Author: kannadanewsnow05

ಬೆಂಗಳೂರು : ನಟ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಒಂದು ಪ್ರಕರಣಕ್ಕೆ ಗೃಹ ಇಲಾಖೆಯ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಾನಾಗಲಿ, ದರ್ಶನ್ ಅಗಲಿ ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಆಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಆಗುತ್ತದೆ. ನಾನಾಗಲಿ ದರ್ಶನಾಗಲಿ ಕಾನೂನು ಎಲ್ಲರಿಗೂ ಒಂದೇ. ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಹೇಳಲಾಗುತ್ತಿದ್ದು ಅದಕ್ಕೆ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ಅವರನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಅದು ತಪ್ಪು. ಈಗಾಗಲೇ ಆತನ ಪ್ರಾಣ ಹೋಗಿದೆ ಯಾರು ಏನು ಮಾಡೋಕೆ ಆಗುವುದಿಲ್ಲ. ಆದರೆ ಕಾನೂನು ಪ್ರಕಾರ ಏನು ತೆಗೆದುಕೊಳ್ಳಬೇಕು ಪೋಲಿಸ್ ಇಲಾಖೆ ತೆಗೆದುಕೊಳ್ಳುತ್ತದೆ. ನನಗೆ ಗೊತ್ತಿದ್ದಂಗೆ ಯಾರು ದರ್ಶನ್ ನನ್ನು ರಕ್ಷಿಸಲು ಪ್ರಯತ್ನ…

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳು ಕೊಲೆ ಮಾಡುವ ಸಂದರ್ಭದಲ್ಲಿ ಬಳಸಿದ್ದ ಎರಡು ಕಾರುಗಳನ್ನು ಸೀಸ್ ಮಾಡಿದ್ದಾರೆ ಒಂದು ಜೀಪ್ ಹಾಗೂ ಇನ್ನೊಂದು ಸ್ಕಾರ್ಪಿಯೋ ಕಾರ್ ಎಂದು ಹೇಳಲಾಗುತ್ತಿದೆ. ಆದರೆ ಸ್ಕಾರ್ಪಿಯೋ ಕಾರಿನಲ್ಲಿ ಒಂದು ಲೇಡೀಸ್ ಬ್ಯಾಗ್ ಸಿಕ್ಕಿದ್ದು ಅದು ಪವಿತ್ರ ಗೌಡದ್ದೆಯ ಎಂದು ತನಿಖೆಯ ವೇಳೆ ಬಯಲಾಗಬೇಕಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆಗೆ ಬಳಸಿದ ಕಾರುಗಳು ಇದೀಗ ಸೀಸ್ ಮಾಡಲಾಗಿದೆ. ಒಂದು ಕಪ್ಪು ಬಣ್ಣದ ಸ್ಕಾರ್ಪಿಯೋ ಹಾಗೂ ಕೆಂಪು ಬಣ್ಣದ ಥಾರ್ ಜೀಪ್ ಕಾರುಗಳನ್ನು ಪೊಲೀಸರು ಇದೀಗ ಸೀಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾ ಸ್ವಾಮಿ ಮೃತದೇಹವನ್ನು ಇದೆ ಕಾರಿನಲ್ಲಿ ಶಿಫ್ಟ್ ಮಾಡಿದ್ದರು. ಜೀಪ್ ಮತ್ತು ಸ್ಕಾರ್ಪಿಯೋ ಕಾರನ್ನು ಇದೀಗ ಪೊಲೀಸರು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆಂಪು ಬಣ್ಣದ ಜೀಪ್ ನಲ್ಲಿ ಒಂದು ಮಧ್ಯದ ಬಾಟಲ್ ಕೂಡ ಪತ್ತೆಯಾಗಿದೆ. ಆರೋಪಿ ವಿನಯ್, ಪ್ರದೋಷ್ ಹೆಸರಿನಲ್ಲಿ ಈ ಕಾರುಗಳು ನೋಂದಣಿಯಾಗಿವೆ…

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಕಸ್ಟರ್ಡಿಯಲ್ಲಿರುವ ನಟಿ ಪವಿತ್ರ ಗೌಡ ನಟ ದರ್ಶನ್ ಸೇರಿ 13 ಆರೋಪಿಗಳನ್ನು ಪೊಲೀಸರು ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇತ್ತ ನಟಿ ಪವಿತ್ರ ಗೌಡ ಅತ್ತ ಅವರ ಮನೆಗೆ ಬೀಗ ಹಾಕಲಾಗಿದೆ ಮನೆಯಲ್ಲಿ ಸದ್ಯ ಯಾವುದೇ ಸದಸ್ಯರು ಇಲ್ಲ ಎಂದು ಹೇಳಲಾಗುತ್ತಿದ್ದು ಅರೆಸ್ಟ್ ಆದ ಬೆನ್ನಲ್ಲೇ ಮನೆಯಲ್ಲಿದ್ದ ಸದಸ್ಯರು ಮನೆಗೆ ಬೀಗ ಹಾಕಿ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪವಿತ್ರ ಗೌಡ ಮನೆಯಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಹಾಗೂ ತನಿಖೆಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಪೋಲಿಸ್ ನಿಯೋಜನೆ ಮಾಡಲಾಗಿದೆ. ಮನೆಯ ಬಳಿ ಆರ್ ಆರ್ ನಗರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಪವಿತ್ರ ಗೌಡ ಅರೆಸ್ಟ್ ಆದ ಬಳಿಕ ಇದೀಗ ಮನೆಗೆ ಬೀಗ ಹಾಕಲಾಗಿದೆ ಮನೆಯಲ್ಲಿ ಯಾರು ಸದ್ಯಕ್ಕೆ ಇಲ್ಲ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹದಿಮೂರು ಆರೋಪಿಗಳು ಇದೀಗ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇತ್ತ ಇನ್ಸ್ಟಾಗ್ರಾಮ್ ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದೂ ಅಲ್ಲದೆ ದರ್ಶನ್ ಜೊತೆಗಿದ್ದ ಡಿಪಿಯನ್ನು ಕೂಡ ತೆಗೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಫೋನ್ನಲ್ಲಿ ಪತ್ನಿಗೆ ಕರೆ ಮಾಡಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನಟ ದರ್ಶನ್ ವಿಜಯಲಕ್ಷ್ಮಿಗೆ ತಿಳಿಸಿದರು. ಇದರ ಬೆನ್ನಲ್ಲೇ ಇದೀಗ ವಿಜಯಲಕ್ಷ್ಮಿ ದರ್ಶನ್ ಅವರನ್ನು ಅನ್ ಫಾಲೋ ಮಾಡಿ ಅವರ ಜೊತೆಗಿದ್ದ ಡಿಪಿ ಕೂಡ ತೆಗೆದಿದ್ದಾರೆ. ಈ ಒಂದು ಘಟನೆಯಿಂದ ದರ್ಶನ್ ಮತ್ತು ಪತ್ನಿ ವಿಜಯ್ ಲಕ್ಷ್ಮಿ ದಾಂಪತ್ಯದಲ್ಲಿ ಮತ್ತೆ ಬಿರುಕು ಮೂಡುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

Read More

ಬೆಂಗಳೂರು : ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ತಕ್ಷಣ ಅವರು ಬೆಂಗಳೂರಿನ ನೆಲಮಂಗಲದಲ್ಲಿ ಇರುವಂತಹ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸರಳ ನಟ ಎಂದೇ ಖ್ಯಾತರಾದ ವಿನೋದ್‌ ರಾಜ್‌ ಅವರಿಗೆ ಅನಾರೋಗ್ಯದಿಂದ ನೆಲಮಂಗಲದಲ್ಲಿರುವ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಚಿಕಿತ್ಸೆ ಮೇಲೆ ಕರುಳಿನ ಸಮಸ್ಯೆ ಎಂದು ತಿಳಿದು ಬಂದಿದೆ. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಸದ್ಯ ವಿನೋದ್‌ ರಾಜ್‌ ಅವರಿಗೆ ಕರುಳಿನ ಆಪರೇಷನ್ ಮಾಡಲಾಗಿದೆ. ಕಳೆದ ಕೆಲವು ತಿಂಗಳಿನ ಹಿಂದೆ ತಾಯಿ ಲೀಲಾವತಿ ಅವರನ್ನು ಕಳೆದುಕೊಂಡಿದ್ದ ನಟ ವಿನೋದ ರಾಜ್, ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಾಯಿ ಲೀಲಾವತಿಯ ಹೆಮ್ಮೆಯ ಪುತ್ರರಾಗಿದ್ದಾರೆ. ಇದೀಗ ಅವರಿಗೆ ಕರುಳಿನ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Read More

ಬೆಂಗಳೂರು : ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳು ಹೀಗೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನೆನ್ನೆ ಬೆಂಗಳೂರಿನ ಮೇಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ಈ ವೇಳೆ ಕೋರ್ಟ್ ನಿಂದ ಅನ್ನಪೂರ್ಣೇಶ್ವರಿ ಠಾಣೆಗೆ ಕರೆ ತಂದ ಪೊಲೀಸ್ ಸಿಬ್ಬಂದಿ ಅವರಿಗೆ ದೊನ್ನೆ ಬಿರಿಯಾನಿ, ತಿಂಡಿ ಕಾಫಿ ನೀಡಿ ರಾಜ್ಯಾತಿಥ್ಯ ನೀಡಿದ್ದಾರೆ.ಹೌದು ರೇಣುಕಾ ಸ್ವಾಮಿ ಎಂಬುವವರನ್ನು ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್​, ವಿ. ವಿನಯ್, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ನಿನ್ನೆ ರಾತ್ರಿ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳನ್ನು ತರಿಸಲಾಗಿದೆ. ಆದರೆ ರಾತ್ರಿ ಕೂಡ ಊಟ ಮಾಡದ ನಟ ದರ್ಶನ್ ಹಾಗೂ ಸಹಚರರು…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 13 ಆರೋಪಿಗಳು ಅಷ್ಟೇ ಅಲ್ಲ ಇದರ ಮೇಲೆ ನಾಲ್ವರು ಆರೋಪಿಗಳು ಕೂಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಕೊಲೆ ಆರೋಪಿಗಳ ಸಂಖ್ಯೆ 13 ರಿಂದ 17ಕ್ಕೆ ಏರಿಕೆ ಕಂಡಿದೆ. ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಈಗಾಗಲೇ 13 ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಹತ್ಯೆ ಪ್ರಕರಣದ ನಾಲ್ವರು ಇದೀಗ ಆರೋಪಿಗಳು ನಾಪತ್ತೆಯಾಗಿದ್ದಾರೆಎಂದು ತಿಳಿದು ಬಂದಿದ್ದು, ನಾಪತ್ತೆಯಾಗಿರುವವರಿಗಾಗಿ ಪೊಲೀಸರಿಂದ ಇದೀಗ ಶೋಧ ಕಾರ್ಯ ಆರಂಭವಾಗಿದೆ. ನಟ ದರ್ಶನ್ ಗೆ ಈ ನಾಲ್ವರು ಆಪ್ತರು ಆಗಿದ್ದರು ಎಂದು ತಿಳಿದುಬಂದಿದೆ. ಹೌದು ಈಗಾಗಲೇ ರೇಣುಕಾ ಸ್ವಾಮಿ ಎಂಬುವವರನ್ನು ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್​, ವಿ. ವಿನಯ್, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇದೀಗ…

Read More

ಮೈಸೂರು : ಆಕೆಯ ಗಂಡ ತೀರಿ ಹೋಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿರಲಿಲ್ಲ. ಆಗಲೇ ವಿವಾಹಿತ ಮಹಿಳೆಯೊಂದಿಗೆ ಆ ವ್ಯಕ್ತಿಯ ಪರಿಚಯವಾಗಿ, ಪರಿಚಯ ಸಲುಗೆಗೆ ಮುಂದುವರೆದಿದೆ. ಈ ವೇಳೆ ವಿವಾಹಿತ ಮಹಿಳೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಅಕ್ಕ ತಮ್ಮ ಇಬ್ಬರು ಸೇರಿ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಹೌದು ಹೆಚ್.ಡಿ.ಕೋಟೆ ತಾಲೂಕಿನ ಸಿದ್ದಯ್ಯನಹುಂಡಿ ನಿವಾಸಿ ರಾಜೇಶ್​(32) ಕೊಲೆ ಆದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಕೊಳೆ ಮಾಡಿದವರನ್ನು ಪ್ರೇಮಾ ಹಾಗೂ ಆಕೆ ಸಹೋದರ ಶಿವು ಎಂದು ಹೇಳಲಾಗುತ್ತಿದೆ.15 ವರ್ಷದ ಹಿಂದೆ ಪ್ರೇಮಾಗೆ ಮದುವೆ ಆಗಿತ್ತು. ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾಗಿರುವ ಪ್ರೇಮಾ ನಂಜನಗೂಡಿನ ಶ್ರೀರಾಂಪುರ ನಿವಾಸಿ ಜೊತೆ ಮದುವೆ ಮಾಡಿಕೊಂಡಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವೇಳೆ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಪರಿಚಯ ಆಗಿತ್ತು. ಪರಿಚಯ ಮುಂದೆ ಸಲುಗೆಯಾಗಿ ಇಬ್ಬರು ಬಹಳ ಆತ್ಮೀಯವಾಗಿದ್ದರು. ಅದಾದ ಬಳಿಕ…

Read More

ಬೆಂಗಳೂರು : ನಟ ದರ್ಶನ್ ಹಾಗೂ ಅವರ ಗ್ಯಾಂಗ್ ನಿಂದ ಅಭಿಮಾನಿಯಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಹೌದು ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಗೆ ಒಳಗಾದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾಗಿರುವ ನಟಿ ಪವಿತ್ರ ಗೌಡಳನ್ನು ಇದೀಗ ನಿಮ್ಹಾನ್ಸ್ ಆಸ್ಪತ್ರೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಇತ್ತ ನಾಳೆ ಬೆಳಿಗ್ಗೆ ನಟ ದರ್ಶನ್ ಹಾಗೂ ಗ್ಯಾಂಗ್ ಅನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಪ್ರಾಥಮಿಕ ಹಂತದ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಿಗೆ ಬಿರಿಯಾನಿ ತರಿಸಿದ ಪೊಲೀಸರು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದರ್ಶನ್ ಮತ್ತು ಗ್ಯಾಂಗ್ ಇದ್ದು, ರೇಣುಕಾ ಸ್ವಾಮಿ ಹತ್ಯೆ ಕೇಸ್ ಆರೋಪಿಗಳಿಗೆ ಪೊಲೀಸ್ರಿಂದ ಬಿರಿಯಾನಿ ನೀಡಲಾಗಿದೆ. ಆರೋಪಿಗಳಿಗೆ ಪೊಲೀಸ್…

Read More

ಚಿತ್ರದುರ್ಗ : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಸಹಚರರು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರೇಣುಕಾ ಸ್ವಾಮಿ ಹೆಂಡತಿ ನಾಳೆ ನನಗೆ ಹುಟ್ಟೋ ಮಗ ಅಪ್ಪ ಎಲ್ಲಿ ಅಂತ ಕೇಳಿದರೆ ಏನು ಹೇಳಬೇಕು ಎಂದು ಕಣ್ಣೀರು ಹಾಕಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾ ಸ್ವಾಮಿ ಪತ್ನಿ ನಮಗೆ ಮದುವೆಯಾಗಿ ಒಂದು ವರ್ಷವಾಗಿದೆ. ಈಗ ನಾನು ತಾಯಿ ಆಗ್ತಿದ್ದೀನಿ. ನಂಗೆ ಮುಂದೆ ಹುಟ್ಟೋ ಮಗು ಅಪ್ಪ ಎಲ್ಲಿ ಎಂದು ಕೇಳಿದರೆ ಏನು ಹೇಳಬೇಕು? ಮೊನ್ನೆ ನನಗೆ ಕರೆ ಮಾಡಿ ಮಾತನಾಡಿದ್ದೇ ಕೊನೆ ಆಗೋಯ್ತು. ನನ್ನ ಮತ್ತು ನನ್ನ ಮುಂದಿನ ಜೀವನ ಹೇಗೆ ಮಾಡೋದು? ನೀವೇ ನ್ಯಾಯಾಲಯ ಕೊಡಿಸಿ ಎಂದು ರೇಣುಕಾಸ್ವಾಮಿ ಪತ್ನಿ ಸುಶೀಲ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ನಾನು ಗೃಹಿಣಿ ಇದಿನಿ ಹೀಗೆ ಆಗಬಾರದಿತ್ತು. ಮದುವೆಯಾಗಿ ಒಂದು ವರ್ಷ ಆಗಿದೆ. ತಾಯಿ…

Read More