Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಹೃದಯಾಘಾತ ಎನ್ನುವುದು ಇತ್ತೀಚಿಗೆ ಸಾಮಾನ್ಯವಾಗಿ ಬಿಟ್ಟಿದೆ. ಕೌಂಟರ್ ಬಳಿ ನಿಂತಲ್ಲೇ ಹೋಟೆಲ್ ಸಿಬ್ಬಂದಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲ್ಬುರ್ಗಿ ನಗರದ ಹೋಟೆಲ್ ಒಂದರಲ್ಲಿ ನಡೆದಿದೆ. ಕಲಬುರಗಿಯ ಆಮಂತ್ರಣ ಹೋಟೆಲ್ನಲ್ಲಿ ಘಟನೆ ನಡೆದಿದ್ದು, ಮಂಗಳೂರು ಮೂಲದ 53 ವರ್ಷದ ರಾಜೇಶ್ ಮೃತ ವ್ಯಕ್ತಿ ಎನ್ನಲಾಗಿದೆ. ಕಳೆದ 15 ದಿನಗಳ ಹಿಂದಷ್ಟೇ ಈ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ. ಹೋಟೆಲ್ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತರಾಗಿದ್ದಾರೆ. ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ‘RAW’ (Research and Analysis Wing) ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ MCA ಪದವೀಧರೆಗೆ ಖದೀಮನೊಬ್ಬ ಸುಮಾರು 8 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಸುಪ್ರೀಂಲೇಔಟ್ ನ ವೇಣುಗೋಪಾಲ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. MCA ಪದವೀಧರೆಯಾದ ಚಿತ್ರಪ್ರಿಯಾ ಬಳಿ 8 ಲಕ್ಷ ಪಡೆದಿದ್ದ ವೇಣುಗೋಪಾಲ್ ಚಿತ್ರಪ್ರಿಯಾ ಪತಿಯ ಸ್ನೇಹಿತನಿಂದ ಆರೋಪಿ ವೇಣುಗೋಪಾಲ್ ಪರಿಚಿತನಾಗಿದ್ದ ಎನ್ನಲಾಗುತ್ತಿದೆ. RAW ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ವೇಣುಗೋಪಾಲ್ ಇಂಟರ್ವ್ಯೂ ಕೂಡ ಮಾಡಿದ್ದ ಎನ್ನಲಾಗುತ್ತಿದೆ. ಬಳಿಕ ಮಾರ್ಕ್ಸ್ ಕಾರ್ಡ್ ಪಡೆದು ನಕಲಿ ಆಫರ್ ಲೆಟರ್ ನೀಡಿದ್ದ. ಇದೀಗ ಆರೋಪಿ ವೇಣುಗೋಪಾಲ್ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯ ಹವಮಾನ ಇಲಾಖೆಯು ಮಳೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಕ್ಟೊಬರ್ 12, 13 ರಂದು ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಅ. 11, 12ರಂದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು . ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಶಾಸಕ ವಿನಯ್ಕುಲಕರ್ಣಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಮಹಿಳೆ ದೂರು ನೀಡಿದ್ದರೆ, ಇದಕ್ಕೆ ಪ್ರತಿಯಾಗಿ ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ವಿನಯ್ಕುಲಕರ್ಣಿ ಅವರು ದೂರು ನೀಡಿದ್ದಾರೆ.ಈ ಎರಡೂ ದೂರುಗಳ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ದೂರಿನಲ್ಲೇನಿದೆ? ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಕುಲಕರ್ಣಿ ನನಗೆ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು.…
ಬೆಂಗಳೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಾಗೂ ಆಯುಧ ಪೂಜೆಯ ಅಂಗವಾಗಿ ಇಂದು ನಾಡಿನಲ್ಲೇ ಆಯುಧ ಪೂಜೆಯ ಸಂಭ್ರಮದ ಮನೆ ಮಾಡಿದೆ. ನಾಡಿನ ಆದ್ಯಂತ ಇಂದು ಆಯುಧ ಪೂಜೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದೀಗ ಬೆಂಗಳೂರಿನಲ್ಲಿ ಕೆ ಆರ್ ಮಾರ್ಕೆಟ್ ನಲ್ಲಿ ಆಯುಧ ಪೂಜೆಗೆ ಬೇಕಾದಂತ ಸಾಮಗ್ರಿಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಹೌದು ನಾಡಿನೆಲ್ಲೆಡೆ ಆಯುಧ ಪೂಜೆ ಹಾಗೂ ದಸರಾ ಸಂಭ್ರಮ ಕಳೆಗಟ್ಟಿದ್ದು, ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಹೂವು, ಹಣ್ಣು ಬಾಳೆಕಂದು ಸೇರಿದಂತೆ ಪೂಜೆಗೆ ಬೇಕಾದಂತ ಎಲ್ಲ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್ ನಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದು, ಕೆಆರ್ ಮಾರ್ಕೆಟ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.ಹೂವು ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ ಸಹ ನಮ್ಮ ಜನ ಸಂಪ್ರದಾಯ ಸಂಸ್ಕೃತಿಯನ್ನು ಬಿಡಲ್ಲ. ಹೂವು ಹಣ್ಣು ಬಾಳೆಕಂದು ಸೇರಿದಂತೆ ಅಗತ್ಯ ವಸ್ತು ಖರೀದಿಗೆ ಜನ ಮುಗಿ…
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ನಾಡಿನೆಲ್ಲೆಡೆ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಇಂದು ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿ ಅಂಗವಾಗಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಯಲಿದೆ. ಈ ಒಂದು ಆಯುಧ ಪೂಜೆಯನ್ನು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಲಿದ್ದಾರೆ. ರಾಜ ಪರಂಪರೆಯಂತೆ ಶುಕ್ರವಾರ ಬೆಳಗ್ಗೆ ಯದುವೀರ್, ದುರ್ಗಾಷ್ಟಮಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 6ಕ್ಕೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ ನಡೆಯಲಿದೆ. ಆ ವೇಳೆಗೆ ಆನೆ ಬಾಗಿಲಿಗೆ ಪಟ್ಟದ ಹಸು ಆಗಮನವಾಗುತ್ತದೆ. ಬೆಳಗ್ಗೆ 6.40ರಿಂದ 7.10ರ ಸಮಯದಲ್ಲಿ ಅರಮನೆ ಕಲ್ಯಾಣ ಮಂಟಪದಿಂದ ಆನೆ ಬಾಗಿಲಿನ ಮೂಲಕ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅವುಗಳನ್ನು ಸ್ವಚ್ಛಗೊಳಿಸಿ 7.30ರಿಂದ 8 ಗಂಟೆಯವರೆಗೆ ಕಲ್ಯಾಣ ಮಂಟಪಕ್ಕೆ ತರಲಾಗುತ್ತದೆ. ಬೆಳಗ್ಗೆ 9.05ಕ್ಕೆ ಚಂಡಿಕಾ ಹೋಮ, ಪೂರ್ಣಾಹುತಿ ಆದ ಬಳಿಕ ಮಧ್ಯಾಹ್ನ 12.20ರಿಂದ 12.45ರವರೆಗೆ ಕಲ್ಯಾಣ ಮಂಟಪದಲ್ಲಿ ಯದುವೀರ್ ಆಯುಧಗಳಿಗೆ ಪೂಜೆ ಸಲ್ಲಿಸುವರು. ಬಳಿಕ ಆನೆ ತೊಟ್ಟಿಯಲ್ಲಿ ಪಟ್ಟದ…
ಬೆಂಗಳೂರು : ಸಿಎಂ ಬದಲಾವಣೆ ಕುರಿತಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸಚಿವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.ಈ ವಿಷಯವಾಗಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಸಭೆ ನಡೆಸಿದ ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗೆ ಯಾರು ಹೇಳಿದ್ದು? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ ಅವರು, ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟು ಹಾಕುತ್ತಿದ್ದೀರಿ. ಇಷ್ಟಕ್ಕೂ ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಎಂದು ಹೇಳಿದ್ದು ಯಾರು? ನಾನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಸಂಪುಟ ಸದಸ್ಯರಿಗೆ ಸಿದ್ದರಾಮಯ್ಯ ನೀಡಿದ ಸ್ಪಷ್ಟ ಸಂದೇಶ. ಸಭೆಯಲ್ಲಿ ಕೆಲ ಸಚಿವರು ಹಾಗೂ ನಾಯಕರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ ಅವರು, ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ…
ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು. ಇದೀಗ ವಿಜಯಪುರದಲ್ಲಿ ಗೃಹಲಕ್ಷ್ಮಿ ಹಣದಿಂದ ಗ್ರಾಮದ ದೇವತೆಗೆ ನವರಾತ್ರಿಯ ನಿಮಿತ್ಯ ದೇವಿ ಮೂರ್ತಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಹೌದು ಈ ಒಂದು ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ತಮಗೆ ಬಂದ 12 ತಿಂಗಳ ಗೃಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ತ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ದೇವಿ ಮೂರ್ತಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ವಿಷಯ ತಿಳಿದು ಶಾಸಕ ಅಶೋಕ್ ಮನಗೂಳಿ ದಂಪತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಪಾಲಿಸಿದೆ. ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ 1.60…
ರಾಮನಗರ : ಚಿಕ್ಕ ಮಕ್ಕಳನ್ನು ಪೋಷಕರಾದವರು ಹೊರಗಡೆ ಬಿಡಲೆಬಾರದು. ಅಕಸ್ಮಾತ್ ಅವರನ್ನು ಹೊರಗಡೆ ಬಿಟ್ಟರೆ ಅವರ ರಕ್ಷಣೆ ಮಾಡಲೇಬೇಕು. ಇಲ್ಲವಾದರೆ ಅನಾಹುತ ಸಂಭಾವಿಸುವ ಸಾಧ್ಯತೆ ಇರುತ್ತದೆ. ಇದೀಗ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಮುಂದೆ ಅಥವಾಡುತ್ತಿದ್ದ 3ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಹೌದು ಮನೆ ಮುಂದೆ ಆಡುತ್ತಿದ್ದ 3 ವರ್ಷದ ಬಾಲಕ, ಗ್ರಾಮದ ಸಿಂಧು ಮತ್ತು ಶ್ರೀನಿವಾಸ್ ಪುತ್ರ ಪ್ರದ್ವಿನ್ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಅಡಕೆ ಹಳ್ಳ ಗ್ರಾಮದಲ್ಲಿ ಸಂಭವಿಸಿದೆ.ಹೆರಿಗೆಗೆಂದು ಸಿಂಧು ತವರು ಮನೆಗೆ ಬಂದಿದ್ದು, 2ನೇ ಮಗು ವಿನ ನಿರೀಕ್ಷೆಯಲ್ಲಿರುವಾಗ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಪಿಜಿಯಲ್ಲಿ ಯುವತಿಯ ಭೀಕರ ಕೊಲೆಗೆ ಸಂಬಂಧಪಟ್ಟಂತೆ, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ಸಂಖ್ಯೆಗಿಂತ (ಪಿಜಿ) ಹೆಚ್ಚು ಅನಧಿಕೃತ ಪಿಜಿಗಳು ಕಾರ್ಯಾಚರಣೆ ನಡೆಸುತ್ತಿವೆ. ಹಾಗಾಗಿ ಬಿಬಿಎಂಪಿ ಅನಧಿಕೃತ ಪಿಜಿಗಳಿಗೆ ಬೀಗ ಜಡಿದು ಇನ್ನು ಅಧಿಕೃತ ಪಿಜಿಗಳಿಗೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದೆ. ಬಿಬಿಎಂಪಿ ಕಾಯ್ದೆ ಪ್ರಕಾರ ನಗರದಲ್ಲಿ ಪಿಜಿಗಳನ್ನು ನಡೆಸಲು ಪಾಲಿಕೆಯಿಂದ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ, ಆದರೆ ನಗರದಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ನಡೆಯುತ್ತಿರುವ ಪಿಜಿಗಳ ಸಂಖ್ಯೆಯೇ ಹೆಚ್ಚಾಗಿರುವುದು ಇದೀಗ ಬೆಳಕಿಗೆ ಬಂದಿದೆ.ಒಟ್ಟು 2,193 ಪಿಜಿಗಳು ಬಿಬಿಎಂಪಿ ಪರವಾನಗಿ ಪಡೆದು ನಡೆಸುತ್ತಿದ್ದರೆ 2,320 ಪಿಜಿಗಳು ಯಾವುದೇ ಅನುಮತಿ ಪಡೆಯದೇ ನಡೆಸಲಾಗುತ್ತಿದೆ. ಈ ಪೈಕಿ ಬೆಂಗಳೂರಿನ ಹೊರ ವಲಯಗಳಾದ ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕ ವಲಯ, ಪೂರ್ವ ವಲಯದಲ್ಲಿ ಅತ್ಯಧಿಕ ಸಂಖ್ಯೆಯ ಅನಧಿಕೃತ ಪಿಜಿಗಳಿವೆ. ಮಾರ್ಗಸೂಚಿ ಬಿಡುಗಡೆ: ನಗರದಲ್ಲಿರುವ ಎಲ್ಲ ಪಿಜಿಗಳಿಗೆ ಬಿಬಿಎಂಪಿ…












