Author: kannadanewsnow05

ಬೆಂಗಳೂರು : ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದ್ರೆ, ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ಇಂದು ಮಧ್ಯಾಹ್ನ 1:30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಿರ್ದೇಶಕ ನಾಗಶೇಖರ್‌ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ.ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ಅಪಘಾತದ ಕುರಿತು ನಾಗಶೇಖರ್ ಪ್ರತಿಕ್ರಿಯೆ ನೀಡಿದ್ದು, ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದ ಪರಿಣಾಮ ಅಪಘಾತಕ್ಕೆ ಕಾರಣವಾಯಿತು. ಕಾರು ಡ್ಯಾಮೇಜ್ ಆಗಿದೆ, ಅದು ಬಿಟ್ಟರೆ ನನಗೇನು ತೊಂದರೆ ಆಗಿಲ್ಲ ಎಂದು ನಾಗಶೇಖರ್ ತಿಳಿಸಿದ್ದಾರೆ. ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ, ಇನ್ನು ನಿರ್ದೇಶಕ ನಾಗಶೇಖರ್ ಅವ್ರ ಚೆಂಜ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

Read More

ಶಿವಮೊಗ್ಗ : ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದ. ಇದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಬಳಿಕ ಹೆದರಿ ಶರಾವತಿ ನದಿ ಸೇತುವೆ ಮೇಲಿಂದ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೌದು ಪತಿಯ ಹಲ್ಲೆಯಿಂದ ಗಾಯಗೊಂಡ ಪತ್ನಿ ಸಬೀತಾ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂದ ವ್ಯಕ್ತಿಯನ್ನು ಸದಾನಂದ ಭಟ್, ಎಂದು ತಿಳಿದುಬಂದಿದೆ.ಕಳೆದ 12 ವರ್ಷಗಳಿಂದ ಪ್ರತಿನಿತ್ಯ ಜಗಳ ಮಾಡಿಕೊಂಡಿದ್ದ ದಂಪತಿ. ಕಳೆದ ನಾಲ್ಕು ವರ್ಷಗಳಿಂದ ಒಂದೇ ಮನೆಯಲ್ಲಿದ್ದರೂ ಇಬ್ಬರು ಬೇರೆ ಬೇರೆ ಅಡುಗೆ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಪತಿಗೆ ಅನೈತಿಕ ಸಂಬಂಧ ಇರುವುದು ಪತ್ನಿಯ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಗಂಡನೊಂದಿಗೆ ಜಗಳಕ್ಕೆ ಬಿದ್ದಿದ್ದ ಪತ್ನಿ. ದಿನನಿತ್ಯ ಇದೇ ವಿಚಾರವಾಗಿ ಜಗಳವಾಡುತ್ತಿದ್ದ ಪತ್ನಿ. ಇದರಿಂದ ಬೇಸತ್ತು. ಪತ್ನಿ ಸಬಿತಾ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಸದಾನಂದ ಭಟ್. ಪತಿಯ ಹಲ್ಲೆಯಿಂದ ತೀವ್ರ ಪೆಟ್ಟಾಗಿ…

Read More

ಬೆಂಗಳೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿದೆ. ಇದರ ಮಧ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಹೌದು ಇಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸೂರತ್ನಿಂದ 100 ರೂಪಾಯಿ ಬೆಲೆಯ ಸೀರೆಗಳನ್ನು ಹೆಚ್ಚಿನ ಬೆಲೆ ನೀಡಿ ಸುಮಾರು 10 ಲಕ್ಷ ಸೀರೆಗಳನ್ನು ತರಿಸಲಾಗಿತ್ತು. ಈ ಕುರಿತು ವಿಧಾನ ಪರಿಷತ್ ಅಲ್ಲಿ ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದಾಗ ಈ ವಿಚಾರದ ಬಗ್ಗೆ ಚರ್ಚೆಯಾಗಿದೆ. ಈ ಹಗರಣದ ಬಗ್ಗೆ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ…

Read More

ಬಾಗಲಕೋಟೆ : ಕಳೆದ ಕೆಲವು ತಿಂಗಳುಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಮಹಿಳೆ ಒಬ್ಬಳು ಗರ್ಭಪಾತದಿಂದ ಸಾವನ್ನಪ್ಪಿದ್ದ ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೆ ಮಹಾಲಿಂಗಪುರದಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದ್ದು, ಹೆಣ್ಣು ಮಗುವೆಂದು ಗರ್ಭಪಾತ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರದ ಮಹಿಳೆ ಸಾವು ಕೇಸ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಪಾಟೀಲ್ ಆಸ್ಪತ್ರೆಯಲ್ಲಿ ಹೆಣ್ಣು ಮಗು ಎಂದು ಗರ್ಭಪಾತ ಮಾಡಿಸುವ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಈ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗರ್ಭಪಾತ ಮಾಡಿಸಿದ್ದಾರೆ ಆದರೆ ಗಂಡು ಮಗು ಎಂದು ಗೊತ್ತಾದ ಹಿನ್ನೆಲೆ ಕೇಸ್ ಬಹಿರಂಗವಾಗಿದೆ. ಡಾಕ್ಟರ್ ರಾಜೇಂದ್ರ ಪಾಟೀಲ್ ವಿರುದ್ಧ ಗರ್ಭಪಾತ ಮಾಡಿದ ಆರೋಪ ಇದೀಗ ಕೇಳಿಬಂದಿದ್ದು,…

Read More

ಮೈಸೂರು : ಆಕೆ 8 ತಿಂಗಳ ತುಂಬು ಗರ್ಭಿಣಿ ಇದನ್ನು ಲೆಕ್ಕಿಸದೆ ಪತಿಯಾದವನು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದರಿಂದ ಮನನೊಂದು 8 ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಹೌದು ಮೈಸೂರಿನ ಕನಕಗಿರಿಯಲ್ಲಿ ಚೈತ್ರ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಕನಕಗಿರಿಯ ಶರತರಾಜು ಜೊತೆ ಚೈತ್ರ ಮದುವೆಯಾಗಿದ್ದಳು. ಇನ್ನೂ ಚೈತ್ರಾ ಪತಿ ಶರತ್ ರಾಜ್ ನನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರುಕುಳ ತಾಳಲಾರದೆ ಚೈತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪ ಹೇಳಿ ಬಂದಿದ್ದು ಪತಿಯ ಮನೆಯ ವಿರುದ್ಧ ವಿರುದ್ಧ ಚೈತ್ರ ಪೋಷಕರು ದೂರು ಸಲ್ಲಿಸಿದ್ದು, ಘಟನೆ ಕುರಿತಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಹಂತದ ಯೋಜನೆ ಉದ್ಘಾಟನೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದರು. ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ ಯಾವುದೇ ಸಂಶಯ ಬೇಡ. ಎರಡನೇ ಹಂತದ ಯೋಜನೆಯ ಕಾಮಗಾರಿ 2026 27ಕ್ಕೆ ಮುಗಿಯಲಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಯಾವುದೇ ಅನುಮಾನ ಬೇಡ. ಎತ್ತಿನಹೊಳೆ ಯೋಜನೆ ಕಾಮಗಾರಿಗೆ ನಾನೇ ಭೂಮಿ ಪೂಜೆ ಮಾಡಿದ್ದು. 2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ನಾನು ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ್ದೆ. ಇಂದು ನಾನೇ ಆ ಒಂದು ಕಾಮಗಾರಿಯ ಉದ್ಘಾಟನೆ ಮಾಡಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ಈ ಒಂದು ಯೋಜನೆಯು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ರಾಮನಗರ, ಚಿಕ್ಕಮಂಗಳೂರು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು. 7 ಜಿಲ್ಲೆಗಳಿಗೆ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. 527 ಕೆರೆಗಳಿಗೆ ನೀರು ತುಂಬಿಸುವ ಕುಡಿಯುವ ನೀರಿನ ಯೋಜನೆಯಾಗಿದೆ…

Read More

ಬೆಂಗಳೂರು : ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಕೂಡಲೇ ಅಲ್ಲಿನ ಹೇಮಾ ಸಮಿತಿ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕೂಡ ಅಂಥ ಒಂದು ಸಮಿತಿ ರಚನೆ ಮಾಡಬೇಕು ಎಂದು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ನಟ ನಟಿಯರು ಮನವಿ ಸಲ್ಲಿಸಿದರು. ಈ ಒಂದು ವಿಚಾರವಾಗಿ ಕನ್ನಡದ ಹಿರಿಯ ಖ್ಯಾತ ನಟ ರಮೇಶರವಿಂದ ಪ್ರತಿಕ್ರಿಯೆ ನೀಡಿದ್ದು, ನಾನು ಆಕ್ಟಿವಿಸ್ಟ್ ಅಲ್ಲ ಆದರೂ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನ್ಯಾಯ ಆಗಿರೋರಿಗೆ ನ್ಯಾಯ ಸಿಗಬೇಕು. ನಾನು ಆಕ್ಟಿವಿಸ್ ಅಲ್ಲ ಆದ್ರೂ ಬೆಂಬಲ ಕೊಡುತ್ತೇನೆ ಎಂದು ಕಮಿಟಿ ರಚನೆ ವಿಚಾರಕ್ಕೆ ರಮೇಶ್ ಅರವಿಂದ್ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಎಲ್ಲೇ ಕಿರುಕುಳ ನಡೆದರು ಅದು ತಪ್ಪು. ನಾನು ಸದ್ಯ ಆಕ್ಟಿವ್ಸ್ಟ್ ಅಲ್ಲ ಆದರೂ ಬೆಂಬಲ ಕೊಡುತ್ತೇನೆ ಎಂದು ಅವರು ಬೆಂಬಲ ಸೂಚಿಸಿದರು. ಸಿನಿಮಾ ಅನ್ನೋದು ದೊಡ್ಡ ಸಾಗರ. ಇದರಲ್ಲಿ ನಾವೆಲ್ಲರೂ ಒಂದೇ ಫ್ಯಾಮಿಲಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ.ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಅವರು ಕಾಮನ್ ಮ್ಯಾನ್ ಅಲ್ಲ. ಇಂಡಸ್ಟ್ರಿಗೆ ದರ್ಶನ್ (Darshan) ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟಿಗಟ್ಟಲೇ ಬಂಡವಾಳ ಹೂಡಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಇರುವ ಕೆಲವೇ ಸೂಪರ್ ಸ್ಟಾರ್‌ಗಳಲ್ಲಿ ದರ್ಶನ್ ಕೂಡ ಒಬ್ಬರು ಸೂಪರ್ ಸ್ಟಾರ್. ಹಾಗಾಗಿ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ ಎಂದರು. ನಮಗೂ ಆ…

Read More

ಬೆಂಗಳೂರು : ತನ್ನ ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣ ಮೂಲದ ನಕ್ಸಲನ್ನು ಇದೀಗ ಕೇಂದ್ರ ಅಪರಾಧ ವಿಭಾಗ (CCB) ಎಟಿಸಿ ತಂಡ ಬಂಧಿಸಿದೆ. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್ ಎಂದು ತಿಳಿದುಬಂದಿದೆ. ಪೊಲೀಸ್ ಆಯುಕ್ತರು ಹೇಳಿದ್ದೇನು? ಪ್ರಕರಣ ಸಂಬಂಧ, ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ಹರಿಯಾಣ ಮೂಲದ ಅನಿರುದ್ದ ರಾಜನ್​ ಖಾಸಗಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದನು. ಈತ ನಿಷೇಧಿತ ಎಡಪಂಥಿಯ ಸಂಘಟನೆಯ ಸಂಪರ್ಕ ಹೊಂದಿದ್ದಾನೆ. ಆ ಸಂಘಟನೆಗಳ ಜೊತೆಗೆ ಈತ ಕಾರ್ಯ ನಿರ್ವಹಿಸುತ್ತಿದ್ದನು. ಸದ್ಯ ಆತನನ್ನ ಬಂಧಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನ 15 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದೇವೆ.‌ ಸದ್ಯ ಆತನ ಕಾರ್ಯ ಚಟುವಟಿಕೆ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದರು. ನಕ್ಸಲ್ ಹಿನ್ನೆಲೆ? ಅನಿರುದ್ದ್ ನಿಷೇಧಿತ ಸಿಪಿಐ(ಎಂ) ನಕ್ಸಲ್ ಸಂಘಟನೆಯಲ್ಲಿ ಇದ್ದನು. ಅನಿರುದ್ದ್ ನಿಷೇಧಿತ ಬರಹಗಳನ್ನ ಬರೆದು ಪೋಸ್ಟ್​ ಮಾಡುತ್ತಿದ್ದನು. ಈತನಿಗಾಗಿ ಪೊಲೀಸ್​ ಮತ್ತು ನಕ್ಸಲ್ ನಿಗ್ರಹ ತಂಡ ಬಲೆ…

Read More

ಬೆಂಗಳೂರು : ರಾಜ್ಯದಲ್ಲಿ ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಕೆಲವೆಡೆ ನಡೆದ ಭೀಕರ ಅಪಘಾತದಲ್ಲಿ ಸುಮಾರು 12 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.ವಿಜಯಪುರ, ಬಾಗಲಕೋಟೆ, ರಾಮನಗರ, ಮಂಗಳೂರಿನಲ್ಲಿ ರಸ್ತೆ ಅಪಘಾತಗಳು ಸಂಭವಿಸಿವೆ. ಮೃತರ ಕುಟುಂಬಸ್ಥರ ಪಾಲಿಗೆ ಕಾರಳ ದಿನವಾಗಿದೆ ಎಂದರು ತಪ್ಪಾಗಲಾರದು. ಬಾಗಲಕೋಟೆ ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಬಿವಿವಿಯ ಶ್ರುತಿ ಒಂದಕುದರಿ (32), ಡೆಂಟಲ್ ಕಾಲೇಜ್ ಉಪನ್ಯಾಸಕಿ, ರಜನಿ ಒಂದಕುದರಿ (34), ಸಾಪ್ಟವೇರ್ ಇಂಜಿನಿಯರ್ ಅಭಿಷೇಕ್ ದೋತ್ರಿ (20) ಮೃತರು ಎಂದು ತಿಳಿದುಬಂದಿದೆ. ಸ್ಕೂಟಿಯಲ್ಲಿದ್ದ ಮಹಿಳೆಯರು ಡಿವೈಡರ್ ಕ್ರಾಸ್​ ಮಾಡಿ ಅಡ್ಡ ಬಂದು ವೇಗವಾಗಿ ಹೊರಟಿದ್ದ ಯಮಹಾ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಬೈಕ್​​ಗಳು ಪೀಸ್​ ಪೀಸ್​ ಆಗಿವೆ. ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ…

Read More