Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರುಪಾಯಿ ಹಾಗೂ ತಿಂಗಳಿಗೆ 8 ಸಾವಿರ ಖಾತೆಗೆ ಹಾಗಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದಕ್ಕೆ ಟ್ವೀಟ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಈಗ ಬಿವೈ ವಿಜಯೇಂದ್ರ ಟ್ವೀಟಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ ಎಂದಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಮಾನ್ಯ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರೇ, ಜನ ಕಾಂಗ್ರೆಸ್ ಮೇಲೆ ಇಟ್ಟಿರುವ ನಂಬಿಕೆಯನ್ನು ನೋಡಿ ತಮಗೆ ಸಹಿಸಿಕೊಳ್ಳಲಾಗದಷ್ಟು ತಾಪಮಾನ ಏರುತ್ತಿದೆ! ಜನತೆಗೆ ಈಗಾಗಲೇ ನಾವು “ನುಡಿದಂತೆ ನಡೆಯುತ್ತೇವೆ“ ಎಂಬುದು ಖಾತ್ರಿಯಾಗಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಸಹ ಜನರಿಗೆ ಖಚಿತವಾಗಿದೆ. ಗೃಹಲಕ್ಷ್ಮಿಯಂತೆ ”ಮಹಾಲಕ್ಷ್ಮಿ” ಯೋಜನೆಯೂ ಜಾರಿ ಮಾಡುವುದರ ಬಗ್ಗೆ ಜನತೆಗೆ ಅನುಮಾನ ಉಳಿದಿಲ್ಲ, ಏಕೆಂದರೆ ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ! ಅಂದಹಾಗೆ ಬಿವೈ ವಿಜಯೇಂದ್ರ ಅವರೇ,…
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇದೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಹೌದು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ.ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಮ್ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ…
ಬೀದರ್ : ಬೀದರ್ ನ ಜಿ ಎನ್ ಡಿ ಕಾಲೇಜು ಕಾರ್ಯಕ್ರಮದಲ್ಲಿ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಬೀದರ್ ನ ಗಾಂಧಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಇಂದು ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿ ಏನ್ ಡಿ ಡಿಗ್ರಿ ಕಾಲೇಜಿನಲ್ಲಿ ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಹೊಡೆದಾಟ ಸಂಬಂಧ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಎರಡು ಸಮುದಾಯದ ವಿದ್ಯಾರ್ಥಿಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ ಎಂದು ಬೀದರ್ ಎಸ್ ಪಿ ಚನ್ನಬಸವಣ್ಣ ರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗಾಯಗೊಂಡಿದ್ದ ವಿದ್ಯಾರ್ಥಿಗಳಿಬ್ಬರ ದೂರಿನ ಮೇರೆಗೆ ಇದೀಗ ಕೇಸ್ ದಾಖಲಾಗಿದೆ.ಹಲ್ಲೆ ಪ್ರಕರಣದಲ್ಲಿ ಭಾಗಿಯಾದ 17 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.ನಾಳೆ ಕಾಲೇಜಿನಲ್ಲಿ ಬಿಳ್ಕೊಡುಗೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಇದೀಗ ಕಾಲೇಜು…
ದಾವಣಗೆರೆ : ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದು ದಾವಣಗೆರೆ SP ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಮೇ 24 ರಂದು ಚೆನ್ನಗಿರಿ ಠಾಣೆಯ ಮುಂದೆ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.ಈ ಬಗ್ಗೆ ಪರಿಶೀಲಿಸಿದ್ದು ಪಾಕಿಸ್ತಾನ ಜಿಂದಾಬಾದ್ ಅಂತ ಯಾರು ಘೋಷಣೆ ಕೂಗಿಲ್ಲ. ಪರಿಶೀಲಿಸಲಾದ ವಿಡಿಯೋ ದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ ಎಂದು ಅವರು ತಿಳಿಸಿದರು. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತವಾದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ ಪಿ ಉಮಾ ಪ್ರಶಾಂತ್ ತಿಳಿಸಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಸುಳ್ಳು ಸುದ್ದಿಗಳನ್ನು ಹರಡಬಾರದು ಸಾರ್ವಜನಿಕರಿಗೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಸೂಚನೆ ನೀಡಿದರು. ಮಟ್ಕಾ…
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯದು ನುಡಿದಂತೆ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಗೊಳಿಸಿತು ಅದರಲ್ಲಿ ಪ್ರಮುಖವಾದದ್ದು ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಒಂದು ಯೋಜನೆಯಿಂದ ಜಿಎಸ್ಟಿ ಸಂಗ್ರಹ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಳವಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ…
ಮಂಗಳೂರು : ಕುಟುಂಬ ರಾಜಕಾರಣದಿಂದ ಬಿಜೆಪಿಯನ್ನು ಶುದ್ಧೀಕರಣಗೊಳಿಸಲು ಈ ಬಾರಿಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ರಘುಪತಿ ಭಟ್ ಅವರನ್ನು ಬೆಂಬಲಿಸುವಂತೆ ಮಾಜಿ ಸಚಿವ ಈಶ್ವರಪ್ಪ ಅವರು ಪದವೀಧರ ಮತದಾರರನ್ನು ವಿನಂತಿಸಿದ್ದಾರೆ. ಮಂಗಳೂರಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗ ಅಪ್ಪ, ಮಕ್ಕಳ ಪಕ್ಷವಾಗಿದೆ. ಪಕ್ಷದ ತತ್ವ, ಸಿದ್ಧಾಂತಕ್ಕಿಂತಲೂ ಕುಟುಂಬ ರಾಜಕಾರಣವೇ ಮೇಳೈಸುತ್ತಿದೆ. ಇದನ್ನು ನೋಡಿ ಬಿಜೆಪಿ ನಿಷ್ಠ ಕಾರ್ಯಕರ್ತರಿಗೆ ನೋವಾಗಿದೆ. ಕೇಂದ್ರ ನಾಯಕರೂ ಕೂಡ ಬಿಎಸ್ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಟ್ಟಿಲ್ಲವೆಂದು ಸಹಜವಾಗಿ ರಘುಪತಿ ಭಟ್ ಸಮಧಾನಗೊಂಡಿದ್ದರು. ಆದರೆ ಇದೀಗ ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಬಂಡಾಯದ ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಇವರನ್ನು ಬೆಂಬಲಿಸಿ ಎಂದು ಕೆ ಎಸ್ ಈಶ್ವರಪ್ಪ ಪದವೀಧರರಿಗೆ ಮನವಿ…
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಎಂಬ ಗ್ರಾಮದಲ್ಲಿ ಬೈಕ್ ಟಚ್ ಆಗಿದ್ದನ್ನು ಪ್ರವೇಶಿಸಿದ್ದಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಇಬ್ಬರು ಯುವಕರಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ಅನ್ಯ ಕೋವಿನ ಇಬ್ಬರು ಯುವಕರಿಂದ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಲ್ಲಿನಕೋಟೆಯಲ್ಲಿ ಶ್ರೀನಿವಾಸಮೂರ್ತಿ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ.ನದೀಮ್, ಇಮ್ರಾನ್ ಹಾಗೂ ಮತ್ತೊಬ್ಬನಿಂದ ಹಲ್ಲೆ ನಡೆದಿದೆ. ಅಲ್ಲದೆ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಶ್ರೀನಿವಾಸಮೂರ್ತಿಗೆ ದಾಬಸ್ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನಯೆಲ್ಲಿ ಮೂವರು ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಹೌದು ಮೂವರು ಅನುಮಾನಾಸ್ಪದ ಶವಗಳು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗಿತ್ತು.ಆದರೆ ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನನ್ನನ್ನು ಬಿಟ್ಟು ಅಣ್ಣನನ್ನು ಮದುವೆಯಾಗಿದ್ದಕ್ಕೆ ತಮ್ಮನೊಬ್ಬ ಮೂವರನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಹೌದು ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನಯೆಲ್ಲಿ ನಿನ್ನೆ ಮೂವರು ಶವವಾಗಿ ಪತ್ತೆಯಾಗಿದ್ದರು. ಒಂದೇ ಮನೆಯಲ್ಲಿ ಮೂವರು ನಿಗೂಢವಾಗಿ ಸಾವನಪ್ಪಿದ ಪ್ರಕರಣ ಮೂವರದು ಆತ್ಮಹತ್ಯೆ ಅಲ್ಲ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಹೊಸ ಲಿಂಗಾಪುರ ಗ್ರಾಮದ ನಿವಾಸಿಗಳಾದ ಐವತ್ತು ವರ್ಷದ ರಾಜೇಶ್ವರಿ,ರಾಜಶ್ವರಿ ಪುತ್ರಿಯಾಗಿರುವ ಇಪ್ಪತ್ತೆಂಟು ವರ್ಷದ ವಸಂತಾ, ಮತ್ತು ವಸಂತಾಳ ಐದು ವರ್ಷದ ಮಗ ಸಾಯಿಧರ್ಮತೇಜ್, ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಪೊಲೀಸರು ತನಿಖೆ ಕೈಗೊಂಡಾಗ ಬೆಚ್ಚಿಬಿದ್ದಿದ್ದು, ತನ್ನನ್ನು ಬಿಟ್ಟು ಅಣ್ಣನನ್ನು (ಆರಿಫ್) ಮದುವೆಯಾಗಿದ್ದಕ್ಕೆ ಮೂವರನ್ನು ತಮ್ಮ (ಆಸೀಫ್) ಕೊಲೆ ಮಾಡಿದ್ದಾನೆ…
ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ. ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ . ವಾಹನ ಸಾಲಕ್ಕಾಗಿ ಹಾವೇರಿಯ ಪ್ರವೀಣ ಮಾಳಗಿ ಎಂಬಾತ ಅರ್ಜಿ ಹಾಕಿದ್ದ ಎನ್ನಲಾಗಿದೆ. ಈ ವೇಳೆ ಕಾನೂನು ಸಲಹೆ ಕೊಡಲು ರಮೇಶ್ ಎಂಟು ಸಾವಿರ ಬೇಡಿಕೆಯನ್ನು ಇಟ್ಟಿದ್ದ ಇಂದು 8,000 ಲಂಚ ಪಡೆಯುವಾಗ ಅಧಿಕಾರಿ ಬಲೆಗೆ ಬಿದ್ದಿದ್ದಾನೆ. ಧಾರವಾಡ ಲೋಕಾಯುಕ್ತ ಎಸ್ ಪಿ ಶಂಕರ್ ರಾಗೇ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.
ಧಾರವಾಡ : ಧಾರವಾಡದ ಬಳಿ ಅಕ್ರಮವಾಗಿ ಸ್ಪಿರಿಟ್ ಅನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಅಂದಾಜು 2 ಲಕ್ಷ ಮೌಲ್ಯದ 350 ಲೀಟರ್ ಸ್ಪಿರಿಟ್ ಅನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಟವೇರಾ ವಾಹನದಲ್ಲಿ ಧಾರವಾದದಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿಯ ವೇಳೆ ವಾಹನದಲ್ಲಿ ಇದ್ದಂತಹ ಇಬ್ಬರು ಪರಾರಿಯಾಗಿದ್ದಾರೆ. ಜಪ್ತಿ ಮಾಡಿದಂತ ಸ್ಪಿರಿಟ್ ಅನ್ನು ಧಾರವಾಡ ಉಪನಗರ ಠಾಣೆಯ ಸಿಸಿಬಿ ಅಧಿಕಾರಿಗಳು ಒಪ್ಪಿಸಿದ್ದಾರೆ. ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.