Author: kannadanewsnow05

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಂಪುಟ ಹಿಂಪಡೆದಿತ್ತು. ಈ ಒಂದು 43 ಕೇಸ್ ಗಳಲ್ಲಿ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಕೂಡ ಒಂದಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ. ಹೌದು ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 16.4.2022 ರಂದು ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಗಲಭೆ ಪ್ರಕರಣ ನಡೆದಿದೆ. 43 ಕೇಸ್ ಪ್ರಕರಣಗಳನ್ನು ಪಡೆದಿದೆ. ಆ ಒಂದು 43 ಪ್ರಕರಣಗಳಲ್ಲಿ ಹುಬ್ಬಳ್ಳಿಯ ಗಲಭೆ ಕೇಸ್ ಕೂಡ ಒಂದಾಗಿದೆ. ಹುಬ್ಬಳ್ಳಿಯ ಹಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಗಲಭೆ ನಡೆದಿತ್ತು. ಪ್ರಕರಣ ಹಿನ್ನೆಲೆ? ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್​ 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್​ ಠಾಣೆ ಮುಂದೆ ಸೇರಿ…

Read More

ಮೈಸೂರು : ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಕಾಂಗ್ರೆಸ್ ಪತ್ರಿಕಾ ಜಾಹಿರಾತು ವಿಚಾರವಾಗಿ ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ದುಷ್ಠ ಶಕ್ತಿಗಳು ಯಾರು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲ್ಲ, ಜನರು ತೀರ್ಮಾನ ಮಾಡುತ್ತಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರು ಸರ್ಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಯಾರು ಭಷ್ಟಾಚಾರವನ್ನೇ ಉದ್ಯಮ ಮಾಡಿಕೊಂಡಿದ್ದಾರೆ. ವರ್ಗಾವಣೆಗೂ ದುಡ್ಡು, ಕೆಲಸ ಕೊಡಿಸಲಿಕ್ಕೂ ದುಡ್ಡು. ಎಲ್ಲರದಲ್ಲೂ ದುಡ್ಡು ತಗೋಳ್ತಾರೆ, ಅಂತವರು ಯಾವ ದೃಷ್ಟರ ಬಗ್ಗೆ ಮಾತನಾಡುತ್ತಾರೆ ಅವರಿಗೆ ಅವರೇ ಪ್ರಶ್ನೆ ಹಾಕಿಕೊಳ್ಳಬೇಕು. ಇಂತಹ ಜಾಹೀರಾತಿಗೆ ಸರ್ಕಾರದ ಹಣ ಬಳಕೆ ಮಾಡಿಕೊಂಡು ಅವರ ಮುಖಕ್ಕೆ ಅವರೇ ಮಸಿ ಬಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲಿ ಸ್ವತಃ ಸಿಎಂ ಧರ್ಮಪತ್ನಿ ಸೈಟ್ ವಾಪಸ್ ಮಾಡಿದರು. ಯಾಕೆ ವಾಪಸ್ ಮಾಡಿದ್ರು, ತಪ್ಪು ಮಾಡಿದ್ರಿ ಅದಕ್ಕೆ ವಾಪಾಸ್ ನೀಡಿದ್ರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರೋದರ…

Read More

ಬೆಂಗಳೂರು : ಮುಂದಿನ ತಿಂಗಳು ನವೆಂಬರ್​ 1ಕ್ಕೆ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳು, ಐಟಿಬಿಟಿ ಕಚೇರಿಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ಹೆದರಿಸಿದರೆ ಕಾನೂನು ಕ್ರಮ ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು…

Read More

ವಿಜಯನಗರ : ಯುವಕ ಯುವತಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿಯ ಬಳಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿ ತೀರದಲ್ಲಿ ಯುವಕ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಹಗ್ಗದಲ್ಲಿ ಯುವಕ ಮತ್ತು ಯುವತಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಮೃತ ಯುವಕ ಮತ್ತು ಯುವತಿಯ ಗುರುತು ಪತ್ತೆಯಾಗಿಲ್ಲ.ಆದರೆ ಯುವಕನ ಮೊಬೈಲ್ ಸಿಕ್ಕಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ನಿನ್ನೆ ಮೈಲಾರ ಲಿಂಗೇಶ್ವರ ದೇವರ ದರ್ಶನಕ್ಕೆ ಯುವತಿ ಮತ್ತು ಯುವಕ ಇಬ್ಬರು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೊಳಲು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಮೈಸೂರು : ಇಂದು ನಾಡಿನಾದ್ಯಂತ ದಸರಾ ಹಾಗೂ ಆಯುಧ ಪೂಜಾ ಸಂಭ್ರಮದ ಮನೆ ಮಾಡಿದ್ದು ಅದರಲ್ಲೂ ವಿಶೇಷವಾಗಿ ಮೈಸೂರು ಅರಮನೆಯಲ್ಲಿ ಯದುವೀರ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ.ಇದರ ಮಧ್ಯ ಮೈಸೂರು ಅರಮನೆಯಲ್ಲಿ ತ್ರಿಶಿಕಾ ಕುಮಾರಿ ಒಡೆಯರ್‌ ಅವರು ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದು, ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂಭ್ರಮ ಇಮ್ಮಡಿಯಾಗಿದೆ. ಹೌದು ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು, ದಸರಾ ಸಂಭ್ರಮದಲ್ಲಿದ್ದ ರಾಜವಂಶಸ್ಥರಿಗೆ ಮತ್ತೊಂದು ಡಬಲ್ ಸಂಭ್ರಮ ಎಂದೇ ಹೇಳಬಹುದು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಎರಡನೇ ಪುತ್ರನಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಶಿಕಾ ಕುಮಾರಿಗೆ ಗಂಡು ಮಗು ಜನನವಾಗಿದೆ. ಯುವರಾಣಿ ತ್ರಿಶಿಕಾ ಕುಮಾರಿ ಒಡೆಯರ್‌ ಅವರು ಇನ್ನೊಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ. ನವರಾತ್ರಿಯ ಆರಂಭದ ಪೂಜಾ ಕಾರ್ಯಕ್ರಮಗಳಲ್ಲಿ ಕೃಷಿಕ ಅವರು…

Read More

ಬೆಂಗಳೂರು : ಸಾಮಾನ್ಯವಾಗಿ ಪಾರಿವಾಳಗಳು ಕಾಳು ಕಡಿಗಳನ್ನು ಹುಡುಕಿಕೊಂಡು ಹೋಗುತ್ತವೆ.ಆದರೆ ಬೆಂಗಳೂರಿನ ವಿವಿ ಪುರಂ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾರಿವಾಳಗಳು ವಾಸ ಮಾಡುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.ಉಸಿರಾಟದ ತೊಂದರೆ ಹಾಗೂ ಅಸ್ತಮಾ ಕಾಯಿಲೆಗಳು ಎದುರಾಗುತ್ತಿರುವ ಹಿನ್ನಲೆಯಲ್ಲಿ ಜನರು ಭೀತಿಯಿಂದ ಓಡಾಡುತ್ತಿದ್ದಾರೆ. ಹೌದು ವಿವಿ ಪುರಂ ನಿವಾಸಿಗಳಿಗೆ ಪಾರಿವಾಳಗಳಿಂದ ಸಂಕಷ್ಟ ಎದುರಾಗಿದೆ.ಅನೇಕರು ಕಾಳು ಹಾಕುತ್ತಿರುವುದರಿಂದ ಸಾವಿರಾರು ಪಾರಿಗಳು ವಾಸ ಮಾಡುತ್ತಿವೆ. ಮನೆಗಳ ಬಳಿ ಪಕ್ಷಿಗಳ ಪುಕ್ಕ ಹಿಕ್ಕೆಯಿಂದ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಅಕ್ಕಪಕ್ಕದ ಮನೆಗಳಿಗೆ ಪಾರಿವಾಳಗಳಿಂದ ಇದೀಗ ಸಮಸ್ಯೆ ಎದುರಾಗಿದೆ. ಪಾರಿವಾಳಗಳ ಹಿಕ್ಕಿನಿಂದ ಅಸ್ತಮಾ ಹಾಗೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಾದ ವೆಂಕಟೇಶ್ ಅವರು, ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ನಮಗೆ ಪಾರಿವಾಳ ಪುಕ್ಕಗಳು ಹಾಗೂ ಹಿಕ್ಕೆಯಿಂದ ನಮಗೆ ಉಸಿರಾಟದ ತೊಂದರೆ ಉಂಟಾಗುತ್ತಿದ್ದು. ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರು…

Read More

ರಾಯಚೂರು : ಈಗಾಗ್ಲೇ ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ಬೆನ್ನಲ್ಲೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಯಚೂರಲ್ಲಿ ಸರ್ಕಾರಿ ಮಕ್ಕಳಿಗೆ ಸೇರಬೇಕಾಗಿದ್ದ ಶೂ ಹಾಗೂ ಸಾಕ್ಸ್ ಗಳು ಅಕ್ರಮವಾಗಿ ಕಳ್ಳ ಸಂತೆಯಲ್ಲಿ ಮಾರಾಟ ಆಗುತ್ತಿದ್ದು ಇದೀಗ, ತಿಪ್ಪೆ ಹಾಗೂ ತೊಟ್ಟಿಯಲ್ಲಿ ಶೂ ಹಾಗೂ ಸಾಕ್ಸ್ ಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌದು ರಾಯಚೂರು ನಗರದ ಲಿಂಗಸುಗೂರು ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. 15 ದಿನಗಳಿಂದ ಅಕ್ರಮವಾಗಿ ಶೂ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ತಿಪ್ಪೆ ಹಾಗೂ ತೊಟ್ಟಿಗಳಲ್ಲಿ ಹೊಸ ಹೊಸ ಶೂಗಳನ್ನು ಎಸೆಯಲಾಗಿದೆ. ಈ ವೇಳೆ ಕೈಗೆ ಸಿಕ್ಕಷ್ಟು ಶೂಗಳನ್ನು ಜನರು ಎತ್ತಿಕೊಂಡು ಹೋಗುತ್ತಿದ್ದಾರೆ. ಮಕ್ಕಳ ಪಾದ ರಕ್ಷಿಸಬೇಕಾದ ಶೂಗಳು ಇದೀಗ ಕಸದ ರಾಶಿಯಲ್ಲಿ ಕಂಡು ಬಂದಿವೆ. ಹೀಗಾಗಿ ಶಿಕ್ಷಣಾಧಿಕಾರಿಗಳ ಘೋರ ನಿರ್ಲಕ್ಷ್ಯದಿಂದ ಹಾಗೂ ಅಕ್ರಮವಾಗಿ ಶೂ ಮತ್ತು ಸಾಕ್ಸ್ ಗಳನ್ನು ಮಾರಾಟ ಮಾಡುತ್ತಿರುವುದು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ರಾಶಿರಾಶಿ ಶೂಗಳನ್ನ ತಿಪ್ಪೆಗೆ ಎಸೆದಿದ್ದಾರೆ.…

Read More

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಾಗೂ ಆಯುಧ ಪೂಜೆ ಅಂಗವಾಗಿ ಇಂದು ಕೇಂದ್ರ ಸಚಿವರಾದಂತಹ ಹೆಚ್‍ಡಿ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಹತ್ತಿರ ಇರುವ ಪೆನ್ ಡ್ರೈವ್ನಲ್ಲಿ ಯಾವುದೇ ಅಶ್ಲೀಲ ವಿಡಿಯೋ ಇಲ್ಲ. ಬದಲಾಗಿ ವರ್ಗಾವಣೆ ದಂಧೆಯ ಕುರಿತು ಇದೆ. ಪೆನ್ಡ್ರೈವ್ ನಲ್ಲಿ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇರುವುದು. ನನ್ನ ಪೆನ್ ಪೆನ್ ಡ್ರೈವ್ ನಲ್ಲಿ ಯಾವುದೊ ಒಂದು ಅಶ್ಲೀಲ ವಿಡಿಯೋ ಇಲ್ಲ. ನಾನು ಅಧಿಕಾರದಲ್ಲಿದ್ದಾಗ ಕಮಿಷನ್ ಪಡೆದು ವರ್ಗಾವಣೆ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕೋವಿಡ್ ಅಕ್ರಮದ ತನಿಖೆಗೆ ನನ್ನ ತಕರಾರು ಇಲ್ಲ. ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸರಕಾರಕ್ಕೆ ಮೋಸ ಮಾಡಿ 14 ಸೈಟ್ ಪಡೆದಿದ್ದರು. ಈಗ ಸರ್ಕಾರದ ಸೈಟ್ ಅನ್ನು ವಾಪಸ್ ನೀಡಿದ್ದಾರೆ. ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ…

Read More

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂದು HD ಕುಮಾರಸ್ವಾಮಿ ನಿನ್ನೆ ಹೇಳಿದ್ದರು. ಇದರ ಮಧ್ಯ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್​ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​​ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ. ಹೌದು ಈ ಕುರಿತು HD ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ಷಣ ದವರೆಗೆ ಯಾವುದೇ ಒಪ್ಪಂದ ಆಗಿಲ್ಲ. ಯಾವುದೇ ಸಂದರ್ಭದಲ್ಲೂ ಇಂತಹ ಒಂದು ಒಪ್ಪಂದ ನಡೆದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು. ಅಲ್ಲದೆ ಮಂಡ್ಯವನ್ನು ನಾವು ಜೆಡಿಎಸ್​​ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ…

Read More

ಬೆಂಗಳೂರು : ಆಯುಧ ಪೂಜೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಪೂಜೆಯ ಖರ್ಚಿ ಕೇವಲ 100 ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಕಾಂಗ್ರೆಸ್‌ ಸರಕಾರದ ಬಳಿ ದುಡ್ಡಿಲ್ಲ. ಸಾರಿಗೆ ಇಲಾಖೆ ದಿವಾಳಿಯಾಗಿದೆ ಎಂದು ಬಿಜೆಪಿ ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್‌ ಹಳೆಯ ವಿಡಿಯೋವೊಂದರ ಮೂಲಕ ತಿರುಗೇಟು ನೀಡಿದೆ. ‘ಸಿಎಂ ಅಂಕಲ್‌ ಅಪ್ಪನಿಗೆ ಸಂಬಳವನ್ನು ಕೊಡಿ. ಮನೆಯಲ್ಲಿ ದೀಪಾವಳಿ ಹಬ್ಬವಿಲ್ಲ,’ ಎಂದು ಅಂಗಲಾಚಿದ್ದ ಬಿಜೆಪಿ ಆಡಳಿತಾವಧಿಯ ವಿಡಿಯೋವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ. ಈ ಕುರಿತು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ. 2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ ಕೊಡುತ್ತಿದ್ದ ಹಣ ₹30. ಮತ್ತೆ ಬಿಜೆಪಿಯ 2019ರಿಂದ 2023ರವರೆಗೆ ಅವಧಿಯಲ್ಲಿ ಕೊಡುತ್ತಿದ್ದ ಹಣ ₹100. ಈಗ ಮತ್ತೆ ನಮ್ಮ…

Read More