Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ಅಗ್ನಿಶಾಮಕ ದಳದ ಬಸ್ ಗಳು ಬೆಂಕಿ ನಂದಿಸುವ ಕಾರ್ಯಾಚರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಮತ್ತು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (DFS) ಅಧಿಕಾರಿ ತಿಳಿಸಿದ್ದಾರೆ. ಅಲಿಪುರದ ಫಿರ್ನಿ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸಂಜೆ 4 ಗಂಟೆ ಸುಮಾರಿಗೆ ಕರೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಘಟನೆಯು ಆತಂಕಕಾರಿಯಾಗಿದೆ ಮತ್ತು ಅವರು ಅದನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಅವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಧಿಕೃತ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಗೋದಾಮನ್ನು ಕಾಗದ ಮತ್ತು ರಾಸಾಯನಿಕಗಳನ್ನು ಸಂಗ್ರಹಿಸಲು ಬಳಸಲಾಗಿದೆ ಎಂದು ಶಂಕಿಸಲಾಗಿದೆ. ಆದರೆ ನಿಖರವಾದ ವಿವರಗಳು ಇನ್ನೂ ಲಭ್ಯವಿಲ್ಲ ಎಂದು ಅಗ್ನಿಶಾಮಕ…
ವಿಜಯಪುರ : ವಕ್ಫ್ ವಿವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ವಕ್ಫ್ ಮಂಡಳಿ ಸಭೆ ನಡೆಸಿ ಸಭೆಯಲ್ಲಿ ಇದುವರೆಗೂ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂರೆ ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ಮಾಡಿದ್ದಾರೆ ಎಂದು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲು ಹೇಳಿದ್ದೇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾದ ಆದೇಶ ನೀಡಿದ್ದಾರೆ. ರೈತರ ಜಮೀನನ್ನ ಯಾವುದೇ ಕಾರಣಕ್ಕೂ ತೆಗೆದುಕೊಳ್ಳುತ್ತಿಲ್ಲ. ಅವರು ನಮ್ಮ ಅನ್ನದಾತರು. ಅವರ ಜಮೀನು ತೆಗೆದುಕೊಳ್ಳೊಕೆ ಅಗುತ್ತಾ? ಎಂದರು. ರಾಜ್ಯದಲ್ಲಿ ವಕ್ಫ್ ಬೋರ್ಡ್ ಜಮೀನು ಒತ್ತುವರಿಯಾಗಿದೆ. 90 ಪ್ರತಿಶತ ಮುಸ್ಲಿಂರೇ ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ಮಾಡಿದ್ದಾರೆ. ಪಾಪ ಹಿಂದೂಗಳು ಕೇವಲ 10 ಪರ್ಸೆಂಟ್ ಮಾಡಿರಬಹುದು. ಯಾರನ್ನೂ ಒಕ್ಕಲೆಬ್ಬಿಸೊ ಉದ್ದೇಶವಿಲ್ಲ. ಹಾಗಾಗಿ…
ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟೀಸ್ ಗಳನ್ನು ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದು, ನಿಮ್ಮ ಸರ್ಕಾರದಲ್ಲಿ ಆಗಿ ಹೋದಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅನೇಕ ರೈತರ ಆಸ್ತಿಗಳನ್ನು ವಕ್ಫ್ ಗೆ ಬದಲಾಯಿಸಿರುವ ಕುರಿತು ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಸ್ಪೋಟಕ್ಕೆ ಹೇಗೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ…
ನವದೆಹಲಿ : ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಅಂತ ಹಿರಿಯರು ಗಾದೆ ಹೇಳಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಒಂದು ಜಗಳ, ಗಲಾಟೆ, ಮನಸ್ತಾಪಗಳು ವಿಕೋಪಕ್ಕೆ ಹೋಗಿ ಪ್ರಾಣಕ್ಕೆ ಕುತ್ತು ತರುತ್ತಿವೆ. ದಂಪತಿಗಳ ನಡುವೆ ಗಲಾಟೆ ಉಂಟಾಗಿದ್ದು ಈ ವೇಳೆ ರೊಚ್ಚಿಗೆದ್ದ ಪತ್ನಿ ಗಂಡನ ಮರ್ಮಾಂಗವನ್ನೇ ಕತ್ತರಿಸಿ ಹಾಕಿರುವ ಘಟನೆ ಉತ್ತರ ದಿಲ್ಲಿಯಲ್ಲಿ ನಡೆದಿದೆ. ಹೌದು ಗಾಯಾಳು ಪತಿಯನ್ನು ಸಫ್ದರ್ ಜಂಗ್ ಎಂದು ಗುರುತಿಸಲಾಗಿದ್ದು, ಘಟನೆ ನಡೆದ ತಕ್ಷಣ ಆತನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಸಫ್ದರ್ ಜಂಗ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಘಟನೆಯ ಕುರಿತು ಅವರ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕಿದೆ. ಗಾಯಾಳು ಪತಿಯು ಚೇತರಿಸಿಕೊಂಡ ನಂತರ, ಘಟನೆಯ ಬಗ್ಗೆ ಮತ್ತಷ್ಟು ವಿವರಗಳು ಲಭ್ಯವಾಗಲಿವೆ.ಸದ್ಯ ಆರೋಪಿ ಮಹಿಳೆ ತಲೆ ಮರೆಸಿಕೊಂಡಿದ್ದು, ಆಕೆಯನ್ನು ಸೆರೆ ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನ : ಸುಪ್ರಸಿದ್ದ ಹಾಸನಾದ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡಲಾಗುತ್ತದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆ ಉತ್ಸವ ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ. ಬೇರೆ ಭಾಗಗಳಿಂದ ದೇವಿ ದರ್ಶನಕ್ಕೆ ಬಾರದಂತೆ ಭಕ್ತರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ. ದೇಗುಲ ಒಳಭಾಗದಲ್ಲಿ ಸ್ವಚ್ಚತೆ, ಸಿಂಗಾರ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಗಣ್ಯರ ಸಮ್ಮುಖದಲ್ಲಿ ದೇಗುಲದ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮೂಲಕ ಈ ವರ್ಷದ ದರ್ಶನೋತ್ಸವಕ್ಕೆ ಬೀಳಲಿದೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.ಹಾಸನಾಂಬೆ ದೇಗುಲದ ಹೊರಭಾಗ ಆವರಣದಲ್ಲಿ ನಿನ್ನೆ ಸಿದ್ದೇಶ್ವರ ಸ್ವಾಮಿ ಜಾತ್ರೆ ನಡೆಯಿತು.ಇಂದು ಬೆಳಗ್ಗೆ 6 ಗಂಟೆಗೆ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ನಡೆಯಲಿದೆ. ಕೆಂಡೋತ್ಸವದ ನಂತರ ಹಾಸನಾಂಬೆ ದೇವಿಗೆ ಪೂಜೆ ನಡೆಯಲಿದೆ. ಬಳಿಕ ಹಾಸನಾಂಬೆ ನಿರಾಭರಣ ದೇವಿಯಾಗಲಿದ್ದಾಳೆ. ಕಳೆದ 10 ದಿನಗಳಿಂದ ಹಾಸನಾಂಬೆ…
ತುಮಕೂರು : ಕಳೆದ ಕೆಲವು ತಿಂಗಳುಗಳ ಹಿಂದೆ ತುಮಕೂರಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು. ಈ ಹಿನ್ನೆಲೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೂ ಕೂಡ ಈ ಒಂದು ಮೀಟರ್ ದಂಧೆ ನಿಂತಿಲ್ಲ.ಇದೀಗ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕನನ್ನು ಅರುಣ್ ಕುಮಾರ್ (34) ಎಂದು ತಿಳಿದುಬಂದಿದೆ. ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪದೇ ಪದೇ 1 ಲಕ್ಷಕ್ಕೆ 5 ಲಕ್ಷ ಬಡ್ಡಿ ನೀಡುವಂತೆ ದಂಧೆಕೋರರು ಅರುಣ್…
ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟೀಸ್ ಗಳನ್ನು ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದು, ನಿಮ್ಮ ಸರ್ಕಾರದಲ್ಲಿ ಆಗಿ ಹೋದಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅನೇಕ ರೈತರ ಆಸ್ತಿಗಳನ್ನು ವಕ್ಫ್ ಗೆ ಬದಲಾಯಿಸಿರುವ ಕುರಿತು ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಸ್ಪೋಟಕ್ಕೆ ಹೇಗೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ…
ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್ಟಿಓ ಇನ್ಸ್ಪೆಕ್ಟರ್ ನಡುವೆ ಟಾಕ್ ವಾರ್ ನಡೆದಿದ್ದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್ ಟಿ ಓ ಇನ್ಸ್ಪೆಕ್ಟರ್ ಮಂಜುನಾಥ್ ನಡುವಿನ ಟಾಕ್ ವಾರ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕ ಶೈಲೇಂದ್ರ ಕಡೆ ಕೈಮಾಡಿ ಮಂಜುನಾಥ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದ್ದು, ಫೇಸ್ಬುಕ್ ಹಾಗೂ ವಾಟ್ಸಪ್ ನಲ್ಲಿ ಟಾಕ್ ವಾರ್ ವಿಡಿಯೋ ಸದ್ಯ ಹರಿದಾಡುತ್ತಿದೆ. ಆಡಿಯೋ ಬಿಡುಗಡೆ ಮಾಡಿ ಶಾಸಕರಿಗೆ ಮಂಜುನಾಥ್ ಕೊರವಿ ಮನವಿ ಮಾಡಿದ್ದಾರೆ. ಪೂರ್ತಿ ವಿಡಿಯೋ ಬಿಡುಗಡೆ ಮಾಡುವಂತೆ ಆರ್ ಟಿ ಓ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಾನೊಬ್ಬ ಸಣ್ಣ ಅಧಿಕಾರಿ ನಾನು ಮಾತನಾಡುವ ವಿಡಿಯೋ ಮಾಡಿಸಿದ್ದಾರೆ. ನಾನು ಮಾತನಾಡಿದ್ದ ವಿಡಿಯೋ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ ರಹೀಂ ಖಾನ್ ಗೆ ವಿಡಿಯೋ ರವಾನಿಸಿದ್ದಾರೆ. ಪೂರ್ತಿ ವಿಡಿಯೋ ಹಾಕಿದ್ದರೆ…
ಯಾದಗಿರಿ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯನ್ನು ನಾಲ್ವರು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗ್ರಾಮದ ಎಎಂಡಿ ಕ್ಯಾಂಪಿನ ಬಳಿ ಸಂಜೆ ನಡೆದಿದೆ. ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ (35) ಎಂದು ತಿಳಿದು ಬಂದಿದೆ.ನಾಲ್ಕಾರು ಜನ ಸೇರಿ ಬೈಕ್ ಮೇಲೆ ಹೊರಟಿದ್ದ ತಿಪ್ಪಣ್ಣನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಶಿಳ್ಳೆ, ಕೇಕೆ ಹಾಕುತ್ತಾ ಟೊಕಾಪುರ ರಸ್ತೆ ಮೂಲಕ ತೆರಳಿದರು ಎಂದು ಕೊಲೆ ನಡೆದಿದ್ದನ್ನು ನೋಡಿದವರು ತಿಳಿಸಿದ್ದಾರೆ. ಹಳೇ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪಿಐ ಎಸ್.ಎಂ.ಪಾಟೀಲ್ ಪೊಲೀಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಎಸ್ ಪಿ ಭೇಟಿ ನೀಡಿ ಪರಿಶೀಲನೆಗೆ ಸೂಚಿಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆ ನಿಲ್ಲಿಸುವ ಕುರಿತು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದರು. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗ್ಯಾರಂಟಿ ಯೋಜನೆ ಕುರಿತು ಕೀಳಾಗಿ ಮಾತಾಡ್ಬೇಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದರು. ಇದೀಗ ಸಚಿವ ಜಮೀರ್ ಅಹ್ಮದ್ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಮಗೆ ಸೀಟ್ ಬರಲಿಲ್ಲ. 18 ರಿಂದ 20 ಸೀಟು ಗೆಲ್ಲುತ್ತೇವೆ ಎಂದು ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಯಿತು. ಆಗ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭ ಆಗಲಿಲ್ಲ ಎಂದು ತಿಳಿಸಿದರು. ಆ ವೇಳೆ ಗ್ಯಾರಂಟಿಗಳನ್ನು ತೆಗೆದುಹಾಕಿ ಎಂದು ಹೇಳಿದರು. ಆಗ ಸಿಎಂ ರಾಜಕೀಯ ಲಾಭಕ್ಕೆ ಗ್ಯಾರಂಟಿ ಜಾರಿ ಮಾಡಿಲ್ಲ ಅಂದರು. ಬಡವರಿಗೆ…












