Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಂಗಾರು ಮಾರುತಗಳು ಬಹತೇಕ ರಾಜ್ಯವನ್ನು ಆವರಿಸಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಕಾಲಕ್ಕೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ, ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗೋವಾ, ಕರ್ನಾಟಕ ಮತ್ತು ತೆಲಂಗಾಣದ, ರಾಯಲಸೀಮೆಯಲ್ಲಿ ಮುಂದುವರೆದಿದೆ. ಮುಂದಿನ 3 ರಿಂದ 4 ದಿನಗಳಲ್ಲಿ ಪಶ್ಚಿಮ, ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂಗಾರು ಮಾರುತಗಳು ಅವರಿಸಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು…
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಕರ್ನಾಟಕ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸತ್ತು ಪ್ರವೇಶಿಸಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾವೇರಿಯಿಂದ ಸ್ಪರ್ದಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಂಡ್ಯದಿಂದ ಸ್ಪರ್ಧಿಸಿದ್ದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಭಾರಿ ಗೆಲುವು ಕಂಡು ಸಂಸತ್ತು ಪ್ರವೇಶಿಸಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಇದಕ್ಕೂ ಮೊದಲೇ ಸಂಸದರಾಗಿದ್ದರು. ಆದರೆ, ಈಗ ಮತ್ತೆ ಲೋಕಸಭೆ ಪ್ರವೇಶಿಸುವುದಿಲ್ಲ ಎಂದೇ ಭಾವಿಸಲಾಗಿತ್ತು. ಬದಲಾದ ಮೈತ್ರಿ ರಾಜಕೀಯ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲವೆಂದು ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ , ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಹಾಗೂ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡಿ ಬಿಜೆಪಿಗೆ ವಾಪಸ್ ಆಗಿದ್ದರು ಇದೀಗ ಬೆಳಗಾವಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು…
ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ 17 ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಗೆದ್ದಿವೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ 20ಮಂದಿ ಮೊದಲ ಬಾರಿಗೆ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಲಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಬೆಂ. ಗ್ರಾಮಾಂತರದ ಡಾ.ಸಿ.ಎನ್.ಮಂಜುನಾಥ್, ತುಮಕೂರಿನ ವಿ.ಸೋಮಣ್ಣ, ಮೈಸೂರಿನ ಯದುವೀರ್, ಉಡುಪಿ- ಚಿಕ್ಕಮಗಳೂರಿನ ಕೋಟ ಶ್ರೀನಿವಾಸ ಪೂಜಾರಿ, ಚಿತ್ರದುರ್ಗದ ಗೋವಿಂದ ಕಾರಜೋಳ, ಬೆಳಗಾವಿಯ ಶೆಟ್ಟರ್, ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್, ಹಾವೇರಿಯ ಬೊಮ್ಮಾಯಿ, ಉತ್ತರ ಕನ್ನಡದ ಹೆಗಡೆ ಕಾಗೇರಿ, ದಕ್ಷಿಣ ಕನ್ನಡದ ಕ್ಯಾ.ಬ್ರಿಜೇಶ್ ಚೌಟ, ಕೋಲಾರದ ಮಲ್ಲೇಶ್ ಮೊದಲ ಸಲ ಗೆದ್ದಿದ್ದಾರೆ. ಅದೇ ರೀತಿಯಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬೀದರ್ ನ ಸಾಗರ್ ಖಂಡ್ರೆ, ರಾಯಚೂರಿನ ಕುಮಾರ ನಾಯಕ್, ಬಳ್ಳಾರಿಯ ತುಕಾರಾಂ, ಚಿಕ್ಕೋಡಿಯ ಪ್ರಿಯಾಂಕಾ, ದಾವಣಗೆರೆಯ ಪ್ರಭಾ, ಗುಲ್ಬರ್ಗಾದ ರಾಧಾಕೃಷ್ಣ, ಕೊಪ್ಪಳದ ರಾಜಶೇಖರ್, ಹಾಸನದ ಶ್ರೇಯಸ್, ಚಾಮರಾಜ ನಗರದ ಸುನೀಲ್ ಬೋಸ್ ಮೊದಲ ಬಾರಿಗೆ ಗೆಲುವು ಸಾಧಿಸಿದ್ದಾರೆ.
ಪಂಜಾಬ್ : ಯಾವುದೇ ಚುನಾವಣೆ ಇರಲಿ ಅಭ್ಯರ್ಥಿಗಳು ಭರ್ಜರಿಯಾಗಿ ರ್ಯಾಲಿ, ಸಮಾವೇಶ ನಡೆಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸರ್ಕಸ್ ಮಾಡುವುದನ್ನು ನಾವು ನೋಡಿದ್ದೇವೆ. ಆದರೆ ಇದರ ನಡುವೆ ಇಬ್ಬರು ಅಭ್ಯರ್ಥಿಗಳು ಜೈಲಿನಲ್ಲಿದ್ದುಕೊಂಡೇ ಈ ಬಾರಿ ಗೆಲುವು ಸಾಧಿಸಿದ್ದಾರೆ. ಹೌದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪಂಜಾಬ್ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಕುಲ್ಲೀರ್ಸಿಂಗಾ ಜೀರಾ ವಿರುದ್ಧ 1.97 ಲಕ್ಷ ಅಂತರದಿಂದ ಜಯ ಸಾಧಿಸಿದ್ದಾರೆ. ಇನ್ನು ಕಾಶ್ಮೀರದ ಬಾರಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಬ್ದುಲ್ ರಶೀದ್ ಗೆಲುವು ಪಡೆದಿದ್ದಾರೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಾಜಿ ಮುಖ್ಯಮಂತ್ರಿ ನ್ಯಾಷನಲ್ ಕಾನ್ವರೆನ್ಸ್ ಪಕ್ಷದ ಒಮರ್ ಅಬ್ದುಲ್ಲಾ ಅಬ್ದುಲ್ಲಾ ವಿರುದ್ದ ವಿರುದ್ದ ಅಬ್ದುಲ್ ಅಬ್ದುಲ್ ರಶೀದ್ ಸ್ಪರ್ಧಿಸಿದ್ದು, 1 ಲಕ್ಷ ಮತ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಭಯೋತ್ಪಾದನಾ ಕಾನೂನಿನಡಿಯಲ್ಲಿ 2019ರಲ್ಲಿ ರಶೀದ್ ಅವರ ಬಂಧನವಾಗಿತ್ತು. ರಶೀದ್ ಪರ ಅವರ ಪುತ್ರ ಅಬ್ರಾರ್ ಪ್ರಚಾರ ನಡೆಸಿದ್ದರು.
ನವದೆಹಲಿ : ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಇರುವ ಸಂಭ್ರಮದಲ್ಲಿದ್ದರೆ, ಇತ್ತ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹೌದು ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಸಂಜೆ ವೇಳೆಗೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ವ್ಯಕ್ತಿಯೊಬ್ಬರು ಈ ಕೃತ್ಯಕ್ಕೆ ಕೈ ಹಾಕಿದ್ದಾರೆ. ಸೀಮೆ ಎಣ್ಣೆಯನ್ನು ಮೈ ಮೇಲೆ ಸುರಿದು ಕೊಳ್ಳುವುದನ್ನು ಗಮನಿಸಿದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.
ನಿರುದ್ಯೋಗ ನೆಪ ಹೇಳಿ ವಿಚ್ಛೇದಿತ ಪತ್ನಿ, ಪುತ್ರಗೆ ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ : ಹೈಕೋರ್ಟ್
ಬೆಂಗಳೂರು : ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಹಾಗಾಗಿ ಪತಿ ವಿಚ್ಚೆಧೀತ ಪತ್ನಿ ಹಾಗೂ ಆಕೆಯ ಅಪ್ರಾಪ್ತ ಮಗುವಿಗೆ ಜೀವನಾಂಶ ನೀಡಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು. ವಿಚ್ಛೇದಿತ ಪತ್ನಿಗೆ ಮಾಸಿಕ ಏಳು ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ ಮೂರುಸಾವಿರ ರು. ಜೀವನಾಂಶ ಪಾವತಿಸುವಂತೆ ತನಗೆ ಸೂಚಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯ ಮೂರ್ತಿ ಸಚಿನ್ ಶಂಕರ್ ಮುಗ್ದಮ್ ಅವರ ಪೀಠ ಈ ಸ್ಪಷ್ಟನೆ ನೀಡಿ, ಕೌಟುಂಬಿಕ ನ್ಯಾಯಾಲಯದ ಆದೇಶ ದಂತೆ ವಿಚ್ಛೇದಿತ ಮತ್ತು ಮಗುವಿಗೆ ಜೀವನಾಂಶ ಪಾವತಿಸುವಂತೆ ಅರ್ಜಿದಾರನಿಗೆ ಸೂಚಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಅರ್ಜಿದಾರ ಸದ್ಯ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ಈವಾದ…
ಬೆಂಗಳೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇ ಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.ಈ ಸಂಬಂಧ ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯ ಭೂಮಿ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೋರಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಡಾ.ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಒಬ್ಬ ಮೇರು ನಟ. ಅವರ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ಭವನ ನಿರ್ಮಾಣ ಆಗಬೇಕು ಎಂಬುದು ಅರ್ಜಿದಾರರ ಅಭಿಲಾಷೆ. ಸ್ಮಾರಕ ಭವನ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋಗೆ ಮಂ ಜೂರಾದ ಜಾಗದ ಪೈಕಿ ಕೆಂಗೇರಿಯ ಮೈಲಸಂದ್ರ ಗ್ರಾಮದ ಸರ್ವೇ ನಂ. 26, 68ರಲ್ಲಿ 10 ಗುಂಟೆ ಜಾಗವನ್ನು ಕೇಳಿ 2017ರಲ್ಲಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇಂತಹ ವಿಚಾರಗಳ ಬಗ್ಗೆ ಹೈಕೋರ್ಟ್ ವ್ಯವಹರಿಸಲಾಗದು. ಅಗತ್ಯವಿ ದ್ದರೆ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷೆ ಮಾಡಿದಷ್ಟು ಸೀಟ್ ಗೆಲ್ಲಲು ಸಾಧ್ಯವಾಗಿಲ್ಲ. ಇದರಿಂದ ಸಿಎಂ ಸಿದ್ಧರಾಮಯ್ಯ ಕೂಡ ಬೇಸರಗೊಂಡಿದ್ದಾರೆ. ಅವರು ಬಹಳ ಸೆನ್ಸಿಟಿವ್ ವ್ಯಕ್ತಿ. ಇದರಿಂದಾಗಿ ನಾಳೆಯೇ ಅವರು ರಾಜೀನಾಮೆ ಕೊಟ್ಟರೂ ಕೊಡಬಹುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಎಕ್ಸಾಂನಲ್ಲಿ ಸೋತಿದ್ದಾರೆ. ಡಿಸಿಎಂ ತವರು ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಡಾ. ಮಂಜುನಾಥ್ ಅವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಹಾಗಿದ್ದರೂ ಬಹು ಮತದಿಂದ ಗೆಲುವು ಸಾಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತುಂಬಾ ಸೆನ್ಸಿಟಿವ್. ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜೀನಾಮೆ ಕೊಡುತ್ತಾರೆ ಅನಿಸುತ್ತೆ. ನಾಳೆ ಬೆಳಿಗ್ಗೆ ಪತ್ರಿಕಾಗೋಷ್ಠಿ ಕರೆದು ರಾಜೀನಾಮೆ ಕೊಟ್ಟರು ಕೊಡಬಹುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವೋಟು ಶೇ.46. ಎನ್ಡಿಎಗೆ 51.66 % ವೋಟ್ ಶೇರಿಂಗ್ ಬಂದಿದೆ 136 ಎಂಎಲ್ಎ ಇರುವ ಕಾಂಗ್ರೆಸ್ ಸರ್ಕಾರಕ್ಕೆ ಶೇ. 45.43ರಷ್ಟು ವೋಟ್ ಶೇರ್ ಬಂದಿದೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಯೋಗ್ಯತೆ ಇದರಲ್ಲೇ ಗೊತ್ತಾಗುತ್ತಿದೆ.…
ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.
ಕೋಲ್ಕತ್ತಾ : ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ. ಈ ಬಾರಿ 400 ಸೀಟು ದಾಟುತ್ತೇವೆ ಎಂದು ಹೇಳಿದ್ದಕ್ಕೆ ಪ್ರಧಾನಿಯವರು ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದರು. ಕೋಲ್ಕತ್ತಾದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ ಅರ್ಪಿಸಿದ ಮಮತಾ, ಮೋದಿ ಅವರು ಎಲ್ಲ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ತೋರಿಸಿವೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಈ ಬಾರಿ ಬಹಳಷ್ಟು ಜನ ನನ್ನನ್ನು ಕಡಿಮೆ ಅಂದಾಜು ಮಾಡಿದ್ದಾರೆ ಎಂದರು. ನನಗೆ ಷೇರು ಮಾರುಕಟ್ಟೆ ಹೆಚ್ಚು ಅರ್ಥವಾಗುತ್ತಿಲ್ಲ, ಆದರೆ ನೀವು ಇಂದು ಷೇರು ಮಾರುಕಟ್ಟೆಯನ್ನು ನೋಡಿದ್ದೀರಾ? ಎಂದು ಕೇಳಿದ್ದಾರೆ.ಅಲ್ಲದೆ ಮುಂದುವರೆದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, “ನೀವು ಇಸಿಐ, ಸಿಬಿಐ ಅನ್ನು ನಿಯಂತ್ರಿಸಬಹುದು, ಆದರೆ ಇಂಡಿಯಾ ಬ್ಲಾಕ್ ನಿಮ್ಮನ್ನು ಕೆಳಗಿಳಿಸುತ್ತದೆ ಎಂದು ಹೇಳಿದ್ದಾರೆ.