Author: kannadanewsnow05

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಇಂದಿನಿಂದ ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ ಆರಂಭಿಸಲಾಗುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ಇಂದಿನಿಂದ ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸುತ್ತಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲು ಸೇರ್ಪಡೆಗೊಳಿಸಲಾಗಿದೆ. ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು.ಇಂದಿನಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಿಗೆ ಹೆಚ್ಚುವರಿ 15 ಮೆಟ್ರೋ ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು, ಅಗ್ರಹಾರದ (ಐಟಿಪಿಎಲ್‌) ವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಮತ್ತು 1 ರೈಲು ಬೈಯಪ್ಪನಹಳ್ಳಿ ಕಡೆಗೆ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರ ಬೇಡಿಕೆ ಪೂರೈಸಲು ಪ್ರಸ್ತುತ, ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14…

Read More

ಬೆಂಗಳೂರು : ಆರು ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸುತ್ತಾರೆ. ಆದರೆ ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದ್ದು ಇದೀಗ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಇಂದು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು, 6 ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಐಡಿಜಿಪಿ ಕಚೇರಿಯಲ್ಲಿ ಸಿಎಂ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇತೃತ್ವದಲ್ಲಿ ಈ ಒಂದು ಸಭೆ ನಡೆಯಲಿದೆ. ಈ ಹಿಂದೆ ನಿಗದಿ ಮಾಡಿದ ಸಭೆ ಮುಂದೂಡಲಾಗಿತ್ತು. ಇದೀಗ ಇಂದು ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.ಕಾನೂನು ಸುವ್ಯವಸ್ಥೆ ಸೇರಿದಂತೆ ಇಲಾಖೆಯ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ : ನಿನ್ನೆ ದೆಹಲಿಯಲ್ಲಿ ಸ್ಪೈಸ್ ಜೆಟ್ ಏರ್ಲೈನ್ಸ್ ಸಿಬ್ಬಂದಿಗಳ ಎಡವಟ್ಟಿನಿಂದ ಪ್ರಯಾಣಿಕರು ವಿಮಾನದಲ್ಲೇ 10 ಗಂಟೆ ಕಾಲ ಕಳೆದು ಪ್ರಯಾಣಿಕರನ್ನು ವಿಮಾನದಲ್ಲಿ ಕೂಡಿಟ್ಟು ಕಾಟ ನೀಡಿದ್ದಾರೆ ಎನ್ನಲಾಗಿದೆ.SG8151 ವಿಮಾನದಲ್ಲಿ ಈ ಒಂದು ಘಟನೆ ನಡೆದಿದೆ. ತಾಂತ್ರಿಕ ದೂರ ಎಂದು ಏರ್ಪೋರ್ಟ್ ನಲ್ಲಿ ವಿಮಾನ ನಿಂತಿದೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಆಗಮಿಸಬೇಕಿತ್ತು. ಆದರೆ ತಾಂತ್ರಿಕ ದೋಷ ಎಂದು ಏರ್ಪೋರ್ಟ್ ನಲ್ಲಿ ವಿಮಾನ ನಿಂತಿದೆ. ನಿನ್ನೆ ರಾತ್ರಿ 7.40ಕ್ಕೆ ದೆಹಲಿಯಿಂದ ಟೆಕ್ ಆಫ್ ಆಗಬೇಕಿತ್ತು. ಆದರೆ 10 ಗಂಟೆಗಳು ಕಳೆದರೂ ಇನ್ನೂ ವಿಮಾನ ಟೆಕ್ ಆಫ್ ಆಗಿಲ್ಲ. ವಿಮಾನದಲ್ಲೇ ಕುಳಿತು 60 ಮಂದಿ ಪ್ರಯಾಣಿಕರು ಸುಸ್ತಾಗಿದ್ದಾರೆ. ಬೋರ್ಡಿಂಗ್ ಪಾಸ್ ಮಾಡಿ ಸಿಬ್ಬಂದಿ ಕೂರಿಸಿದ್ದಾರೆ. ಸೂಕ್ತ ಮಾಹಿತಿ ನೀಡಿದೆ ಕೂರಿಸಿದ್ದಕ್ಕೆ ಪ್ರಯಾಣಿಕರು ಆಕ್ರೋಶ.

Read More

ಬೆಂಗಳೂರು : ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕಡೆಗೂ ನೂರಡಿ ದಾಟಿದೆ. ಸಾಮಾನ್ಯವಾಗಿ ಮೇ, ಜೂನ್‌ನಲ್ಲೇ ನೂರು ಅಡಿ ತಲುಪುತ್ತಿದ್ದ ಕನ್ನಂಬಾಡಿ ಕಟ್ಟೆಯ ನೀರಿನ ಮಟ್ಟ ಈ ವರ್ಷ ಜುಲೈ ಮೊದಲ ವಾರದಲ್ಲಿ ಮುಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡುತ್ತಿದ್ದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರ್ಹರಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರು ಹರಿಸಲು ಪ್ಲಾನ್ ಮಾಡಲಾಗಿದ್ದು, ಹಾಗಾಗಿ ಇಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ನೀರು ಹರಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಸಿ ನಾಲೆಗಳಿಗೆ ನೀರು ಹರಿಸುವ ಕುರಿತಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿಯವರು ಮಾಹಿತಿ ನೀಡಲಿದ್ದಾರೆ. ಕಳೆದ ವರ್ಷ ಬರಗಾಲ ಹಿನ್ನೆಲೆಯಲ್ಲಿ ನೀರು ಹರಿಸಲು ಆಗಿಲ್ಲ ಈಗ ಡ್ಯಾಮ್…

Read More

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ನೇಮಕ ಅಕ್ರಮ ಸಂಬಂಧ ಮುರುಗೇಶ್‌ ನಿರಾಣಿ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಆದರೆ, ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಹೌದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ದೂರು ಆಧರಿಸಿ ನೇಮಕ ಹಗರಣದ ತನಿಖೆಯನ್ನು ಹೈಗ್ರೌಂಡ್ಸ್‌ ಪೊಲೀಸರು ತನಿಖೆ ನಡೆಸುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಮುರುಗೇಶ್ ನಿರಾಣಿ ಅವರು, ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ, ಪ್ರಕರಣ ರದ್ದು ಕೋರಿ ಮುರುಗೇಶ್‌ ನಿರಾಣಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾ. ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಎಲ್ಲರನ್ನೂ ಬಂಧಿಸಿ ಕಾರಾಗೃಹದಲ್ಲಿಡುವುದು ಸರಿಯಲ್ಲ. ಹೊರಗಿರುವವರು ಮತ್ತು ಜೈಲಿನಲ್ಲಿರುವವರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗುತ್ತದೆ. ಹಾಗಾಗಿ, ಈ ಪ್ರಕರಣದಲ್ಲಿತನಿಖೆ ಮುಂದುವರಿಸಿ, ಅದಕ್ಕೆ ನ್ಯಾಯಾಲಯ ಯಾವುದೇ ಅಡ್ಡಿಪಡಿಸುವುದಿಲ್ಲ. ಆದರೆ, ಅರ್ಜಿದಾರರನ್ನು ಬಂಧಿಸಬೇಡಿ. ಅವರು ತನಿಖೆಗೆ ಎಲ್ಲಾರೀತಿಯ ಸಹಕಾರ ನೀಡಲಿದ್ದಾರೆ…

Read More

ಧಾರವಾಡ : ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲದ ಸಿದ್ದಲಿಂಗ ಶ್ರೀ ಸ್ವಾಮೀಜಿ ಸೇರಿದಂತೆ ಶ್ರೀ ರಾಮ ಸೇನೆಯ ಪ್ರಮುಖ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಶ್ರೀರಾಮ ಸೇನಾ ಸಂಘಟಿತ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ತಿಳಿಸಿದ್ದಾರೆ. ಇಂದು ಧಾರವಾಡದಲ್ಲಿ ಮಾತನಾಡಿದ ಅವರು, ಶ್ರೀರಾಮ ಸೇನೆ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ ಎಂದು ಧಾರವಾಡ ನಗರದಲ್ಲಿ ಗಂಗಾಧರ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನದಿಂದ ನಮ್ಮ ಫೇಸ್ ಬುಕ್ ಅಕೌಂಟ್ ಬ್ಲಾಕ್ ಆಗಿದೆ. ಲವ್ ಜಿಹಾದ್ ವಿರುದ್ಧ ನಾವು ಅಭಿಯಾನ ಮಾಡುತ್ತಿದ್ದೇವೆ ಇದನ್ನು ಹತ್ತಿಕ್ಕಲು ನಮ್ಮ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ. ಇದರಿಂದ ಸರ್ಕಾರ ಅಥವಾ ಯಾರದ್ದೋ ಷಡ್ಯಂತರವಿದೆ. ಪ್ರಮೋದ್ ಮುತಾಲಿಕ್, ಸಿದ್ದಲಿಂಗ ಶ್ರೀ ಸೇರಿದಂತೆ ಪ್ರಮುಖರ ಖಾತೆ ಬ್ಲಾಕ್ ಆಗಿದ್ದು, ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಸರ್ಕಾರವೇ ಮಾಡಿದ್ದರೆ ಯಾಕೆ ಅಂತ ಕಾರಣ ಕೊಡಬೇಕು. ಫೇಸ್ಬುಕ್ ಸಂಸ್ಥೆ ಮಾಡಿದ್ದರೆ ಸರ್ಕಾರ…

Read More

ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…

Read More

ಬೆಂಗಳೂರು : ಇತ್ತೀಚಿಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದರ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೌದು ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದರು. ಪತ್ರದ ಮೂಲಕ ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ ಎಂದು ತಿಳಿದುಬಂದಿದೆ. ಕಾವೇರಿ…

Read More

ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 9 ಸ್ಥಾನ ಪಡೆದುಕೊಂಡು ಜೆಡಿಎಸ್ ಮೂರರಲ್ಲಿ ಎರಡು ಸ್ಥಾನ ಪಡೆದುಕೊಂಡಿತು. ಈಗ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಶ್ರೀರಾಮುಲು ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ ನಾನೇ ಕಾರಣ ಎಂದು ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸೋಲಿಗೆ ನಾನೇ ಕಾರಣನಾಗಿದ್ದೇನೆ ಎಂದು ಬೆಂಗಳೂರಿನಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮಲು ಹೇಳಿಕೆ ನೀಡಿದರು. ನಿಮ್ಮ ಸೋಲಿಗೆ ಕಾರಣ ಏನು ಅಂತ ರಾಧಾ ಮೋಹನ್ದಾಸ್ ಕೇಳಿದಾಗ ಸೋಲಿಗೆ ವೈಯಕ್ತಿಕವಾಗಿ ನಾನೇ ಕಾರಣ ಅಂತ ಹೇಳಿದ್ದೇನೆ ಎಂದರು. ಬಳ್ಳಾರಿ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಅಂದಿದ್ದೇನೆ. ಇನ್ನೂ ಸಂಡೂರು ವಿಧಾನಸಭೆ ಉಪಚುನಾವಣೆ ಟಿಕೆಟ್ ಕೇಳಿಲ್ಲ. ಆದರೆ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆಯೋ ಅವರ…

Read More

ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…

Read More