Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಪತಿ ಕಳೆದುಕೊಂಡವರು ಹಾಗೂ ಪತಿಯನ್ನು ಬಿಟ್ಟು ದೂರವಾದವರೇ ಈ ಕಿರಾತಕನ ಟಾರ್ಗೆಟ್ ಆಗಿದ್ದಾರೆ. ಒಂದಲ್ಲ ಎರಡಲ್ಲ ಇವರು ಹೆಣ್ಣು ಮಕ್ಕಳ ಬಾಳಿನಲ್ಲಿ ಈ ಕಿರಾತಕ ಆಟ ಆಡಿದ್ದು ಬಾಳು ಕೊಡೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಹಣ ಚಿನ್ನ ಪಡೆದು ಐವರು ಮಹಿಳೆಯರಿಗೆ ಮೋಸ ಮಾಡಿದ್ದಾನೆ. ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಎಂಡಿ ರಾಮಾಂಜಿ (38) ಈ ಕೃತ್ಯ ಎಸಗಿದ್ದು, ಇದೀಗ ಆತನ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದ್ದು, ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಅಪಾರ್ಟ್ಮೆಂಟ್ ಗಳಲ್ಲಿ ಸೆಕ್ಯೂರಿಟಿ, ಹೌಸ್ ಕೀಪಿಂಗ್ ಕೆಲಸವನ್ನು ಮಾಡಿಸುತ್ತಿದ್ದ. ಈತನ ಬಳಿ ಸುಮಾರು 60ಕ್ಕೂ ಹೆಚ್ಚು ಜನ ಕೆಲಸಕ್ಕೆ ಇದ್ದರು. ಕೆಲಸಕ್ಕೆ ಬರುವ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕುತ್ತಿದ್ದ ಎಂದು ಗೊತ್ತಾಗಿದೆ. ಅಪ್ಪ ಅಮ್ಮನ ಬಿಟ್ಟು ಬೆಂಗಳೂರಿಗೆ ಬರುವ ಹೆಣ್ಣು ಮಕ್ಕಳು ಇಲ್ಲಿ ಕೆಲಸ ಹುಡುಕಿಕೊಂಡು ಬರುತ್ತಾರೆ. ಅಲ್ಲದೆ ಗಂಡನನ್ನು ಕಳೆದುಕೊಂಡವರು ಅಥವಾ ಗಂಡನಿಂದ ಡಿವೋರ್ಸ್ ಪಡೆದ…
ವಿಜಯನಗರ : ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತಂದೆಯ ಕಣ್ಣೇದುರಲ್ಲೇ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಹೌದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನು (19) ಹಾಗೂ ಪ್ರಜ್ವಲ್ (18) ಮೃತ ಸಹೋದರರು. ತಂದೆಯ ಕಣ್ಣೆದುರಲ್ಲೇ ಅಣ್ಣ-ತಮ್ಮ ಪ್ರಾಣ ಬಿಟ್ಟಿದ್ದಾರೆ. ತಂದೆಯೊಂದಿಗೆ ತುಂಗಭದ್ರಾ ನದಿಗೆ ಮೂವರು ಸಹೋದರರು ಈಜಲು ತೆರಳಿದ್ದರು. ಇಬ್ಬರು ಸಹೋದರರು ಆಯತಪ್ಪಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ತಂದೆ ಮಂಜಪ್ಪ ಅವರ ಸಮಯ ಪ್ರಜ್ಞೆಯಿಂದ ಕೊನೆಯ ಮಗ ಚಿರಂಜೀವಿ ಸಾವಿನಿಂದ ಪಾರಾದರು.ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸೈಬರ್ ವಂಚಕರು 94 ವರ್ಷದ ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಮಾಡಿ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ನಿವೃತ್ತ ಸಂಶೋಧಕನಿಗೆ ಸೈಬರ್ ವಂಚಕರು ಭಾರಿ ವಂಚನೆ ಎಸಗಿದ್ದಾರೆ. ಲ್ಯಾಂಡ್ ಲೈನ್ ಗೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮೂಲಕ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ಮೊದಲು ಟೆಲಿಕಾಂ ಆಫೀಸ್ ನಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಕೆಎಸ್ ದಾಖಲಾಗಿದೆ. ಇನ್ಸ್ಪೆಕ್ಟರ್ ಕರೆ ಮಾಡುತ್ತಾರೆ ಎಂದು ಕಾಲ್ ಕಟ್ ಮಾಡಿದ್ದ. ಬಳಿಕ ಸಂದೀಪ್ ರಾವ್ ಹೆಸರಿನಲ್ಲಿ ವೃದ್ಧನಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಸಿಬಿಐ ಅಧಿಕಾರಿ ಎಂದು ಆಧಾರ್ ಕಾರ್ಡ್ ವಾಟ್ಸಪ್ಪ್ ಮಾಡಿಸಿಕೊಂಡಿದ್ದ. ವೃದ್ಧರ ಮೊಬೈಲ್ ನಂಬರ್ ಗೆ ನಕಲಿ ಎಫ್ಐಆರ್ ಕಳುಹಿಸಿದ್ದ ಆರೋಪಿ ನಂತರ ಸಿ ಬಿ ಐ ಪೊಲೀಸರ ರೀತಿ ಡ್ರೆಸ್ ಹಾಕಿ ವಿಡಿಯೋ ಕಾಲ್ ಮಾಡಿದ್ದಾನೆ. ನಾವು ಹೇಳಿದಂತೆ ಕೇಳಬೇಕು ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ. ಕೊನೆಗೆ ಕೇಸ್ ಕೈ ಬಿಡಲು…
ಬೆಳಗಾವಿ : 500 ರೂ. ಮುಖಬೆಲೆಯ ಖೋಟಾ ನೋಟು ಬೆಳಗಾವಿಯಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದ ಗೋವಾ ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಖಡೇಬಜಾರ್ ಅಂಗಡಿಯಲ್ಲಿ ಖೋಟಾ ನೋಟು ಚಲಾವಣೆಗೆ ಆರೋಪಿಗಳು ಯತ್ನಿಸಿದ್ದಾರೆ. ಸಂಶಯಗೊಂಡ ಅಂಗಡಿ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆಗಿ ಕಾರ್ಯಾಚರಣೆಗೆ ಇಳಿದ ಮಾರ್ಕೆಟ್ ಠಾಣೆ ಪೊಲೀಸರು, ಗೋವಾ ರಾಜ್ಯದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಕಾರ್, 2 ಲಕ್ಷದ 40 ಸಾವಿರ ಖೋಟಾ ನೋಟು ಮತ್ತು 4 ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಗೋವಾದಲ್ಲಿ 1 ಲಕ್ಷಕ್ಕೆ 2 ಲಕ್ಷ ಖೋಟಾ ನೋಟು ಕೊಟ್ಟು ಬೆಳಗಾವಿಗೆ ಬಂದಿದ್ದ ಈ ಗ್ಯಾಂಗ್, ಇಲ್ಲಿ ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದರು ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು : ಭಾರತಕ್ಕೆ ಕಚ್ಚಾ ದೈಲ ತುಂಬಿದ್ದ ಮತ್ತೊಂದು ಹಡಗು ಇದೀಗ ಎಂಟ್ರಿ ಕೊಟ್ಟಿದೆ ತೈಲಪಟ್ಟಿನ ಮಧ್ಯೆ ಭಾರತಕ್ಕೆ ರಷ್ಯ ಸಹಾಯ ಮಾಡಿದ್ದು ಮಂಗಳೂರು ಬಂದರಿಗೆ ಅಕ್ವಾ ಟೈಟಾನ್ ಇದೀಗ ಕಚ್ಚಾ ತೈಲು ಹಡಗು ಆಗಮಿಸಿದೆ. ಚೀನಾಗೆ ಹೋಗುತ್ತಿದ್ದ ಕಚ್ಚಾ ತೈಲ ಹಡಗು ಇದೀಗ ಮಂಗಳೂರು ಬಂದರಿಗೆ ಬಂದು ತಲುಪಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ರಷ್ಯಾ ಹಡಗು ಯೂಟರ್ನ್ ತೆಗೆದುಕೊಂಡಿದೆ. ಮಂಗಳೂರು ಬಂದರಿಗೆ ಬಂದಿದೆ. 7.7 ಲಕ್ಷ ಬ್ಯಾರೆಲ್ ಕಚ್ಚಾ ಟೈಲರ್ ತುಂಬಿರುವಂತಹ ಹಡಗು ಇದೀಗ ಮಂಗಳೂರು ಬಂದರಿಗೆ ಬಂದಿದೆ.
BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!
ಬೆಂಗಳೂರು : ಬೆಂಗಳೂರಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಬೆಂಗಳೂರಿಗೆ ರೈಲಿನಲ್ಲಿ ನಾಯಿಗೆ ನೀಡುವ ಆಹಾರದ ಬಾಕ್ಸ್ ಗಳಲ್ಲಿ ಮಾದಕ ವಸ್ತು ತರುತ್ತಿದ್ದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರಸ್ ರೈಲಿನಲ್ಲಿ ನಾಯಿಗಳಿಗೆ ಹಾಕುವ ಆಹಾರದ ಬಾಕ್ಸ್ ಗಳಲ್ಲಿ ಕೆ.ಜಿ.ಗಟ್ಟಲೇ ಮಾದಕ ವಸ್ತು ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಡಿಆರ್ಐ ಅಧಿ ಕಾರಿ ಗಳು ದಾಳಿ ನಡೆಸಿ, ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಈತನ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಇತರೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಬಳಿಕ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ, 40 ಡೆಬಿಟ್ ಕಾರ್ಡ್ 70 ಕ್ಕೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿಗಳಿಂದ ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ…
ಹೈದ್ರಾಬಾದ್ : ಕೆಲವರು ಸುಖಾಸುಮ್ಮನೆ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಾರೆ. ಹೈದರಾಬಾದ್ ನಲ್ಲಿ ಇದೀಗ ಅಂತದ್ದೇ ಘಟನೆ ನಡೆದಿದ್ದು, ಕುಟುಂಬಸ್ಥರು ಬೆಕ್ಕನ್ನು ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಹೌದು ಹೈದರಾಬಾದ್ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಿನ್ಸಿ ತನ್ನ ತಾಯಿ ಕುಸುಮಲತಾ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಕೆಲವು ವಾರಗಳ ಹಿಂದೆ, ಪ್ರಿನ್ಸಿ ಬೆಕ್ಕನ್ನು ಮನೆಗೆ ಕರೆತಂದಿದ್ದರು. ನಂತರ ಅವರು ನಿರಂತರವಾಗಿ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಬೆಕ್ಕನ್ನು ಸಾಕುವುದು ಬೇಡ ಎಂದು ಕುಟುಂಬಸ್ಥರು ವಿರೋಧಿಸಿದ್ದರು. ಶುಕ್ರವಾರ ವೈದ್ಯೆಯ ತಾಯಿ ಮತ್ತು ಅಜ್ಜಿ ಕೆಲಸಕ್ಕೆ ಹೋಗಿದ್ದರು. ಅವರು ಸಂಜೆ ಹಿಂತಿರುಗಿದಾಗ, ಪ್ರಿನ್ಸಿ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಗೊತ್ತಾಗಿದೆ. ಅವರು…
ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಹಾಗು ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ದಾವಣಗೆರೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಸಹಿತ ಪ್ರಮುಖ ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.
ಬೆಳಗಾವಿ : ಈ ಸಾವು ಅನ್ನೋದು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳೋಕ್ ಆಗಲ್ಲ. ಹೌದು ಸ್ವಿಮ್ಮಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ. ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ಮಿಂಗ್ ಮಾಡುವ ವೇಳೆ ಘಟನೆ ನಡೆದಿದ್ದು, ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್ಸಿಂಗ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ ಎಂಎಲ್ಐಆರ್ಸಿ ಕಮಾಂಡೋ ವಿಂಗ್ನಲ್ಲಿ ಟ್ರೇನಿಂಗ್ನಲ್ಲಿ ಅಧಿಕಾರಿಯಾಗಿದ್ದರು ಎನ್ನಲಾಗಿದೆ. ಸ್ವಿಮ್ಮಿಂಗ್ ಮಾಡುವಾಗಲೇ ತೀವ್ರ ಹೃದಯಾಘಾತವಾಗಿದೆ. ಅಧಿಕಾರಿಯನ್ನು ಮೇಲಕ್ಕೆ ತಂದು ಲೈಫ್ ಗಾರ್ಡ್ ಪ್ರದೀಪ್ ಕುಮಾರ್ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅಂಬುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯದಲ್ಲೇ ಲೆಫ್ಟಿನೆಂಟ್ ಅಮಿತ್ ಸಿಂಗ್ ಸಾವನ್ನಪ್ಪಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಹಾಗು ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ದಾವಣಗೆರೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಸಹಿತ ಪ್ರಮುಖ ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.














