Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತಂತೆ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಹಾಗೂ ಬೀದರ್ನಲ್ಲಿ ದಲಿತ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಇನ್ನು ಹುಬ್ಬಳ್ಳಿಯಲ್ಲಿ ಈ ಒಂದು ಬಂದ್ ತೀವ್ರ ಸ್ವರೂಪ ಪಡೆದಿದ್ದು, ಟೈರ್ ಗೆ ಬೆಂಕಿ ಹಚ್ಚಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಲಾಯಿತು. ಬಂದ್ ಪರಿಣಾಮದಿಂದ ನಗರದ ಹಲವು ಖಾಸಗಿ ವಾಹನಗಳು ಹಾಗೂ ಬಸ್ ಗಳ ಚಕ್ರದ ಗಾಳಿ ತೆಗೆದು ಹತ್ತಿ ಬಟನಾಕಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಅಂಗಡಿ ಮುಗ್ಗಟ್ಟುಗಳನ್ನು ಕೂಡ ಬಂದ್ ಮಾಡಿಸಿದರು. ಬೆಳಿಗ್ಗೆ 6 ಗಂಟೆಯಿಂದಲೇ ದಲಿತ ಸಂಘಟನೆಗಳು ಸೇರಿದಂತೆ ಇತರೆ ಸಂಘಟನೆಗಳು ಹುಬ್ಬಳ್ಳಿಯ ಪ್ರಮುಖ ಕೇಂದ್ರವಾದ ಚನ್ನಮ್ಮ ಸರ್ಕಲ್ ಹಾಗೂ ಸುತ್ತಮುತ್ತಲಿನ ಎಲ್ಲಾ ವ್ಯಾಪಾರ ವಹಿವಾಟು ನಡೆಸುವ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದರು. ಇನ್ನು ಒಳ ರಸ್ತೆಯಲ್ಲಿರುವ ಹಲವು ಅಂಗಡಿಗಳು ಓಪನ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಇಂದು…
ನಾಗ್ಪುರ್ : ಮದುವೆಯಾಗಿ ಆ ದಂಪತಿಗಳು 25ನೇ ವರ್ಷ ಮುಗಿಸಿ 26ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಈ ವೇಳೆ, ವೆಡ್ಡಿಂಗ್ ಆನಿವರ್ಸರಿ ಗೆ ಎಂದು ಖರೀದಿಸಿದ ಹೊಸ ಬಟ್ಟೆಯನ್ನು ಧರಿಸಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಆದರೆ ನಂತರ ನಡೆದಿದ್ದು ಘೋರ ದುರಂತ. ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಬಳಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹೌದು 26ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪತಿ ಮತ್ತು ಪತ್ನಿ ಸಾವಿಗೆ ಶರಣಾಗಿದ್ದಾರೆ.ಮೃತರನ್ನು 57 ವರ್ಷದ ಜೆರಿಲ್ ಡ್ಯಾಮ್ಸನ್ ಆಸ್ಕರ್ ಮಾನ್ಕ್ರೀಫ್ ಅಡುಗೆಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ 46 ವರ್ಷದ ಆನಿ ಜೆರಿಲ್, ಡ್ರಾಯಿಂಗ್ ರೂಮಿನಲ್ಲಿ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾದರು. ದಂಪತಿ 26 ವರ್ಷಗಳ ಹಿಂದೆ ಮದುವೆಯ ದಿನ ಧರಿಸಿದ್ದ ಅದೇ ಉಡುಗೆಗಳನ್ನು ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆರಿಲ್ ಮತ್ತು ಆಯನ್ ದಂಪತಿಗೆ ಮಕ್ಕಳು ಇರಲಿಲ್ಲ. ಡೆತ್ನೋಟ್ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂಬುದನ್ನು ದಂಪತಿ…
ರಾಮನಗರ : ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನಪ್ಪಿರುವ ಘಟನೆ ರಾಮನಗರ ತಾಲೂಕಿನ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ನಡೆದಿದೆ. ಹೌದು ಈ ಒಂದು ಅಪಘಾತ ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ. ಹೌದು ದೂರು ನೀಡಲು ಬಂದಂತಹ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ ಕುರಿತು ದೂರು ನೀಡಲು ಬಂದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ವ್ಯಕ್ತಿ ಒಬ್ಬ ನಿವೇಶನಕ್ಕಾಗಿ ತನ್ನಿಂದ ಹಣ ಪಡೆದು ಬಳಿಕ ನಿವೇಶನವನ್ನು ನೀಡದೆ ಮತ್ತು ಹಣವನ್ನು ನೀಡದೆ ವಂಚಿಸಿದ್ದ. ಈ ಕುರಿತು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ನಾನು…
BREAKING : ಕರ್ನಾಟಕ ಈಗ ‘ನಕ್ಸಲ್ ಮುಕ್ತ’ : ಶರಣಾದವರಿಗೆ ಶೀಘ್ರ ನ್ಯಾಯ ಕೊಡಿಸುವ ಕೆಲಸ : ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು : ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲರು ನಿನ್ನೆ ಬೆಂಗಳೂರಿನ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಶರಣಾದರು. ಈ ವಿಚಾರವಾಗಿ ನನ್ನ ಪ್ರಕಾರ ಇದೀಗ ಕರ್ನಾಟಕ ನಕ್ಸಲ್ ಮುಕ್ತವಾಗಿದ್ದು, ಶೀಘ್ರದಲ್ಲಿ ಶರಣಾದ ನಕ್ಸಲರಿಗೆ ನ್ಯಾಯ ಕೊಡಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ನಿನ್ನೆ ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು…
ಚಿತ್ರದುರ್ಗ : ವರದಕ್ಷಿಣೆಯ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದರಿಂದ ನೊಂದ ಪತಿ ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಇನ್ನು ನೇಣಿಗೆ ಶರಣಾದ ಗೃಹಿಣಿಯನ್ನು ಆಂಧ್ರಪ್ರದೇಶ ಮೂಲದ ಪ್ರವಲ್ಲಿಕ (25) ಎಂದು ತಿಳಿದುಬಂದಿದ್ದು, ಸುದರ್ಶನ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ. ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸುದರ್ಶನ್ ಅಸ್ವಸ್ಥಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದರ್ಶನ್ ರೆಡ್ಡಿ ಹಾಗೂ ಪ್ರವಲ್ಲಿಕ 1 ವರ್ಷದ ಹಿಂದೆ ಮದುವೆ ಆಗಿದ್ದರು. ಸುದರ್ಶನ್ ಮೊಳಕಾಲ್ಮೂರಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಗಿರಿಜಯ್ಯನಹಟ್ಟಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಸುದರ್ಶನ್ ಕುಟುಂಬಸ್ಥರು ಪ್ರತಿದಿನ ಪ್ರವಲ್ಲಿಕಾಗೆ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇನ್ನು ಪ್ರಕರಣ ಸಂಬಂಧ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರೆ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ. ಘಟನೆ…
ಕೋಲಾರ : ತಮಿಳುನಾಡಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ತಮಿಳುನಾಡಿನ ರಾಣಿಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬಸ್ ಕ್ಯಾಂಟರ್ ಲಾರಿ ನಡುವೆ ಡಿಕ್ಕಿಯಾಗಿ ಕ್ಯಾಂಟರ್ ನಲ್ಲಿ ನಾಲ್ವರು ಹಾಗೂ ಸಾರಿಗೆ ಬಸ್ ನಲ್ಲಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ರಾಣಿಪೇಟೆಯ ರಾಣಿಪೇಟೆ ಬಳಿ ಮೇಲ್ಮರುವತ್ತೂರಿನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಚೆನ್ನೈ ಕಡೆಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 30ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ವಾಲಾಜಪೇಟೆಗೆ ರವಾನಿಸಲಾಗಿದೆ.
ಬೀದರ್ : ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಗೆ ವ್ಯಕ್ತಿ ಒಬ್ಬ ಹಾಡು ಹಗಲೇ ಚಾಕು ಇರಿದಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ. ಅಶೋಕ್ ಪಾಟೀಲ್ ಎನ್ನುವವರು ತನ್ನ ಸ್ನೇಹಿತ ದಯಾನಂದ ಶಿಂಧೆಗೆ 10,000 ಸಾಲ ನೀಡಿದ್ದರು. ಇದೇ ಸಾಲವನ್ನು ವಾಪಸ್ ಕೇಳಿದ್ದಕ್ಕಾಗಿ ಅಶೋಕ್ ಪಾಟೀಲ್ ಸ್ನೇಹಿತರ ಜೊತೆ ಬಾರ್ ನಲ್ಲಿ ಕುಳಿತಿದ್ದಾಗ ಹಾಡು ಹಗಲೇ ಬಾರ್ ಗೆ ನುಗ್ಗಿ ದಯಾನಂದ್ ಶಿಂದೆ ಚಾಕು ಇರಿದು ಪರಾರಿಯಾಗಿದ್ದಾನೆ. ಅಶೋಕ್ ಆರೋಪಿ ದಯಾನಂದನಿಗೆ 10 ಸಾವಿರ ರೂ. ಸಾಲ ನೀಡಿದ್ದ. ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ.ಚಾಕು ಇರಿದ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಗಾಯಾಳು ಅಶೋಕ್ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪರಾರಿಯಾಗಿದ್ದ. ಇದೀಗ ಪೀಣ್ಯ ಠಾಣೆಯ ಪೊಲೀಸರು ಆರೋಪಿ ಪತಿಯನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಜಾಲಹಳ್ಳಿ ಕ್ರಾಸ್ ಬಳಿ ಹೋಂಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಂಗರಾಜು ಎಂಬಾತ ತನ್ನ ಪತ್ನಿ ಭಾಗ್ಯ ಹಾಗೂ ಇಬ್ಬರು ಮಕ್ಕಳನ್ನು ಮನೆಯಲ್ಲಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದ. ಇದೀಗ ಪಿಣ್ಯ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದು ಘಟನೆ ಕುರಿತಂತೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಇಂದು ತ್ರಿಬಲ್ ಮರ್ಡರ್ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಹೌದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಮೂವರ ಡೆಡ್ಲಿ ಮರ್ಡರ್ ಆಗಿದೆ. ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಈ ಒಂದು ಹತ್ಯೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಹೊರಬೀಳಲಿದೆ.













