Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ವೈದ್ಯರ ನಿರ್ಲಕ್ಷತನ ಎಡವಟ್ಟಿನಿಂದ ಹಲವಾರು ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದ್ದು ಹೆರಿಗೆ ಮಾಡುವ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಎಂಬುವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಆಗದ ಹಿನ್ನೆಲೆ ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ಮಗುವಿನ ಮರ್ಮಾಂಗಕ್ಕೆ ವೈದ್ಯರಿಂದ ತೊಂದರೆ ಮಾಡಿದ್ದಾರೆ. ಅಮೃತಾಳಿಗೆ ಸಿಸರಿನ್ ಮೂಲಕ ಮಗುವನ್ನು ಹೊರ ತೆಗೆಯಬೇಕು ಎಂದು ವೈದ್ಯರು ಸೂಚಿಸಿದ್ದರು. ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ವೈದ್ಯ ನಿಜಾಮುದ್ದೀನ್ ಮಗುವಿನ ಮರ್ಮಾಂಗವನ್ನು ಆಕಸ್ಮಿಕವಾಗಿ ಕೊಯ್ದಿದ್ದಾರೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಬಾಪುಜಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ವೈದ್ಯರು ಕಾರಣ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಗುವಿನ ಸಾವಿಗೆ ಕಾರಣವಾದ ವೈದ್ಯನನ್ನು ಅಮಾನತು…
ತುಮಕೂರು : ಜಮೀನು ವಿವಾದ ವಿಚಾರಕ್ಕೆ ಎರಡು ಕುಟುಂಬಗಳ ಪರಸ್ಪರ ಬಡಿದಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೇ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ, ಘಟನೆಯಲ್ಲಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗೇಗೌಡನಪಾಳ್ಯದ ಮಂಜುನಾಥ್,ಗಂಗಮ್ಮ,ನಾಗಯ್ಯ,ಮಂಜುನಾಥ ನ ತಾಯಿ,ಪತ್ನಿ ಹಲ್ಲೆ ಮಾಡಿದವರು. ಲಕ್ಷ್ಮಣಯ್ಯ ಕುಟುಂಬಸ್ಥರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ಮಂಜುನಾಥ್ ಕುಟುಂಬಸ್ಥರು ಲಕ್ಷ್ಮಣಯ್ಯರನ್ನ ನೀರಿನಲ್ಲಿ ಮುಳುಗಿಸಿ ಕುಡುಗೋಲು, ಕಲ್ಲಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು ಸದ್ಯ ತುರುವೇಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಮಾಜಿ ಉಪಮೇಯರು ಒಬ್ಬರು ನಟ ದರ್ಶನ್ ಅವರಿಗೆ ಹಣ ಸಹಾಯ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ವಿಚಾರಣೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮಾಜಿ ಉಪಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ 40 ಲಕ್ಷ ಹಣ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ. ಹಾಗಾಗಿ ಉಪ ಮೇಯರ್ ಮೋಹನ್ ರಾಜ್ ಇದಿ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆಯಾದ ದಿನದಂದೇ ದರ್ಶನ್ ಅವರು ಮೋಹನ್ ರಾಜ್ ಅವರ ಬಳಿ ನಲವತ್ತು ಲಕ್ಷ ಯಾಕೆ ತೆಗೆದುಕೊಂಡರು? ಹಾಗೂ ಏನು ಕಾರಣ ಎಂಬುದರ ಕುರಿತು ಪೊಲೀಸರು ಉಪಮೇಯರ್ ಮೋಹನ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾಜಿ ಉಪಮೇಯ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರಗೆ ಸಂಕಷ್ಟ ಎದುರಾಗಿದ್ದು, ವಿಶೇಷ ತನಿಕಾ ತಂಡದಿಂದ (SIT) ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗು SIT ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ನಿಗಮದ ಅಧ್ಯಕ್ಷರ ಚಂದ್ರಶೇಖರ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಬಯಸಿತ್ತು ಇದಾದ ಬಳಿಕ ಹಲವು ಬೆಳವಣಿಗೆಯ ನಂತರ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಇದೀಗ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿತರಣೆಗೆ ಹಾಜರಾಗುವಂತೆ…
ರಾಯಚೂರು : ಸಾಮಾನ್ಯವಾಗಿ ಕಳ್ಳರು ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಬೀಗ ಹಾಕಿದ ಮನೆಗೆ ಕನ್ನ ಹಾಕಿ ನಗದು ಚಿನ್ನಾಭರಣ ಕಳ್ಳತನ ಮಾಡುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲಿ ಭಕ್ತರ ಸೋಗಿನಲ್ಲಿ ಬಂದು ಮಠಾಧೀಶರಿಗೆ ಹೆದರಿಸಿ ಲಕ್ಷಾಂತರ ರೂಪಾಯಿ ಚಿನ್ನ, ನಗದನ್ನು ದೋಚಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿ ನಡೆದಿದೆ. ಹೌದು ಭಕ್ತರ ಸೋಗಿನಲ್ಲಿ ಬಂದು ಚಿತ್ತರಗಿ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗೆ ಹೆದರಿಸಿ ಚಿನ್ನಾಭರಣ, ನಗದು ಸೇರಿದಂತೆ ಸುಮಾರು 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಲಿಂಗಸುಗೂರಿನಲ್ಲಿ ನಡೆದಿದೆ. ಪಟ್ಟಣದ ಬಸವಸಾಗರ ರಸ್ತೆಯಲ್ಲಿರುವ ಮಠದ ಸಿದ್ಧಲಿಂಗ ಸ್ವಾಮೀಜಿಗಳಿಗೆ ಹೆದರಿಸಿ ಸುಲಿಗೆಕೋರರು 20 ರಿಂದ 25 ಲಕ್ಷ ರೂ. ನಗದು, 80 ಗ್ರಾಂ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಕಲಬುರಗಿಯಿಂದ ಬಂದಿದ್ದೇವೆ. ರಾತ್ರಿ ಮಠದಲ್ಲಿ ಆಶ್ರಯ ಕೊಡಿ ಎಂದು ಕೇಳಿದ್ದಾರೆ. ಬಳಿಕ ನೀರು ಕೇಳುವ ನೆಪದಲ್ಲಿ…
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಹೊಳೆನರಸಿಪುರದಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ಕುರಿತು ವಿಚಾರ ನಡೆಸಿದ ಹೈಕೋರ್ಟ್ ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಇಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಸಲ್ಲಿಸಿದ ಗ್ರಾಮೀಣ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಒಂದು ಪ್ರಕರಣದಲ್ಲಿ ಮಾತ್ರ ಪ್ರಜ್ವಲ್ ಅವರನ್ನು ಪೊಲೀಸರು ಬಂಧೀಸಿದ್ದಾರೆ. ಉಳಿದ ಕೇಸ್ ಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸಲು ಮನವಿ ಮಾಡಿದ್ದಾರೆ. ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಇದೀಗ SIT ಗೆ ಹೈಕೋರ್ಟ್ ಸೂಚನೆ ನೀಡಿದೆ. ತನಿಖೆ ನಡೆಯಲಿ ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು,ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿದ್ದಾರೆ ಎಂದು ತಿಳಿಬಂದಿದೆ.…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹತ್ಯೆಯಾದ ಬಳಿಕ ಸ್ಥಳದಲ್ಲಿದ್ದ ನಿಗೂಢ ವ್ಯಕ್ತಿ ಇದೀಗ ಪತ್ತೆಯಾಗಿದ್ದಾನೆ. ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದ ಕಾಣದ ವ್ಯಕ್ತಿ ಇದೀಗ ಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.ಪತ್ತೆಯಾದ ವ್ಯಕ್ತಿಯನ್ನು MLA ರವಿ ಸುಬ್ರಮಣ್ಯ ಕಾರು ಚಾಲಕ ಕಾರ್ತಿಕ್ ಪುರೋಹಿತ ಎಂದು ತಿಳಿದುಬಂದಿದೆ. ಪ್ರದೋಷ ಸೂಚನೆ ಮೇರೆಗೆ ಕಾರ್ತಿಕ್ ಪುರೋಹಿತ್ ಸ್ಪಾಟ್ ಗೆ ಬಂದಿದ್ದ ಕೊಲೆ ಸ್ಥಳದಿಂದ ಪ್ರದರ್ಶನನ್ನು ಕಾರ್ತಿಕ್ ಪುರೋಹಿತ್ ಕಾರಲ್ಲಿ ಕರೆದು ಸದ್ಯ ಅಪ್ಪು ಕಾರ್ತಿಕ್ರಿಯ ಪೊಲೀಸರು ನೋಟಿಸಿದ್ದಾರೆ ನೋಟಿಸ್ ನೀಡಿದ ನಂತರ ಕಾರ್ತಿಕ್ ಪರಾರಿಯಾಗಿದ್ದಾನೆ ಎಂಎಲ್ಎ ಬಳಿ ಕಾರ್ತಿಕ್ ಪರೋಹಿತ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಎಂಎಲ್ಎ ರವಿ ಸುಬ್ರಮಣ್ಯ ಕಚೇರಿಯಲ್ಲಿ ಇದೀಗ ನಿಗೂಢ ವ್ಯಕ್ತಿ ಕಾರ್ತಿಕ್ ಪುರೋಹಿತ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಇದೀಗ ಪೊಲೀಸರು ಕಾರ್ತಿಕ್ ಪುರೋಹಿತಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದು, ನೋಟಿಸ್ ಬಂದ ತಕ್ಷಣ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಗೆ ಆರೋಪಿ ದೀಪಕ್ ಅಮೌಂಟ್ ಆಫರ್ ಮಾಡಿದ್ದ ನಿಂಗೆ 10…
ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯ ಸಿಪಿ ಯೋಗೇಶ್ವರ್ ಅಭ್ಯರ್ಥಿ ಆಗಲಿದ್ದಾರೆ ಎಂದು ಇದೀಗ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಒಂದು ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ಪಾಳೆಯದಲ್ಲಿ ಒಲವು ವ್ಯಕ್ತವಾಗಿದೆ. ಹೌದು ಎಚ್.ಡಿ.ಕುಮಾರಸ್ವಾಮಿ ಸಹ ಉಪಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಎಂದು ಹೇಳಿದರೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಸಿ.ಪಿ.ಯೋಗೇಶ್ವರ್ ನಾಯಕರಲ್ಲಿ ಅವರೇ ಅಭ್ಯರ್ಥಿ ಎಂಬ ನಿಲುವು ಬಿತ್ತಿದ್ದಾರೆ. ಅವರನ್ನು ಗೆಲ್ಲಿಸುವಲ್ಲಿ ಅವಿರತವಾಗಿ ಶ್ರಮಿಸಲು ಉಭಯಪಕ್ಷಗಳಕಾರ್ಯಕರ್ತರು ಸಹ ಮುಂದಾಗಿದ್ದಾರೆ. ಆದರೂ ಬಿಜೆಪಿ-ಜೆಡಿಎಸ್ನ ಹೈಕಮಾಂಡ್ ತೀರ್ಮಾನವೇ ಅಂತಿಮವಾ ಗಿರುವುದರಿಂದ ಯಾರಿಗೆ ಟಿಕೆಟ್ ಲಭಿಸಲಿದೆ ಎಂಬುದು ತೀವ್ರ ಕೂತುಹಲ ಮೂಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸುವಲ್ಲಿ ಮತ್ತು ಗೆಲ್ಲಿಸುವಲ್ಲಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ಯೋಗೇಶ್ವರ್ ಶ್ರಮ ಸಾಕಷ್ಟು ಇದೆ. ಈ ಋಣ ತೀರಿಸಲು ಯೋಗೇಶ್ವರ್ ಅವರನ್ನು…
ಬೆಂಗಳೂರು : ಬೆಂಗಳೂರಿನ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬಿಬಿಎಂಪಿ 500 ರೂಪಾಯಿ ದಂಡ ವಿಧಿಸಿ ಕ್ರಮಕ್ಕೆ ಮುಂದಾಗಿದೆ, ಈ ಕುರಿತಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಷ್ಟು ದಿನ 50 ರೂಪಾಯಿ ಇದ್ದ ದಂಡದ ಮೊತ್ತ 500ಕ್ಕೆ ಹೆಚ್ಚಿಸಲು ಇದೀಗ ಆಯುಕ್ತರು ಸೂಚನೆ ನೀಡಿದ್ದಾರೆ. ನಗರದ 7 ಜೋನ್ ಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ಬೆಂಗಳೂರ ನಗರದಲ್ಲಿ 153 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ.ಹಾಗಾಗಿ ಬೆಂಗಳೂರಿನಲ್ಲಿ ಸದ್ಯ 547ಕ್ಕೆ ಪ್ರಕರಣಗಳು ಏರಿಕೆ ಕಂಡಿವೆ. ಹಾಗಾಗಿ ಎಲ್ಲೆಂದರಲ್ಲಿ ಕಸ ಬಿಸಾಡಿದರೆ 500 ರೂಪಾಯಿ ದಂಡ ವಿಧಿಸುವಂತೆ ಆಯುಕ್ತ ತುಷಾರ ಗಿರಿನಾಥ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಂಡ್ಯ : ಇಂದಿನ ಜನತಾ ದರ್ಶನ ಸಭೆಗೆ ಬರದಂತೆ ಅಧಿಕಾರಿ ವರ್ಗಕ್ಕೆ ರಾಜ್ಯಸರ್ಕಾರ ಸುತ್ತೋಲೆ ಹೋರಡಿಸಿರುವದಕ್ಕೆ ಕೇಂದ್ರ ಸಚಿವ HD ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ನನ್ನ ಜನತಾ ದರ್ಶನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗುಡಗಿದ್ದು ಕಾರ್ಯಕ್ರಮಕ್ಕೆ ಬರುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೆ. ಕಾರ್ಯಕ್ರಮಕ್ಕೆ ತೆರಳದಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕಾರ್ಯಕ್ರಮಕ್ಕೆ ತೇರಳದಂತೆ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ದೋಷಿಸುವುದಿಲ್ಲ. ಆದರೆ ರಾಜ್ಯ ಸರ್ಕಾರ ತನ್ನ ಸಣ್ಣತನ ತೋರುತ್ತಿದೆ ಇದು ನನ್ನ ಮನೆಯ ಕಾರ್ಯಕ್ರಮವಲ್ಲ ಇದು ಜನರಿಗೋಸ್ಕರ ಮಾಡುತ್ತಿರುವ ಕಾರ್ಯಕ್ರಮ.ಅಧಿಕಾರಿಗಳು ಇಲ್ಲದಿದ್ದರೂ ಜನತಾದರ್ಶನ ಮಾಡುತ್ತೇವೆ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ನನ್ನ ಜನತಾ ದರ್ಶನ ಯಾರಿದಂಲೂ ತಪ್ಪಿಸಲು ಸಾಧ್ಯವಿಲ್ಲ.ರಾಜ್ಯ ಸರ್ಕಾರ ಜನರ ಸಮಸ್ಯೆ ಬಗೆ ಹರಿಸುವ ಕೆಲಸಕ್ಕೆ ಕಡಿವಾಣ ಹಾಕಿ…