Author: kannadanewsnow05

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ಮಾಡಿ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪರ್ವೇಜ್ ಪಠಾಣ್ ಎಂದು ಗುರುತಿಸಲಾಗಿದ್ದು, ಕಳೆದ ಜನವರಿ 4ರಂದು ಕಾಲೇಜಿಗೆ ಬಿಡುವುದಾಗಿ ಅಪ್ರಾಪ್ತ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದಾನೆ. ಧಾರವಾಡದ ಕ್ಲಾಸಿಕ್ ಇಂಟರ್ ನ್ಯಾಷನಲ್ ಕಾಲೇಜಿನ ಹಿಂದೆ ಇರುವ ಅಜ್ಞಾತ ಸ್ಥಳಕ್ಕೆ ಬಾಲಕಿಯನ್ನ ಒತ್ತಾಯ ಪೂರ್ವಕವಾಗಿ ಬೈಕ್ ಮೇಲೆ ಕರೆದುಕ್ಕೋಂಡು ಹೋಗಿದ್ದಾನೆ. ಈ ವೇಳೆ ಬಾಲಕಿಯ ದೇಹದ ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟಿ, ಅವಳಿಗೆ ಮೊಬೈಲ್ ನಲ್ಲಿ ವಿಡಿಯೋ ಹಾಗೂ ಅಶ್ಲೀಲ ಫೋಟೋ ತೋರಿಸಿ ಪ್ರಚೋದನೆ ಆಗುವಂತೆ ನಡೆದುಕೊಂಡಿದ್ದಾನೆ. ಈ ವೇಳೆ ಅವಳು ಒಪ್ಪದೇ ಇದ್ದಾಗ ಆಕೆ ಮೇಲೆ ಹಲ್ಲೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ…

Read More

ವಿಜಯಪುರ : ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇತ್ತೀಚಿಗೆ ಕಲಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಪ್ರತಿಭಟನೆ ನಡೆಯಿತು. ಆದರೆ ಈ ಒಂದು ಪ್ರತಿಭಟನೆಯಲ್ಲಿ ಬಿಜೆಪಿ ಬಿವೈ ವಿಜಯೇಂದ್ರ ಭಾಗಿಯಾಗಿರಲಿಲ್ಲ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿವೈ ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ ನಡೆಯಿತು. ಆ ಹೋರಾಟಕ್ಕೆ ವಿಜಯೇಂದ್ರ ಯಾಕೆ ಬರಲಿಲ್ಲ? ಯಾಕೆ ಅಂದ್ರೆ ವಿಜಯೇಂದ್ರಗೆ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ್ದರು. ನಿಮ್ಮ ತಂದೆಯವರದು ಎಲ್ಲಾ ತೆಗಿತೀನಿ ಅಂತ ಪ್ರಿಯಾಂಕ್ ಖರ್ಗೆ ವಿಜಯೇಂದ್ರಗೆ ಬೆದರಿಕೆ ಹಾಕಿದ್ದರು. ಹೀಗಾಗಿ ವಿಜಯೇಂದ್ರ ಕಲಬುರ್ಗಿ ಹೋರಾಟಕ್ಕೆ ಬರಲಿಲ್ಲ. ಹೋರಾಟಗೆ ಯಾಕೆ ಬರಲಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಬೇಕು ಎಂದು ವಿಜೇಂದ್ರ ವಿರುದ್ಧ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ಸಿಟಿ ರವಿಗೆ…

Read More

ಬೆಂಗಳೂರು : ಕಳೆದ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಾನು ಮಹಿಳಾ ನ್ಯಾಯಾಧೀಶರ ಮುಂದೆ 164 ಹೇಳಿಕೆಯನ್ನು ದಾಖಲಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಹೌದು ಬಿಜೆಪಿ ನಾಯಕ ಸಿಟಿ ರವಿ ತಮ್ಮನ್ನು ಅವಾಚ್ಯವಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿಕೆ ದಾಖಲಿಸಲು ಸಿಐಡಿ ಮುಂದಾಗಿದೆ. ಎರಡು ದಿನಗಳ ಹಿಂದೆ ಸಿಐಡಿ ಸಿಟಿ ರವಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಸಿಐಡಿ ಲಕ್ಷ್ಮಿ ಹೆಬ್ಬಾಳಕರ್‌ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಲು ಮುಂದಾಗಿದೆ.ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ‌ ಎಸಿಎಂಜೆ 4 ರ ನ್ಯಾಯಾಲಯದಲ್ಲಿ 164 ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು. ಆದರೆ ಅಲ್ಲಿ ಪುರುಷ ನ್ಯಾಯಾಧೀಶರಿರುವ ಕಾರಣ ಹೆಬ್ಬಾಳ್ಕರ್‌ ಮಹಿಳಾ ನ್ಯಾಯಾಧೀಶರ ಮುಂದೆ ಮಾತ್ರ 164 ಹೇಳಿಕೆ ನೀಡುತ್ತೇನೆ ಎಂದಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಿಸಿದ್ದ ಘಟನೆ ನಡೆದಿದ್ದು ಈ ಕುರಿತಾಗಿ ಕಲ್ಬುರ್ಗಿ ನಗರದ ಚೌಕ್ ಪೊಲೀಸ್ ಠಾಣೆಗೆ ಕೆಲವು ಮುಸ್ಲಿ ಮುಖಂಡರೇ ಈ ಕುರಿತು ದೂರು ನೀಡಿರುವ ಘಟನೆ ನಡೆದಿದೆ. ಹೌದು ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜ ಇಟ್ಟು ಅಪಮಾನ ಮಾಡಿದ ಆರೋಪ ಇದೀಗ ಕೇಳಿಬಂದಿದ್ದು, ಈ ಕುರಿತು ಮುಸ್ಲಿಂ ಮುಖಂಡರೇ ಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಬುರ್ಗಿ ಶೇಕ್ ರೋಜಾ ದರ್ಗಾದಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಶೇಖ್ ರೋಜಾ ದರ್ಗಾದಲ್ಲಿ ಸಾಮೂಹಿಕ ವಿವಾಹ ವೇಳೆ ಧ್ವಜಾರೋಹಣ ನೆರವೇರಿಸಲಾಗಿತ್ತು. ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜ ಇಟ್ಟು ಅವಮಾನ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚೌಕ ಪೊಲೀಸ್ ಠಾಣೆಗೆ ಕೆಲವು ಮುಖಂಡರಿಂದಲೇ ದೂರು ಸಲ್ಲಿಕೆಯಾಗಿತ್ತು.

Read More

ಕೊಪ್ಪಳ : ಇದು ಕರ್ನಾಟಕ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಭಕ್ತರು ಸೇರಿ ನಡೆಸುವಂತಹ ಅತೀ ದೊಡ್ಡ ಜಾತ್ರೆ. ಇದು ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿದೆ. ಅದುವೇ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ. ಹೌದು ಈಗಾಗಲೇ ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ. ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ. ಸ್ವತಃ ಶ್ರೀಗಳೆ ಮುಂದೆ ನಿಂತು ಎಲ್ಲಾ ಸಿದ್ಧತಾ ಕಾರ್ಯವನ್ನ ನೋಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ ನಡೆಯುವ ಕೊಪ್ಪಳದ ಸುಪ್ರಸಿದ್ದ ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು, ದಕ್ಷಿಣ ಭಾರತದ ಕುಂಬಮೇಳ ಅಂತಲೇ ಕರೆಯುತ್ತಾರೆ. ಈ ವರ್ಷ ಜನವರಿ 15 ರಂದು ಗವಿಮಠದ ರಥೋತ್ಸವ ನಡೆಯುತ್ತದೆ. ಜನವರಿ 12 ರಿಂದ ಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ. ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ.ಇನ್ನು ಮತ್ತೊಂದು ಮಾದರಿ ಹೆಜ್ಜೆ ಇಟ್ಟಿರೋ ಶ್ರೀಗಳು ವಿಶೇಷ ಚೇತನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ವಿಶೇಷ ಚೇತನರಿಗೆ…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಕಾರಿ ರಸಾಯನಿಕ ಸೋರಿಕೆಯಾಗಿ, ಸುಮಾರು 12ಕ್ಕೂ ಹೆಚ್ಚು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ನಡೆದಿದೆ ಹೌದು ಕಾರ್ಖಾನೆಯಲ್ಲಿ ರಸಾಯನಿಕ ಸೋರಿಕೆಯಿಂದ 11ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಆದಿತ್ಯ ಬಿರ್ಲಾ ಗ್ರೂಪ್ನ ಗ್ರಾಸಿಮ್ ಇಂಡಸ್ಟ್ರಿಯಲ್ಲಿ ಈ ಒಂದು ಘಟನೆ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಇಂಡಸ್ಟ್ರೀಸ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ವಸ್ಥ ಕಾರ್ಮಿಕರಿಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಂ ಇಂಡಸ್ಟ್ರೀಸ್ ನಲ್ಲಿ ಘಟನೆ ನಡೆದಿದ್ದು,  ಕೆಲ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದಾಗಿ, ಬಿಣಗಾ ಗ್ರಾಮದ ನಿವಾಸಿ ನಾಗರಾಜ್ ಎಂಬವರು ಮೃತಪಟ್ಟಿದ್ದರು. ಸದ್ಯ ಡಿವೈಎಸ್ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಡಿವೈಎಸ್ಪಿ ಗಿರೀಶ್ ಕಾರ್ಮಿಕರಿಂದ ಘಟನೆ…

Read More

ಬೆಂಗಳೂರು : ಕನ್ನಡದ ಖ್ಯಾತ ರ‍್ಯಾಪರ್ ಚಂದನ್ ಶೆಟ್ಟಿ ಅವರು ಕಾಟನ್ ಕ್ಯಾಂಡಿ ಸಾಂಗ್ ನಲ್ಲಿ ಈ ಹಿಂದೆ ಇದ್ದಂತಹ ಇನ್ನೊಂದು ಹಾಡಿನ ಟ್ಯೂನ್ ಕಾಪಿ ಮಾಡಿದ್ದಾರೆ ಎಂದು ರ‍್ಯಾಪರ್ ಯುವರಾಜ್ ಚಂದನ್ ಶೆಟ್ಟಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.ಇದೀಗ ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಯುವರಾಜ್ ತಿಳಿಸಿದ್ದಾರೆ. ಹೌದು ಕಾಟನ್ ಕ್ಯಾಂಡಿ ಹಾಡಿನಲ್ಲಿ ಟ್ಯೂನ್ ಬಳಸಿರುವ ಆರೋಪ ಕೇಳಿ ಬಂದಿದೆ.ಆರು ವರ್ಷದ ಹಿಂದೆಯೇ ಯುವರಾಜ್ ‘ವೈಬುಲ್’ ಸಾಂಗ್ ಕಂಪೋಸ್ ಮಾಡಿದ್ದರು. ಯುವರಾಜ್ ಮಾಡಿದ ಸಾಂಗ್ ಅನ್ನು ಚಂದನ್ ಶೆಟ್ಟಿ ಹಾಡಿನ ಟ್ಯೂನ್ ಕದ್ದ ಆರೋಪ ಕೇಳಿ ಬಂದಿದೆ. ಚಂದನ್ ಶೆಟ್ಟಿ ವಿರುದ್ಧ ಕಾಟನ್ ಕ್ಯಾಂಡಿ ಟ್ಯೂನ್ ಕದ್ದಿರುವ ಆರೋಪ ಕೇಳಿ ಬಂದಿದೆ. ನನ್ನ ಸಾಂಗ್ ಅನ್ನು ಪಲ್ಲವಿ ಹಾಗೂ ಚರಣ್ ಕಾಪಿ ಮಾಡಿದ್ದರು. ನನ್ನ ಹಾಡು ಚಂದನ್ ಶೆಟ್ಟಿ ಮಾಡಿರುವ ಹಾಡನ್ನು ಒಮ್ಮೆ ನೋಡಿ. ಚಂದನ್ ಶೆಟ್ಟಿ ಕೇಳಿದರೆ ನಾನೇ ಬಿಟ್ಟುಕೊಡುತ್ತಿದ್ದೆ. ನಾನು ಬಡವ 12 ಲಕ್ಷ ರೂಪಾಯಿ…

Read More

ಮುಂಬೈ : ಸಾಮಾನ್ಯವಾಗಿ ಯಾವುದಾದರೂ ಸಭೆ ಸಮಾರಂಭಗಳಿಗೆ ಹೋಗಬೇಕಾದರೆ ಪರ್ಫ್ಯೂಮ್ ಬಳಸುವುದು ಸಹಜ. ಆದರೆ ಇಲ್ಲಿ ಪರ್ಫ್ಯೂಮ್ ಬಾಟಲ್ ಒಂದು ಸ್ಪೋಟಗೊಂಡ ಪರಿಣಾಮ ಒಂದೇ ಕುಟುಂಬದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮುಂಬೈನ ಹೊರವಲಯದ ನಾಲಾಸುಪಾರದಲ್ಲಿ ನಡೆದಿದೆ. ಹೌದು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನಾ ರೋಶಿನಿ ಅಪಾರ್ಟ್‌ಮೆಂಟ್ ಒಂದರ 112ನೇ ಮನೆಯಲ್ಲಿಈ ಘಟನೆ ನಡೆದಿದೆ. ಕುಟುಂಬ ಸದಸ್ಯರು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ 41 ವರ್ಷದ ಮಹಾವೀರ್ ವಾದರ್, 38 ವರ್ಷದ ಸುನೀತಾ ವಾದರ್ , ಮಕ್ಕಳಾದ 9 ವರ್ಷದ ಕುಮಾರ್ ಹರ್ಷವರ್ಧನ್ ವಾದರ್ ಹಾಗೂ 14 ವರ್ಷದ ಕುಮಾರಿ ಹರ್ಷದಾ ವಾದರ್ ಗಾಯಗೊಂಡಿದ್ದಾರೆ. ಸ್ಫೋಟದ ಸದ್ದು ಕೇಳಿ ಅಕ್ಕ ಪಕ್ಕದ ಮನೆಯವರು ಧಾವಿಸಿದ್ದಾರೆ. ಬಳಿಕ ಗಾಯಗೊಂಡಿದ್ದವರನ್ನು ಆಸ್ಪತ್ರೆ…

Read More

ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಅಯೋಮಯ ಸ್ಥಿತಿಗೆ ತಲುಪಿದೆ. ದೆಹಲಿ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ. ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಆಗುವ ಹಂತಕ್ಕೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಳ ಜಗಳದಿಂದ ಆಡಳಿತದ ಮೇಲೆ ಪರಿಣಾಮ ಬೀರಿದೆ. ಈ ಸರ್ಕಾರದಲ್ಲಿ ಅನೇಕ ಭ್ರಷ್ಟಾಚಾರ ಹಗರಣಗಳು ನಡೆಯುತ್ತಿವೆ. ಸರ್ಕಾರ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡಿದೆ. ಕೆಎಸ್ಆರ್ಟಿಸಿ ಅಂಗ ಸಂಸ್ಥೆಗಳು ಬಾಗಿಲು ಹಾಗೂ ಹಂತಕ್ಕೆ ಬಂದಿವೆ. ಅಲ್ಲದೆ ಕಲಬುರ್ಗಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆಯಾಗಿದೆ. ಬಸ್ ಅದರ ಏರಿಸಿ ಜನರ ಮೇಲೆ ಹೊರೆ ಹೊರೆಸಿದ್ದಾರೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಶತ್ರುಸಂಹಾರ ಮಾಡುತ್ತಾರೆ. ಹಾಗಾದರೆ ಅವರ ಪ್ರಕಾರ ಅವರ ಶತ್ರುಗಳು ಯಾರು? ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ ಎಲ್ಲರೂ ಪ್ರತಿಸ್ಪರ್ಧಿಗಳು. ಶತ್ರುಗಳು ಯಾರು ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಬೇಕು. ಸಿಎಂ ಸಿದ್ದರಾಮಯ್ಯನವರ, ಡಾ. ಜಿ ಪರಮೇಶ್ವರರಾ?…

Read More

ಬೆಂಗಳೂರು : ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಪ್ರಿಯಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇದರಿಂದ ಮನನೊಂದ ವಿವಾಹಿತೆ ಪ್ರಿಯತಮೆ ಒಬ್ಬಳು ಇಂದು ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತ ಹಳ್ಳಿಯಲ್ಲಿ ನಡೆದಿದೆ. ಹೌದು ಅಮೃತಹಳ್ಳಿಯ ಶ್ರೀರಾಮಪುರದಲ್ಲಿ ಪ್ರಿಯತಮೆ ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಆಕೆಯ ಪ್ರಿಯಕರ ಜಾನ್ಸನ್ (25) ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ದಿಲ್ಶಾದ್ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಿಲ್ಶಾದ್ ಈಗಾಗಲೇ ಮದುವೆಯಾಗಿತ್ತು. ಜಾನ್ಸನ್ಗೆ ಮದುವೆಯಾಗಿರಲಿಲ್ಲ. ಆದರೂ ಕೂಡ ಪರಸ್ಪರವಾಗಿ ಜಾನ್ಸನ್ ಹಾಗೂ ದಿಲ್ಶಾದ್ ಪ್ರೀತಿಸುತ್ತಿದ್ದರು. ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ರಾಜೇನಹಳ್ಳಿಯಲ್ಲಿ ನಿನ್ನೆ ಪ್ರಿಯಕರ ಜಾನ್ಸನ್ ನೇಣಿಗೆ ಶರಣಾಗಿದ್ದ. ಜಾನ್ಸನ್ ಸಾವಿನ ವಿಚಾರ ತಿಳಿದು ಇಂದು ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More