Author: kannadanewsnow05

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಸ್ಪಂದನಾ ಆಸ್ಪತ್ರೆಯಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ವಾದಂತಹ ಅಗ್ನಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಈ ಒಂದು ಅನಾಹುತದಿಂದ ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೌದು ಚಿಕ್ಕಮಗಳೂರಿನ ಸೇಂಟ್ ಜೋಸೆಫ್ ಶಾಲಾ ಮುಂಭಾಗದಲ್ಲಿರುವ ಸ್ಪಂದನಾಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದೆ. ಸದ್ಯ 10ಕ್ಕೂ ಹೆಚ್ಚು ರೋಗಿಗಳು ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಟ್ಟಡದ ಕೆಳಮಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಪತ್ನಿಯ ಶೀಲವನ್ನು ಶಂಕಿಸಿ ಪತಿಯೊಬ್ಬ ವೈರ್ ನಿಂದ ಪತ್ನಿಯ ಕುತ್ತಿಗೆಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾಗಿರುವ ಮಹಿಳೆಯನ್ನು ಕೋಕಿಲ (25) ಎಂದು ಹೇಳಲಾಗುತ್ತಿದ್ದು ಇನ್ನು ಪತ್ನಿಯನ್ನು ಭೀಕರವಾಗಿ ಕೊಂದ ಪತಿಯನ್ನು ಸಿದ್ದರಾಮಣ್ಣ (35) ಎಂದು ತಿಳಿದುಬಂದಿದೆ. ತಂದೆ ಬ್ಯಾಟರಂಗಯ್ಯ ಮಗಳ ಮನೆಗೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಕೊಲೆ ಆರೋಪಿ ಸಿದ್ದರಾಮಣ್ಣಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.ಹಾಗಾಗಿ ನಟ ದರ್ಶನ್ ಇಂದು ಬೆಂಗಳೂರಿನ ಹೊರವಲಯದಲ್ಲಿರುವ ಕೆಂಗೇರಿಯ BGS ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು ಇಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಕೋರ್ಟ್ ಕೇವಲ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು ಈ ಹಿನ್ನಲೆಯಲ್ಲಿ ಬಿಡುಗಡೆಯಾದ ತಕ್ಷಣ ಒಂದು ವಾರದ ಒಳಗೆ ಮೈಲಿಕೀಯ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಕೆಂಗೇರಿಯ ಬಿಜಿಎಸ್​ ಆಸ್ಪತ್ರೆಯಲ್ಲಿ ದರ್ಶನ್ ದಾಖಲಾಗಿದ್ದಾರೆ. ಆ ಬಳಿಕ ವೈದ್ಯ ನವೀನ್ ಅಪ್ಪಾಜಿ ಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆನ್ನು ನೋವಿನಿಂದ ದರ್ಶನ್ ಅವರು ಇಂದು 3.30ರ ಸುಮಾರಿಗೆ ಬಂದು ಅಡ್ಮಿಟ್ ಆಗಿದ್ದಾರೆ. ನಾವು ತಪಾಸಣೆ ಮಾಡಿದ್ದೇನೆ. ಕಾಲು ನೋವು ಇದೆ. ಅದರಿಂದ ಬೆನ್ನು ನೋವು ಕೂಡ…

Read More

ಹಾಸನ : ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ. ಅಧಿಕಾರಿಗಳಿಗೆ ಅವರು ಧಮ್ಕಿ ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹಾಗಾಗಿ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಾಗಿ ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಆದರೆ ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ಮಾತನಾಡಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ತಂದು ಅವರ ಸೂಚನೆಯ ಮೇರೆಗೆ ನೋಟಿಫಿಕೇಶನ್ ಆಗಿರುವ ಎಲ್ಲವನ್ನು ಖಾತೆ ಮಾಡಿಸಲು ಸೂಚನೆ ನೀಡಿದ್ದಾರೆ ಎಂದರು. ಇದಕ್ಕೆಲ್ಲ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸೂಚನೆ ನೀಡಿದ್ದಾರೆ.ಎಲ್ಲಾ ಜಿಲ್ಲೆಗಳಲ್ಲಿ ಅಧಿಕೃತ ಸಭೆ ಮಾಡಿದ್ದಾರೆ. ವಕ್ಫ್ ಸಚಿವ ಜನರಿಗೆ ಬೆನ್ನೆಲುಬಾಗಿ ನಿಂತಿದ್ದು ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಸಿಎಂ ಆಗಿರಬೇಕು. ಆದರೆ ಕೆಲವರಿಗೆ ಮಾತ್ರ ಸಿಎಂ ಆಗಬಾರದು ಎಂದು…

Read More

ಬೆಂಗಳೂರು : ಆರೋಪಿಯೊಬ್ಬ ಪರಿಚಯಸ್ಥ ಮಹಿಳೆಯ ಮೊಬೈಲ್ ನಲ್ಲೆ ಆಪ್ ಡೌನ್ಲೋಡ್ ಮಾಡಿ ಬಳಿಕ ವಿಡಿಯೋ ಕಾಲ್ ಮೂಲಕ ಆಕೆಯ ಬೆತ್ತಲೆ ವಿಡಿಯೋ ಇಟ್ಟುಕೊಂಡು ಹಣಕ್ಕೆ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಇದೀಗ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳೆ ವಿವಾಹಿತೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಮೂರನೇ ವ್ಯಕ್ತಿಯಿಂದ ಆರೋಪಿಯು ಮಹಿಳೆಗೆ ಸ್ನೇಹಿತನಾಗಿದ್ದ. ಕಾಲಕ್ರಮೇಣ ಮೂವರು ಓಡಾಡಿಕೊಂಡಿದ್ದರು. ಈ ವೇಳೆ ಮಹಿಳೆಗೆ ಅರಿವಿಲ್ಲದಂತೆ ಥರ್ಡ್ ಪಾರ್ಟಿ ಅಪ್ಲಿಕೇಷನ್ ಆ್ಯಪ್ ಅನ್ನ ಮಹಿಳೆಯ ಮೊಬೈಲ್​ನಲ್ಲಿ ಡೌನ್​ಲೋಡ್ ಮಾಡಿ ಆಕೆಗೆ ಅರಿವಿಲ್ಲದಂತೆ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದ. ಈ ನಡುವೆ ಮಹಿಳೆಗೆ ಗೊತ್ತಿಲ್ಲದಂತೆ ಅಪ್ಲೀಕೇಷನ್ ಡೌನ್​ಲೋಡ್ ಮಾಡಿ ಮೊಬೈಲ್​ನಲ್ಲಿ ಹೈಡ್ ಮಾಡಿದ್ದ. ತುರ್ತು ಫೋನ್ ಬರುವುದೆಂದು ಮಹಿಳೆಯು ಸ್ನಾನದ ಮನೆಯಲ್ಲಿ ಮೊಬೈಲ್ ಇಟ್ಟುಕೊಂಡಿದ್ದರು.ಈ ವೇಳೆ ಆ್ಯಪ್ ಆನ್ ಮಾಡಿಕೊಂಡು ಮೊಬೈಲ್​ನಲ್ಲಿ ಸೆರೆಯಾಗುವ ವಿಡಿಯೋ ಹಾಗೂ ಆಡಿಯೊಗಳನ್ನ ಸಂಗ್ರಹಿಸಿದ್ದ. ಈ ವಿಡಿಯೋಗಳನ್ನು ನಿನ್ನ ಸ್ನೇಹಿತ ಕಳಿಸಿದ್ದಾನೆ ಎಂದು ಸುಳ್ಳು…

Read More

ಬೆಂಗಳೂರು : ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿಗಳ ಬನಾರಸ್ ಸೀರೆಗಳು ಬೆಂಕಿಗೆ ಆಸ್ತಿ ಆಗಿರುವ ಘಟನೆ ಇಂದು ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿ ನಡೆದಿದೆ. ಹೌದು ಟ್ರಾನ್ಸ್ಫಾರ್ಮರ್ ಸ್ಪೋಟದಿಂದ ಮನೆಯೊಂದು ಬೆಂಕಿ ಹೊತ್ತಿ ಉರಿದಿದೆ. ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮೊದಲ ಮಹಡಿಯ ಮನೆಯಲ್ಲಿದ್ದ ನೂರಾರು ಬನಾರಸ್ ಸೀರೆ ಭಸ್ಮವಾಗಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Read More

ಬೆಂಗಳೂರು : ಈ ಬಾರಿಯ ದೀಪಾವಳಿಯಲ್ಲಿ ಪಟಾಕಿ ಮಾರಾಟಕ್ಕೂ ಹಾಗೂ ಪಟಾಕಿ ಸಿಡಿಸುವ ಸಾರ್ವಜನಿಕರಿಗೂ ಕೂಡ ಹಲವು ನಿಯಮಗಳು ಅನ್ವಯವಾಗುತ್ತವೆ. ಆದರೆ ಬೆಂಗಳೂರಿನಲ್ಲಿ ಪಟಾಕಿ ಮಾರಾಟಗಾರರಿಂದ ನಿಯಮ ಉಲ್ಲಂಘನೆಯಾಗಿದ್ದು, ಈ ಕುರಿತಂತೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕರೂ ಕೂಡ ಅವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಬೆಂಗಳೂರಿನಲ್ಲಿ ನಿಯಮಗಳನ್ನು ಮೀರಿ ಪಟಾಕಿ ಮಾರಾಟ ಮಾಡಲಾಗಿದೆ. ದಾಸರಹಳಿಯ ವಲಯ ಬಿಬಿಎಂಪಿ ಮೈದಾನದಲ್ಲಿ ಪಟಾಕಿ ಮಾರಾಟದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಪಟಾಕಿ ಬಾಕ್ಸ್ ಮೇಲೆ ಸಿಎಸ್ಐಆರ್ ಮಾರ್ಕ್ ಇಲ್ಲ, ಕ್ಯೂಆರ್ ಕೋಡ್ ಇಲ್ಲ ಅಲ್ಲದೆ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ನಿಯಮ ಸಹ ಉಲ್ಲಂಘನೆ ಮಾಡಲಾಗಿದೆ. ಇನ್ನು ಮಳಿಗೆಗಳಲ್ಲಿ ಬೆಂಕಿ ನಂದಿಸುವ ಯಾವುದೇ ಸಾಧನೆಗಳು ಇಲ್ಲದೆ ಪಟಾಕಿ ಮಾರಾಟ ಮಾಡಲಾಗುತ್ತಿದೆ. ದಾಸರಹಳ್ಳಿ ಪಟಾಕಿ ವರ್ತಕರ ಸಂಘದಿಂದ ನಿಯಮಗಳ ಉಲ್ಲಂಘನೆಯಾಗಿದೆ. ಈ ವೇಳೆ ಪಟಾಕಿ ಮಾರಾಟ ಮಳಿಗೆಯಲ್ಲಿ ಡಿಸಿಪಿಗಳು ಪರಿಶೀಲನೆ ಕಡ್ಡಾಯವಿದ್ದು, ನಿಯಮ ಉಲ್ಲಂಘಿಸಿದರು ಕೂಡ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಬೆಳಗಾವಿ : ಹಿರಿಯರಿಂದ ಬಂದಂತಹ ಆಸ್ತಿಯನ್ನು ಕೇವಲ ತಾನು ಒಬ್ಬನೇ ಅನುಭವಿಸಬೇಕೆಂದು ಅಣ್ಣನೊಬ್ಬ ಇಡೀ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಇದಕ್ಕೆ ತಮ್ಮ ನನಗೂ ಪಾಲು ಬೇಕು ಎಂದು ಕೇಳಿದಾಗ ಅವನ ಹಾಗೂ ಆತನ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ್ ತಾಲೂಕಿನ ಅಲಕನೂರಿನಲ್ಲಿ ನಡೆದಿದೆ. ಆಸ್ತಿ ತನ್ನ ಹೆಸರಿಗೆ ಬರೆಸಿಕೊಂಡ ಅಣ್ಣನನ್ನು ಕರೆಪ್ಪ ಎಂದು ಹೇಳಲಾಗುತ್ತಿದ್ದು, ಆಸ್ತಿಯನ್ನು ತಮ್ಮ ಹೆಸರಿಗೆ ಮಾಡುವಂತೆ ಅಣ್ಣನಿಗೆ ಕರೆಪ್ಪನ ತಮ್ಮ ಗೋಪಾಲ ಕೇಳಿದ್ದಾನೆ. ಇಷ್ಟಕ್ಕೆ ತಮ್ಮ ಗೋಪಾಲ ಹಾಗೂ ಆತನ ಕುಟುಂಬದ ಮೇಲೆ ಕರೆಪ್ಪ ಹಲ್ಲೆ ಮಾಡಿದ್ದಾನೆ.ಅಲಕನೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಒಂದು ಗಲಾಟೆ ನಡೆದಿದೆ. ಗೋಪಾಲ ಮಾಂಗ, ಶೈನಪ್ಪ ಮಾಂಗ, ಆನಂದ್ ಮಾಂಗ, ಕುಲಾಬಾಯಿ ಮಾಂಗ, ಬಸವರಾಜ ಮಾಂಗ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಹಾರುಗೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕರೆಪ್ಪ ಮತ್ತು ಆತನ ಮಕ್ಕಳ…

Read More

ಬೆಂಗಳೂರು : ಮುಡಾ ಹಗರಣ ಸೇರಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತನಿಗೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆಯಿಂದ ದೇವರ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಮಧ್ಯ ಸಿಎಂ ಸಂಘಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಟೀ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮೈಸೂರು ಬ್ಯಾಂಕ್‌ ಸರ್ಕಲ್‌ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಮಾತನಾಡಿದ ಅವರು,ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೇ ಬೀದಿಯಲ್ಲಿ ಹೋಗುವವರಿಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು ಎಂದಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಮುಂದುವರೆದ ರಾಜ್ಯವೆಂದು ನ್ಯಾಯಯುತ ಅನುದಾನ ನೀಡದೆ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಹಸು ಹಾಲು ಕೊಡುತ್ತದೆ ಎಂದು ಅಷ್ಟೂ ಹಾಲನ್ನು ಕರೆದರೆ ಕರು ಬಡವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೀಗಾಗಿ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ಸಮಸ್ತ ಕನ್ನಡಿಗರು ಧ್ವನಿಯೆತ್ತಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ, ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ…

Read More