ಮತ್ತು ಗ್ಯಾಂಗ್ ನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಾಯಿತು. ನಂತರ ಪರಿಕತ್ ಭಾಷಣ ನಂತರ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಈ ಹಿಂದೆ ಕೋರ್ಟ್ ಆದೇಶ ಹೊರಡಿಸಿತು.ಇದೀಗ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ.ಇನ್ನೇನು ಕೆಲವೇ ಕ್ಷಣಗಳಲ್ಲಿ ನಟ ದರ್ಶನ್ ಗೆ ಜೈಲ ಅಥವಾ ಬೇಲಾ ಎಂಬುದರ ಕುರಿತು ತೀರ್ಪು ಹೊರ ಬೀಳಲಿದೆ .
ಬೆಂಗಳೂರು : 3ನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರವು ತಪ್ಪಾಗಿ ರಚನೆಯಾಗಿದ್ದು, ಶೀಘ್ರದಲ್ಲೇ ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಾಗಿ ಎನ್ಡಿಎ ಸರ್ಕಾರ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಪ್ರಮಾದದಿಂದ ಎನ್ಡಿಎ ಸರಕಾರ ರಚನೆಯಾಗಿದ್ದು, ಅದು ಯಾವಾಗ ಬೇಕಾದರೂ ಪತನವಾಗಬಹುದು ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ತನ್ನ ಮೈತ್ರಿ ಪಕ್ಷಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂಬ ಊಹಾಪೋಹದ ಕೆಲವು ದಿನಗಳ ನಂತರ ಅವರ ಈ ಹೇಳಿಕೆ ಹೊರಬಿದ್ದಿದೆ.ಹಾಗಾಗಿ ನರೇಂದ್ರ ಮೋದಿಯವರ ಬಹುಮತವಿಲ್ಲದ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಖರ್ಗೆ ಭವಿಷ್ಯ ನುಡಿದಿದ್ದಾರೆ. https://twitter.com/shaandelhite/status/1801858732080644485?t=0bEbAiYWAhOFL0rjsG9INg&s=19
ಬೆಂಗಳೂರು : ಅಕ್ರಮ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಬರ್ಬರ ಕೊಲೆಯಾಗಿರುವ ಘಟನೆ ಬೆಂಗಳೂರಿನ ಬಾಗಲಕೋಟೆಯಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೊದಲನೇ ಪ್ರಕರಣದಲ್ಲಿ ಬಾಗಲಕುಂಟೆಯಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿದ್ದಾನೆ. ಜ್ಯೋತಿ (55) ಕೊಲೆಯಾಗಿರುವ ಮಹಿಳೆ ಎಂದು ತಿಳಿದುಬಂದಿದೆ. ನಂತರ ಜ್ಯೋತಿ ಪತಿ ಅಶ್ವಥ್ ನಾರಾಯಣ ನೇಣಿಗೆ ಶರಣಾಗಿದ್ದಾನೆ. ಜೂನ್ 10 ರಂದು ನಡೆದಿದ್ದ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಆದ್ದರಿಂದ ಜ್ಯೋತಿ ಹಾಗೂ ಪತಿ ಅಶ್ವಥ್ ಮೃತ ದೇಹ ಇದೀಗ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೂ ಮತ್ತೊಂದು ಪ್ರಕರಣದಲ್ಲಿ ಪತ್ನಿಯಿಂದಲೇ ಪತಿಯ ಕೊಲೆಯಾಗಿದೆ. ಬಾಗಲಕುಂಟೆಯ ವಿನಾಯಕ ನಗರದ ಮನೆಯೊಂದರಲ್ಲಿ ಪತ್ನಿಯಿಂದ ಪತಿಯ ಹತ್ಯೆ ಮಾಡಲಾಗಿದೆ. ಅಕ್ರಮ ಸಂಬಂಧ ಕಲ್ಪಿಸಿ ಗಲಾಟೆ ವೇಳೆ ರಾಮಾಂಜಿನಪ್ಪ (30) ಕೊಲೆಯಾಗಿದ್ದಾನೆ ಎಂದು ತಿಳಿದುಬಂದಿದೆ ಚಾಕುವಿನಿಂದ ಇರಿದು ಪತ್ನಿ ಪ್ರೇಮ (27) ಕೊಲೆಗದಿದ್ದು ಸದ್ಯಪೋಲಿಸಲು ಆಕೆಯನ್ನು ಬಂಧಿಸಿದ್ದಾರೆ ಬಾಗಲಕುಂಟೆ ಠಾಣೆಯಲ್ಲಿ ಎರಡು ಪ್ರತ್ಯೇಕ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. ಈ ವೇಳೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯ ಮುಂದೆ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದು ಅವರ ಮೇಲೆ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚಿನ ತನಿಖೆಗಾಗಿ ಪೊಲೀಸರು ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮತ್ತಷ್ಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಂದು ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಟ ದರ್ಶನ್ ಸೇರಿದಂತೆ ಎಲ್ಲಾ…
ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಇದುವರೆಗೆ ಒಟ್ಟು 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇಂದು ಫಿಲಂ ಚೇಂಬರ್ನ ಪದಾಧಿಕಾರಿಗಳು ಸೇರಿ ಚಿತ್ರದುರ್ಗದ ರೇಣುಕಾ ಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾತನಾಡಿದ ಫಿಲಂ ಚೇಂಬರ್ ನ ಅಧ್ಯಕ್ಷ ಎನ್ಎಂ ಸುರೇಶ್ ಅವರು ಚಿತ್ರರಂಗದಿಂದ ದರ್ಶನ್ ಫ್ಯಾನ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲು ಆಗಲ್ಲ ಎಂದು ತಿಳಿಸಿದರು. ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಕುಟುಂಬದ ಭೇಟಿ ಬಳಿಕ ಮಾತನಾಡಿದ ಅವರು, ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೆವು. ಬಹಳ ನೋವಾಗಿದೆ ಎಂದು ಚಿತ್ರದುರ್ಗದಲ್ಲಿ ಫಿಲಂ ಅಧ್ಯಕ್ಷ ಎಂ ಎನ್ ಸುರೇಶ್ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಎನ್ ಎಂ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಯಾರೇ ಮಾಡಿದರು ತಪ್ಪು ತಪ್ಪೇ. ವಾಣಿಜ್ಯ ಮಂಡಳಿ ತಪ್ಪುಗಳನ್ನು ಖಂಡಿಸುತ್ತದೆm ರೇಣುಕಾಸ್ವಾಮಿ ತಂದೆ ತಾಯಿ ಕಣ್ಣೀರು ಹಾಕಿದ್ದು…
ಉತ್ತರಖಂಡ : ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 23 ಜನರಿದ್ದ ಟೆಂಪೋ ಟ್ರಾವೆಲರ್ ಒಂದು ಅಲಕನಂದ ನದಿಗೆ ಹೂಳಿ ಬಿದ್ದು ಸುಮಾರು 10 ಜನರು ಸಾವನ್ನಪ್ಪಿದ್ದು 7 ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಖಾಂಡಿನ ರುದ್ರಪ್ರಯಾಗದ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಲಕನಂದ ನದಿಗೆ ಟಿಟಿ ಉರುಳಿ ಬಿದ್ದು 10 ಪ್ರಯಾಣಿಕರ ಸಾವನ್ನಾಪ್ಪಿದ್ದರೆ. ಉತ್ತರಖಾಂಡಿನ ರುದ್ರ ಪ್ರಯಾಗದಲ್ಲಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ 7 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟೆಂಪೋ ಟ್ರಾವೆಲರ್ ನಲ್ಲಿ 23 ಪ್ರಯಾಣಿಕರು ಎಂದು ತಿಳಿದುಬಂದಿದೆ. ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ರುದ್ರಪ್ರಯಾಗ್ ನಗರದಿಂದ ಐದು ಕಿಲೋಮೀಟರ್ ಮುಂದಿರುವ ಬದರೀನಾಥ್ ಹೆದ್ದಾರಿಯ ರಟೋಲಿ ಬಳಿ ಟೆಂಪೋ ಟ್ರಾವೆಲರ್ ಅಲಕನಂದಾ ನದಿಗೆ ಬಿದ್ದಿದೆ. ವಾಹನದಲ್ಲಿ 23 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಮಾಹಿತಿಯ ಮೇರೆಗೆ ಪೊಲೀಸ್ ಆಡಳಿತ, ಜಿಲ್ಲಾ…