Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ನಿನ್ನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣ ನದಿಯ ತಟದಲ್ಲಿ 8 ಜನರು ಇಸ್ಪೀಟ್ ಆಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಎಂಟೂ ಜನರು ತೆಪ್ಪದಲ್ಲಿ ನದಿಯ ಮತ್ತೊಂದು ತಟಕ್ಕೆ ಹೋಗುತ್ತಿದ್ದ ವೇಳೆ ತೆಪ್ಪ ಮಗಚಿದೆ. ಐವರು ನೀರು ಪಾಲಾಗಿದ್ದು, ಮೂವರ ಮೃತ ದೇಹ ಸಿಕ್ಕಿದೆ.ಉಳಿದ ಇಬ್ಬರ ಮೃತದೆಹಕ್ಕಾಗಿ ಇದೀಗ ಶೋಧಕಾರ್ಯ ಮುಂದುವರೆದಿದೆ. ನೀರು ಪಾಲಾಗಿದ್ದ ಪುಂಡಲೀಕ ಯಂಕಂಚಿ, ತಯ್ಯಬ್ ಚೌಧರಿ (40), ಕೊಲ್ಹಾರ ಪಟ್ಟಣದ ನಿವಾಸಿ ದಶರಥ ಗೌಡರ್ (54) ಮೃತದೇಹ ಪತ್ತೆಯಾಗಿವೆ. ಆಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನೆ ಮಾಡಲಾಗಿದೆ. ರಫೀಕ್ ಬಾಂಬೆ ಹಾಗೂ ಮೆಹಬೂಬ್ ವಾಲೀಕಾರಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧಕಾರ್ಯ ನಡೆದಿದೆ. ಘಟನೆ ಹಿನ್ನೆಲೆ? ನಿನ್ನೆ ವಿಜಯಪುರ ಜಿಲ್ಲೆಯ ಕೋಲಾರ ಸಮೀಪ ಬಳುತಿ ಜಾಕ್ ವೆಲ್ ನಲ್ಲಿ ಕೃಷ್ಣಾ ನದಿ ತಟ್ಟದಲ್ಲಿ 8 ಜನರು ಇಸ್ಪೀಟ್ ಆಡಲು ಕುಳಿತಿದ್ದರು. ಇವಳೆ…
ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯ ಎಸ್ ಜಿ ಓ ಕಾಲೋನಿಯಲ್ಲಿ ಈ ಒಂದು ದುರ್ಘಟನೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಾಯಿ ಪಾರಮ್ಮ, ಮಗ ಪ್ರವೀಣ, ಸೊಸೆ ಭಾಗ್ಯ ಹಾಗೂ ಇಬ್ಬರು ವೃದ್ಧ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಗಾಯಾಳುಗಳಿಗೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ವೃದ್ಧ ದಂಪತಿ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಈ ವೇಳೆ ನೋಡಲು ಹೋದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ಕುರಿತಂತೆ ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ. ಇತ್ತ ಆಸ್ಪತ್ರೆಯಲ್ಲಿ ಹೆಣದ ರಾಶಿ ನೋಡಿ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ. ಇಟಾಹ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನರೆ. ಮೃತ ಸಿಬ್ಬಂದಿಯನ್ನ ಅಲಿಗಢ ಜಿಲ್ಲೆಯ ಬನ್ನಾದೇವಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಎಂದು ಹೇಳಲಾಗುತ್ತಿದೆ. ಇಟಾ ಎಸ್ಎಸ್ಪಿ ರಾಜೇಶ್ ಕುಮಾರ್ ಸಿಂಗ್ ವಿವರಗಳನ್ನು ವಿವರಿಸಿ, “ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಇಟಾ ಆಸ್ಪತ್ರೆಯಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ 27 ಶವಗಳನ್ನು ಸ್ವೀಕರಿಸಲಾಗಿದೆ. ಗಾಯಗೊಂಡವರು ಇನ್ನೂ ಆಸ್ಪತ್ರೆಗೆ ತಲುಪಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದರು. ದುರಂತಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ…
ವಿಜಯಪುರ : ಇಂದು ವಿಜಯಪುರ ಜಿಲ್ಲೆಯಲ್ಲಿ ಘನ ಘೋರವಾದಂತಹ ಘಟನೆ ನಡೆಯದಿದ್ದು ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಸುಮಾರು 4 ಜನರು ಜಲ ಸಮಾಧಿ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲಾರದ ಸಮೀಪ ಬಳುತಿ ಎಂಬಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಕೋಲಾರ ಸಮೀಪ ಬಳುತಿ ಎಂಬಲ್ಲಿ ತೆಪ್ಪ ಮಗುಚಿ 4 ಜನರು ಜಲ ಸಮಾಧಿಯಾಗಿದ್ದಾರೆ. ಬಳುತಿ ಜಾಕ್ ವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯಪುರದ ಕೋಲಾರ ತಾಲೂಕಿನ ಬೂಳುತಿ ಜಾಕ್ ವೆಲ್ ಬಳಿ ಈ ಒಂದು ಘಟನೆ ನಡೆದಿದೆ. ನದಿ ದಡದಲ್ಲಿ ಈ ಒಂದು ಗುಂಪು ಇಸ್ಪೀಟ್ ಆಡುತ್ತಿತ್ತು ಎನ್ನಲಾಗಿದೆ. ಪೊಲೀಸರು ಬರುತ್ತಿರುವ ಮಾಹಿತಿಯನ್ನು ಸ್ಥಳೀಯರು ನೀಡುತ್ತಿದ್ದಂತೆ ಹೆದರಿಕೊಂಡು ನದಿಯ ನಡುಗಡ್ಡೇಗೆ ತೆಪ್ಪದಲ್ಲಿ 6 ಜನರು ತೆರಳಿದ್ದಾರೆ. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ತೆಪ್ಪ ಮಗುಚಿದೆ. ತಕ್ಷಣ 6 ಜನರು ನೀರು ಪಾಲಾಗಿದ್ದಾರೆ.ಈ ವೇಳೆ ಇಬ್ಬರು ಈಜಿ ದಡ ಸೇರಿದ್ದಾರೆ. ಸದ್ಯ ಇಬ್ಬರ…
ಕಲಬುರ್ಗಿ : ನಿನ್ನೆ ಬೆಂಗಳೂರಿನ ಜ್ಞಾನಭಾರತಿ ಬಳಿ ಪಾಳು ಬಾವಿಯೊಂದರಲ್ಲಿ ಪೊಲೀಸ್ ಸಿಬ್ಬಂದಿ ಒಬ್ಬನ ಶವ ಪತ್ತೆಯಾಗಿತ್ತು ಇದೀಗ ಕಲಬುರ್ಗಿಯಲ್ಲಿ ಕೂಡ ಇಂತದೆ ಘಟನೆ ನಡೆದಿದ್ದು, ಕಲ್ಬುರ್ಗಿಯ ರೈಲ್ವೆ ನಿಲ್ದಾಣದ ಬಳಿ ಇನ್ಸ್ಪೆಕ್ಟರ್ ಒಬ್ಬರ ಶವ ಪತ್ತೆಯಾಗಿದೆ. ಹೌದು ಕಲ್ಬುರ್ಗಿಯ ರೈಲ್ವೆ ಹಳಿಯ ಮೇಲೆ ಇನ್ಸ್ಪೆಕ್ಟರ್ ಶವ ಪತ್ತೆಯಾಗಿದೆ. ರೈಲ್ವೆ ಹಳಿಯ ಮೇಲೆ ಇನ್ಸ್ಪೆಕ್ಟರ್ ಬಾಪೂಗೌಡ ಶವ ಪತ್ತೆಯಾಗಿದೆ. ವಯರ್ಲೆಸ್ ವಿಭಾಗದಲ್ಲಿ ಬಾಪೂಗೌಡ ಇನ್ಸ್ಪೆಕ್ಟರ್ ಆಗಿದ್ದ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಬಾಪೂಗೌಡ ಕ್ಯಾನ್ಸರನಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಇದರಿಂದ ಬಾಪೂಗೌಡ ಮಾನಸಿಕ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ರೇಲ್ವೆ ವಿಭಾಗದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿದ್ದಾರೆ ಏನು ಎಂಬುದೆಲ್ಲ ಸ್ವಲ್ಪ ದಿನಗಳಲ್ಲಿ ಹೊರಬರಲಿದೆ ಎಂದು ತಿಳಿಸಿದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾನೂನನ್ನು ಗೌರವಿಸಬೇಕಾಗಿರುವುದದು ಎಲ್ಲರ ಕರ್ತವ್ಯವಾಗಿದೆ. ನಾನು ಕೂಡ ಒಬ್ಬ ವಕೀಲನಾಗಿ ನ್ಯಾಯಾಂಗದ ವ್ಯವಸ್ಥೆಗೆ ತಲೆಬಾಗಲೇಬೇಕಾಗುತ್ತದೆ. ನನ್ನ ಮೇಲೆ ಗುರುತರವಾದದ್ದ ಆರೋಪ ಬಂದಿತ್ತು. ಹಾಗಾಗಿ ನಾನು ನ್ಯಾಯಾಂಗ ಬಂಧನದಲ್ಲಿದ್ದ ನಾನು ತನಿಖಧಿಕಾರಿಗಳಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದ್ದೇನೆ ಎಂದರು. ಎಲ್ಲಾ ರೀತಿಯ ಆಯಾಮದ ವಿಚಾರಣೆ ಮುಗಿದಿದೆ. ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದು ಬೇಡ. ಆದರೆ ಒಂದು ಸತ್ಯಕ್ಕೆ ಜಯ ಇದೆ ಎಂದು ನಾವೆಲ್ಲರೂ ಅಂದುಕೊಂಡಿದ್ದೇವೆ.ಪ್ರಕರಣದ ಹಿಂದೆ ಯಾರಿದ್ದಾರೆ ಏನೂ ಎಂದು ಸ್ವಲ್ಪ ದಿನಗಳಲ್ಲಿ ಎಲ್ಲವೂ ಹೊರಬರಲಿದೆ. ಪ್ರಕರಣ ತನಿಖೆ…
ಉತ್ತರಕನ್ನಡ : ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ನಾಡಬಾಂಬ್ ಸ್ಫೋಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಅದೃಷ್ಟ ಪತ್ರಕರ್ತರ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗಾಗಿ ಭಾರಿ ಅನಾಹುತವೊಂದು ತಪ್ಪಿದೆ. ಹೌದು ಇಂದು ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಕಾರ್ಯಕ್ರಮವೊಂದಕ್ಕೆ ಪತ್ರಕರ್ತರು ಸಂದೇಶ್ ದೇಸಾಯಿ ಎನ್ನುವವರ ಕಾರಿನಲ್ಲಿ ತೇರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಗೆ ಸಿಕ್ಕು ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪತ್ರಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದರ ಬೆನ್ನಲ್ಲೇ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳೊಂದಿಗೆ ಸಭೆ ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬೆನ್ನಲ್ಲೇ ಇಂದು ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ‘ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. ಇದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. ಸದಾ ಮಳೆ ಬರುತ್ತಿದ್ದರೆ ಡೆಂಗ್ಯೂ ಹುಳಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಮಳೆ ಬಂದು ನಿಂತ ನೀರಿದ್ದರೆ ಅಲ್ಲಿ ಡೆಂಗ್ಯೂ ಸೊಳ್ಳೆಗಳು ರೋಗವನ್ನು ಹರಡಲು ಆರಂಭಿಸುತ್ತವೆ. ಇಂತಹ ವಾತಾವರಣದಿಂದ ರೋಗ ಹೆಚ್ಚುತ್ತದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ.…
ಬಾಗಲಕೋಟೆ : ನೀವು ಯಾರನ್ನಾದ್ರೂ ಸಿಎಂ ಆದರೂ ಮಾಡಿಕೊಳ್ಳಿ ಡಿಸಿಎಂ ಆದರೂ ಮಾಡಿಕೊಳ್ಳಿ ಆದರೆ ನಮ್ಮ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ರಾಜ್ಯದಲ್ಲಿ ಇದೀಗ ಸಿಎಂ ಬದಲಾವಣೆ ಹಾಗೂ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಇಳಕಲ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಟ್ಟು ಪುಣ್ಯಕಟ್ಟಿಕೊಳ್ಳಿ ಎಂದರು. ನಾವು ಮೀಸಲಾತಿಗಾಗಿ ಪಾದಯಾತ್ರೆ ಆರಂಭಿಸುವ ಮೊದಲು. ನಮ್ಮವರು ಮಂತ್ರಿ ಆಗಬೇಕು, ಮುಖ್ಯಮಂತ್ರಿ ಅಗಬೇಕು ಅಂತ ಹೇಳಿದ್ದೆವು. ಆದ್ರೆ ಈಗ ನಮಗೆ ಮಂತ್ರಿ, ಮುಖ್ಯಮಂತ್ರಿಗಿಂತ ಮೀಸಲಾತಿ ಮುಖ್ಯವಾಗಿದೆ. ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಿಕೊಡಿ ಅನ್ನೋದೇ ನಮ್ಮ ಒತ್ತಾಯ. ಆದ್ರೆ ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಯಾರನ್ನಾದ್ರೂ ಸಿಎಂ, ಡಿಸಿಎಂ ಮಾಡಿ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸಾಕು ಎಂದರು. ಧರ್ಮಗುರುಗಳಾದವರು ಸರ್ಕಾರದ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 2,500 ಕೋಟಿಗೂ ಹೆಚ್ಚು ಭೂಹಗರಣ ನಡೆದಿದೆ. ಈ ಹಗರಣವನ್ನು ಮುಚ್ಚಿಹಾಕಲು ಸಚಿವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮೈಸೂರು ನಗರ ಬಿಜೆಪಿ ಶಾಸಕ ಶ್ರೀವತ್ಸ ಒತ್ತಾಯಿಸಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮುಡಾದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ನಾನು ಬೆಂಗಳೂರಿನ ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ದೂರು ನೀಡಿದ್ದೆ. ದೂರಿನನ್ವಯ ನಗರಾಭಿವೃದ್ಧಿ ಕಾರ್ಯದರ್ಶಿಗಳು ಮುಡಾಕ್ಕೆ ತನಿಖಾಧಿಕಾರಿಗಳನ್ನ ಕಳುಹಿಸಿ ಪರಿಶೀಲನೆ ನಡೆಸಿ 140ಕ್ಕೂ ಹೆಚ್ಚು ಕಡತಗಳನ್ನು ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸಿದ್ದಾರೆ ಎಂದರು. ಮುಡಾದಲ್ಲಿ ಸೈಟ್ ಹಂಚಿಕೆ ಸೇರಿದಂತೆ ಇತರ ಎಲ್ಲಾ ಕಡೆ ಅವ್ಯವಹಾರ ನಡೆದಿದ್ದು, ಕಳೆದ 4 ವರ್ಷಗಳಲ್ಲಿ 50:50 ಸೈಟು ಹಂಚಿಕೆ ಅವ್ಯವಹಾರದಲ್ಲಿ 2,500 ಕೋಟಿಗೂ ಹೆಚ್ಚು ಅವ್ಯವಹಾರ ಆಗಿದೆ. ಇದನ್ನು ಮುಖ್ಯಮಂತ್ರಿಗಳು ಉನ್ನತ ಮಟ್ಟದ ತನಿಖೆಗೆ ನೀಡಬೇಕು. ಮೈಸೂರು ಮುಡಾದಲ್ಲಿ…