Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿ ಅಧಿಕಾರಕ್ಕೆ ಬಂದಿತ್ತು. ಇದೀಗ ಇದೇ ಒಂದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ಬೊಕ್ಕಸಕ್ಕೆ ಆದಾಯ ಸಂಗ್ರಹದಲ್ಲಿ 12,000 ಕೋಟಿ ಕೊರತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ ಕಡಿಮೆ ಹಣ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಪ್ರಯೋಜನಗಳನ್ನು ಪಡೆಯಲು ಅವಿಭಜಿತ ಕುಟುಂಬಗಳು ವಿಭಜನೆಯಾಗುತ್ತಿವೆ. ವಿಭಜನೆಯಾದ ಕುಟುಂಬದ ಮಹಿಳೆಯರು ನಮ್ಮದು ಪ್ರತ್ಯೇಕ ಕುಟುಂಬ ಅಂತ ಹೇಳಿ ಎರಡು ಸಾವಿರ ರೂ. ಪಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸರ್ಕಾರವು ಗ್ಯಾರಂಟಿ ಯೋಜನೆ…
ರಾಮನಗರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್ಗಳನ್ನು ಹಂಚಿ ವ್ಯಾಪಕ ಅಕ್ರಮ ನಡೆಸಿತ್ತು. ಇದೀಗ ಉಪಚುನಾವಣೆಯಲ್ಲಿಯೂ ಕೂಡ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಚನ್ನಪಟ್ಟಣದಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು,, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ 3 ಸಾವಿರ ರೂ. 5 ಸಾವಿರ ರೂ. ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್ಗಳನ್ನು ಬೆಂಗಳೂರಿನ ಲುಲು ಮಾಲ್ಗೆ ಹೋಗಿ ಕೊಡಿ, ಅಲ್ಲಿಗೆ ಹೋಗಿ ನಿಮಗೆ ಬೇಕಾದ ವಸ್ತುವನ್ನು ಖರೀದಿ ಮಾಡಿ ಎಂದು ಆಮಿಷ ಒಡ್ಡಿದ್ದರು. ಇದನ್ನು ನಂಬಿ ಕೂಪನ್ ಹಿಡಿದುಕೊಂಡು ಲುಲು ಮಾಲ್ಗೆ ಹೋದರೆ ಅಲ್ಲಿ ಕೂಪನ್ ಇಲ್ಲ, ವಸ್ತುಗಳೂ ಇಲ್ಲ.ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ,…
ಬೆಂಗಳೂರು : ಅತಿಯಾದ ಟ್ರಾಫಿಕ್, ಜನದಟ್ಟಣೆ, ವಾಹನಗಳ ಸೌಂಡ್ ಹಾರ್ನ್ ಇದೆಲ್ಲವೂ ಬೆಂಗಳೂರಿನ ಜನತೆಗೆ ನಿತ್ಯ ದರ್ಶನವಾಗಿದೆ. ಇದಲ್ಲದರ ಮಧ್ಯ ಕೂಡ ಕಾರು ಚಾಲಕನೊಬ್ಬ ಸಿಗ್ನಲ್ ಬಳಿ ನಿದ್ರೆಗೆ ಜಾರಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಹಾಗೂ ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನಡೆದಿದೆ. ಹೌದು ಸಂಚಾರ ದಟ್ಟಣೆ ಹಾಗೂ ವಾಹನಗಳ ಜೋರು ಹಾರ್ನ್ ಶಬ್ದದ ನಡುವೆಯೂ ನಡು ರಸ್ತೆಯಲ್ಲಿ ಚಾಲಕನೊಬ್ಬ ಕಾರಿನಲ್ಲಿ ಯೇ ನಿದ್ದೆಗೆ ಜಾರಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕುಟುಂಬದ ಸದಸ್ಯರ ಜತೆಗೆ ಪ್ರವಾಸಕ್ಕೆ ತೆರಳಿ ಸುಸ್ತಾಗಿದ್ದ ಕಾರು ಚಾಲಕ, ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕಣ್ಣು ಮುಚ್ಚಿ ನಿದ್ದೆಗೆ ಜಾರಿದ್ದಾರೆ. ಈ ನಡುವೆ ದಟ್ಟಣೆ ಕಡಿಮೆ ಯಾಗಿ ವಾಹನಗಳು ಮಂದಗತಿಯಲ್ಲಿ ಮುಂದಕ್ಕೆ ಚಲಿಸಿವೆ. ಆದರೂ ಚಾಲಕ ನಿದ್ದೆಯಿಂದ ಎಚ್ಚರಗೊಂಡಿಲ್ಲ. ಹಿಂದಿನ ವಾಹನಗಳು ಜೋರಾಗಿ ಹಾರ್ನ್ ಮಾಡಿದರೂ ಚಾಲಕ ಎಚ್ಚರಗೊಂಡಿಲ್ಲ. ಬಳಿಕ ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಚಾಲಕ ಕಾರಿನಲ್ಲಿ ನಿದ್ದೆ ಮಾಡುತ್ತಿರುವುದನ್ನು ವಿಡಿಯೋ…
ಬೆಂಗಳೂರು : ಹಣ ಡಬಲ್ ಮಾಡಿಕೊಳ್ಳುವ ಆಸೆಗೆ ಬಿದ್ದು ಅದೆಷ್ಟೋ ಜನರು ಲಕ್ಷಾಂತರ ಕೋಟ್ಯಾಂತರ ಹಣ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಇದೀಗದುಪ್ಪಟ್ಟು ಆದಾಯಗಳಿಸುವ ಆಮಿಷವೊಡ್ಡಿ ಆನ್ ಲೈನ್ ಟ್ರೇಡಿಂಗ್ನಲ್ಲಿ ಖಾಸಗಿ ಕಂಪನಿಯ ಲೆಕ್ಕಧಿಕಾರಿಯೊಬ್ಬರಿಂದ ಸೈಬರ್ವಂಚಕರು ಬರೋಬ್ಬರಿ 4.5 ಕೋಟಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯ ಪೂರ್ಣಪ್ರಜ್ಞಾ ಲೇಔಟ್ ನಿವಾಸಿ ಕೆ.ಎಂ.ಮಧುಕುಮಾರ್ ವಂಚನೆಗೆ ಒಳಗಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸಂಜೀವ್ ಸಿಂಗ್ ಎಂಬಾತ ಪರಿಚಯ ಮಾಡಿಕೊಂಡು ಮಧುಗೆ ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ನನ್ನ ಮೊಬೈಲ್ಗೆ ಸೆ.2ರಂದು ಸಂಜೀವ್ ಸಿಂಗ್ ಎಂಬಾತ ಈ ಸ್ಟಾಕ್ ಮಾರ್ಕೆಟ್ ವಿನ್ನರ್ ವಿಐಪಿ 1 ಎಂಬ ವಾಟ್ ಪ್ಸ್ ಆ್ಯಪ್ ಗ್ರೂಪ್ ಗೆ ಸೇರುವಂತೆ ಸಂದೇಶ ಕಳುಹಿಸಿದ್ದ. ಅದರಲ್ಲಿ ಸ್ಟಾಕ್ ಮಾರ್ಕೆಟಿಂಗ್ ಬಗ್ಗೆ ತರಬೇತಿ ಹಾಗೂ ಅದರ ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದ. ಅದರಂತೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು RTI ಕಾರ್ಯಕರ್ತತು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೆ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅನುದಾನ ಹಂಚಿಕೆ ಮಾಡಿದ್ದು ಆದರೆ, ಜಯನಗರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದೂರು ಸಲ್ಲಿಸಲಾಗಿದೆ. ಹೌದು ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ವಿಧಾನಸಭಾ ಕ್ಷೇತ್ರವನ್ನು ಈ ಅನುದಾನ ಹಂಚಿಕೆಯಿಂದ ಹೊರಗಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದೆ ವಿಚಾರ ಇಟ್ಟುಕೊಂಡು ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ವಕೀಲ ಹೆಚ್.ಯೋಗೇಂದ್ರ ಎನ್ನುವರು ಡಿಕೆ ಶಿವಕುಮಾರ್ ವಿರುದ್ಧ ಇಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ ಪ್ರಮಾಣವಚನದ ಉದ್ದೇಶ ಉಲ್ಲಂಘಿಸಿದ್ದಾರೆ. ಉಪಮುಖ್ಯಮಂತ್ರಿ ಆಗುವ ವೇಳೆ…
ಬೆಂಗಳೂರು : ನಗರದಲ್ಲಿ ಕಾನೂನು ಬಾಹಿರ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಕ್ ಸಿದ್ದರಾಮಯ್ಯ ಅವರು, ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದೆ. ಕಂದಾಯ ಬಡಾವಣೆಗಳಲ್ಲಿ ಹಾಗೂ ಬಿ ಖಾತಾ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯುತ್ತಿಲ್ಲ. ಸೆಟ್ ಬ್ಯಾಕ್ ಬಿಡದೆ ಅಕ್ರಮವಾಗಿ 6 ರಿಂದ 8 ಮಹಡಿ ಕಟ್ಟುತ್ತಿದ್ದಾರೆ. ಇಂತಹ ಅಕ್ರಮ ನಿರ್ಮಾಣದಿಂದ ಇತ್ತೀಚೆಗೆ ಕಟ್ಟಡ ನೆಲಸಮ ಆಗಿ 8 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಅಕ್ರಮ ನಿರ್ಮಾಣಗಳನ್ನು ನಿಯಂತ್ರಿಸಲು ಕಾನೂನು ಭದ್ರ ಮಾಡುತ್ತಿದ್ದೇವೆ ಎಂದರು. ಇನ್ನು ಬಾಬು ಸಾಬ್ ಪಾಳ್ಯ ಘಟನೆ ಕುರಿತು ಮಾತನಾಡಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಅಕ್ರಮ ಕಟ್ಟಡಗಳ ನಿರ್ಮಾಣ ನಿಯಂತ್ರಿಸಲು ಬಿಬಿಎಂಪಿ, ಬಿಎಂಆರ್ಡಿಎ…
ಹಾವೇರಿ : ವಕ್ಫ್ ಆಸ್ತಿ ವಿವಾದದ ಬಿಸಿ ಇದೀಗ ಹಾವೇರಿ ಜಿಲ್ಲೆಗೂ ತಟ್ಟಿದ್ದು, ಹಾವೇರಿ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಬೋರ್ಡ್ ಹೆಸರಿನಲ್ಲಿ ಇಂದಿಕರಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವಾಸವಿದ್ದ ಮನೆ ಖಾಲಿ ಮಾಡಿಸಬಹುದು ಎಂಬ ಆತಂಕಕ್ಕೆ ಒಳಗಾಗಿದ್ದ ಜನ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಹೌದು ಮುಸ್ಲಿಂ ಮುಖಂಡರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹಾವೇರಿ ಎಸ್ ಪಿ ಅಂಶು ಕುಮಾರ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮಗೆ ಸಂಜೆ 7:30ಕ್ಕೆ ಮಾಹಿತಿ ಬಂತು. ಕಡಕೋಳ ಗ್ರಾಮದಲ್ಲಿ ಗಲಾಟೆಯಲ್ಲಿ ಐವರಿಗೆ…
ಬೆಂಗಳೂರು : ರಾಜ್ಯದ ಆದಾಯ ಸಂಗ್ರಹದಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದು, ಆರ್ಥಿಕ ವರ್ಷದ 7 ತಿಂಗಳಲ್ಲಿಯೇ ಶೇ.53ರಷ್ಟು ಗುರಿ ಮುಟ್ಟಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ 1.95 ಲಕ್ಷ ಕೋಟಿ ರು. ಆದಾಯ ಸಂಗ್ರಹದ ಗುರಿ ಹೊಂದಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ 1.03 ಲಕ್ಷಕೋರು. ಆದಾಯ ಸಂಗ್ರಹಿಸುವ ಮೂಲಕ ನಿಗದಿತ ಗುರಿಯ ಶೇ. 53ರಷ್ಟು ಸಾಧಿಸಿದಂತಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆದಾಯ ಸಂಗ್ರಹದಲ್ಲಿ ಶೇ. 11.2ರಷ್ಟು ಪ್ರಗತಿ ಸಾಧಿಸಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಬಜೆಟ್ ಅನುದಾನ ವೆಚ್ಚ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಳವಾಗಿದೆ. ಅಕ್ಟೋಬರ್ ಅಂತ್ಯಕ್ಕೆ ಶೇ. 46ರಷ್ಟು ಬಜೆಟ್ ಅನುದಾನ ವೆಚ್ಚ ಮಾಡಲಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ ಶೇ. 42ರಷ್ಟು ಸಾಧನೆ ಮಾಡಲಾಗಿತ್ತು. ಜತೆಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್ನಲ್ಲಿ ಘೋಷಿಸಲಾಗಿದ್ದ 52 ಸಾವಿರಕೋಟಿ ರು.ಗಳ ಪೈಕಿ ಈವರೆಗೆ 24,235 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ.ಜತೆಗೆ 2024-25ರ ಮೊದಲ ತ್ರೈಮಾಸಿಕ…
ಬೆಂಗಳೂರು: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಎಸಿ ಮೆಕ್ಯಾನಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮೆಕ್ಯಾನಿಕ್ ನನ್ನು ಚಾಮುಂಡಿ ನಗರದ ನಿವಾಸಿ ರಾಶಿ (24) ಎಂದು ತಿಳಿದುಬಂದಿದೆ. ಮೂರು ದಿನಗಳ ಹಿಂದೆ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.ಮೃತ ರಾಶಿ ಮೂಲತಃ ತಮಿಳುನಾಡಿನವನಾಗಿದ್ದು, ಹಲವು ವರ್ಷಗಳ ಹಿಂದೆಯೇ ಆತನ ಕುಟುಂಬ ನಗರಕ್ಕೆ ವಲಸೆ ಬಂದು ಚಾಮುಂಡಿ ನಗರದಲ್ಲಿ ನೆಲೆಸಿತ್ತು. ಈತ ಎಸಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಅ.27 ರಂದು ರಾತ್ರಿ ಕುಟುಂಬದವರೆಲ್ಲ ಊಟ ಮುಗಿಸಿ ನೆಲಮಹಡಿಯಲ್ಲಿ ಮಲಗಿದ್ದರು. ಆಗ ರಾತ್ರಿ 10 ಗಂಟೆ ಸುಮಾರಿಗೆ ಮೊದಲ ಮಹಡಿಯಲ್ಲಿದ್ದ ಅಡುಗೆ ಮನೆಗೆ ರಾಶಿ ತೆರಳಿದ್ದ.ಆ ವೇಳೆ ಅಡುಗೆ ಮನೆ ಸ್ವಿಚ್ ಹಾಕುತ್ತಿದ್ದಂತೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ರಾಶಿ…
ಬಳ್ಳಾರಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್ಗಳ ಮೂಲಕ (https://sevasindhuservices.karnataka.gov.in) ಗೆ ಭೇಟಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.23 ಕೊನೆಯ ದಿನವಾಗಿದೆ. ಯೋಜನೆಗಳು: ನೇರಸಾಲ ಯೋಜನೆ : ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ ರೂ.50,000 ಸಹಾಯಧನ ಮತ್ತು ರೂ.50,000 ಸಾಲ) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ : ವ್ಯಾಪಾರ ಮತ್ತು ಇತರೆ ಸಣ್ಣ ಉದ್ಯಮಗಳಿಗಾಗಿ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ. ಸ್ವಾವಲಂಭಿ ಸಾರಥಿ : ಸರಕು ವಾಹನ/ಟ್ಯಾಕ್ಸಿ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷ ಸಹಾಯಧನ ಮತ್ತು ಉಳಿದ…












