Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಜಮೀನಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದ್ದು ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದೆ. ಕಟ್ಟಿಗೆ ಕುಡುಗೋಲಿನಿಂದ ಎರಡು ಕುಟುಂಬದವರು ಬಡಿದಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಬಳಿ ಜಮೀನಿನಲ್ಲಿ ಎರಡು ಕುಟುಂಬದವರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮದ ನಿವಾಸಿ ಸಿದ್ದರಾಯಿ ತುಂಬರಿ ಎಂಬವರಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಂಡಾಗಳನ್ನು ಕರೆಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಅನಿಲ್ ಗೆ ಸೇರಿದ ಜಮೀನನ್ನು ಲಪಟಾಯಿಸಲು ಸಿದ್ದರಾಯಿ ಪ್ಲಾನ್…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಇರುವ ಹಿನ್ನೆಲೆಯಲ್ಲಿ ಇದೀಗ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್ ತಾಯಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ. ಆದರೆ ಭವಾನಿ ರೇವಣ್ಣ ಅವರು ಕಳೆದ 15 ದಿನಗಳಿಂದ ತಲೆಮರಿಸಿಕೊಂಡಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಮನೆಯ ಹತ್ತಿರ ಅವರಿಗಾಗಿ ಕಾದು ಕುಳಿತಿದ್ದಾರೆ. ಸಂಜೆ 5:00 ವರೆಗೂ ಅಧಿಕಾರಿಗಳು ಕಾಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿಗಮದ ಅಧೀಕ್ಷಕ ರಾಗಿದ್ದ ಚಂದ್ರಶೇಖರನ್ ಅವರ ಸಾವಿಗೆ ನೇರವಾಗಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರಣರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಗಂಭೀರವಾದಂತಹ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ, ತೆಲಂಗಾಣದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಕಾಂಗ್ರೆಸ್ ಟು ಕಾಂಗ್ರೆಸ್ ಪ್ಲಾನ್ ಮಾಡಿದ್ದಾರೆ. ಇಡೀ ಕ್ಯಾಬಿನೆಟ್ ಕುಳಿತು ಪ್ಲಾನ್ ಮಾಡಿದ್ದಾರೆ. ಹಾಗಾಗಿ ರಾಜ್ಯದಿಂದ ತೆಲಂಗಾಣಕ್ಕೆ ಹಣ ವರ್ಗಾವಣೆ ಮಾಡಿ ಅಲ್ಲಿಂದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಹಣ ಕಳುಹಿಸುತ್ತಿದ್ದಾರೆ ಎಂದು ಅಶೋಕ್ ಗಂಭೀರವಾದ ಆರೋಪ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಈಗ ಸ್ಪಷ್ಟ ದಾಖಲೆಗಳು ಸಿಕ್ಕಿವೆ ಕಾಂಗ್ರೆಸ್ ನವರು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು ಕರ್ನಾಟಕದಿಂದ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಹೀಗೆ ಹಣ ಕಳುಹಿಸಲು ಹೈದರಾಬಾದ್ ಗೆ ಇಲ್ಲಿನ ಕಾಂಗ್ರೆಸ್ ಸರ್ಕಾರ ಹಣ ವರ್ಗಾವಣೆ…
ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಕೆ ಎಸ್ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೂನ್ 6 ರೊಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯವ್ಯಾಪಿ ಆಂದೋಲನ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 6ರ ಒಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯ ವ್ಯಾಪಿ ಆಂದೋಲನ ಹಮ್ಮಿಕೊಳ್ಳಲಾಗುತ್ತದೆ.ಸಚಿವರ ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ನ ಒತ್ತಡದಿಂದಲೇ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕಾಂಗ್ರೆಸ್ನ ಒತ್ತಡ ಮತ್ತು ಬೆದರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಂದ್ರಶೇಖರ್ ಆತ್ಮಹತ್ಯೆಗೆ ಸಿದ್ದರಾಮಯ್ಯನವರೇ ಕಾರಣ ಕಾಂಗ್ರೆಸ್ ಫಸ್ಟ್ ವಿಕೆಟ್ ಬಿದ್ದು ಹೋಯಿತು ಅಂತಾನೆ ಅರ್ಥ ಅಧಿವೇಶನ ನಡೆಯಲು ಬಿಡದಂತಹ ಸ್ಥಿತಿ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ವಾಗ್ದಾಳಿ ನಡೆಸಿದರು. ಎಲ್ಲಿದ್ದೀಯಪ್ಪ ರಣದೀಪ್ ಸಿಂಗ್ ಸುರ್ಜೆವಾಲಾ? ಸ್ವಲ್ಪ ಬಾಯಿ ಬಿಚ್ಚು. ರಾಹುಲ್ ಗಾಂಧಿಯವರೇ ನೀವು ವಿದೇಶಕ್ಕೆ ಓಡೋಗಿ ಬಿಟ್ಟಿದ್ದೀರಾ? ವಿದೇಶಕ್ಕೆ…
ಬೆಂಗಳೂರು : ಈ ಸರ್ಕಾರ ಬೆಳಗ್ಗೆ ಎದ್ದಕೂಡಲೇ ಲೂಟಿ ಹೊಡೆಯಲು ನಿಲ್ಲುತ್ತದೆ.ಈ ಸರ್ಕಾರ ಬಂದ ಮೇಲೆ ಬರೀ ಡೆತ್ನೋಟ್ಗಳೇ ಬರುತ್ತವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, KRIDL ನಿಂದ ಬಾಕಿ ಬಿಲ್ ಬರದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳಿಗೆ ಈ ಸರ್ಕಾರ ಕಿರುಕುಳ ಕೊಡುತ್ತಿದೆ.ಸಿಎಂ ಸಿದ್ದರಾಮಯ್ಯ ಅವರಿಗೆ 50 ವರ್ಷದ ರಾಜಕೀಯ ಅನುಭವ ಇದೆ ಅಂತಾರೆ, ಘಟನೆ ನಡೆದು 4 ದಿನವಾದ್ರೂ ಗೊತ್ತಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಇವರಿಗೆ ಗೊತ್ತಾಗಿಲ್ಲ ಅಂತಾದರೆ ಇವರೇನು ಮುಖ್ಯಮಂತ್ರಿನಾ ಎಂದು ಪ್ರಶ್ನಿಸಿದ್ದಾರೆ.ಎಲ್ಲರೂ ಮಹಾಪುರುಷರು, ಗೃಹ ಮಂತ್ರಿಗೆ ಕೈ ಮುಗಿಯಬೇಕು. ಡಿಸಿಎಂಗೆ ದೊಡ್ಡ ನಮಸ್ಕಾರ, ಸಿಎಂಗೆ ಅಡ್ಡ ಬೀಳಬೇಕು. ಈ ಸರ್ಕಾರದಲ್ಲಿ ಎಲ್ಲರೂ ದರೋಡೆಕೋರರೇ ಇದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಅಶ್ವತ್ಥ್ ನಾರಾಯಣ ಕೆಂಡಾ ಮಂಡಲವಾಗಿದ್ದಾರೆ.
ಯಾದಗಿರಿ : ಮನೆಯ ಮಾಲೀಕ ಮಕ್ಕಳನ್ನು ಶಾಲೆಗೆ ಸೇರಿಸಲೆಂದು ಕಲಬುರ್ಗಿಗೆ ತೆರಳಿದ್ದಾಗ, ಕಳ್ಳರು ಕೈಚಳಕ ತೋರಿಸಿದ್ದು ಮನೆಯ ಬೀಗ ಒಡೆದು ಮನೆಯಲ್ಲಿದ್ದ ಸುಮಾರು 500 ಗ್ರಾಂ ಚಿನ್ನ 5 ಲಕ್ಷ ರೂಪಾಯಿ ನಗರದನ್ನು ಕಳ್ಳತನ ಮಾಡಿರುವ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ಘಟನೆ ನಡೆದಿದೆ. ಹೌದು ಹಾಡು ಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ 5 ಲಕ್ಷ ನಗದು ಕಳವು ಮಾಡಿರುವ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆಮಕ್ಕಳನ್ನು ಶಾಲೆಗೆ ಸೇರಿಸಲು ಕಲಬುರ್ಗಿಗೆ ತೆರಳಿದ್ದಾಗ ಕಳ್ಳರಿಂದ ಈ ಕೃತ್ಯ ನಡೆದಿದೆ. ಮನೆ ವೇಗ ಒಡೆದು ಎರಡು ಬೆಡ್ ರೂಮ್ನಲ್ಲಿದ್ದ ಚಿನ್ನ ಹಾಗೂ 5 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ಲಾಕರ್ ಸಮೇತ ಚಿನ್ನಾಭರಣ ನಗದನ್ನು ಕದ್ದುಯ್ದಿದ್ದಾರೆ. ಇಬ್ಬರು ಕಳ್ಳರು ಮನೆಯಲ್ಲಿ ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ…
ಚಿಕ್ಕಮಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೋಳಿಸಿದ್ದಾರೆ. ಹೌದು ಸಂತ್ರಸ್ತೆ ವಿಡಿಯೋ ಚಿತ್ರಿಕರಿಸಿದ ಚಾಲಕ ಅಜಿತ್ ಗಾಗಿ ಎಸ್ಐಟಿ ಹುಡುಕಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಕಲ್ಯಾಣ ನಗರದ ಮಾವನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.ಆರು ದಿನದ ಹಿಂದೆ ಅಜಿತ್ ಮಾವ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು.ರಾತ್ರಿಯ ವೇಳೆ ದಿನೇಶ್ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರು. ಶೋಧ ನಡೆಸಿದ ನಂತರ ದಿನೇಶ್ ಮನೆಗೆ ಬೀಗ ಹಾಕಿ ಇದೀಗ ತೆರಳಿದ್ದಾರೆ.ಸಂತ್ರಸ್ತೆ ಹೇಳಿಕೆಯನ್ನು ರೆಕಾರ್ಡ್ ಮಾಡಿ ಅಜಿತ್ ವೈರಲ್ ಮಾಡಿದ್ದ ಎನ್ನಲಾಗುತ್ತಿದೆ. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಅಜಿತ್ ವಿರುದ್ಧ ಎಫ್ಐಆರ್ ದಾಖಲಿಸಿ ಎಸ್ಐಟಿ ಹುಡುಕಾಟ ನಡೆಸುತ್ತಿದ್ದು ಇವರಿಗೆ ಅಜಿತ್ ಬಂದನವಾಗಿಲ್ಲವೆಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಸ…
ಬೆಂಗಳೂರು : ಇತ್ತೀಚಿಗೆ ಸಣ್ಣಪುಟ್ಟ ವಿಷಯಗಳಿಗೆ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಂತಹದ್ದೇ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ಮೊಟ್ಟೆ ತಿನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಪತ್ನಿ ಮನನೊಂದು ಮನೆಯ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ ಹೌದು ಉತ್ತರ ಪ್ರದೇಶದ ಮೂಲದ ಪೂಜಾ (31) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ಅನಿಲ್ ಕುಮಾರ್ (35) ನನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗುತ್ತಿದೆ. ಊಟದ ವೇಳೆ ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ ಶುರುವಾಗಿದೆ. ನಾನು ಮನೆ ಯಜಮಾನ ನನಗೆ ಒಂದು ಮೊಟ್ಟೆ ಹೆಚ್ಚು ಬೇಕೆಂದು ಪತಿ-ಪತ್ನಿಯ ಜೊತೆ ಜಗಳವಾಡಿದ್ದಾನೆ.ಊಟಕ್ಕೆ ಕುಳಿತಿದ್ದಾಗ ಪತ್ನಿ ಪೂಜಾ ಮೇಲೆ ಅನಿಲ್ ಹಲ್ಲೆ ಮಾಡಿದ್ದಾನೆ. ಪತಿಯ ತಾರತಮ್ಯ ಭಾವನೆಗೆ ಬೇಸತ್ತು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ಕುರಿತಂತೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಆರ್ ವಿ ದೇಶಪಾಂಡೆ ಪ್ರತಿಕ್ರಿಯ ನೀಡಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆಯಾಗಿಲ್ಲ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರಿದೆ ಅನ್ನೋದು ಗಾಳಿ ಸುದ್ದಿ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ಹಿರಿಯ ನಾಯಕರ ಹೆಸರು ಕೇಳಿ ಬರುತ್ತಿದೆ.ಅಧ್ಯಕ್ಷ ಸ್ಥಾನ ಬದಲಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.ಆದರೆ ಇದೀಗ ಆರ್ ವಿ ದೇಶಪಾಂಡೆ ಅವರು ಇದೆಲ್ಲ ಗಾಳಿ ಸುದ್ದಿ, ಕೆಪಿಸಿಸಿ…
ದಾವಣಗೆರೆ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಕ್ಷಣ ಅವರನ್ನು ದಾವಣಗೆರೆಯ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಇದೀಗ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಹಿಂದುರಿಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.