Author: kannadanewsnow05

ಮಂಡ್ಯ : ಸಿಎಂ ಕುರ್ಚಿ ಖಾಲಿ ಎಲ್ಲಿದೆ? ಖಾಲಿ ಇದ್ದಾಗ ಅದರ ಬಗ್ಗೆ ಮಾತಾಡಲಿ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್ ಹೇಳಿದರು. ಚಂದ್ರಶೇಖರ್ ಸ್ವಾಮೀಜಿಯ ಅಭಿಪ್ರಾಯ ಅವರ ವೈಯಕ್ತಿಕ. ಈಗ ಸಿದ್ದರಾಮಯ್ಯ ಸಿಎಂ ಖುರ್ಚಿಯಲ್ಲಿ ಕುಳಿತಿದ್ದಾರೆ. ಸಿಎಂ ಖುರ್ಚಿ ಖಾಲಿ ಎಲ್ಲಿದೆ?. ಖಾಲಿ ಇರುವಾಗ ಚರ್ಚೆ ಮಾಡಬೇಕು. ಖಾಲಿ ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ. ಸ್ವಾಮೀಜಿ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು. ಒಕ್ಕಲಿಗರು, ಲಿಂಗಾಯತರು, ದಲಿತರು ಕೇಳ್ತಿದ್ದಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ಹಾಕಿದ ಗೆರೆಯನ್ನ ನಾವ್ಯಾರು ದಾಟುವುದಿಲ್ಲ. ಇದು ನಮ್ಮ ಪಕ್ಷದ ಪಾಲಿಸಿ. ಏನೇ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ…

Read More

ಬೆಂಗಳೂರು : ಸಿದ್ದರಾಮಯ್ಯ ಅವರು ಬಂದಾಗ ಅವರ ಬಳಿ ಸಮಸ್ಯೆ ಹೇಳಿ ಸುಮ್ಮನಾಗಬಾರದು, ಸಮಸ್ಯೆ ಹೇಳಿ ನಂತರ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಹಾಸ್ಯ ಚಟಾಕಿ ಹಾರಿಸಿದರು. ಹೌದು ನಿರ್ಮಾಪಕರ ಸಂಘದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಶಿವರಾಜ್ ಕುಮಾರ್, ಜಗ್ಗೇಶ್ ಹಾಗೂ ಇನ್ನೂ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮುಂದೆ ಬೇಡಿಕೆಗಳ ಸರಮಾಲೆಯನ್ನೇ ಇಡಲಾಯ್ತು. ಚಿತ್ರರಂಗದ ಸಮಸ್ಯೆಗಳ ಬಗ್ಗೆ ಒಬ್ಬರ ಹಿಂದೊಬ್ಬರು ಹೇಳುತ್ತಲೇ ಇದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ತಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಆಗಾಗ ಹೋಗಿ ತಲೆ ಕೆಡಸಿದರೆ ನಮ್ಮ ಕೆಲಸ ಬೇಗ…

Read More

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಹೌದು ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಅಲ್ಲದೆ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಕೂಡ ಆಗ್ರಹ ಕೇಳಿಬಂದಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ…

Read More

ಹುಬ್ಬಳ್ಳಿ : ಸಿಎಂ ಸ್ನಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಹಲವು ಸ್ವಾಮೀಜಿಗಳು ತಮ್ಮ ವ್ಯಕ್ತಿಕ ಅಭಿಪ್ರಾಯ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಒಂದು ವೇಳೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು 5 ವರ್ಷದವರೆಗೆ ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಎಂದು ಅವರು ತಿಳಿಸಿದರು. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡಬೇಕು ಎಂದು ಮಾತನಾಡುತ್ತಿದ್ದಾರೆ.ಇಂಥ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು. ಮುಖ್ಯಮಂತ್ರಿ ಬದಲಾವಣೆ ಆಗಬೇಕು ಅಂತ ಸ್ವಾಮೀಜಿಗಳು ಹೇಳಿದ್ದಾರೆ. ಹೀಗಾಗಿ ಅದು ಚಂದ್ರಶೇಖರ ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿ ಬದಲಾವಣೆ ಆದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡಿತಿದ.…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಘಟನೆ ಕುರಿತಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗದ ಬೆಳವಣಿಗೆಗಳ ಬಗ್ಗೆ ನಟ ಶಿವರಾಜಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದ ಬೆಳವಣಿಗೆಗಳ ಬಗ್ಗೆ ನಟ ಶಿವರಾಜಕುಮಾರ್ ವಿಷಾದ ವ್ಯಕ್ತಪಡಿಸಿದ್ದು, ನಾವು ಮಾಡುತ್ತಿರುವುದು ಸರೀನಾ ಅಂತ ಯೋಚಿಸಬೇಕು. ಇದರ ಬಗ್ಗೆ ಮಾತಾಡಿ ಪ್ರಯೋಜನ ಇಲ್ಲ ಘಟನೆಯಿಂದ ಎರಡು ಕುಟುಂಬಗಳಿಗೆ ನೋವಾಗಿದೆ. ದರ್ಶನ್ ಹಾಗೂ ರೇಣುಕಾ ಸ್ವಾಮಿ ಕುಟುಂಬಕ್ಕೆ ನೋವಾಗಿದೆ ಎಂದು ದರ್ಶನ್ ಕೆಸಿನ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಹುಶಃ ಏನು ಮಾಡೋಕ್ಕೆ ಆಗಲ್ಲ. ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ. ಕಾನೂನಿನ ಅಡಿಯಲ್ಲಿ ಏನಾಗಬೇಕು ಅದು ಆಗೇ ಆಗುತ್ತದೆ. ಆದರೆ ಈ ಒಂದು ಘಟನೆ ನಡೆಯಬಾರದಿತ್ತು ಇದರಿಂದ ನನಗೂ ತುಂಬಾ ಬೇಸರವಾಗಿದೆ. ದರ್ಶನ್ ಕುಟುಂಬ ಆಗಿರಬಹುದು ರೇಣುಕಸ್ವಾಮಿ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ಪ್ರಕರಣದ ಎ 1 ಆರೋಪಿಯಾಗಿರುವ ಪವಿತ್ರ ಗೌಡ ಕೂಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದು ನನ್ನ ಕಣ್ಣೆದುರಲ್ಲಿಯೇ ದರ್ಶನ್ ಅವರು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೆದರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಪ್ರಕಾರಣಕ್ಕೆ ಸಂಬಂಧಸಿದಂತೆ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಆತನ 2ನೇ ಪತ್ನಿ ಸೇರಿದಂತೆ 17 ಜನರ ಗ್ಯಾಂಗ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ವೇಳೆ ನಟಿ ಪವಿತ್ರಾಗೌಡನನ್ನು ವಿಚಾರಣೆ ಮಾಡಿದಾಗ ರೇಣುಕಾಸ್ವಾಮಿಗೆ ನಾನು ಚಪ್ಪಲಿಯಿಂದ ಒಂದು ಏಟು ಹೊಡೆದೆ. ಆದರೆ, ದರ್ಶನ್ ನನ್ನ ಮುಂದೆಯೇ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾರೆ ಎಂದು ಎ1 ಆರೋಪಿ ಪವಿತ್ರಾಗೌಡ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಪೊಲೀಸರ ಮುಂದೆ ಪವಿತ್ರಗೌಡ ಹೇಳಿದ್ದೇನು? ನಾನು ಶೆಡ್ ಗೆ ಹೋಗುವುದಕ್ಕು ಮುಂಚಿನಿಂದಲೂ ದರ್ಶನ್ ಶೆಡ್‌ನಲ್ಲಿದ್ದನು.ನಾನು ಚಪ್ಪಲಿಯಲ್ಲಿ ಒಂದು ಏಟು…

Read More

ಬೆಂಗಳೂರು : ಐಸಿಸಿ ಟಿ 20 ವಿಶ್ವಕಪ್ ಫೈನಲ್ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ಹೌದು 2024ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸುವ ಮೂಲಕ ಭಾರತ 176 ರನ್ಗಳ ಬೃಹತ್ ಮೊತ್ತವನ್ನು ಗಳಿಸಿತು. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಟೀಂ ಇಂಡಿಯಾಗೆ ಶುಭಕೊರಿದ್ದು, ಸಾಮಾಜಿಕ ಜಾಲತಾಣ X ನಲ್ಲಿ ಈ ಕುರಿತು ಹಂಚಿಕೊಂಡಿದ್ದು, ದೆಹಲಿ ಪ್ರವಾಸದಿಂದ ನಾಡಿಗೆ ವಾಪಾಸಾಗುವ ವೇಳೆ ವಿಮಾನ ಏರುವ ಮೊದಲು ಸಿಕ್ಕ ಅಲ್ಪ ಸಮಯದಲ್ಲೇ ಭಾರತ – ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪೈನಲ್ ಪಂದ್ಯ ವೀಕ್ಷಿಸಿದೆ.ಸಂಘಟಿತ ಹೋರಾಟದ ಮೂಲಕ ಭಾರತ ವಿಶ್ವಕಪ್ ಗೆದ್ದುಬರಲಿ ಎಂದು ಮನದುಂಬಿ ಹಾರೈಸುತ್ತೇನೆ. ಎಂದು ಬರೆದುಕೊಂಡಿದ್ದರು.…

Read More

ನವದೆಹಲಿ : ಕಳೆದ ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಫಲವರ್ಧನೆಗೆ ಪ್ರಸ್ತಾವನೆಗಳನ್ನು ಮಂಜೂರಾತಿ ಕುರಿತಂತೆ ಚರ್ಚಿಸಿದರು. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದೆ. ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ: ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವುದು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ…

Read More

ಬೆಂಗಳೂರು : ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತಂತೆ ಸಚಿವ ಕೆ ಎನ್ ರಾಜಣ್ಣ ಮಾತನಾಡಿದ್ದು, ನಾನು ಸಿಎಂ ಪರ ಅಂತಲ್ಲ ನಾನು ಪ್ರಜಾಪ್ರಭುತ್ವದ ಪರ. ನಾನು ಹಗರಣ ಮಾಡಿದರೆ ತನಿಖೆ ಮಾಡಲಿ. ಬಡವರ ಪರ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ ಅದಕ್ಕೆ ಸಿದ್ದರಾಮಯ್ಯರ ಜೊತೆ ನಾವಿದ್ದೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಸಿ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಮಾತನಾಡಿದಕ್ಕೆ ಪ್ರತಿಕ್ರಿಯಿಸಿದ ಅವರು ವಾರ್ನಿಂಗ್ ಗೆ ಎಲ್ಲ ನಾ ಹೆದರಕೋತಿನ? ಬಾಯಿಗೆ ಎಲ್ಲರೂ ಬೀಗ ಹಾಕಿಕೊಳ್ಳಬೇಕು. ಅವರು ಹೇಳಿದ್ದಕ್ಕೆ ಬಾಯಿ ಮುಚ್ಚಿಕೊಂಡು ಇರಲು ಆಗುವುದಿಲ್ಲ. ಸ್ವಾಮೀಜಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗುತ್ತಾ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೇಂದ್ರ ಜನ ಹೇಳಿಕೆ ನೀಡಿದರು. ಎಲ್ಲರೂ ಸುಮ್ಮನೆ ಇದ್ದರೆ ನಾನು ಸುಮ್ಮನೆ ಇರುತ್ತೇನೆ. ಸಿದ್ದರಾಮಯ್ಯ ರಾಜೀನಾಮೆ ಕೇಳಿದರೆ ಸುಮ್ಮನೆ ಇರಬೇಕಾ? ಅದನ್ನು ಕೇಳಿಕೊಂಡು ನಾನು ಸುಮ್ಮನಿರಬೇಕಾ? ಸ್ವಾಮೀಜಿಗಳು ಹೇಳುವುದನ್ನು ಕೇಳೋಕೆ ಆಗುತ್ತಾ?…

Read More

ಬೆಳಗಾವಿ : ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಆ ಸಂದರ್ಭದಲ್ಲಿ, ಸಮಯ, ಸನ್ನಿವೇಶ ನೋಡಿಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ಕ್ಲೇಮ್ ಮಾಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆಯಂಥ ವಿಚಾರಗಳೆಲ್ಲವೂ ಹೈಕಮಾಂಡ್ ಹಾಗೂ ಪಕ್ಷದ ಪ್ರಮುಖರು ತೀರ್ಮಾನ ಮಾಡುವ ವಿಷಯ. ಈ ಬಗ್ಗೆ ಯಾರೂ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ. ಅಷ್ಟೇ ಅಲ್ಲದೆ, ಸಭೆ ಸಮಾರಂಭಗಳಲ್ಲಿ, ವೈಯಕ್ತಿಕವಾಗಿ ಹೇಳಿದರೆ ಅದಕ್ಕೆಲ್ಲಾ ಮಹತ್ವ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದು ಹೋದ ಚರ್ಚೆ. ದೆಹಲಿ ಬೆಂಗಳೂರಿನಲ್ಲಿ ಸಾಕಷ್ಟು ವಿಚಾರಗಳನ್ನ ಹೇಳಿದ್ದಾರೆ. ಆ ಚರ್ಚೆಯನ್ನು ಮುಂದುವರೆಸುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಿದರೂ ಅದೆಲ್ಲಾ ಮುಗಿದುಹೋದ ಅಧ್ಯಾಯ ಎಂದರು. ಒಂದು ಕಡೆ ಸ್ವಾಮೀಜಿಗಳು ಡಿಸಿಎಂ…

Read More