Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಂಸತ್ ನಲ್ಲಿ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದನ್ನು ವಿರೋಧಿಸಿ, ಬಿಜೆಪಿ ನಾಯಕರು ರಾಹುಲ್ ಗಾಂಧಿ ಕ್ಷಮೆಗೆ ಆಗಮಿಸಿದ್ದಾರೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ ಹೇಳಿದ್ದನ್ನೆಲ್ಲ ಹಿಂದುಗಳು ಕೇಳಬೇಕಾ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷಗಳಿಂದ ಬಿಜೆಪಿಗೆ ಇದೇ ಚಾಳಿ. ಹಿಂದೂಗಳಿಂದ ಹಿಂಸಾಚಾರ ನಡೆಯಲು ಬಿಡಲ್ಲ ಅಂತ ಹೇಳಿದ್ದಾರೆ. ಅಹಮ್ಮದಾಬಾದ್ನಲ್ಲಿ ಹತ್ಯೆಯಾಗಿದೆಯಲ್ಲ ಇದಕ್ಕೆ ಏನ್ ಹೇಳ್ತಾರೆ? ಎಂದು ಸಂಸತ್ನಲ್ಲಿ ರಾಹುಲ್ ಗಾಂಧಿ ಆಡಿದ ಮಾತುಗಳಿಗೆ ಕ್ಷಮೆ ಕೇಳಬೇಕು ಎಂಬ ಬಿಜೆಪಿ ಒತ್ತಾಯಕ್ಕೆ ತಿರುಗೇಟು ನೀಡಿದರು. ಹತ್ತುವರ್ಷಗಳಿಂದ ಇದೇ ಕೆಲಸವನ್ನ ಮಾಡಿಕೊಂಡು ಬಂದಿದ್ದಾರೆ. ಅದಕ್ಕೆ ಅಲ್ವ ಇವರಿಗೆ ಲೋಕಸಭೆಯಲ್ಲಿ ಬಹುಮತ ಬಂದಿಲ್ಲ. ನರೇಂದ್ರ ಮೋದಿ ಒಬ್ಬ ಸುಳ್ಳಿನ ಸರದಾರ. ಬಿಜೆಪಿ ಐಟಿ ಸೆಲ್ ಸುಳ್ಳಿನಕಾರ್ಖಾನೆ ತಯಾರು ಮಾಡುತ್ತೆ. ರಾಹುಲ್ ಗಾಂಧಿ ಕೊಟ್ಟಿರುವ ಹಿಂದೂ ವಿರೋಧಿ ಸ್ಟೇಟ್ಮೆಂಟ್ ತೋರಿಸಲಿ ಎಂದು ಸವಾಲು ಹಾಕಿದರು. ಮೋದಿ ಹೇಳಿದನ್ನೆಲ್ಲಾ ಹಿಂದೂಗಳು ಕೇಳಬೇಕಾ?…
ಕೋಲಾರ : ನಿನ್ನೆ ಕೋಲಾರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆಗೆ ಸಂಬಂಧಿಸಿದಂತೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ನಿನ್ನೆ ನಗರದ ಹೊರ ವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಕಾಲೇಜು ಶೌಚಾಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಳು. ಹೊಟ್ಟೆ ನೋವು ಎಂದು ಬಾಲಕೇಶ್ವರಕ್ಕೆ ಎದ್ದೇಳಿದಾಗ ಬಾಲಕಿಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಮಗುವಿನ ಅಳುವ ಸದ್ದು ಕೇಳಿ, ಕಾಲೇಜಿನ ಸಿಬ್ಬಂದಿ ಹಾಗೂ ಉಪನ್ಯಾಸಕರು ಓಡಿ ಬಂದು ಬಾಲಕಿ ಮಗುಗೆ ಜನ್ಮ ನೀಡಿರುವುದನ್ನು ನೋಡಿ ಶಾಕ್ ಆಗಿದ್ದಾರೆ. ಇನ್ನು ಹೆರಿಗೆಯಾದ ಬಾಲಕಿ ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಬಾಲಕಿಗೆ ಹೆರಿಗೆ ಆಗಿರುವುದನ್ನು ಕಂಡು ಕಾಲೇಜಿನ ಆಡಳಿತ ಮಂಡಳಿಯವರು ತಕ್ಷಣವೇ ಸಮೀಪದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಬಾಲಕಿಯ ಕಾಲೇಜಿನ ಸಿಬ್ಬಂದಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ.…
ಮಂಗಳೂರು : ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈಗಾಗಲೇ ರಾಜ್ ಕುಮಾರ್ ಎನ್ನುವ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಇದೀಗ ಸತತ 6 ಗಂಟೆಗಳ ಕಾಲ ಚಂದನ್ ಕುಮಾರ್ ಎನ್ನುವ ಮತ್ತೊರ್ವ ಕಾರ್ಮಿಕನನ್ನು ಸಿಬ್ಬಂದಿಗಳು ರಕ್ಷಿಸಿದ್ದಾರೆ ಆದರೆ ಚಂದನ್ ಕುಮಾರ್ ಕೊನೆಯುಸಿರೆಳೆದಿದ್ದಾನೆ ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದಾರೆ. ಅವರು ರಕ್ಷಣಾ ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಮಂಗಳೂರಿನ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿತ ಉಂಟಾಗಿತ್ತು. ಮಣ್ಣಿನಲ್ಲಿ ಬಿಹಾರ್ ಮೂಲದ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇಬ್ಬರು ಕಾರ್ಮಿಕರನ್ನು ಇದೀಗ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಸತತ 6 ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್ ಎನ್ನುವ ಕಾರ್ಮಿಕರನ್ನು ಸಿಬ್ಬಂದಿಗಳು ಹೊರತೆಗೆದಿದ್ದರು. ಆದರೆ ಮಣ್ಣಿನ ಅಡಿಯಲ್ಲಿ ನಿತ್ರಾಣಗೊಂಡಿದ್ದ ಚಂದನ್ ಕುಮಾರ್ ಇದೀಗ ಸಾವನ್ನಪ್ಪಿದ್ದಾನೆ. ಹೊರಕ್ಕೆ ತೆಗೆದ ನಂತರ…
ಮಂಗಳೂರು : ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈಗಾಗಲೇ ರಾಜ್ ಕುಮಾರ್ ಎನ್ನುವ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಇದೀಗ ಸತತ 6 ಗಂಟೆಗಳ ಕಾಲ ಚಂದನ್ ಕುಮಾರ್ ಎನ್ನುವ ಮತ್ತೊರ್ವ ಕಾರ್ಮಿಕನನ್ನು ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಎಸ್ಡಿಆರ್ಎಫ್ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಮಿಕರ ಪ್ರಾಣ ಉಳಿಸಲು ಬೆಳಿಗ್ಗೆಯಿಂದ ಹರಸಾಹಸ ಪಡುತ್ತಿದ್ದರು. ಮಣ್ಣಿನಡಿ ಸಿಲುಕಿರುವ ಸಂತ್ರಸ್ತರನ್ನು ಬಿಹಾರ ಮೂಲದ ರಾಜ್ಕುಮಾರ್ ಹಾಗೂ ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಎಂದು ಗುರುತಿಸಲಾಗಿದೆ. ಇಂದು ಮಂಗಳೂರಿನ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿತ ಉಂಟಾಗಿತ್ತು. ಮಣ್ಣಿನಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇಬ್ಬರು ಕಾರ್ಮಿಕರನ್ನು ಇದೀಗ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಸತತ 6 ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಎನ್ನುವ ಕಾರ್ಮಿಕರನ್ನು ಸಿಬ್ಬಂದಿಗಳು ಇದೀಗ ಹೊರಗೆ ತೆಗೆದಿದ್ದಾರೆ. ಹೊರಕ್ಕೆ ತೆಗೆದ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ BRTS ಚಿಗರಿ ಬಸ್ ಡಿಕ್ಕಿಯಾಗಿ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ರಸ್ತೆದಾಟುವಾಗ ಬಿ ಆರ್ ಟಿ ಎಸ್ ಬಸ್ ಗುದ್ದಿ ವೃದ್ಧ ದಾರುಣವಾಗಿ ಸಾವನಪ್ಪಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಬಳಿ ಈ ಒಂದು ಅಪಘಾತ ನಡೆದಿದೆ. ಮಂಜುನಾಥ್ ನಗರದ ನಿವಾಸಿ ಗಂಗಾಧರ್ ಎನ್ನುವ ವೃದ್ಧರು ಸಾವನಪ್ಪಿದ್ದಾರೆ. ಘಟನೆ ನಂತರ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಬಿ ಆರ್ ಟಿ ಎಸ್ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಈ ವೇಳೆ ಪೊಲೀಸರು ಹಾಗೂ ಬಿ ಆರ್ ಟಿ ಎಸ್ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆದಿದೆ.ಸ್ಥಳೀಯರು ಸಿಬ್ಬಂದಿಗಳನ್ನು ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಹಾವೇರಿ : ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಶಿಗ್ಗಾಂವ ಕಾಂಗ್ರೆಸ್ ಅಭ್ಯರ್ಥಿ ಅಕಾಂಕ್ಷಿಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬುಧವಾರ ಶಿಗ್ಗಾಂವ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡುವ ಮುನ್ನವೇ ಶಿಗ್ಗಾಂವ ಐಬಿ ಮುಂದೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹಾಗೂ ಯಾಸೀರ ಅಹ್ಮದಖಾನ್ ಪಠಾಣ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಹೌದು ಇಂದು ಸಚಿವ ಸತೀಶ್ ಜಾರಕಿಹೊಳಿ ಹಾವೇರಿ ಜಿಲ್ಲೆಯ ಶಿಗ್ಗಾವ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು ಈ ವೇಳೆ ಅವರನ್ನು ಕಾರಿನಿಂದ ಕೆಳಗೆ ಇಳಿಯಲು ಬಿಡದೆ ಕಾಂಗ್ರೆಸ್ ಆಕಾಂಕ್ಷಿಗಳಾದ ಅಜ್ಜಂಪಿರ್ ಖಾದ್ರಿ ಹಾಗೂ ಯಾಸೀರ ಅಹ್ಮದಖಾನ್ ಪಠಾಣ ಶಕ್ತಿ ಪ್ರದರ್ಶನ ಮಾಡಿದ್ದು, ಸಹಜವಾಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ಹೊರಹಾಕಿ ಆಕಾಂಕ್ಷಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾಗಿ ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಸತೀಶ ಜಾರಕಿಹೊಳಿ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಶಿಗ್ಗಾವಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಬಸವ ಪ್ರಸಾದ್ (30) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಆನವಟ್ಟಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ ಪರಿಣಾಮ 13 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಶಿರಾಳಕೊಪ್ಪ ಹಾಗೂ ಶಿಕಾರಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಇತ್ತ ಮಕ್ಕಳನ್ನು ಹೊರ ತರಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇತ್ತ ಸಹೋದರ ಸೂರಜ್ ರೇವಣ್ಣ ಕೂಡ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಿ ಕೆಡ್ನಲ್ಲಿ ಇದ್ದಾರೆ. ಇತ್ತೀಚಿಗೆ ಅಂದರೆ ಕಳೆದ ಸೋಮವಾರ ಪ್ರಜ್ವಲ್ ನನ್ನು ಭೇಟಿಯಾಗಲು ತಾಯಿ ಭವಾನಿ ರೇವಣ್ಣ ಜೈಲಿಗೆ ಆಗಮಿಸಿದ್ದರು. ಇವಳೇ ಸುಮಾರು ಹೊತ್ತು ಮಗನ ಜೊತೆ ಚರ್ಚೆ ಮಾಡಿದರು. ಅದಾದ ಬಳಿಕ ಇಂದು ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು…
ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೆ ಮೊದಲ ಬಾರಿಗೆ ಮಾಜಿ ಶಾಸಕ HD ರೇವಣ್ಣ ಅವರು ಮಗ ಪ್ರಜ್ವಲ್ ನನ್ನು ಭೇಟಿ ಮಾಡಲು ಜೈಲಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಹೌದು, ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್ಡಿ ರೇವಣ್ಣ ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗಮಿಸಿ, ಪರಪ್ಪನ ಅಗ್ರಹಾರ ಕ್ವಾರಂಟೈನ್ ಜೈಲಿನಲ್ಲಿರುವ ಪುತ್ರ ಪ್ರಜ್ವಲ್ನ್ನು ಭೇಟಿ ಆಗಿದ್ದಾರೆ. ಈ ವೇಳೆ ಸುಮಾರು 30 ನಿಮಿಷ ಮಾತನಾಡಿದ ಅವರು, ಮುಂದಿನ ಕಾನೂನು ಹೋರಾಟದ ಕುರಿತು ಮಗನ ಜೊತೆ ಚರ್ಚೆ ಮಾಡಿ ಹೊರಬಂದಿದ್ದಾರೆ. ಇನ್ನು ಇದೇ ಜುಲೈ 1ರಂದು ತಾಯಿ ಭವಾನಿ, ಪ್ರಜ್ವಲ್ ಭೇಟಿಯಾಗಿ ತೆರಳಿದ್ದರು. ಅದರ ಬೆನ್ನಲ್ಲೇ…
ಬೆಳಗಾವಿ : ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪೊಲೀಸರು ಪತ್ತೆ ಮಾಡಿದ್ದೂ, ಸೀನಿಮಿಯ ರೀತಿಯಲ್ಲಿ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ್ ಮಹ್ಮದ್ ಸಲೀಂ ಯಾದವಾಡ, ಮಹಾಲಿಂಗಪುರದ ಸದ್ದಾಂ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ಒನಶೆಣವಿ ಮತ್ತು ವಿಠ್ಠಲ ಹನುಮಂತ ಹೊಸಕೋಟಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 29ರಂದು ಗೋಕಾಕ್-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಬಳಿ ಗಸ್ತು ಪೊಲೀಸರು ಕಾರೊಂದನ್ನು ತಡೆದು ತಪಾಸಣೆ ಮಾಡಿದಾಗ 100, 500 ರೂ. ಮುಖಬೆಲೆಯ 6,792 ನಕಲಿ ನೋಟುಗಳು ಪತ್ತೆಯಾಗಿದ್ದವು. ಕೂಡಲೇ ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅರಭಾವಿ ಗ್ರಾಮದ ಮನೆಯೊಂದರಲ್ಲಿ ಖೋಟಾ ನೋಟು ಪ್ರಿಂಟ್ ಮಾಡಿ ಚಲಾವಣೆ ಮಾಡುತ್ತಿದ್ದರು. ಮುಧೋಳ, ಮಹಲಿಂಗಪುರ, ಗೋಕಾಕ್, ಹಿಡಕಲ್, ಬೆಳಗಾವಿ, ಧಾರವಾಡ ಸೇರಿ ಮತ್ತಿತರ ಕಡೆಗಳಲ್ಲಿ ಈ…