Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಭೀಕರವಾಗಿ ಕೊಲೆ ನಡೆದರು ಕೂಡ ಪೊಲೀಸರು ನಿದ್ದೆಗಣ್ಣಲ್ಲಿ ಇದ್ದಾರೆ. ಎರಡು ಕೊಲೆಗಳು ಆದ ಬಳಿಕವೂ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಬೆಚ್ಚಿ ಬಿಡಿಸುವಂತಹ ಘಟನೆ ನಡೆದಿದ್ದು, ಮಹಿಳೆಯನ್ನು ಅರೆಬೆತ್ತಲೆ ಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಮಾರುತಿ ನಗರದ ಸೆಕೆಂಡ್ ಕ್ರಾಸ್ ಬಳಿ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ. ಹೌದು ಹುಬ್ಬಳ್ಳಿಯ ಮಾರುತಿ ನಗರದ ಸೆಕೆಂಡ್ ಕ್ರಾಸ್ ಬಳಿ ಖಾಸಗಿ ಆಸ್ಪತ್ರೆ ಹತ್ತಿರ, ಮೇ 25 ರಂದು ಸಾಯಂಕಾಲ ಕ್ಷುಲ್ಲಕ ಕಾರಣಕ್ಕೆ ಎಲಿಜಿಬತ್ ಎಂಬ ಮಹಿಳೆಯನ್ನು ಸಾರ್ವಜನಿಕ ಸ್ಥಳದಲ್ಲೇ ಅರೆ ಬೆತ್ತಲೆಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇನ್ನು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಾಶ ಕಾಳೆ, ಸಾಗರ, ನಾಗರತ್ನ, ಪೂಜಾ, ಸೀನು, ರೇಣುಕಾ, ಶಾಂತಮ್ಮಾ ಹಾಗೂ ರಾಜೇಶ್ವರಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು…
ಬಳ್ಳಾರಿ : ಮುಸ್ಲಿಂ ಯುವಕರಿಂದ ಹಿಂದೂ ಯುವತಿಯರನ್ನು ರಕ್ಷಣೆ ಮಾಡಲು ಇಂದು ಶ್ರೀರಾಮ ಸೇನೆ ಸಹಾಯವಾಣಿಯನ್ನು ಇಂದು ಆರಂಭಿಸಿದೆ. ಇದರ ಬೆನ್ನಲ್ಲೇ ಇದೀಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಪರಸ್ಪರ ಪ್ರೀತಿಸಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಓಡಿಹೋದ ಘಟನೆ ಬೆಳಕಿಗೆ ಬಂದಿದೆ. ಹೌದು ಅಪ್ರಾಪ್ತ ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೀತಿಸಿ ಓಡಿಹೋದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ಪ್ರೀತಿ ವಿಷಯ ಇಬ್ಬರು ಮನೆಯಲ್ಲಿ ಗೊತ್ತಾಗುತ್ತಿದಂತೆ 16 ವರ್ಷದ ಮುಸ್ಲಿಂ ಯುವತಿ ಮತ್ತು 20 ವರ್ಷದ ಹಿಂದೂ ಯುವಕ ಹದಿನೈದು ದಿನಗಳ ಹಿಂದೆಯೇ ಮನೆಯಿಂದ ಎಸ್ಕೇಪ್ ಆಗಿದ್ದಾರೆ. ಹಿಂದೂ ಯುವಕ ಪರಮೇಶ ಹಾಗೂ ಮುಸ್ಲಿಂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ವಿಚಾರ ಮನೆಯಲ್ಲಿ ಗೊತ್ತಾಗುತ್ತಿದಂತೆ ನಾಪತ್ತೆ ಆಗಿದ್ದಾರೆ. ಈ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಯುವಕ ಪರಮೇಶ…
ದಾವಣಗೆರೆ : ರಾಜ್ಯದಲ್ಲಿ ಯಾವುದೇ ಕೋಮು ಗಲಭೆ ನಡೆದಿಲ್ಲ. ಕೋಮು ಭಾವನೆ ಕೆರಳಿಸುವ ಘಟನೆ ನಡೆದಿಲ್ಲ.ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಗಂಭೀರ ಪ್ರಕರಣ ನಡೆದಿಲ್ಲ. ಈ ಬಗ್ಗೆ ನಮ್ಮ ಬಳಿ ಅಂಕಿ ಸಂಖ್ಯೆಗಳಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದರು. ಇಂದು ಅವರು ಚೆನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಈ ಘಟನೆ ಸಂಬಂಧಪಟ್ಟ 108 ಆರೋಪಿಗಳನ್ನು ಗುರುತಿಸಲಾಗಿದೆ ಎಂದು ದಾವಣಗೆರೆಯಲ್ಲಿ ಎಡಿಜಿಪಿ ಆರ್ ಹಿತೇಂದ್ರ ಹೇಳಿಕೆ ನೀಡಿದರು. ಕಲ್ಲುತೂರಾಟ ಮಾಡಿದ 30 ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ. ಈಗಾಗಲೇ ಈ ಘಟನೆ ಸಂಬಂಧಪಟ್ಟ ಎಫ್ಐಆರ್ ಸಹ ದಾಖಲಾಗಿದೆ. ಪೊಲೀಸರ ಮೇಲೆ ಕೂಡ ದಾಳಿಯಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವಿನ ಬಗ್ಗೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ ಬಗ್ಗೆ ಸಿಐಡಿ ಅಧಿಕಾರಿಗಳನ್ನೇ ಕೇಳಬೇಕು. ಕೆಲವು ಅಧಿಕಾರಿಗಳನ್ನು ಅಮಾನತು ಮಾಡುವುದು ಸಾಮಾನ್ಯ.…
ಬೀದರ್ : ಕಾಲೇಜು ಕಾರ್ಯಕ್ರಮ ಒಂದರಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿಎನ್ಡಿ ಡಿಗ್ರಿ ಕಾಲೇಜಿನಲ್ಲಿ ನಡೆದಿದೆ. ಹೌದು ಬೀದರ್ ನ ಜಿ ಏನ್ ಡಿ ಕಾಲೇಜಿನಲ್ಲಿ ಇಂದು ಕಾಲೇಜು ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಕಾಲೇಜು ಸಭಾಂಗಣದಲ್ಲೇ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬೀದರ್ ನ ಮೈಲೂರು ಕ್ರಾಸ್ ನಲ್ಲಿರುವ ಗುರುನಾನಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.ಘಟನೆಯು ಗಾಂಧಿ ಗಂಜಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಚಿವ ಈಶ್ವರ ಖಂಡ್ರೆ ಹಾಗೂ ರಹೀಮ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನನ್ನು ಮೂರು ದಿನ ಎಸ ಐ ಟಿ ಕಸ್ಟಡಿಗೆ ನೀಡಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು JMFC ಕೋರ್ಟ್ ಆದೇಶ ಹೊರಡಿಸಿದೆ. ಇಂದು ಆರೋಪಿಗಳನ್ನು ಹಾಸನದ 5ನೇ ಹೆಚ್ಚುವರಿ ಸಿವಿಲ್, JMFC ಕೋರ್ಟಿಗೆ SIT ಅಧಿಕಾರಿಗಳು ಹಾಜರುಪಡಿಸಿದರು. ಆರೋಪಗಳಾದ ನವೀನ್ ಗೌಡ, ಚೇತನ್ ಎನ್ನುವವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಪಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಆರೋಪಿಗಳನ್ನು ಮೂರು ದಿನ ಎಸ್ಐಟಿ ಕಷ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇನ್ನು ಕೋರ್ಟಿಗೆ ಹಾಜರುಪಡಿಸುವ ಮುನ್ನ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಅನ್ನು ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ. ಪ್ರಜ್ವಲ ಸಲ್ಲಿಸಿರುವ ಅರ್ಜಿಯನ್ನು ವಿಚಾರ ನಡೆಸಿದ ನ್ಯಾಯಾಲಯವು ಇದೀಗ ಮೇ 31ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ನ್ಯಾಯಾಲಯ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದೆ. ಇಮೇಲ್ ಮೂಲಕ ವಕೀಲರು ವಕಾಲತ್ತು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಇಮೇಲ್ ಮೂಲಕ ವಕೀಲರು ಪ್ರಜ್ವಲ್ ವಕಾಲತನ್ನು ಸ್ವೀಕರಿಸಿದ್ದಾರೆ ಎನ್ನಲಾಗಿದೆ.ಹಾಗಾಗಿ ಇದೀಗ ವಿಚಾರಣೆಯನ್ನು ಕೋರ್ಟ್ ಮೇ 31ಕ್ಕೆ ಮುಂದೂಡಿದೆ ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್ಪೆಕ್ಟರ್ ಚಂದ್ರಾಧರ ನನ್ನು ಬಂಧಿಸಲಾಗಿದ್ದು, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ನಡೆಸಿದ್ದರು ಎನ್ನಲಾಗಿದೆ.ಈ ಹಿಂದೆ ಸೈಬರ್ ಕ್ರೈಂ ಠಾಣೆ ಇನ್ಸ್ಪೆಕ್ಟರ್ ಆಗಿದ್ದು ಹಗರಣದ ತನಿಖೆ ನಡೆಸಿದ್ದರು. ಇದೀಗ ಸಿಐಡಿ ಪೊಲೀಸರು ಚಂದ್ರಾಧರನನ್ನು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ? 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು.ಈ ಕೇಸ್ ತನಿಖೆ ವೇಳೆ ಬಿಟ್ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು.2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್ಕಾಯಿನ್ ಕೇಸ್ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್ಫಾರ್ಮ್ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್ಕಾಯಿನ್ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿದ್ದನು. ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಮೇ 7 ರಂದು ಪೊಲೀಸರು ಕೊನೆಗೂ ಬಂಧಿಸಿದ್ದರು . 2017ರಲ್ಲಿ ತುಮಕೂರು…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ SIT ಅಧಿಕಾರಿಗಳು ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನನ್ನು SIT ಅಧಿಕಾರಿಗಳು ಇಂದು ಕೋರ್ಟಿಗೆ ಹಾಜರುಪಡಿಸಿದರು. ಆರೋಪಿಗಳನ್ನು ಹಾಸನದ 5ನೇ ಹೆಚ್ಚುವರಿ ಸಿವಿಲ್, JMFC ಕೋರ್ಟಿಗೆ SIT ಅಧಿಕಾರಿಗಳು ಹಾಜರುಪಡಿಸಿದರು. ಆರೋಪಗಳಾದ ನವೀನ್ ಗೌಡ, ಚೇತನ್ ಎನ್ನುವವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.ಇದೀಗ ಆರೋಪಿಗಳನ್ನು ಬಂಧಿಸಿ ಇಂದು ಕೋರ್ಟಿಗೆ ಹಾಜರುಪಡಿಸಲಾಗಿದೆ. ಇನ್ನು ನಿನ್ನೆ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ ಐ ಟಿ ಅಧಿಕಾರಿಗಳು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು.ಹೈಕೋರ್ಟಿಗೆ ಜಾಮೀನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು. ಈ ಬವೇಳೆ ನವೀನ ಗೌಡ ಹಾಗೂ ಚೇತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಹೈಕೋರ್ಟ್ ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳು…
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದಾಖಲಾಗುವ ಮುನ್ನ ವಿದೇಶ ಪ್ರವಾಸ ಹೋಗಿದ್ದರು. ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆಗಲು ಪ್ರೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫೈಟ್ ಹತ್ತಲಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರಜ್ವಲ್ ಬಂಧನಕ್ಕೆ ಕಾಯುತ್ತಿದ್ದಾರೆ ಎನ್ನಲಾಗಿದೆ. ಲುಫ್ತಾನ್ನಾ ಏರ್ಲೈನ್ಸ್ ಮೂಲಕ ಫೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್ನಲ್ಲಿ ಫೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಇದಕ್ಕಾಗಿ ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ವಿಮಾನ…