Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಪಿಸ್ತೂಲ್ ಹಿಡಿದು ಕಾಂಗ್ರೆಸ್ ಮುಖಂಡ ಬಿಲ್ಡಪ್ ತೆಗೆದುಕೊಂಡಿದ್ದಾನೆ. ದುರಂದರ ಹಾಡಿಗೆ ಸ್ಟೆಪ್ಸ್ ಹಾಕಿರುವ ಘಟನೆ ನಡೆದಿದೆ. ಅಫ್ಜಲಪುರ ಕಾಂಗ್ರೆಸ್ ಮುಖಂಡ ಮತಿನ್ ಪಟೇಲ್ ಕಲ್ಬುರ್ಗಿಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮತೀನ್ ಪಟೇಲ್ ಪಿಸ್ತೂಲು ಹಿಡಿದು ಬಿಲ್ಡಪ್ ತೆಗೆದುಕೊಂಡಿದ್ದಾನೆ. ಅಫ್ಜಲ್ಪುರ ಶಾಸಕ ಎಂ.ವೈ ಪಾಟೀಲ್ ಬಳಗ ಬಂಟ ಆಗಿರುವ ಬಲಗೈ ಬಂಟ ಮತಿನ್ ಪಟೇಲ್ ಹಿಡಿದು ಬಿಲ್ಡಪ್ ತೆಗೆದುಕೊಂಡಿದ್ದಾನೆ ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡುವುದು ಅಪರಾಧ ಅದರಲ್ಲೂ ಈ ರೀತಿ ಪಿಸ್ತುಲ್ ಹಿಡಿದುಕೊಂಡು ದುರಂದರ ಹಾಡಿಗೆ ಬಿಲ್ಡಪ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಈಗಲೇ ಪೊಲೀಸರು ಕೂಡ ಈ ಕುರಿತು ತನಿಖೆ ನಡೆಸುತ್ತಿದ್ದು ಶಾಸ್ತ್ರಾಸ್ತ್ರಗಳು ಎಲ್ಲಿಂದ ಬಂದವು ಎನ್ನುವುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೋಲಾರ : ಕೋಲಾರದಲ್ಲಿ ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಂಧ್ರಪ್ರದೇಶ ಮೂಲದ ರೌಡಿಶೀಟರ್ ನನ್ನ ಕೊಚ್ಚಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಳ್ಳಿ ಬಳಿ ಈ ಒಂದು ಬರ್ಬರ ಕೊಲೆ ನಡೆದಿದೆ. ರೌಡಿಶೀಟರ್ ಆದ ಭಾಸ್ಕರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೌಡಿಶೀಟರ್ ಭಾಸ್ಕರ್ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಾಸ್ಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಸ್ಥಳಕ್ಕೆ ನಂಗಲಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತದಿಂದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ. ಈ ಒಂದು ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸೈಡ್ ಪಡೆದಿರುವ ಇತರರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ತನಿಖೆ ಮುಂದುವರಿಸಿರುವ ಲೋಕಾಯುಕ್ತ ಎಸ್ ಪಿ ಉದೇಶ ಅವರು ಪ್ರತಿ ಕೇಸ್ ಸಂಬಂಧ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ನೀಡಿದ್ದಾರೆ. ಅಂದಿನ ಮೂಡ ಆಯುಕ್ತರ ತಂತ್ರ ನಟೇಶ್ ಹಾಗೂ ದಿನೇಶ್ ಅವಧಿಯಲ್ಲಿ 50:50 ಅನುಪಾತದಲ್ಲಿ 1050 ಸೈಟ್ ಹಂಚಿಕೆಯಾಗಿದ್ದು, ಸಂಬಂಧ ಪಟ್ಟಂತೆ 134 ಪ್ರಕರಣ ದಾಖಲಾಗಿದ್ದು ಪ್ರತಿ ಪ್ರಕರಣದ ಈಗಾಗಲೇ ಹಲವರಿಗೆ ನೋಟಿಸ್ ನೀಡಲಾಗಿದೆ ಹಾಗಾಗಿ 50 ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆ ಮುಂದುವರೆಸಿದೆ.
ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಸೇರಿದಂತೆ ಎಫ್ಡಿಎ ಎಸ್ಡಿಎ ಪರೀಕ್ಷೆಯಲ್ಲೂ ಕೂಡ ಭಾರಿ ಅಕ್ರಮ ನಡೆದಿತ್ತು. ಇದೀಗ ಆರ್ಮಿ ಗ್ರೂಪ್ ಸಿ ಪರೀಕ್ಷೆಯಲ್ಲಿ ಕಳ್ಳಾಟ ಮಾಡಿರುವ ಆರೋಪ ಕೇಳಿಬಂದಿದೆ. ಪರೀಕ್ಷೆ ವೇಳೆ ಎಲೆಕ್ಟ್ರಾನಿಕ್ ಡಿವೈಸ್ ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಈ ಸಂಬಂಧ 18 ಮಂದಿ ಆಭ್ಯರ್ಥಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿವಿಲ್ ಡಿಫೆನ್ಸ್ ಎಂಪ್ಲಾಯಿ ರೆಕ್ರೂಟ್ ಮೆಂಟ್ ನ ಗ್ರೂಪ್ ಸಿ ಯ ಲೋಯರ್ ಡಿವಿಜನ್ ಕ್ಲರ್ಕ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಹಲಸೂರಿನ 515 ಆರ್ಮಿ ಬೇಸ್ ವರ್ಕ್ ಶಾಪ್ ನಲ್ಲಿ ಭಾನುವಾರ ಬೆಳಗ್ಗೆ 10 ರಿಂದ 12 ಗಂಟೆವರೆಗೆ ಪರೀಕ್ಷೆ ನಡೆದಿತ್ತು. ಈ ವೇಳೆ ಒಟ್ಟು 18 ಜನ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಪರೀಕ್ಷೆ ಬರೆದಿರೋದು ಪತ್ತೆಯಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಪರೀಕ್ಷಾ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು…
ವಿಜಯಪುರ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ಒಂದು ನಡೆದಿದ್ದು ಯುವತಿ ಒಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಈ ವೇಳೆ ತಂದೆ ತಾಯಿ ಆಕೆಯ ಕಾಲಿಗೆ ಬಿದ್ದು ಗೊಗರೆದರು ಕೂಡ ಅದನ್ನು ಲೆಕ್ಕಿಸಿದೆ ನನ್ನ ಗಂಡನ ಜೊತೆ ಹೋಗುತ್ತೇನೆ ಎಂದು ತಂದೆ ತಾಯಿಯನ್ನು ನಿರ್ಲಕ್ಷಿಸಿ ಯುವಕನೊಂದಿಗೆ ಪರಾರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೌದು ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಅದೇ ಠಾಣೆಗೆ ಸ್ವಯಂಪ್ರೇರಿತವಾಗಿ ಪ್ರಿಯಕರನೊಂದಿಗೆ ಬಂದ ಯುವತಿ, ತಾನು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ. ಈ ವೇಳೆ ಠಾಣೆಗೆ ಬಂದ ಪೋಷಕರು, ಎಷ್ಟೇ ಕರೆದರೂ ಒಪ್ಪದ ಮಗಳು ಗಂಡನೊಂದಿಗೇ ಹೋದಾಗ, ಆಕೆಯಿದ್ದ ಪೊಲೀಸ್ ವಾಹನಕ್ಕೂ ಅಡ್ಡಬಿದ್ದು ಮಗಳನ್ನು ಓಲೈಸಲು ಪೋಷಕರು ಪ್ರಯತ್ನಿಸಿದ್ದಾರೆ. ಮನೆಗೆ ವಾಪಸ್ ಬರುವಂತೆ ಮಗಳಲ್ಲಿ ಅಂಗಲಾಚಿದ್ದಾರೆ. ಆದರೆ ಯುವತಿ…
ಬೆಂಗಳೂರು, ಫೆ. 10, (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ…
ಬೆಂಗಳೂರು : ದಿನಾಂಕ 09/02/2026 ರಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರನ್ನು ಭೇಟಿ ಮಾಡಿ, ವಾಹನ-4 ಪೋರ್ಟಲ್ ಮೂಲಕ ರಾಜ್ಯದಲ್ಲಿ “ಭಾರತ್ ಟ್ಯಾಕ್ಸಿ” ಯೋಜನೆಯನ್ನು (ಬೈಕ್ ಟ್ಯಾಕ್ಸಿ/ದ್ವಿಚಕ್ರ ವಾಹನವನ್ನು ಹೊರತುಪಡಿಸಿ) ಆಟೋ ಮತ್ತು ಟ್ಯಾಕ್ಸಿಗಳಿಗೆ ಕೂಡಲೇ ಜಾರಿಗೆ ತರಲು ಮನವಿ ಸಲ್ಲಿಸಿರುತ್ತಾರೆ. ಖಾಸಗಿ ಅಗ್ರಿಗೇಟರ್ಗಳಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಕಷ್ಟ ಅನುಭವಿಸುತ್ತಿರುವುದರಿಂದ ಕೇಂದ್ರ ಸರ್ಕಾರವು “ಭಾರತ್ ಟ್ಯಾಕ್ಸಿ” ಯೋಜನೆಯನ್ನು ಪ್ರಾರಂಭಿಸಿದ್ದು, ರಾಜ್ಯದಲ್ಲಿ ಈ ಯೋಜನೆಯನ್ನು ವಾಹನ್ ಪೋರ್ಟಲ್ ಮೂಲಕ ತರಬೇಕೆಂದು, ಅಗ್ರಿಗೇಟರ್ ವ್ಯವಸ್ಥೆಯಲ್ಲಿ ಚಾಲಕರಿಂದ ಪ್ರತಿ ಪ್ರಯಾಣಕ್ಕೆ 20% ರಿಂದ 35% ರವರೆಗೆ ಕಮಿಶನ್ ಪಡೆಯುತ್ತಿರುವುದರಿಂದ ಚಾಲಕರಿಗೆ ತೊಂದರೆಯುಂಟಾಗುತ್ತಿರುವುದಾಗಿ, ವಾಹನ-4 ಪೋರ್ಟಲ್ ಯೋಜನೆಯಿಂದ ನೋಂದಣಿ, ಪರವಾನಗಿ, ವಿಮೆ ಸುಲಭವಾಗಿ ಪಾರದರ್ಶಕವಾಗಿ ದೊರೆಯುವಂತಾಗುತ್ತದೆ. ಇದರಿಂದ ಪ್ರಯಾಣಿಕರ ಸುರಕ್ಷತೆ, ಅಪಘಾತ ಅಥವಾ ಅನಾಹುತದ ಸಂದರ್ಭದಲ್ಲಿ ಪರಿಹಾರ ದೊರೆಯುವುದಾಗಿ, (ಆದರೆ ಸದರಿ ಯೋಜನೆಯಲ್ಲಿ ಬೈಕ್ ಟ್ಯಾಕ್ಸಿ/ದ್ವಿಚಕ್ರ ವಾಹನವನ್ನು ಸೇರಿಸಬಾರದೆಂದು) ಸೇರಿಸಿದಲ್ಲಿ…
ಯಾದಗಿರಿ : ಮಧ್ಯಪಾನ ಬಿಡು ಅಂದಿದ್ದಕ್ಕೆ ಮಗಳನ್ನೇ ತಾಯಿಯೊಬ್ಬಳು ಕೊಲೆ ಮಾಡಿರುವ ಘಟನೆ ವರದಿಯಾಗಿದೆ, ಕತ್ತು ಹಿಸುಕಿ 10 ವರ್ಷದ ಮಗಳನ್ನು ತಾಯಿ ಕೊಲೆ ಮಾಡಿರುವ ಘಟನೆ ಯಾದಗಿರಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಕೃತ್ಯ ನಡೆದಿದೆ. ಮಗಳನ್ನ ಕೊಂದ ಬಳಿಕ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಾಯಿ ನಿರ್ಮಲ ಡ್ರಾಮಾ ಮಾಡಿದ್ದಾಳೆ. 15 ರೂಪಾಯಿ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ನಿರ್ಮಲ ಕೊಲೆಯ ಬಳಿಕ ನಾಟಕವಾಡಿದ್ದಾಳೆ. ತಂದೆ ತಾಯಿ ಇಬ್ಬರು ಕುಡಿತದ ಚಟಕ್ಕೆ ದಾಸರಾಗಿದ್ದರು. ಆರೋಪಿ ನಿರ್ಮಲಾಗೆ ನಾಲ್ಕು ಜನ ಮಕ್ಕಳು ಇದ್ದಾರೆ. ಈ ರೀತಿ ಕುಡಿಯುತ್ತಿದ್ದರೆ ಕುಟುಂಬದ ನಿರ್ವಹಣೆ ಕಷ್ಟ ಆಗುತ್ತದೆ ಎಂದು ಮಕ್ಕಳು ತಾಯಿಗೆ ಬುದ್ದಿ ಹೇಳಿದ್ದಾರೆ. ಅದೇ ರೀತಿ ನಿನ್ನೆ ಕುಡಿದು ಮನೆಗೆ ಬಂದಿದ್ದಾಳೆ. ಈ ವೇಳೆ ಕೊಲೆಯಾದ ಪ್ರತಿಭಾ ಎನ್ನುವ ಮಗಳ ಜೊತೆ ನಿರ್ಮಲಾ ಜಗಳ ಮಾಡುತ್ತಾಳೆ. ಆಗ ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಪ್ರತಿಭಾಳನ್ನು ತಾಯಿ ನಿರ್ಮಲ ಕೊಲೆ ಮಾಡಿದ್ದಾಳೆ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಾನು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲರೂ ಸೇರಿ ಮಾತನಾಡಿದ್ದೇವೆ ಎಂದು ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಸಿದ್ದರಾಮಯ್ಯ ಏನು ಮಾತನಾಡಿದ್ದೇವೆ ಅಂತ ನಮಗೆ ಮಾತ್ರ ಗೊತ್ತು. ನಾವೇನು ಕದ್ದು ಮುಚ್ಚಿ ಮಾತಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಹಾಗೂ ನಾವು ಎಲ್ಲ ಸೇರಿ ಮಾತನಾಡಿದ್ದೇವೆ ಆ ಮಾತಿನ ಪ್ರಕಾರ ಇಬ್ಬರು ಮಾತನಾಡಿಕೊಂಡಿದ್ದೇವೆ. ಬೇರೆ ಯಾರು ಟೆನ್ಶನ್ ತೆಗೆದುಕೊಳ್ಳುವುದು ಹೇಳಿಕೆ ಕೊಡುವುದರಿಂದ ಯಾರಿಗೂ ಏನು ಪ್ರಯೋಜನ ಆಗಲ್ಲ. ಹೇಳಿಕೆ ಕೊಡುವವರು ನನ್ನ ಪರವಾಗಿ ಕೊಡಬಹುದು, ಅಥವಾ ನನ್ನ ವಿರುದ್ಧ ಕೊಡುತ್ತಿರಬಹುದು. ಮಂತ್ರಿಗಳು ಶಾಸಕರು ಯಾರೇ ಇರಲಿ, ಪಕ್ಷ ಡ್ಯಾಮೇಜ್ ಮಾಡುವ ಹೇಳಿಕೆಗಳಾಗಿವೆ ಹೊರತು ಪಕ್ಷಕ್ಕೆ ಒಳ್ಳೆಯ ಮಾಡುವ ಹೇಳಿಕೆಗಳಿಲ್ಲ. ಎಲ್ಲ ಬಾಯಿ ಮುಚ್ಚಿಕೊಂಡು ಇದ್ದಾರೆ ಒಳ್ಳೆದು ಅಂತ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಎಂದರು. ಎಐಸಿಸಿ ಮೀಟಿಂಗ್ ನಲ್ಲಿ ಭಾಗಿಯಾಗಲು ನಾನು…
ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣ ಮತ್ತು ನಗದು ಕಳ್ಳತನ ಆಗಿದೆ. 300 ಗ್ರಾಮ ಚಿನ್ನಾಭರಣ ಮತ್ತು 1.50 ಲಕ್ಷ ರೂಪಾಯಿ ನಗದು ಹಣ ಇದ್ದಂತಹ ಕೈ ಚೀಲ ಕಳ್ಳತನವಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ ಈ ಒಂದು ಕಳ್ಳತನ ನಡೆದಿದೆ. ನವೀನ್ ಎಂಬಾತನಿಗೆ ಸೇರಿದ 300 ಗ್ರಾಂ ಚಿನ್ನಾಭರಣ ಮತ್ತು 1.50 ಲಕ್ಷ ರೂಪಾಯಿ ಕಳ್ಳತನವಾಗಿದೆ. ಕೆಲಸದ ನಿಮಿತ್ಯ ನವೀನ್ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ. ಚಿನ್ನಾಭರಣ ಹಾಗೂ ನಗದು ಇದ್ದ ಕೈಚೀಲದೊಂದಿಗೆ ಬಂದಿದ್ದ. ಸಚಿವರ ಕಚೇರಿಯಲ್ಲಿ ಮಾರನೇ ದಿನ ಸಚಿವರ ಕಚೇರಿಗೆ ಬಂದು ನೋಡಿದಾಗ ಕೈಚೀಲ ನಾಪತ್ತೆಯಾಗಿತ್ತು. ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸಿಸಿಟಿವಿ ಪರಿಶೀಲನೆ ವೇಳೆ ಡಿ ಗ್ರೂಪ್ ನೌಕರಣ ಪಾತ್ರ ಇರುವುದು ಪತ್ತೆಯಾಗಿದೆ. ಆರೋಪಿ ಡಿ ಗ್ರೂಪ್ ನೌಕರರನ್ನು ವಿಧಾನಸೌಧ ಠಾಣೆಪಡಿಸಲು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು ತನಿಖೆ…














