Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಹಾಸನದಲ್ಲಿ ಸರಣಿ ಅಪಘಾತದಲ್ಲಿ ಪಲ್ಸರ್ ಬೈಕ್ ಗೆ BMW ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಬಿ ಎಂ ಡಬ್ಲ್ಯೂ ಕಾರು ಡಿಕ್ಕಿಯಾಗಿ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸಾವನ್ನಾಪ್ಪಿದ್ದಾರೆ. ಘಟನೆಯು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕತ್ತರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ದೇವೇಗೌಡ ನಗರದ ಬಿಎಸ್ ಅಜಿತ್ (30) ಹಾಗೂ ಮನು (26) ಸಾವನಪ್ಪಿರುವ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಕಾರು ಡಿಕ್ಕಿ ರಭಸಕ್ಕೆ ಬೈಕ್ ಸಮೇತ ಹಳ್ಳಕ್ಕೆ ಸವಾರರು ಹಾರಿ ಬಿದ್ದಿದ್ದಾರೆ. ಬೆಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ KA 06 HS 0727 ಪಲ್ಸರ್ ಬೈಕ್ ಎಂದು ಹೇಳಲಗುತ್ತಿದ್ದೂ, ನಂತರ ಕಿಯಾ ಕಾರು ಹಾಗೂ ಸರ್ಕಾರಿ ಬಸ್ಸಿಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದಿದೆ. ಸರಣಿ ಅಪಘಾತದ ಬಳಿಕ, ಪಕ್ಕದಲ್ಲಿರುವ ಕೆರೆಗೆ ಹಾರಿ ಬಿದ್ದಿದೆ.ಘಟನೆ ಕುರಿತಂತೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ…
ಹಾವೇರಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡ ಬಳಿಕ ನೂತನ ಸಂಸತ್ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 17ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು. ಶಿಗ್ಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾನು ಜೂ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾವಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದರೆ, ಬಿಜೆಪಿಯಿಂದ ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ. ಹೈಕಮಾಂಡ್ನಿಂದ ಈ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಪಕ್ಷ ಟಿಕೇಟ್ ನೀಡಲಿದೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಖಂಡಿತವಾಗಿ ಶಿಗ್ಗಾವಿ ಉಪಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ 100 ದಿನದ ಕಾರ್ಯಕ್ರಮ…
ದಕ್ಷಿಣಕನ್ನಡ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಆರೋಪಿ ಶಶಿರಾಜ್ ಶೆಟ್ಟಿಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಅದರೊಂದಿಗೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಅಲ್ಲದೆ ಇತ್ತೀಚಿಗೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ PSI ಗೆ ಧಮ್ಕಿ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೂ ಕೂಡ ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ಬಂಧಿಸಿದ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ…
ಬೆಂಗಳೂರು : ಇಂಜಿನಿಯರ್ ಪದವಿಧರರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ನೆಲಮಂಗಲದ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ ಗನ್ ಮ್ಯಾನ್ ಒಬ್ಬ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಹೌದು ಸುಮಾರು 10 ವರ್ಷಗಳ ಕಾಲ ನೆಲಮಂಗಲದ ಮಾಜಿ ಶಾಸಕ ಡಾ. ಶ್ರೀನಿವಾಸ್ ಗೌಡ ಗನ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸಿದ್ದ ವೆಂಕಟೇಶ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಹಣಪೀಕಿದ ಆರೋಪದ ಹಿನ್ನಲೆ ದಾಬಸ್ ಪೇಟೆ ನಿವಾಸಿ ಸುನಂದಾ ಅವರು ಠಾಣೆಗೆ ದೂರು ದಾಖಲಿಸಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ತನ್ನ ಎರಡು ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಬರೋಬ್ಬರಿ 16.50 ಲಕ್ಷ ಹಣ ಪೀಕಿರುವ ಗನ್ ಮ್ಯಾನ್, ಇತ್ತ ಕೆಲಸವೂ ಕೊಡಿಸದೇ, ಹಣವೂ ನೀಡದೆ ಸತಾಯಿಸುತ್ತಿದ್ದ. ಡಿಸೆಂಬರ್ 2022 ರಿಂದಲೂ ಕೆಲಸ ಕೊಡಿಸೊದಾಗಿ ನಂಬಿಸಿದ್ದ ವೆಂಕಟೇಶ್, ಪೋನ್ ಪೇ ಮೂಲಕ ಹಾಗೂ ನಗದು ರೂಪದಲ್ಲಿ 25 ಬಾರಿ ಹಣ ಪಡೆದಿದ್ದಾನೆ. ಈ ಹಿನ್ನಲೆ ನೆಲಮಂಗಲ ಟೌನ್ ಪೊಲೀಸ್…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಒಂದು ಪ್ರಕರಣದಲ್ಲಿ ನನಗೆ ಯಾವ ಒತ್ತಡವು ಕೂಡ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ಒತ್ತಡ ಆರೋಪದ ವಿಚಾರವಾಗಿ ಮಾತನಾಡಿದ ಅವರು, ನನ್ನೊಂದಿಗೆ ಯಾರು ಮಾತಾಡಿಲ್ಲ. ನನಗೆ ಯಾವ ಒತ್ತಡ ಕೂಡ ಇಲ್ಲ. ಘಟನೆ ನಡೆದ 24 ಗಂಟೆ ಆದಮೇಲೆ ನನಗೆ ಈ ವಿಚಾರ ಗೊತ್ತಾಗಿದೆ. ವಿಷಯ ತಿಳಿದು ನಾನು ಮಾತನಾಡುತ್ತೇನೆ. ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆತನನ್ನು ಕಿಡ್ನ್ಯಾಪ್ ಮಾಡಿದ ಸ್ಥಳ ಮಹಜರಿಗಾಗಿ ಒಂದು ತಂಡ ಚಿತ್ರದುರ್ಗಕ್ಕೆ ತೆರಳಿದೆ ಎಂದು ತಿಳಿದುಬಂದಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ, ಜಗದೀಶ್, ಅನು,ರಾಜು ಹಾಗೂ ರವಿಯಿಂದ ರೇಣುಕಾ ಸ್ವಾಮಿಯನ್ನು ಕಿಡ್ನಾಪ್ ಮಾಡಲಾಗಿತ್ತು. ಚಿತ್ರದುರ್ಗ ಮೂಲದ ಜಗದೀಶ್, ಅನು, ರವಿ ಹಾಗೂ ರಾಜು ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ಚಳ್ಳಕೆರೆ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಆಟೋದಲ್ಲಿ ಚಿತ್ರದುರ್ಗದ ಹೊಲ ಹೊರಗೆ ಕರೆದು ಹೋಗಿದ್ದರು ಎಂದು ತಿಳಿದುಬಂದಿದೆ. ಚಿತ್ರದುರ್ಗದ ಹೊರವಲಯದಲ್ಲಿ ಆಟೋದಿಂದ ನಂತರ ರೇಣುಕಾಸ್ವಾಮಿಯನ್ನು ಕಾರಿಗೆ ಶಿಫ್ಟ್ ಮಾಡಿದ್ದಾರೆ. ಬಾಡಿಗೆಗೆ ಎಂದು ಹೇಳಿ ಕಾರು ಚಾಲಕ ರವಿಯನ್ನು ಕರೆಸಿಕೊಂಡಿದ್ದರು. ದರ್ಶನ್ ಭೇಟಿ ಮಾಡಿಸುತ್ತೇನೆ ಎಂದು ರಘು ರೇಣುಕಾ ಸ್ವಾಮಿಗೆ ನಂಬಿಸಿದ್ದ ಎನ್ನಲಾಗಿದೆ. ದರ್ಶನ್ ಭೇಟಿ ಮಾಡಲು ರೇಣುಕಾ ಸ್ವಾಮಿ ಖುಷಿಯಿಂದ ಹೋಗಿದ್ದ.ಸದ್ಯ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದು ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ.
ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಡ್ಯದಲ್ಲಿ ರೈತರು ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ದರ್ಶನ್ ಹಾಗೂ ಆತನ ಗ್ಯಾಂಗನ್ನು ಗಲ್ಲು ಶಿಕ್ಷೆಗೆ ಒಳಪಡಿಸಿ ಎಂದು ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ರೈತರು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ದರ್ಶನ್ ವಿರುದ್ಧ ಮಂಡ್ಯದಲ್ಲಿ ಸಿಡಿದೆದ್ದ ರೈತರು, ಪವಿತ್ರ ಗೌಡ ಹೆಣ್ಣು ಕುಲಕ್ಕೆ ಅವಮಾನ. ಪವಿತ್ರ ಎಂದರೆ ಅದುಕ್ಕೊಂದು ಒಳ್ಳೆಯದಂತಹ ಅರ್ಥ ಇದೆ ಅಂತ ಹೆಸರು ಇಟ್ಟುಕೊಂಡು ಇಂತಹ ನೀತಿ ಕೆಲಸ ಮಾಡಿದವರು ಇವಳು ಹೆಣ್ಣು ಕುಲಕ್ಕೆ ಅವಮಾನ ಅಯೋಗ್ಯ ದರ್ಶನ್ ಪರದೆ ಮೇಲೆ ಬರಬಾರದು ಎಂದು ಪ್ರತಿಭಟನಾ ನಿರುದ ರೈತರು ಕಿಡಿ ಕಾರ್ಯಕರ್ತರು. ಒಬ್ಬ ರೈತನ ಮಗನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ತಂದು ಕೊಲೆ ಮಾಡುತ್ತಾರೆ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಈಗಾಗಲೇ ಬಂದಿಸಲಾಗಿದೆ ಹೀಗಾಗಿ ನಟ ದರ್ಶನ್ ಅವರನ್ನು ಸ್ಯಾಂಡಲ್ವುಡ್ ನಿಂದ ಬ್ಯಾನ್ ಮಾಡುವಂತೆ ಈಗಾಗಲೇ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ಕೂಡ ಆಗ್ರಹಿಸಿದ್ದಾರೆ ಹಾಗಾಗಿ ಇದೀಗ ಫಿಲಂ ಚೇಂಬರ್ ನಲ್ಲಿದ್ದು ದರ್ಶನ್ ಭವಿಷ್ಯ ಈ ಒಂದು ಸಭೆಯಲ್ಲಿ ನಿರ್ಧಾರವಾಗಲಿದೆ. ಈಗಾಗಲೇ ಕೊಲೆ ಕೇಸಿನಲ್ಲಿ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಕ್ಷಣಗಳಲ್ಲಿ ಫಿಲಂ ಚೇಂಬರ್ ಸಭೆ ನಡೆಯಲಿದ್ದು, ಅಧ್ಯಕ್ಷ ಎಂ ಎನ್ ಸುರೇಶ್ ನೇತ್ರತ್ವದಲ್ಲಿ ಮಹತ್ವದ ಸಭೆ ನಡೆಯುತ್ತದೆ. ಸ್ಯಾಂಡಲ್ ವುಡ್ನಿಂದ ನಟ ದರ್ಶನ್ ಅವರನ್ನು ಬ್ಯಾನ್ ಮಾಡ್ತಾರಾ ಎಂಬ ಕುರಿತು ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಸ್ಯಾಂಡಲ್ ವುಡ್ನಿಂದ ದರ್ಶನ್ ಬ್ಯಾನಿಗೆ ಆಗ್ರಹ ಕೇಳಿ ಬರುತ್ತಿದೆ. ಸಂಘಟನೆಗಳು ಸಾರ್ವಜನಿಕರಿಂದ ಆಗ್ರಹ ಹಿನ್ನೆಲೆಯಲ್ಲಿ ಇದೀಗ ಕ್ರಮ ಜರುಗಿಸುವ ಸಾಧ್ಯತೆ ಇದೆ. ದರ್ಶನ್ ಬ್ಯಾನ್ ಬಗ್ಗೆ ಸಮಿತಿಯ ಸದಸ್ಯರು ಚರ್ಚಿಸಲಿದ್ದಾರೆ.50 ಸದಸ್ಯರ ಬದಲು 27 ಮಂದಿ ಅಷ್ಟೇ…
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕಳ್ಳತನಕ್ಕೆ ಹೋಗಿದ್ದಾಗ ಇಬ್ಬರೂ ಕಳ್ಳರ ಮೇಲೆ ಕೂಲಿಕಾರ್ಮಿಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ಘಟನೆಯಲ್ಲಿ ಓರ್ವ ಕಳ್ಳ ಸಾವನಪ್ಪಿದ್ದು ಮತ್ತು ಅವರ ಮನೆಗೆ ಗಂಭೀರವಾದಂತಹ ಗಾಯವಾಗಿರುವ ಘಟನೆ ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಹೌದು ಇಬ್ಬರು ಕಳ್ಳರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಕಬ್ಬಿಣ ಕಳ್ಳತನಕ್ಕೆ ಹೋಗಿದ್ದಾಗ ಕಳ್ಳರ ಮೇಲೆ ಹಲ್ಲೆ ನಡೆಸಲಾಗಿದೆ ಕಟ್ಟಡದಲ್ಲಿದ್ದ ಕಬ್ಬಿಣ ಕವಿಯಲು ಹೋಗಿದ್ದ ಸಲ್ಮಾನ್ ಹಾಗೂ ಸಲೀಂ ಎಂಬ ಕಳ್ಳರು ಎಂದು ತಿಳಿದುಬಂದಿದೆ. ಕೂಲಿ ಕಾರ್ಮಿಕರ ಹಲ್ಲೆಯಿಂದ ಸಲ್ಮಾನ್ (25) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಸಲಿಂ ಸ್ಥಿತಿ ಕೂಡ ಗಂಭೀರವಾಗಿದ್ದು ತಕ್ಷಣ ಅದನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.