Author: kannadanewsnow05

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೂಡಸಂದ್ರ ಬಳಿ  ಈ ಒಂದು ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚೂಡಸಂದ್ರ ಎಂಬಲ್ಲಿ ಆಂಧ್ರಪ್ರದೇಶ ಮೂಲದ ನಂದಿನಿ (23) ಎಂಬ ಯುವತಿ ಸಾವನಪ್ಪಿದ್ದಾಳೆ. ಸ್ನೇಹಿತರ ಜೊತೆ ನಿರ್ಮಾಣ ಹಂತದ ಕಟ್ಟಡದ ಮೇಲೆ ಯುವತಿ ಮದ್ಯಪಾನ ಮಾಡಲು ತೆರಳಿದ್ದಳು. ನಿರ್ಮಾಣ ಹಂತದ ಕಟ್ಟಡದಲ್ಲಿ ತನ್ನ ಸ್ನೇಹಿತರ ಜೊತೆಗೂಡಿ ಮದ್ಯಪಾನ ಮಾಡಲು ಮುಂದಾಗಿದ್ದಳು. ಈ ವೇಳೆ ಸ್ನೇಹಿತರ ಜೊತೆ ನಂದಿನಿ ಕುಡಿದು ರೀಲ್ಸ್ ಮಾಡಿದ್ದಾಳೆ. ನಂತರ ಆಯತಪ್ಪಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳನ್ನು ಆಂಧ್ರಪ್ರದೇಶ ಮೂಲದ ನಂದಿನಿ (23) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಸ್ನೇಹಿತರ ಜೊತೆ ಕಟ್ಟಡದ ಮೇಲೆ ಹೋಗಿದ್ದಳು. ಈ ವೇಳೆ ದುರಂತ ಸಂಭವಿಸಿದೆ.  ಸದ್ಯ ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿರುತ್ತದೆ. ಪೋಷಕರು ಸ್ವಲ್ಪ ಏರು ಧ್ವನಿಯಲ್ಲಿ ಮಾತನಾಡಿದರೂ, ಆತ್ಮಹತ್ಯೆ ಹಾಗೂ ಇನ್ಯಾವುದೋ ಕಾರಣಕ್ಕೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ, ಶಿಕ್ಷಕರು ಬೈತಾರೆ ಎಂದು ವಿಷ ಸೇವಿಸಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು ಈ ಒಂದು ಘಟನೆ ಚಿಕ್ಕಮಗಳೂರಿನ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ನಿವೇದಿತಾ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ. ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಅನ್ನು ನೀಡಿದ್ದಾರೆ. ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್ ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗುತ್ತೆ ಶಿಕ್ಷಕರು ಹೊಡೆಯುತ್ತಾರೆ ಎಂದು ಮನೆಯಲ್ಲಿಯೇ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

Read More

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಇದೀಗ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬರೆದಿರುವ ಪತ್ರಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದು, 2025 26ನೇ ಸಾಲಿನ ಮಾವು ಬೆಳೆಗಾರ ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಲ್ ಮಾವಿಗೆ 1,616 ರೂಪಾಯಿ ಘೋಷಣೆ ಮಾಡಿದ್ದಾರೆ. ಹೌದು ರಾಜ್ಯದ ಒಟ್ಟು 2,50,000 ಮೆಟ್ರಿಕ್ ಟನ್ ಮಾವಿಗೆ ಇದೀಗ ಪರಿಹಾರ ಘೋಷಣೆ ಮಾಡಿದ್ದಾರೆ. ಎಂ ಎಸ್ ಐ ಯೋಜನೆಯ ಅಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ.ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ. ಮಾವು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು. ಕಳೆದ 22 ದಿನಗಳಿಂದ ರಾಜ್ಯದಲ್ಲಿ ಮಾವು ಬಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು.ನಾವು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಇಂದು ಕೋಲಾರದಲ್ಲಿ ಚೆನ್ನೈ ಬೆಂಗಳೂರು ರಾಷ್ಟ್ರೀಯ…

Read More

ಚಿಕ್ಕಮಗಳೂರು : ಮಲ್ನಾಡು ಭಾಗಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಹಾಸನ ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತೀರ್ಥ ಕೆರೆ ಬಳಿ ಈ ಒಂದು ಗುಡ್ಡ ಕುಸಿದಿರುವ ಘಟನೆ ನಡೆದಿದೆ.ಗುಡ್ಡ ಕುಸಿತದಿಂದ ಶೃಂಗೇರಿ ಮತ್ತು ಹೊರನಾಡು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ರಸ್ತೆಯಲ್ಲಿ ಮಣ್ಣು ಬಿದ್ದ ಹಿನ್ನೆಲೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಪೊಲೀಸರು ಬ್ಯಾರಿಕೆಡ್ ಹಾಕಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿದ್ದು, ವಿಪಕ್ಷಗಳಿಗೆ ಇವೆ ಪ್ರಮುಖ ಅಸ್ತ್ರವಾಗಿವೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ದೆಹಲಿಗೆ ತೆರಳಿದ್ದಾರೆ. ಹೌದು ನವದೆಹಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತೆರಳಿದ್ದಾರರೆ. ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಬೆನ್ನಲ್ಲೇ, ಬಿವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಒಂದೇ ದಿನ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಹಾಗಾಗಿ ಶೀಘ್ರದಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಒಂದೇ ದಿನ ರಾಜ್ಯದ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

Read More

ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.ಇನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದಾಂಡೇಲಿ ತಾಲೂಕಿನ ತಹಸೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಇನ್ನು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದ್ದು, ಸಕಲೇಶಪುರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆ…

Read More

ಬೆಂಗಳೂರು : ಮದ್ಯದ ಅಂಗಡಿ ಮಾಲೀಕರ ಒತ್ತಡಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದ್ದು, ಲೈಸೆನ್ಸ್ ನವೀಕರಣ ಶುಲ್ಕ ಇದೀಗ ಇಳಿಸಿದೆ.ಅಬಕಾರಿ ಲೈಸೆನ್ ಶುಲ್ಲ ಶೇ. 50 ರಷ್ಟು ಇಳಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಕಳೆದ ಮೇ 15 ರಂದು ಸರ್ಕಾರವು ಪರವಾನಗಿ ಶುಲ್ಕವನ್ನು ದುಪ್ಪಟ್ಟುಗೊಳಿಸುವ ಕರಡು ಅಧಿಸೂಚನೆ ಹೊರಡಿಸಿತ್ತು. ಮದ್ಯದಅಂಗಡಿ ಲೈಸೆನ್ಸ್ ನವೀಕರಣ ಶುಲ್ಕ ಹೆಚ್ಚಳ ಮಾಡಿದ್ದನ್ನು ಖಂಡಿಸಿ, ಇದರಿಂದ ಬೇಸತ್ತ ಕರ್ನಾಟಕ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಕರ್ನಾಟಕ ಬ್ರೂವರಿ ಮತ್ತು ಡಿಸ್ಟಿಲ್ಲರೀಸ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ನೀಡಿದ್ದವು. ಲೈಸೆನ್ಸ್‌ ದರ ಎಷ್ಟಿದೆ ? ಸಿಎಲ್‌-9 ಬಾರ್‌ ಅಂಡ್‌ ರೆಸ್ಟೋರೆಂಟ್‌ ಪರವಾನಗಿಗೆ ಈ ಹಿಂದೆ 8.62 ಲಕ್ಷ ರೂ. ಶುಲ್ಕವಿತ್ತು. ಇದೀಗ ಶುಲ್ಕವನ್ನು15 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಸೆಸ್‌ 2.25 ಲಕ್ಷ ರೂ. ಸೇರಿ ಒಟ್ಟು 17.25 ಲಕ್ಷ ರೂ. ಆಗಲಿದೆ. ಸಿಎಲ್‌ -6ಎ ಸ್ಟಾರ್‌ ಹೋಟೆಲ್‌ ಪರವಾನಗಿಗೆ 9.75…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷಿಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಕೇಸ್ ನಲ್ಲಿ 150 ಸಾಕ್ಷಿಗಳ ವಿಚಾರಣೆ ಆಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸರು ವಶಕ್ಕೂ ತೆಗೆದುಕೊಂಡಿಲ್ಲ. ಹೀಗಾಗಿ ಷರತ್ತು ವಿಧಿಸಿ ಜಾಮೀನು ನೀಡುವಂತೆ, ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಾಗಿ ಕೋರ್ಟಿಗೆ ಮನವಿ ಮಾಡಿದರು. ಈ ವೇಳೆ ಸರ್ಕಾರದ ಪರವಾಗಿ ಎಸ್ ಪಿ ಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ಒಂದು ಕೇಸ್ನಲ್ಲಿ ಈಗಾಗಲೇ ಸಾಕ್ಷಿಗಳ ವಿಚಾರಣೆ ಅಂತಿಮ ಹಂತದಲ್ಲಿದೆ. ಕೋರ್ಟ್ ವಿಚಾರಣೆ ಅಡ್ಡಿಪಡಿಸಲು ಪ್ರಜ್ವಲ್ ರೇವಣ್ಣ…

Read More